Breaking News

ರಾಷ್ಟ್ರೀಯ

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ | ವಕೀಲರ ಹೋರಾಟಕ್ಕೆ ಮಣಿದ ಸಿಎಂ: ಚರ್ಚೆಗೆ ಆಹ್ವಾನ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ, ನಗರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ವಕೀಲರ ಪರಿಷತ್‌ ಯಶಸ್ವಿಯಾಯಿತು. ವಕೀಲರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್‌ 15ರಂದು ಚರ್ಚೆಗೆ ಆಹ್ವಾನಿಸಿದರು. ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ತು, ನ್ಯಾಯಪೀಠ- ಕೂಡಲಸಂಗಮ, ಜಿಲ್ಲಾ ವಕೀಲರ ಪರಿಷತ್ ಆಶ್ರಯದಲ್ಲಿ ರಾಜ್ಯದ ವಿವಿಧೆಡೆಯಿಂದ ಪಂಚಮಸಾಲಿ ಸಮಾಜದ ವಕೀಲರು ಸಮಾವೇಶಗೊಂಡರು. ಇಡೀ …

Read More »

ಜಮೀನು ವಿವಾದ: ಗ್ರಾಮದ ಹಿರಿಯನ ಕೊಲೆ

ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಹೊಸೂರು ಗ್ರಾಮದ ಹದ್ದಿಯಲ್ಲಿ ಶುಕ್ರವಾರ ತಡರಾತ್ರಿ, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲಾಗಿದೆ. ತಡರಾತ್ರಿಯೇ ಕಾರ್ಯಪ್ರವೃತ್ತರಾದ ಇಲ್ಲಿನ ಪೊಲೀಸರು ನಾಲ್ಕೇ ತಾಸಿನಲ್ಲಿ ಪ್ರಕರಣ ಭೇದಿಸಿ ಮೂವರನ್ನು ಬಂಧಿಸಿದ್ದಾರೆ.   ಬೈಕ್ ಮೇಲೆ ತೆರಳುತ್ತಿದ್ದ, ಗ್ರಾಮದ ಹಿರಿಯ ವಿಠ್ಠಲ ಜೋತಪ್ಪ ರಾಮಗೋನಟ್ಟಿ (60) ಕೊಲೆಯಾದವರು. ಬೈಕ್‌ ಓಡಿಸುತ್ತಿದ್ದ ಭೀಮಪ್ಪ ಅವರ ಹಿಂದಿದ್ದ ಬಾಬು ಗಾಯಗೊಂಡಿದ್ದಾರೆ. ಭೀಮಪ್ಪ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಬೈಕಿಗೆ ಕಾರು ಡಿಕ್ಕಿ …

Read More »

ಸರ್ಕಾರಿ ಜಾಗ ಅತಿಕ್ರಮಣ; ತೆರವಿಗೆ ಕ್ರಮವಹಿಸಿ

ಧಾರವಾಡ: ‘ಒತ್ತುವರಿ ನಿರಂತರವಾಗಿ ನಡೆಯುತ್ತಿದೆ. ಒತ್ತುವರಿ ತೆರವುಗೊಳಿಸಿ ಸರ್ಕಾರದ ಆಸ್ತಿ ಸಂರಕ್ಷಣೆಗೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ಕೋರ್ಟ್ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ ಹೇಳಿದರು. ಕರ್ನಾಟಕ ಭೂ ಕಬಳಿಕೆ ವಿಶೇಷ ಕೋರ್ಟ್, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ …

Read More »

ಕಲ್ಯಾಣ ಕರ್ನಾಟಕದ ಭಾಗದ ವಿವಿಧೆಡೆ ಮಳೆ

ಕಲಬುರಗಿ: ಹಲವು ದಿನಗಳ ಬಿಡುವಿನ ಬಳಿಕ ಕಲ್ಯಾಣ ಕರ್ನಾಟಕದ ಹಲವೆಡೆ ಶನಿವಾರ ಮಳೆಯಾಗಿದೆ. ಕಲಬುರಗಿ, ಬೀದರ್ ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಶನಿವಾರ ಬೆಳಿಗ್ಗೆ ಹಾಗೂ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಜೋರು ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲೂ ಜೋರು ಮಳೆ ಸುರಿದಿದೆ. ಕಲಬುರಗಿ ಜಿಲ್ಲೆಯ ಶಹಾಬಾದ್‌ನಲ್ಲಿ ಬೆಳಿಗ್ಗೆ ವರುಣ ಅಬ್ಬರಿಸಿದ್ದಾನೆ. ಕಲಬುರಗಿ ನಗರದಲ್ಲಿ ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆ ಸುರಿಯಿತು. ಕಲಬುರಗಿಯಲ್ಲಿ ಬೆಳಿಗ್ಗೆ ತೀಕ್ಷ್ಣ …

Read More »

30 ತುಂಡಾಗಿ ಕತ್ತರಿಸಿ ಮಹಿಳೆ ಹತ್ಯೆ: ಫ್ರಿಡ್ಜ್‌ನಲ್ಲಿ ಮೃತದೇಹ ಬಚ್ಚಿಟ್ಟ ಆರೋಪಿ!

