ಆಸ್ಟ್ರೇಲಿಯಾದಲ್ಲಿರುವ ಮ್ಯಾಕ್ಡೊನಾಲ್ಡ್ಸ್ ಸ್ಟೋರ್ ಒಂದರ ಸಿಬ್ಬಂದಿ ಒಮ್ಮೆಲೇ 3,400 ಡಾಲರ್ (1.86 ಲಕ್ಷ ರೂಪಾಯಿ) ಮೌಲ್ಯದ ಆರ್ಡರ್ ಬಂದಿದ್ದನ್ನು ನೋಡಿ ದಂಗು ಬಡಿದಿದ್ದಾರೆ. ಆರ್ಡರ್ನಲ್ಲಿ 300ಕ್ಕೂ ಹೆಚ್ಚು ಬರ್ಗರ್ಗಳು ಹಾಗೂ 100ಕ್ಕೂ ಹೆಚ್ಚು ಪಾನೀಯಗಳಿದ್ದು, ಜೊತೆಗೆ 20 ನಗೆಟ್ಗಳು, ಫ್ರೈಸ್ನ 69 ಪ್ಯಾಕ್ಗಳು, ವೆನಿಲ್ಲಾ ಕೋಕ್ ಹಾಗೂ ಚೀಸ್ಗಳನ್ನೂ ಸಹ ಹೇಳಲಾಗಿದೆ. ಈ ಜಂಬೋ ಆರ್ಡರ್ನ ವಿವರಗಳನ್ನು ಮ್ಯಾಕ್ಡೊನಾಲ್ಡ್ಸ್ನ ಸಿಬ್ಬಂದಿಯಲ್ಲಿ ಒಬ್ಬರು ಫೇಸ್ಬುಕ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
Read More »ಕಾನೂನು ಹೋರಾಟದಲ್ಲಿ ರಿಲಯನ್ಸ್ ವಿರುದ್ಧ ಅಮೆಜಾನ್ಗೆ ಜಯ
ನವದೆಹಲಿ: ಭಾರತದ ಆನ್ಲೈನ್ ವ್ಯಾಪಾರದ ಪ್ರತಿ ಸ್ಪರ್ಧಿಗಳಾದ ಮುಕೇಶ್ ಅಂಬಾನಿ ಮತ್ತು ಜೆಫ್ ಬೆಜೋಸ್ ನಡುವಿನ ಕಾನೂನು ಹೋರಾಟದಲ್ಲಿ ಜೆಫ್ ಗೆ ಜಯದಕ್ಕಿದೆ. ಫ್ಯೂಚರ್ ಗ್ರೂಪ್ನ ರಿಟೇಲ್ ಆಸ್ತಿಯನ್ನು ಖರೀದಿಸುವ 3.4 ಶತ ಕೋಟಿ ಡಾಲರ್ ಮೊತ್ತದ ಒಪ್ಪಂದವನ್ನು ರಿಲಯನ್ಸ್ ಕಂಪನಿ ಮುಂದುವರಿ ಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಇದರಿಂದಾಗಿ ಅಮೆಜಾನ್ಗೆ ದೊಡ್ಡ ಯಶಸ್ಸುಸಿಕ್ಕಂತಾಗಿದೆ. ತನ್ನ ಪಾಲುದಾರ ಸಂಸ್ಥೆ ಫ್ಯೂಚರ್ ಗ್ರೂಪ್ ವಿರುದ್ಧ ಅಮೆಜಾನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ತನ್ನ ರಿಟೇಲ್ …
Read More »ಆಸ್ತಿ ಗಳಿಕೆ ವಿಚಾರವಾಗಿ ಐಟಿ ಬದಲು ಇಡಿ ತನಿಖೆ ಆಶ್ಚರ್ಯ ಮೂಡಿಸಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಇಡಿ ಅಧಿಕಾರಿಗಳು ಐಎಂಎ ವಿಚಾರಕ್ಕೆ ದಾಳಿ ಮಾಡಿಲ್ಲ, ಆಸ್ತಿ ವಿಚಾರವಾಗಿ ದಾಳಿ ಮಾಡಿದ್ದಾರೆ ಎಂದು ನಮ್ಮ ಶಾಸಕರಾದ ಜಮೀರ್ ಅಹಮದ್ ಹೇಳಿದ್ದಾರೆ. ಆಸ್ತಿ ಗಳಿಕೆ ವಿಚಾರವಾಗಿ ಆದಾಯ ಇಲಾಖೆ (IT) ಬದಲು ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿರುವುದು ಅಚ್ಚರಿ ಮೂಡಿಸಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ದಾಳಿಗೂ …
