Breaking News

ರಾಷ್ಟ್ರೀಯ

ಸಿಎಂ ಬದಲಾವಣೆ ನಿಶ್ಚಿತ, ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಕೂಡ ಹೊರಕ್ಕೆ – ನಳೀನ್‌ ಕುಮಾರ್‌ ಕಟೀಲ್‌ ಆಡಿಯೋ

ಬೆಂಗಳೂರು – ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗಿದ್ದು ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌ ,ಈಶ್ವರಪ್ಪ  ಅವರನ್ನು ಕೂಡ ಹೊರಗಿಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಮಾತನಾಡಿದ್ದಾರೆನ್ನಲಾದ ಆಡಿಯೋ ಒಂದು ಬಹಿರಂಗವಾಗಿದೆ. ತಮ್ಮ ಅಪ್ತರ ಬಳಿ ತುಳು ಭಾಷೆಯಲ್ಲಿ ಮಾತುಕತೆ ನಡೆಸಿರುವ ನಳೀನ್‌ ಕುಮಾರ್‌ ಕಟೀಲ್‌ ಅವರು, ಈ ಸಂಗತಿಯನ್ನು ಬಹಿರಂಗಪಡಿಸಿರುವ ರೀತಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದೆಯಲ್ಲದೆ ಸಧ್ಯದಲ್ಲೇ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ …

Read More »

ನೂತನ ಶಾಲಾ ಕೊಠಡಿಗಳ ಅಡಿಗಲ್ಲು ಕಾರ್ಯಕ್ರಮಕ್ಕೆ ಭೂಮಿ ಪೂಜೆ

ಘಟಪ್ರಭಾ: ಸಮೀಪದ ಕೊಟಬಾಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯನ್ನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟಿಸಿದರು. ಎರಡು ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಎಸ್‍ಡಿಎಂಸಿ ಅಧ್ಯಕ್ಷ ರಾಜಕುಮಾರ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಇಒ ಮೋಹನ ದಂಡಿನ, ಬಿಸಿಯೂಟ ಸಹ ನಿರ್ದೇಶಕ ಹಿರೇಮಠ, ಸಿಆರ್‍ಪಿಗಳಾದ ವಿ.ಎಸ್.ರಜಪೂತ, ಪ್ರಧಾನ ಗುರು ಎಸ್.ಬಿ.ಹೊಳೆಪ್ಪಗೋಳ ಸೇರಿದಂತೆ ಎಸ್ ಡಿಎಂಸಿ ಸದಸ್ಯರು,ಶಿಕ್ಷಣ ಪ್ರೇಮಿಗಳು ಹಾಗೂ …

Read More »

50 ಲಕ್ಷ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ಹೊಂದುತ್ತಿರುವುದು ಪ್ರಶಂಸನೀಯ ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಶತಮಾನೋತ್ಸವ ಆಚರಿಸಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಈ ಭಾಗದಲ್ಲಿ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡುತ್ತ ಬರುತ್ತಿದೆ. ಈ ಹಿಂದೆ 8 ಕೋಟಿ ರೂ.ಗಳಷ್ಟಿದ್ದ ಪತ್ತನ್ನು 15 ಕೋಟಿ ರೂ.ಗಳವರೆಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಕಲ್ಲೋಳಿ ಪಿಕೆಪಿಎಸ್‍ಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರ …

Read More »