ಬೆಂಗಳೂರು: ನಗರದ ಮಲ್ಲೇಶ್ವರದ ಪೈಪ್‌ಲೈನ್‌ನ ಕೆ.ವಿ.ರಸ್ತೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರನ್ನು 30ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ, ಅವರ ಮೃತದೇಹವನ್ನು ಫ್ರಿಡ್ಜ್‌ನಲ್ಲಿ ಬಚ್ಚಿಟ್ಟಿದ್ದ ಪ್ರಕರಣ ತಡವಾಗಿ ಪತ್ತೆಯಾಗಿದೆ. ಮಹಾಲಕ್ಷ್ಮಿ(29) ಕೊಲೆಯಾದವರು. ಪ್ರಕರಣ ದಾಖಲಿಸಿಕೊಂಡಿರುವ ವೈಯಾಲಿಕಾವಲ್‌ ಠಾಣೆ ಪೊಲೀಸರು, ಪರಾರಿಯಾಗಿರುವ ಆರೋಪಿ ಪತ್ತೆಗೆ ಶೋಧ ಆರಂಭಿಸಿದ್ದಾರೆ. ಕೃತ್ಯದ ನಡೆದ ಸ್ಥಳಕ್ಕೆ ಬೆರಳಚ್ಚು, ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ತಜ್ಞರು, ಶ್ವಾನದಳ ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ದೆಹಲಿಯಲ್ಲಿ ನಡೆದಿದ್ದ ಶ್ರದ್ದಾ …

Read More »

ಲೋಕಾಯುಕ್ತ ಹೆಸರಿನಲ್ಲಿ ಹಣ ಕೇಳಿದರೆ ದೂರು ನೀಡಿ: ಲೋಕಾಯುಕ್ತ

ಬೆಂಗಳೂರು: ‘ಲೋಕಾಯುಕ್ತದ ಹೆಸರಿನಲ್ಲಿ ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ನೌಕರರಿಗೆ ಕರೆ ಮಾಡಿ, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಅಂತಹ ಕರೆ ಬಂದರೆ ತಕ್ಷಣವೇ ಗಮನಕ್ಕೆ ತನ್ನಿ’ ಎಂದು ಲೋಕಾಯುಕ್ತವು ಹೇಳಿದೆ. ‘ಸರ್ಕಾರಿ ನೌಕರರಿಗೆ ಕರೆ ಮಾಡಿ, ನಿಮ್ಮ ವಿರುದ್ಧ ಪ್ರಕರಣ ದಾಖಲಿಸದೇ ಇರಲು ಅಥವಾ ಪ್ರಕರಣ ರದ್ದುಪಡಿಸಲು ಹಣ ನೀಡುವಂತೆ ಕೆಲವರು ಒತ್ತಾಯಿಸುತ್ತಿರುವ ಬಗ್ಗೆ ದೂರು ಬಂದಿದೆ. ಲೋಕಾಯುಕ್ತದಿಂದ ಯಾವುದೇ ವ್ಯಕ್ತಿಗಳು ಹಾಗೆ ಕರೆ ಮಾಡುವುದಿಲ್ಲ. ಅಂತಹ ಕರೆ ಬಂದರೆ, …

Read More »

ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಪಿ.ಎಸ್.ಐ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ.

ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಪಿ.ಎಸ್.ಐ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ. ಸುರೇಶ ಬಾಬಾಸಾಬ ಖೋತ (59) ಅವರು ರಾಯಬಾಗ ಪೊಲೀಸ್ ಠಾಣೆಯಲ್ಲಿ ಹೆಚ್ಚುವರಿ ಪಿಎಸ್‌ಐಯಾಗಿ ಕರ್ತವ್ಯನಿರ್ವಹಿಸುತ್ತಿದ್ದರು. ಗಣೇಶೋತ್ಸವ ಹಿನ್ನೆಲೆಯಲ್ಲಿ ಬಂದೋಬಸ್ತ್ ಮುಗಿಸಿಕೊಂಡು ಮರಳಿ ಮನೆಗೆ ಬಂದಾಗ ಹೃದಯಾಘಾತವಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ನಿವಾಸದಲ್ಲಿ ಘಟನೆ ನಡೆದಿದ್ದು ತಕ್ಷಣವೇ ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಪಿಎಸ್‌ಐ ಸಾವನ್ನಪ್ಪಿದ್ದರಿಂದ …

Read More »

