Breaking News

ರಾಷ್ಟ್ರೀಯ

ಸಮಾಜದಲ್ಲಿ ಜೂಜು, ಡಾರ್ಕ್‌ ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು.

ಬೆಂಗಳೂರು: ಸಮಾಜದಲ್ಲಿ ಜೂಜು, ಡಾರ್ಕ್‌ ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್‌ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು …

Read More »

ವಿದ್ಯುತ್‌ಶಕ್ತಿ ತಿದ್ದುಪಡಿ ಮಸೂದೆ 2020 ವಾ‍ಪಸ್ ಪಡೆಯಬೇಕು ಎಂದು ಒತ್ತಾಯಿಸಿ.

ರಾಯಚೂರು: ವಿದ್ಯುತ್‌ಶಕ್ತಿ ತಿದ್ದುಪಡಿ ಮಸೂದೆ 2020 ವಾ‍ಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಯುನಿಯನ್ಸ್ (ಸಿಐಟಿಯು) ಜಿಲ್ಲಾ ಸಮಿತಿ, ಸಂಯುಕ್ತ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತ್ಯೇಕವಾಗಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.   ಕೇಂದ್ರ ಸರ್ಕಾರ ನೂತನ ವಿದ್ಯುತ್‌ಶಕ್ತಿ ತಿದ್ದುಪಡಿ …

Read More »

ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್‌ಎಸ್‌ಎಲ್‌ಸಿ ತೇಗರ್ಡೆಯಾಗಿದ್ದಾಳೆ.

ಮಂಗಳೂರು, (ಆ.10): ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್‌ಎಸ್‌ಎಲ್‌ಸಿ ತೇಗರ್ಡೆಯಾಗಿದ್ದಾಳೆ. ಅಚ್ಚರಿ ಎನ್ನಿಸಿದರೂ ಸತ್ಯ.   ಕೇವಲ ಐದನೇ ತರಗತಿ ವಿದ್ಯಾರ್ಹತೆ ಪಡೆದು ಮಂಗಳೂರು ವಿವಿ ಕಾಲೇಜಿನ ತಾತ್ಕಾಲಿಕ ಅಟೆಂಡರ್ ಆಗಿರುವ ಜಯಶ್ರೀ, ಇದೀಗ ಮೊದಲ ಪ್ರಯತ್ನದಲ್ಲೇ ಎಸ್‌ಎಸ್‌ಎಲ್‌ಸಿ ಪಾಸ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಲ್ಲದೇ 35 ವರ್ಷಗಳ ಬಳಿಕ ಮತ್ತೆ ವಿದ್ಯಾರ್ಥಿನಿಯಾಗಿ ಗೆದ್ದಿದ್ದಾರೆ.   ಒಂದೇ ಜಿಲ್ಲೆಯ ನಾಲ್ವರಿಗೆ 625ಕ್ಕೆ 625 ಅಂಕ …

Read More »

ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ

ಬೆಳಗಾವಿ: ನವದೆಹಲಿಯ ದ್ವಾರಕಾ ನಗರದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಕೇಂದ್ರ ಸಚಿವರಾಗಿದ್ದ ದಿ| ಸುರೇಶ ಅಂಗಡಿ ಅವರ ಸಮಾಧಿ ಸ್ಥಳದಲ್ಲಿ ನಿರ್ಮಿಸಲಾದ ಅಂಗಡಿ ಅವರ ಪ್ರತಿಮೆಯನ್ನು ಬೆಳಗಾವಿ ಲೋಕಸಭಾ ಸದಸ್ಯೆ ಮಂಗಲಾ ಅಂಗಡಿ ಮಂಗಳವಾರ ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿ ನಮನ ಸಲ್ಲಿಸಿದರು. ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ ಎಲ್ಲ ರೀತಿಯ ಸಹಕಾರ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ …

Read More »

