Breaking News

ರಾಷ್ಟ್ರೀಯ

ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವಿಡಿಯೋ ಸಂವಾದದ ಮೂಲಕ 2025-2026 ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳನ್ನು ಸಚಿವರು ಪ್ರಸ್ತಾಪಿಸಿದರು. ವಿಡಿಯೋ ಸಂವಾದಲ್ಲಿ ಇಲಾಖೆಯ ಹಾಗೂ …

Read More »

16ನೇ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸುತ್ತಿದ್ದಾರೆ C.M.

ಬೆಂಗಳೂರು: ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿದ್ದರಾಮಯ್ಯ ಅವರು ಇದೀಗ ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸುತ್ತಿದ್ದಾರೆ. ಮಾರ್ಚ್​ನಲ್ಲಿ ಮಂಡಿಸಲಿರುವ 2025-26 ಸಾಲಿನ ಆಯವ್ಯಯಗೆ ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವ ಸಿದ್ಧತಾ ಸಭೆಗಳನ್ನು ಆರಂಭಿಸಿದ್ದಾರೆ. ಬಜೆಟ್ ಮಂಡನೆಯಲ್ಲಿ ದಾಖಲೆ ಸೃಷ್ಟಿಸಿರುವ ಸಿಎಂ ಸಿದ್ದರಾಮಯ್ಯರ 15 ಆಯವ್ಯಯಗಳ ಸ್ವಾರಸ್ಯಕರ ಮಾಹಿತಿ ಇಲ್ಲಿದೆ. ಸಿಎಂ ಸಿದ್ದರಾಮಯ್ಯ 2025-26 ಸಾಲಿನ ಬಜೆಟ್ ಮಂಡನೆಗೆ ತಯಾರಿ …

Read More »

ಭದ್ರಾವತಿ ಶಾಸಕ ಸಂಗಮೇಶ್ ಮಗನ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ರಾಜಣ್ಣ

ಬೆಂಗಳೂರು: ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ ‘ಪುತ್ರರತ್ನ’ ಬಸವೇಶ್ ನಿನ್ನೆ ಭದ್ರಾವತಿಯ ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರಿಗೆ ಕೆಟ್ಟ ಪದಗಳನ್ನು ಬಳಸಿ ಬೈದಾಡಿರುವ ಸಂಗತಿ ಕನ್ನಡಿಗರಿಗೆಲ್ಲ ಗೊತ್ತಿದೆ. ಒಂದು ಸುಸಂಸ್ಕೃತ ಕುಟುಂಬ ಯೋಚಿಸಲೂ ಸಾಧ್ಯವಿಲ್ಲದಂಥ ಕೆಟ್ಟ ಪದಗಳನ್ನು ಬಸವೇಶ್ ಅಧಿಕಾರಿಯ ವಿರುದ್ಧ ಬಳಸಿದ್ದಾನೆ. ಅವನು ಬಳಸಿದ ಭಾಷೆ ಮತ್ತು ಅಧಿಕಾರಿಯೊಂದಿಗೆ ನಡೆದುಕೊಂಡಿರುವ ರೀತಿಯನ್ನು ಸಹಕಾರ ಸಚಿವ ಕೆಎನ್ ರಾಜಣ್ಣ ತೀವ್ರವಾಗಿ ಖಂಡಿಸಿದ್ದಾರೆ. ಶಾಸಕನ ಮಗನಾಗಲೀ ಆಥವಾ …

Read More »

ಟಾಟಾ ಮೋಟಾರ್ಸ್ ಕಾರುಗಳ ಮೇಲೆ ಬಂಪರ್ ರಿಯಾಯಿತಿ

ಟಾಟಾ ಕಾರುಗಳು ಫೆಬ್ರವರಿ ರಿಯಾಯಿತಿ ಕೊಡುಗೆಗಳು: ಈ ತಿಂಗಳು ನೀವು ಟಾಟಾ ಕಂಪನಿಯ ಹೊಸ ಕಾರು ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ, ಇದು ನಿಮಗೆ ಉತ್ತಮ ಅವಕಾಶ. ಟಾಟಾ ಮೋಟಾರ್ಸ್ ತನ್ನ 2024 ರ ಉತ್ಪಾದನಾ ವರ್ಷದ ಮಾದರಿಗಳ ಮೇಲೆ ಉತ್ತಮ ರಿಯಾಯಿತಿಗಳು ಮತ್ತು ವಿನಿಮಯ/ಸ್ಕ್ರ್ಯಾಪೇಜ್ ಬೋನಸ್ ಅನ್ನು ನೀಡುತ್ತಿದೆ. ಟಿಯಾಗೊ, ಟಿಗೋರ್, ಪಂಚ್, ನೆಕ್ಸಾನ್, ಆಲ್ಟ್ರೋಜ್, ಹ್ಯಾರಿಯರ್, ಸಫಾರಿ ಮುಂತಾದ ವಿವಿಧ ವಿಭಾಗಗಳ ಟಾಟಾ ಕಾರುಗಳ ಮೇಲೆ ನೀವು ಭಾರಿ …

Read More »