Read More »ಮೊಬೈಲ್ ಫೋನ್ ಸಾಗಿಸುತ್ತಿದ್ದ ಲಾರಿ ದರೋಡೆ; 6 ಕೋಟಿ ಮೌಲ್ಯದ ಎಂಐ ಫೋನ್ ಕಳ್ಳತನ
ಕೋಲಾರ: ಮೊಬೈಲ್ ಫೋನ್ ಸಾಗಿಸುತ್ತಿದ್ದ ಲಾರಿ ದರೋಡೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗ್ರಾಮ ದೇವರಾಯಸಮುದ್ರ ಬಳಿಯ ರಾಷ್ಟ್ರೀಯ ಹೆದ್ದಾರೆ 75 ರಲ್ಲಿ ನಡೆದಿದೆ. ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ದರೋಡೆ ಆಗಿದೆ ಎಂದು ತಿಳಿದುಬಂದಿದೆ. ಎಂಐ ಕಂಪನಿಗೆ ಸೇರಿದ ಮೊಬೈಲ್ ಫೋನ್ಗಳ ದರೋಡೆ ಮಾಡಲಾಗಿದ್ದು, ಮೊಬೈಲ್ನ್ನು ತಮಿಳುನಾಡಿನಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಕೃತ್ಯ ನಡೆದಿದೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ …
Read More »ಹಿರಿಯ ನಾಗರಿಕರು, ವಿಕಲಚೇತನರಿಗೆ ವಿಶೇಷ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
ಎಲ್ಲೆಲ್ಲೂ ಎಲೆಕ್ಟ್ರಿಕ್ ವಾಹನಗಳದ್ದೇ ಭರಾಟೆಯಾಗಿರುವ ಈ ನಡುವೆ ನಾ ಮುಂದು ತಾ ಮುಂದು ಎಂಬಂತೆ ಕಂಪನಿಗಳು ಇವಿ ವಾಹನಗಳನ್ನು ಲಾಂಚ್ ಮಾಡುತ್ತಿವೆ. ಈ ಸಾಲಿಗೆ ತನ್ನದೊಂದು ವಾಹನ ಬಿಡುಗಡೆ ಮಾಡಿರುವ ಕೋಮಾಕಿ ಎಕ್ಸ್ಜಿಟಿ-ಎಕ್ಸ್5 ಹೆಸರಿನಲ್ಲಿ ಹಿರಿಯರಿಗೆ ಹಾಗೂ ವಿಕಲಚೇತನರಿಗೆಂದು ವಿಶೇಷ ಸ್ಕೂಟರ್ ಹೊರತಂದಿದೆ. ಈ ಸ್ಕೂಟರ್ನ ಅಧಿಕೃತ ಲಾಂಚ್ ಮುನ್ನ 1000ಕ್ಕೂ ಹೆಚ್ಚು ಗ್ರಾಹಕರಿಗೆ ಮಾರಾಟ ಮಾಡಲಾಗಿದೆ. ತನ್ನ ಅಧಿಕೃತ ಜಾಲತಾಣದಲ್ಲಿ ಉಚಿತವಾಗಿ ಬುಕ್ ಮಾಡಬಲ್ಲ ಈ ಸ್ಕೂಟರ್ ಭಾರತದಲ್ಲಿರುವ …
Read More »ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜೀನಾಮೆಗೆ ರೆವಲ್ಯೂಶನ್ ಗೋವನ್ಸ್ ಒತ್ತಾಯ..!