ಜೋಗ ಜಲಪಾತ ವೀಕ್ಷಣೆಗಾಗಿ KSRTC ವಿಶೇಷ ಪ್ರವಾಸ ಪ್ಯಾಕೇಜ್

ಬೆಂಗಳೂರು, ಜು.18- ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗಾಗಿ ಕೆಎಸ್‍ಆರ್‍ಟಿಸಿ ವಿಶೇಷ ಪ್ಯಾಕೇಜ್‍ಅನ್ನು ಪ್ರಕಟಿಸಿದೆ. ಪ್ರವಾಸಿಗರ ಅನುಕೂಲಕ್ಕಾಗಿ ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ವಿಶೇಷ ಪ್ಯಾಕೇಜ್ ಟೂರ್ ಆಯೋಜಿಸಿದೆ. ಜು.23ರಿಂದ ನಾನ್ ಎಸಿ ಸ್ಲೀಪರ್ ಬಸ್‍ನಲ್ಲಿ ಪ್ರವಾಸ ಆರಂಭವಾಗಲಿದೆ. ಶುಕ್ರವಾರ, ಶನಿವಾರ ಮಾತ್ರ ಪ್ರಯಾಣಕ್ಕೆ ಅವಕಾಶವಿದ್ದು, ವಯಸ್ಕರಿಗೆ 1900ರೂ., 6 ರಿಂದ 12 ವರ್ಷದ ಮಕ್ಕಳಿಗೆ 1700ರೂ. ನಿಗದಿಗೊಳಿಸಲಾಗಿದೆ.

Read More »

ರಾತ್ರಿ ಓಡಾಡುವವರು ವೇಶ್ಯೆಯರು, ರೇಪ್​ಗೆ​ ಅರ್ಹರು ಎಂದು ಭೀಕರ ಕೊಲೆ ಸಮರ್ಥಿಸಿಕೊಂಡ ಪಾದ್ರಿ!

ತಿರುವನಂತಪುರ: ಕೇರಳದ ವಿವಾದಾತ್ಮಕ ಇಸ್ಲಾಮಿಕ್ ಪಾದ್ರಿಯೊಬ್ಬರು ಇದೀಗ ಮಹಿಳೆಯರ ಕುರಿತಾಗಿ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾತ್ರಿ 9 ಗಂಟೆಯ ನಂತರ ರಾತ್ರಿ ಹೊರಗೆ ಹೋಗುವ ಮಹಿಳೆಯರು ವೇಶ್ಯೆಯರು, ಅವರು ಅತ್ಯಾಚಾರ ಎಸಗಲು ಮಾತ್ರವಲ್ಲದೇ ಕೊಲೆ ಮಾಡಲು ಕೂಡ ಅರ್ಹರು ಎಂದಿದ್ದಾರೆ ಈ ಪಾದ್ರಿ. ಕೇರಳದ ಪ್ರಸಿದ್ಧ ಧರ್ಮಗುರು ಎಂದೇ ಹೆಸರಾಗಿರುವ ಮೌಲಾನಾ ಸ್ವಾಲಿಹ್ ಬಾಥೆರಿ ಇಂಥದ್ದೊಂದು ಹೇಳಿಕೆ ನೀಡಿದ್ದಾರೆ. ಹಚಿನ್ಸನ್-ಗಿಲ್ಫೋರ್ಡ್ ಪ್ರೊಜೆರಿಯಾ ಸಿಂಡ್ರೋಮ್ (ಎಚ್‌ಜಿಪಿಎಸ್) ಎಂಬ ಸಮಸ್ಯೆಯಿಂದ ಬಳಲುತ್ತಿರುವ …

Read More »

ಪಬ್ಲಿಕ್ ಪ್ಲೇಸ್‍ನಲ್ಲಿ ಬಾಯ್‍ಫ್ರೆಂಡ್‍ಗೆ ಕಿಸ್ ಮಾಡಿದ ಶ್ರುತಿ ಹಾಸನ್

ಮುಂಬೈ: ಟಾಲಿವುಡ್ ನಟಿ ಶ್ರುತಿ ಹಾಸನ್ ಬಾಯ್‍ಫ್ರೆಂಡ್‍ಗೆ ಸಾರ್ವಜನಿಕ ಸ್ಥಳದಲ್ಲಿ ಕಿಸ್ ಮಾಡಿದ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಿದ್ದಾರೆ. ಸ್ವತಃ ಶ್ರುತಿ ಹಾಸನ್ ಅವರು ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ. ಅಲ್ಲದೆ ಬಾಯ್‍ಫ್ರೆಂಡ್ ಜೊತೆ ತುಂಬ ಆಪ್ತವಾಗಿರುವ ಫೋಟೋಗಳನ್ನು ಅವರು ಶೇರ್ ಮಾಡುತ್ತಾರೆ. …

Read More »

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ನಲ್ಲಿ ಮೇಜರ್ ಸರ್ಜರಿ?

