ಹಾವೇರಿ: ಒಂದೆಡೆ ಮೂರನೇ ಕೊರೊನಾ ಅಲೆಯ ಭೀತಿ ಶುರುವಾಗಿದೆ.. ಈಗಾಗಲೇ ಕೊರೊನಾದಿಂದ ಬಳಲಿ ಬೆಂಡಾಗಿರುವ ರಾಜ್ಯದಲ್ಲಿ ಮತ್ತೆ ದೊಡ್ಡಮಟ್ಟದ ಅನಾಹುತ ಸೃಷ್ಟಿಯಾಗದಿರಲೆಂದು ಮುಂಜಾಗ್ರತಾ ಕ್ರಮವಾಗಿ ಕಾರ್ಯಕ್ರಮಗಳನ್ನ ನಡೆಸದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಡಿಜಿಐಜಿಪಿ ಆದೇಶ ಹೊರಡಿಸಿದ್ದರು. ದುರಂತ ಅಂದ್ರೆ ಸಿಎಂ ತವರು ಕ್ಷೇತ್ರದಲ್ಲೇ ಸಿಎಂ ಆದೇಶಕ್ಕೆ ಕ್ಯಾರೆ ಎನ್ನುತ್ತಿಲ್ಲ.. ಪೊಲೀಸ್ ಇಲಾಖೆಯೇ ಡಿಜಿಐಜಿಪಿ ಆದೇಶಕ್ಕೆ ಕಿಮ್ಮತ್ತು ನೀಡುತ್ತಿಲ್ಲ. ನಿನ್ನೆಯಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶ ನೀಡಿದ್ದರು.. …
Read More »ರಾಜಕೀಯದಲ್ಲಿ ವಯಸ್ಸು ಮುಖ್ಯವಲ್ಲ, ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯ : ಸಿದ್ದು
ಮೈಸೂರು : ರಾಜಕೀಯದಲ್ಲಿ ಮುಂದುವರೆಯಲು ವಯಸ್ಸು ಎಂದಿಗೂ ಅಡ್ಡಿಯಾಗುವುದಿಲ್ಲ, ನಿಮ್ಮಲ್ಲಿ ಉತ್ತಮ ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯವಾಗಿರುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಜಕೀಯ ನಿವೃತ್ತಿಗೆ ವಯಸ್ಸು ಅಡ್ಡಿ ಬರುವುದಿಲ್ಲ, ನಿಮ್ಮಲ್ಲಿ ಉತ್ತಮ ಅರೋಗ್ಯ, ಜೊತೆಗೆ ಕೆಲಸ ಮಾಡುವ ಉತ್ಸಾಹ ಇದ್ದರೆ ಸಾಕು ಎಂದು ಹೇಳಿದರು, ನನಗೀಗ 75 ವರ್ಷವಾದರೂ ಚೆನ್ನಾಗಿದ್ದೇನೆ. ರಾಜಕೀಯದಲ್ಲಿ ಮುಂದುವರೆಯುವ ಆಸೆಯಿದೆ, ಹಾಗಾಗಿ ಮುಂದುವರೆದಿದ್ದೇನೆ. ನನಗೆ …
Read More »ಈರುಳ್ಳಿಗೆ ಕಾಡುತ್ತಿರುವ ಕೊಳೆರೋಗದಿಂದ ಮಣ್ಣಲ್ಲಿ ಮಣ್ಣಾಗುತ್ತಿರುವ ರೈತನ ಕಣ್ಣೀರು..!