ಪಣಜಿ : ಮಹಿಳೆಯ ಮೇಲೆ ನಡೆದಿರುವ ಲೈಂಗಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕೂಡಲೆ ರಾಜೀನಾಮೆ ನೀಡಬೇಕು ಎಂದು ರೆವಲ್ಯೂಶನ್ ಗೋವನ್ಸ್ ಒತ್ತಾಯಿಸಿದೆ. ಪಕ್ಷದ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೆವಲ್ಯೂಶನ್ ಗೋವನ್ಸ್ ನ ಸುನಯನಾ ಗಾವಡೆ, ಗೋವಾಕ್ಕೆ ಶಾಂತಿಪ್ರಿಯ ಎಂಬ ಗುರುತು ಬದಲಾಗುತ್ತಿದೆ. ಇದಕ್ಕೆ ಜನಪ್ರತಿನಿಧಿಗಳೇ ಕಾರಣ. ಗೋವಾ ರಾಜ್ಯವು ಯಾವಾಗ ಸುರಕ್ಷಿತವಾಗಲಿದೆ..? ರಾತ್ರಿಯ ಸಂದರ್ಭದಲ್ಲಿ ಹೆಣ್ಣುಮಕ್ಕಳು ಮನೆಯಿಂದ ಹೊರ …
Read More »ಬಿಎಸ್ವೈ ಬ್ಲೂಪ್ರಿಂಟ್ಗೆ ವಿರೋಧಿ ಬಣ ತತ್ತರ; ವಿರೋಧಿಗಳಿಗೆ ರಾಜಾಹುಲಿ ಕೊಟ್ಟ ಏಟು ಹೇಗಿದೆ?
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನೂತನವಾಗಿ ರಾಜ್ಯ ಸಚಿವ ಸಂಪುಟ ರಚನೆ ಹಾಗೂ ಹೊಸ ಕ್ಯಾಬಿನೆಟ್ ಗಮನಿಸಿದರೆ ಪ್ರಮುಖವಾಗಿ ಒಂದು ವಿಚಾರ ಎದ್ದು ಕಾಣುತ್ತದೆ. ಅದೇನೆಂದರೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರು ಅಡಿರುವ ಗೇಮ್ನಿಂದ ಬಿಎಸ್ವೈ ವಿರೋಧಿ ಬಣ ಸದ್ಯಕ್ಕೆ ಪುಲ್ ಸೈಡ್ ಲೈನ್ ಆಗಿದೆ. ರಾಜಾಹುಲಿಯ ಬ್ಲೂಪ್ರಿಂಟ್ಗೆ ಕಕ್ಕಾಬಿಕ್ಕಿಯಾಗಿ ಅಡ್ರೆಸ್ ಕಳೆದುಕೊಂಡು ಆಫೋಸಿಟ್ ಗ್ಯಾಂಗ್ನವರು ಈಗ ಎಲ್ಲಿ ಇದ್ದಾರೆ ಅನ್ನೋದೇ ಗೊತ್ತಾಗ್ತಾ ಇಲ್ಲ. ರಾಜ್ಯ ಬಿಜೆಪಿಯ …
Read More »ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಿಎಂ ಮಾಹಿತಿ, ಪ್ರಮುಖ ಖಾತೆಗೆ ಹೆಚ್ಚಿದ ಪೈಪೋಟಿ
ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಶುಕ್ರವಾರವೇ ನೂತನ ಸಚಿವರಿಗೆ ಬಹುತೇಕ ಖಾತೆ ಹಂಚಿಕೆ ಆಗಲಿದೆ. ಪ್ರಮುಖ ಖಾತೆಗಾಗಿ ಒತ್ತಡವಿದ್ದು, ಹೆಚ್ಚುವರಿ ಹೊಣೆಗಾರಿಕೆ ಮೇಲೆಯೂ ನೂತನ ಸಚಿವರು ಕಣ್ಣಿಟ್ಟಿದ್ದಾರೆ. ಇದರಿಂದಾಗಿ ಖಾತೆ ಹಂಚಿಕೆ ವಿಳಂಬವಾಗುತ್ತಿದೆ ಎಂದು ಹೇಳಲಾಗಿದೆ. ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಿ, ಕೊಠಡಿಗಳನ್ನು ಕೂಡ ಹಂಚಿಕೆ ಮಾಡಲಾಗಿದೆ. ಬಿಎಸ್ವೈ ಸಂಪುಟದಲ್ಲಿದ್ದ ಸಚಿವರೇ ಬಹುತೇಕ ಮುಂದುವರೆದಿದ್ದಾರೆ. ಈ ಮೊದಲು ನಿರ್ವಹಿಸುತ್ತಿದ್ದ …