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ನಲ್ಲಿ ಮೇಜರ್ ಸರ್ಜರಿಗೆ ಕಮಿಷನರ್ ಲಾಬೂರಾಮ್ ಮುಂದಾಗಿದ್ದಾರೆ. ವಿವಿಧ ಠಾಣೆಗಳಲ್ಲಿ ಹತ್ತಾರು ವರ್ಷಗಳಿಂದ ಬೀಡು ಬಿಟ್ಟಿರುವ ಕಾನ್‌ಸ್ಟೆಬಲ್, ಹವಾಲ್ದಾರ್, ಎಎಸ್‌ಐ, ಎಸ್‌ಐಗಳ ವರ್ಗಾವಣೆಗೆ ನಿರ್ಧರಿಸಿರುವ ಕಮಿಷನರ್, ನಾಲ್ಕು ವರ್ಷ ಹಾಗೂ ಅದಕ್ಕಿಂತ ಹೆಚ್ಚು ವರ್ಷ‌ ಸೇವೆ ಸಲ್ಲಿಸಿರುವ ಎಲ್ಲ ಸಿಬ್ಬಂದಿಯ ಮಾಹಿತಿ ನೀಡುವಂತೆ ಎಸಿಪಿ ಹಾಗೂ ಠಾಣೆಗಳ ಇನ್‌ಸ್ಪೆಕ್ಟರ್‌ಗಳಿಗೆ ಸೂಚಿಸಿದ್ದಾರೆ. ಅವಳಿ ನಗರದಲ್ಲಿ ನಾಲ್ಕು ಸಂಚಾರ ಪೊಲೀಸ್ ಠಾಣೆಗಳಿದ್ದು, ಅವುಗಳಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿ 10 …

Read More »

ತಹಸೀಲ್ದಾರ್ ಗೆ 3 ತಿಂಗಳ ಜೈಲು!

ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ವಿಶೇಷ ತಹಸೀಲ್ದಾರ್ ಎಸ್.ಬಿ. ಕಾಂಬಳೆಯವರಿಗೆ ಬನಹಟ್ಟಿ ಹಿರಿಯ ದಿವಾಣಿ ನ್ಯಾಯಾಧೀಶ ಕಿರಣಕುಮಾರ ವಡಿಗೇರಿ 3 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಹೌದು, ನಾವಲಗಿ ಗ್ರಾಮದ ಅಣ್ಣಪ್ಪ ಹಣಮಂತ ಮಾಂಗ ಹಾಗು ಇತರರು ಸೇರಿ ನ್ಯಾಯಾಲಯದ ನಿಂದನೆ ಪ್ರಕರಣವನ್ನು ಜಮಖಂಡಿಯಲ್ಲಿ ದಾಖಲಿಸಿದ್ದರು. ನಂತರದ ದಿನಗಳಲ್ಲಿ ಬನಹಟ್ಟಿಯಲ್ಲಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಲಯ ಸ್ಥಾಪನೆಗೊಂಡ ಕಾರಣ ಪ್ರಕರಣ ವರ್ಗಾವಣೆಗೊಂಡಿತ್ತು. ಮಾಂಗ ಎಂಬುವರು …

Read More »

ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …

Read More »

ಹಳ್ಳೂರ ಗ್ರಾಮದಲ್ಲಿ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿಕೊಂಡರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಜರುಗಿದ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳೂರ ಗ್ರಾಮದ ಪ್ರತಿಯೊಂದು ಮನೆಗಳಿಗೆ …

Read More »