ಕಲಾದಗಿ: ಈರುಳ್ಳಿ ಬೆಳೆ ಕೊಳೆರೋಗಕ್ಕೆ ಹಳದಿ ಬಣ್ಣಕ್ಕೆ ಬಾಡಿ ಹೊಲದಲ್ಲಿಯೇ ಕೊಳೆಯುತ್ತಿರುವ ಬೆಳೆಯನ್ನು ರೈತ ನೇಗಿಲು ಹೊಡೆದು ಮಣ್ಣಲ್ಲಿ ಮುಚ್ಚುತ್ತಿದ್ದು ಈ ವೇಳೆ ಬೆಳೆಯೊಂದಿಗೆ ರೈತನ ಕಣ್ಣೀರದಾರೆಯೂ ಮಣ್ಣಲ್ಲಿ ಸೇರಿ ಮಣ್ಣಾಗುತ್ತಿದೆ..! ಹೌದು ಕಲಾದಗಿ ಹೊಬಳಿ ವ್ಯಾಪ್ತಿಯಲ್ಲಿ ರೈತರು ಹೆಚ್ಚಾಗಿ ಈರುಳ್ಳಿ ಬೆಳೆಯನ್ನು ಬೆಳೆದು ಕೃಷಿ ಜೀವನ ನಡೆಸುತ್ತಾರೆ, ಮೇ ತಿಂಗಳಕೊನೆ ವಾರ ಇಲ್ಲವೇ ಜೂನ್ ತಿಂಗಳ ಮೊದಲೆರಡು ವಾರದಲ್ಲಿ ಬಿತ್ತನೆ ಮಾಡಿ ಹುಲುಸು ಬೆಳೆಗೆ ಹಗಲು ರಾತ್ರಿ ಶ್ರಮ …
Read More »ಯೋಗೀಶ್ ಗೌಡ ಕೊಲೆ ಕೇಸ್: ಧಾರವಾಡಕ್ಕೆ ಭೇಟಿ ನೀಡದಂತೆ ವಿನಯ್ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು
ನವದೆಹಲಿ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಬುಧವಾರ (ಆಗಸ್ಟ್ 11) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೂ ಕುಲಕರ್ಣಿಗೆ ಸದ್ಯ ಜೈಲಿನಿಂದ ಬಿಡುಗಡೆ ಇಲ್ಲ ಎಂದು ವರದಿ ವಿವರಿಸಿದೆ. ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕಳೆದ 9 ತಿಂಗಳಿನಿಂದ ಜೈಲಿನಲ್ಲಿದ್ದು, ಜಾಮೀನು ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡಕ್ಕೆ ಭೇಟಿ ನೀಡದಂತೆ …
Read More »ಆನಂದ್ ಸಿಂಗ್ ರಾಜೀನಾಮೆ ಹೈಡ್ರಾಮ: ಯಾವ ಒತ್ತಡಕ್ಕೂ ಸೊಪ್ಪು ಹಾಕದಿರಲು ಸಿಎಂಗೆ ಹೈಕಮಾಂಡ್ ಸಲಹೆ
ಬೆಂಗಳೂರು: ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿವ ಆನಂದ್ ಸಿಂಗ್, ತನ್ನ ಬೇಡಿಕೆ ಈಡೇರಿಸಿಕೊಳ್ಳಲು ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ. ಅತ್ತ ಯಾವುದೇ ಒತ್ತಡಕ್ಕೂ ಸೊಪ್ಪು ಹಾಕಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದು, ಬೊಮ್ಮಾಯಿ ಸಂಪುಟದತ್ತ ಎಲ್ಲರ ಚಿತ್ತ ಮೂಡಿದೆ. ಯಾವುದೇ ಕಾರಣಕ್ಕೂ ಖಾತೆ ಬದಲಾವಣೆ ಮಾಡಬೇಡಿ. ಈಗ ಖಾತೆ ಬದಲಾವಣೆ ಮಾಡಿದರೆ ಮತ್ತೊಬ್ಬರು ಖಾತೆ ಕ್ಯಾತೆ ತೆಗೆಯುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರು ಮತ್ತು ಆರ್ಎಸ್ಎಸ್ನಿಂದ ಸಿಎಂಗೆ ಸಲಹೆ ಬಂದಿದೆ. …
Read More »ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಜತೆಗೆ ರಾಜಕೀಯಕ್ಕೇ ನಿವೃತ್ತಿ ಘೋಷಿಸಲು ಸಜ್ಜಾದ ಆನಂದ್ ಸಿಂಗ್!