ಕಲರ್ಸ್ ಕನ್ನಡದಲ್ಲಿ ಆ.14ರಿಂದ ‘ಎದೆ ತುಂಬಿ ಹಾಡುವೆನು’ ಪ್ರಸಾರ

ಬೆಂಗಳೂರು: ಹಲವಾರು ವರ್ಷಗಳಿಂದ ಈಟಿವಿಯಲ್ಲಿ ಪ್ರಸಾರ ಆಗುತ್ತಿದ್ದ ಜನಪ್ರಿಯ ಸಂಗೀತ ಸ್ಪರ್ಧಾ ಸರಣಿ ‘ಎದೆತುಂಬಿ ಹಾಡುವೆನು’ ಕಲರ್ಸ್ ಕನ್ನಡದಲ್ಲಿ ಆಗಸ್ಟ್ 14ರಿಂದ ಪ್ರಸಾರ ಆಗಲಿದೆ. ಈಟಿವಿಯಲ್ಲಿ ಅಂದು ಎಸ್.ಪಿ. ಬಾಲಸುಬ್ರಮಣ್ಯಂ ಅವರು ನಡೆಸಿಕೊಡುತ್ತಿದ್ದ ಕಾರ್ಯಕ್ರಮ ಇದು. ಈಗ ದಿವಂಗತ ಎಸ್.ಪಿ.ಬಿ. ಅವರ ಜಾಗದಲ್ಲಿ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ ಹಾಗೂ ರಘು ದೀಕ್ಷಿತ್ ಈ ಕಾರ್ಯಕ್ರಮದ ತೀರ್ಪುಗಾರರಾಗಿ ಇರುತ್ತಾರೆ. ವಿಶೇಷ ತೀರ್ಪುಗಾರರಾಗಿ ಎಸ್‌ಪಿಬಿ ಅವರ ಪುತ್ರ ಎಸ್.ಪಿ. ಚರಣ್ ಇರುತ್ತಾರೆ. ಈಗಾಗಲೇ …

Read More »

ಕ್ಯಾಸಿನೊ ಆರಂಭಿಸುವ ಬಗ್ಗೆ ಸರ್ಕಾರ ಯೋಚಿಸಿಲ್ಲ : ಗೋವಾ ಸಿಎಂ ಸಾವಂತ್

ಪಣಜಿ : ಗೋವಾದಲ್ಲಿ ಕೊವಿಡ್ ಎರಡನೇಯ ಅಲೆಯ ವೇಗ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಆದರೆ ರಾಜ್ಯದಲ್ಲಿ ಕ್ಯಾಸಿನೊ ಆರಂಭಿಸುವ ಕುರಿತಂತೆ ಸರ್ಕಾರ ಇದುವರೆಗೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕ್ಯಾಸಿನೊ ಆರಂಭಿಸುವ ಬಗ್ಗೆ ಸರ್ಕಾರ ಇದುವರೆಗೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಕೋವಿಡ್ ಎರಡನೇಯ ಅಲೆ ನಿಯಂತ್ರಿಸುವಲ್ಲಿ ಸರ್ಕಾರಕ್ಕೆ ಯಶಸ್ವಿಯಾಗುವ ಮಾರ್ಗದಲ್ಲಿದೆ. ರಾಜ್ಯದಲ್ಲಿ …

Read More »

ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ ಗಳ ಬಂಧನ

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ಗಾಂಜಾ, ಎಂಡಿಎಂಎ ಸೇರಿ ವಿವಿಧ ಮಾದರಿಯ ಡ್ರಗ್ಸ್‌ಗಳನ್ನು ತಂದು ನಗರದಲ್ಲಿ ವಿದ್ಯಾರ್ಥಿಗಳು,ಟೆಕ್ಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಪೆಡ್ಲರ್‌ ಗಳನ್ನು ಪಶ್ಚಿಮ ವಿಭಾಗದ ಸಿ.ಟಿ.ಮಾರು ಕಟ್ಟೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪಪ್ಪುರಾಮ್‌ ಅಲಿಯಾಸ್‌ ಪಪ್ಪು (20), ಚುನ್ನಿಲಾಲ್‌ ಅಲಿಯಾಸ್‌ ಸುನೀಲ್‌ (20) ಬಂಧಿತರು. ಇಬ್ಬರು ಅತ್ತಿಬೆಲೆಯಲ್ಲಿ ವಾಸವಾಗಿದ್ದರು. ಆರೋಪಿಗಳಿಂದ ಎರಡು ಕೋಟಿ ರೂ. ಮೌಲ್ಯದ ಒಂದುಕೆ.ಜಿ.820 ಗ್ರಾಂ ಬ್ರೌನ್‌ ಶುಗರ್‌, 859 ಗ್ರಾಂ ಎಂಡಿಎಂಎ, …