Read More »ಪಡಿತರ ಚೀಟಿದಾರರಿಗೆ ಮತ್ತೊಂದು ಶಾಕ್: ಇ -ಕೆವೈಸಿಗೆ ಸರ್ವರ್ ಪ್ರಾಬ್ಲಂ, ದಿನಗಟ್ಟಲೆ ಕಾದರೂ ತಪ್ಪದ ಅಲೆದಾಟ
ಪಡಿತರ ಪಡೆದುಕೊಳ್ಳಲು ರೇಷನ್ ಕಾರ್ಡ್ ನಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇ -ಕೆವೈಸಿ ಮಾಡಿಸಬೇಕೆಂದು ಆದೇಶಿಸಲಾಗಿದೆ. ಆದರೆ, ಅನೇಕ ಕಡೆಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿದಾರರು ಪರದಾಡುವಂತಾಗಿದೆ. ದಿನಗಟ್ಟಲೆ ಕಾದರೂ ನೋಂದಣಿ ಕಷ್ಟಸಾಧ್ಯವಾಗಿದೆ. ಇ-ಕೆವೈಸಿ ಮಾಡಲು ಬಯೋಮೆಟ್ರಿಕ್ ನೀಡಬೇಕಿದೆ. ಸರ್ವರ್ ಸಮಸ್ಯೆಯಿಂದ ಬಯೋಮೆಟ್ರಿಕ್ ಅಪ್ಡೇಟ್ ಮಾಡುವುದು ಕಷ್ಟ ಸಾಧ್ಯವಾಗಿ ಪರಿಣಮಿಸಿದೆ ಎಂಬ ದೂರುಗಳು ಕೇಳಿಬಂದಿವೆ. ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಅನ್ವಯ ಪಡಿತರ ಚೀಟಿ ದೃಢೀಕರಣಕ್ಕಾಗಿ ಮಕ್ಕಳು, …
Read More »ಳಿನ್ ಕುಮಾರ್ ಕಟೀಲ್ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಬೆಂಗಳೂರು: ನೂತನ ಸಚಿವ ಸಂಪುಟ ರಚನೆ ಬೆನ್ನಲ್ಲೆ ಬಿಜೆಪಿ ಕಚೇರಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೊತೆ ಚರ್ಚೆ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತ ನನಗೂ ಒಳ್ಳೆಯ ಕಾಲ ಬರುತ್ತದೆ ಎಂದು ಹೇಳಿಕೊಂಡಿದ್ದಾರೆ. ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುಮಾರು 15 ನಿಮಿಷಗಳ ಕಾಲ ನಳಿನಕುಮಾರ್ ಕಟೀಲ್ ಅವರ ಜೊತೆಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. …
Read More »
Laxmi News 24×7