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಆನಂದ್ ಸಿಂಗ್ ನಿರ್ಧರಿಸಿದ್ದಾರೆ. ಈಗಾಗಲೇ ಸ್ಪೀಕರ್ ಭೇಟಿಗೆ ಅವಕಾಶ ಕೇಳಿದ್ದು, ಇನ್ನು ಕೆಲವೇ ಗಂಟೆಯಲ್ಲಿ ಬೆಂಗಳೂರಿಗೆ ಆಗಮಿಸಿ ರಾಜೀನಾಮೆ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಮಾತ್ರವಲ್ಲ, ರಾಜಕೀಯಕ್ಕೂ ನಿವೃತ್ತಿ ಘೋಷಣೆ ಮಾಡಲಿದ್ದಾರೆ. ಬೈ ಎಲೆಕ್ಷನ್ ನಡೆದರೂ ಅದಕ್ಕೂ ನಿಲ್ಲದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಆನಂದ್ ಸಿಂಗ್ಗೆ ಪ್ರವಾಸೋದ್ಯಮ ಖಾತೆ ಸಿಕ್ಕಿದೆ. ತಾನು ಕೇಳಿದ್ದ ಖಾತೆಯನ್ನು ಕೊಟ್ಟಿಲ್ಲ …
Read More »ಜೊಲ್ಲೆ ನನ್ನ ಸಿಸ್ಟರ್ ಇದ್ದ ಹಾಗೆ, ಅವರ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದ ಈಶ್ವರಪ್ಪ
ಬೆಳಗಾವಿ – ಶಶಿಕಲಾ ಜೊಲ್ಲೆ ನನ್ನ ಸಿಸ್ಟರ್ ಇದ್ದಹಾಗೆ. ಅವರ ಬಗ್ಗೆ ನೂರಕ್ಕೆ ನೂರು ವಿಶ್ವಾಸವಿದೆ. ಯಾರೋ ಹೇಳಿದ ತಕ್ಷಣ ಅದನ್ನೆಲ್ಲ ತನಿಖೆ ಮಾಡುವುದಕ್ಕಾಗುವುದಿಲ್ಲ. ಅವರ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೊಲ್ಲೆಯವರ ಬಗ್ಗೆ ಬಂದಿರುವ ಆರೋಪಗಳಲ್ಲಿ ಹುರುಳಿಲ್ಲ. ಅದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಸುಮ್ಮನೇ ಯಾರೋ ಹೇಳುತ್ತಾರೆಂದು ಎಲ್ಲವನ್ನೂ ತನಿಖೆಗೊಳಪಡಿಸಲು ಸಾಧ್ಯವಿಲ್ಲ. …
Read More »ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ಸಚಿವ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಯಾಗುತ್ತಿದ್ದಂತೆ ಅನೇಕ ಸಚಿವರು ತಮಗೆ ನೀಡಿದ ಖಾತೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನಂದ್ ಸಿಂಗ್ ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಇಂಧನ ಹಾಗೂ ಅರಣ್ಯ ಖಾತೆ ನೀಡುವಂತೆ ವರಿಷ್ಠರ …
Read More »ಕಾಂಗ್ರೆಸ್ ನಾಯಕರ ವಿರುದ್ಧ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರ. laxminews
ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಸಿಟ್ಟಿನ ಭರದಲ್ಲಿ ಆಡಿದ್ದ ‘ಆ ಮಾತನ್ನು’ ವಾಪಸ್ ಪಡೆದಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸಿಟ್ಟಿನ ಭರದಲ್ಲಿ ನಾನು ಆ ರೀತಿಯಾಗಿ ಹೇಳಿಕೆ ನೀಡಿದ್ದೇನೆ. ನಾನು ಆ ಪದವನ್ನು ವಾಪಸ್ ಪಡೆಯುತ್ತೇನೆ ಎಂದು ಅವರು ಬೆಳಗಾವಿಯಲ್ಲಿ ತಿಳಿಸಿದರು. ಇತ್ತೀಚೆಗಷ್ಟೇ ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ …
Read More »ಪಿಯುಸಿ ಪಾಸಾದರೂ ಕೇದನೂರ ಯುವಕ ಆತ್ಮಹತ್ಯೆ ..! ಆತ್ಮಹತ್ಯೆಗೆ ಬೇರೊಂದು ಕಾರಣದ ವಾಸನೆ..?
ಬೆಳಗಾವಿ: ಬೆಳಗಾವಿ ತಾಲೂಕಿನ ಕೇದನೂರ ಗ್ರಾಮದ ಹೊರವಲಯದಲ್ಲಿರುವ ರಾಜಾಯಿ ಗಲ್ಲಿಯ 19 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಶಾಲ ಮುರಾರಿ ರಾಜಾಯಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಒಬ್ಬನೇ ಗಂಡು ಮಗನಾಗಿದ್ದ ವಿಶಾಲ ಇತ್ತೀಚಿಗೆ ಪಿಯುಸಿ ಪಾಸಾಗಿದ್ದನು. ಮುಂದಿನ ವಿದ್ಯಾಭ್ಯಾಸಕ್ಕಾಗಿ ತಯಾರಿ ನಡೆಸಿದ್ದನು. ಆದರೆ ಈ ಮದ್ಯೆ ಹಲವು ದಿನಗಳಿಂದ ಏಕಾಂಗಿಯಾಗಿ ಇರುತ್ತಿದ್ದ. ಆತ್ಮಹತ್ಯೆಗೆ ಖಿನ್ನತೆಯೇ ಕಾರಣವೇಂದು ಮೃತರ ತಂದೆ ಕಾಕತಿ ಪೋಲೀಸರಿಗೆ ನೀಡಿರುವ ದೂರದಲ್ಲಿ ತಿಳಿಸಿದ್ದಾರೆ. ಆದರೆ ಆತ್ಮಹತ್ಯೆಗೆ ಬೇರಾವುದೋ …
Read More »
Laxmi News 24×7