Read More »

ನನಗೆ ವಯಸ್ಸಾದ ಕಾರಣ ರಾಜಕೀಯ ಬಿಟ್ಟಿರುವೆ: ಮಾಜಿ ಸಿಎಂ ಎಸ್.ಎಂ ಕೃಷ್ಣ

ಮದ್ದೂರು : ನನಗೆ ವಯಸ್ಸಾಗಿದೆ ಆದ ಕಾರಣ ರಾಜಕಾರಣವನ್ನು ಬಿಟ್ಟಿದ್ದೇನೆ ಹಾಗೂ ರಾಜಕಾರಣದಿಂದ ದೂರವಿದ್ದು, ಬಹಳ ವರ್ಷವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ರವರು ತಿಳಿಸಿದರು. ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಉಗ್ರನರಸಿಂಹಸ್ವಾಮಿ ದೇವಸ್ಥಾನ ಹಾಗೂ ತಾಲ್ಲೂಕಿನ ಶ್ರೀ ವೈಧ್ಯನಾಥೇಶ್ವರ ದೇವಸ್ಥಾನಗಳಿಗೆ ಬೇಟಿ ನೀಡಿ ದೇವರ ದರ್ಶನ ಪಡೆದ 89 ವರ್ಷ ವಯಸ್ಸಿನ ಎಸ್‌ಎಂ ಕೃಣ್ಣ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸುಮಾರು …

Read More »

ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು? ಅವರನ್ನು ತಳ್ಳಲು ಆಗುತ್ತಾ? ಬಿ.ಸಿ.ಪಾಟೀಲ್

ಬೆಂಗಳೂರು: ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು? ಅವರು ಖುಷಿಯಿಂದ ಬಂದರೆ ನಾವೇನು ತಳ್ಳುವುದಕ್ಕೆ ಆಗುತ್ತಾ ಎಂದು ಸಚಿವ ಬಿ.ಸಿ ಪಾಟೀಲ್ ಸಂಭ್ರಮಾಚರಣೆಯನ್ನು ಸಮರ್ಥಿಸಿಕೊಂಡರು. ಸಚಿವರು ಸಂಭ್ರಮದಲ್ಲಿ ತೊಡಗಿದ್ದಾರೆಂಬ ಹೆಚ್‌ಡಿಕೆ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ಹೆಚ್ಚಳ ಆತಂಕದ ಕಾರಣ ಸರ್ಕಾರ ವೀಕೆಂಡ್, ನೈಟ್ ಕರ್ಪೂ ಮಾಡಿದೆ. ಗುಂಪು ಸೇರಬೇಡಿ, ಮಾಸ್ಕ್ ಧರಿಸಿ ಎಂದು ಹೇಳುತ್ತಿದ್ದೇವೆ. ಆದರೂ ಜನ ಗುಂಪು ಸೇರುತ್ತಾರೆ. ನಾವೇನು ಮಾಡಲು ಸಾಧ್ಯ ಎಂದರು. ಬಿಜೆಪಿಯಲ್ಲಿ …

Read More »

ಕೆಲವೇ ಗಂಟೆಗಳಲ್ಲಿ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ (SSLC Result 2021) ಪ್ರಕಟಣೆಗೆ ಸಿದ್ಧವಾಗಿದ್ದು, ಇಂದು ಲಭ್ಯವಾಗಲಿದೆ. ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ನಿಗದಿಪಡಿಸಲಾದ ಸುದ್ದಿಗೋಷ್ಠಿಯಲ್ಲಿ ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಲಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. …

Read More »