ಎಮ್ಮೆಗಳಿಗೂ ಇಲ್ಲೊಂದು ಬ್ಯೂಟಿ ಪಾರ್ಲರ್‌ ಇದೆ

ಇಲ್ಲೊಂದು ಬ್ಯೂಟಿ ಪಾರ್ಲರ್‌ ಇದೆ. ಒಳಗೆ ಹೋದ ತಕ್ಷಣ ಘಮಘಮ ಎನ್ನುವ ಸೋಪು ಹಾಕಿ ಸ್ನಾನ ಮಾಡಿಸುತ್ತಾರೆ. ಅನಗತ್ಯ ಮೈಗೂದಲು ತೆಗೆಯುತ್ತಾರೆ. ಮೈತುಂಬ ಎಣ್ಣೆ ಹಚ್ಚಿ ಮಾಲೀಶ್‌ ಮಾಡುತ್ತಾರೆ. ಕಾಲುಗಳಿಗೆ ಗೆಜ್ಜೆ ಕಟ್ಟಿ, ಕಿವಿಯೋಲೆ ಹಾಕಿ ಅಲಂಕಾರ ಮಾಡುತ್ತಾರೆ. ಇಷ್ಟಾದ ಮೇಲೆ ವಯ್ಯಾರಿ ಬಿಂಕ ಬಿನ್ನಾಣದಿಂದ ಹೊರಬರುತ್ತಾಳೆ. ಅರೆರೇ! ಇದೇನು ಮದುವಣಿಗಿತ್ತಿಯನ್ನು ತಯಾರು ಮಾಡುತ್ತಿದ್ದಾರೆಯೇ ಎಂದು ಕೇಳಬೇಡಿ. ಇಲ್ಲಿ ಸುಂದರಿಯಂತೆ ಅಲಂಕಾರಗೊಳ್ಳುತ್ತಿರುವುದು ಎಮ್ಮೆ! ಹೌದು, ಇದು ಎಮ್ಮೆಗಳ ಪಾರ್ಲರ್‌..! ಮಹಾರಾಷ್ಟ್ರದ …

Read More »

ಹಾವೇರಿ | ನೀರಿಲ್ಲ, ವಿದ್ಯುತ್ತಿಲ್ಲ: ಸೊರಗಿದ ಹುರುಳಿಕುಪ್ಪಿ ಆಸ್ಪತ್ರೆ

ಹಾವೇರಿ: ಮಳೆ ಬಂದರೆ ಸೋರುವ ಕಟ್ಟಡ, ಆವರಣದಲ್ಲಿ ಹೆಚ್ಚಾಗಿರುವ ಕಸ-ಕಂಟಿ, ತುರ್ತು ಪರಿಸ್ಥಿತಿಯಲ್ಲಿ ಲಭ್ಯವಾಗದ ಚಿಕಿತ್ಸೆ, ನೀರಿನ ಸೌಲಭ್ಯ ಹಾಗೂ ವಿದ್ಯುತ್ ಸಂಪರ್ಕವಿಲ್ಲದೇ ದಿನದೂಡುತ್ತಿರುವ ಸಿಬ್ಬಂದಿ, ಅರ್ಧಕ್ಕೆ ನಿಂತ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ…   ಜಿಲ್ಲೆಯ ಸವಣೂರು ತಾಲ್ಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿರುವ ಆರೋಗ್ಯ ವಿಸ್ತರಣಾ ಚಿಕಿತ್ಸಾಲಯ ಕೇಂದ್ರದ ದುಸ್ಥಿತಿ ಇದು. ಮೂಲಸೌಕರ್ಯಗಳ ಕೊರತೆಯಿಂದಾಗಿ ಕೇಂದ್ರ ಸೊರಗುತ್ತಿದೆ. ಗ್ರಾಮಸ್ಥರ ಹೋರಾಟದ ಫಲವಾಗಿ ಉದ್ಘಾಟನೆಗೊಂಡಿದ್ದ ಕೇಂದ್ರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗದಿದ್ದರಿಂದ, ಹುರುಳಿಕುಪ್ಪಿ ಹಾಗೂ …

Read More »

ಶಾಸಕ ಮುನಿರತ್ನ ವಿಶ್ವದಲ್ಲೇ ಕಂಡುಕೇಳರಿಯದಂತಹ ಸಂಚು ಮಾಡಿದ್ದಾರೆ : ಡಿಕೆಶಿ

ಬೆಂಗಳೂರು,ಸೆ.21- ವಿಶ್ವದಲ್ಲೇ ಕಂಡಿರದಂತಹ ಸಂಚನ್ನು ಆರ್‌ಆರ್‌ ನಗರ ಕ್ಷೇತ್ರದ ಶಾಸಕ ಮುನಿರತ್ನ ಸ್ವಪಕ್ಷ ಹಾಗೂ ವಿರೋಧಪಕ್ಷದ ವಿರುದ್ಧ ನಡೆಸಿದ್ದಾರೆ. ಬಿಜೆಪಿ, ಜೆಡಿಎಸ್‌‍ ನಾಯಕರು ಸತ್ಯಾಸತ್ಯತೆ ತಿಳಿದು ಮಾತನಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಚ್ಚರಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರ್ಯಾರು ಸಿಕ್ಕಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿ ಗೊತ್ತಿಲ್ಲ. ಎಲ್ಲವನ್ನೂ ಪರಿಶೀಲಿಸಿದ ಬಳಿಕ ಮಾತನಾಡುವುದು ಒಳ್ಳೆಯದು ಎಂದರು. ಮುನಿರತ್ನ ಪ್ರಕರಣದಲ್ಲಿ ಎಸ್‌‍ಐಟಿ ರಚನೆ ಮಾಡಬೇಕೆಂಬುದು ನಮ ಪಕ್ಷದ ಶಾಸಕರು, ಸಚಿವರು, …

Read More »