ಯತ್ನಾಳ್​ಗೆ ಶಿಸ್ತು ಪಾಲನಾ ಸಮಿತಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ರಾಜ್ಯ ಬಿಜೆಪಿ ಬಣ ಬಡಿದಾಟ ರಾಯಕೀಯ ಇದೀಗ ದೆಹಲಿ ಅಂಗಳಕ್ಕೆ ತಲುಪಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮತ್ತೊಮ್ಮೆ ಬಿಸಿ ಮುಟ್ಟಿಸಲು, ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಮಧ್ಯಪ್ರವೇಶ ಮಾಡಿದೆ. ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಪಾಲನಾ ಸಮಿತಿ ನೋಟಿಸ್ ಜಾರಿ ಮಾಡಿದೆ. ಪಕ್ಷದ ಶಿಸ್ತು ಪಾಲನೆ ಮಾಡದಿರುವ ಬಗ್ಗೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಯತ್ನಾಳ್, 72 ಗಂಟೆಯೊಳಗೆ ಉತ್ತರಿಸುವಂತೆ …

Read More »

ಅಮಾನತಾದ ಖಾನಾಪುರದ ತಹಶೀಲ್ದಾರ್‌ ಪ್ರಕಾಶ್​ ಗಾಯಕವಾಡ

ಬೆಳಗಾವಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಖಾನಾಪುರದ ತಹಶೀಲ್ದಾರ್‌ರನ್ನು ಅಮಾನತುಗೊಳಿಸಲಾಗಿದೆ. ಪ್ರಕಾಶ್​ ಗಾಯಕವಾಡ ಅಮಾನತಾದ ತಹಶೀಲ್ದಾರ್. ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷ್ ಹೆಚ್.​ಜಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಜ.7ರಂದು ಪ್ರಕಾಶ್​ ಗಾಯಕವಾಡ ವಿರುದ್ಧ ಬೆಳಗಾವಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜ.8ರಂದು ಇವರ ಬೆಳಗಾವಿ ಮನೆ, ಖಾನಾಪುರದ ಬಾಡಿಗೆ ಮನೆ ಮತ್ತು ತಹಶೀಲ್ದಾರ್ ಕಚೇರಿ, …

Read More »

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶ

ಬೆಳಗಾವಿ: ಮಹಾನಗರ ಪಾಲಿಕೆಯ ತಿನಿಸು ಕಟ್ಟೆ ಮಳಿಗೆಗಳನ್ನು ತಮ್ಮ ಪತ್ನಿಯರ ಹೆಸರಿನಲ್ಲಿ ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಸೋಮವಾರ ಆದೇಶಿಸಿದ್ದಾರೆ. ವಾರ್ಡ್ ನಂ.23ರ ಜಯಂತ ಜಾಧವ ಹಾಗೂ ವಾರ್ಡ್‌ ನಂ.41ರ ಸದಸ್ಯ ಮಂಗೇಶ ಪವಾರ ಅವರ ಪಾಲಿಕೆ ಸದಸ್ಯತ್ವ ಅನರ್ಹಗೊಳಿಸಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ್ ಆದೇಶಿಸಿದ್ದಾರೆ ತಿನಿಸು ಕಟ್ಟೆಗಳ ಹರಾಜಿನಲ್ಲಿ ಸದಸ್ಯ ಜಯಂತ ಜಾಧವ ಅವರು ತಮ್ಮ ಪತ್ನಿ ಸೋನಾಲಿ ಜಾಧವ …

Read More »

ಮುಡಾ ಹಗರಣ ಕೇಸ್: ಸಿಎಂ ಪತ್ನಿ ಹಾಗೂ ಸಚಿವ ಭೈರತಿ ಸುರೇಶ್​ಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು, (ಫೆಬ್ರವರಿ 10): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಇಡಿ ಸಮನ್ಸ್​ಗೆ​ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ.  ಇಡಿ ನೀಡಿರುವ ಸಮನ್ಸ್​ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,  ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ.20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇದರಿಂದ ಸಿಎಂ …

Read More »

ಕಲಬುರಗಿ ಯಲ್ಲಿ ಮತ್ತೊಂದು ಅಕ್ರಮ: ನಕಲಿ ಅಂಕಪಟ್ಟಿ ಮಾಫಿಯಾ

ಕಲಬುರಗಿ, ಫೆಬ್ರವರಿ 10: ಸದಾ ಪರೀಕ್ಷಾ ಅಕ್ರಮಗಳಿಂದ ಸುದ್ದಿಯಲ್ಲಿರುವ ಕಲಬುರಗಿಯಲ್ಲಿ ಇದೀಗ ಮತ್ತೊಂದು ಅಕ್ರಮ‌ದ ಆರೋಪ ಕೇಳಿ ಬಂದಿದೆ. ಎಸ್ಎಸ್ಎಲ್‌ಸಿ‌ ಅಂಕಪಟ್ಟಿಯನ್ನು ಪೋರ್ಜರಿ (fake marks cards) ಮಾಡಿ ಸರ್ಕಾರಿ ಹುದ್ದೆ ಪಡೆದಿದ್ದು ಬಟಾಬಯಲಾಗಿದೆ. ಆ ಮೂಲಕ ನಕಲಿ ಅಂಕಪಟ್ಟಿ ಮಾಫಿಯಾ ಹುಟ್ಟಿಕೊಂಡಿದೆಯಾ ಎನ್ನೋ ಆತಂಕ ಶುರುವಾಗಿದೆ. ಕಲಬುರಗಿ ಅಂದರೆ ಸಾಕು ಪರೀಕ್ಷಾ ಅಕ್ರಮಗಳ ತವರು ಎನ್ನೋ ಕುಖ್ಯಾತಿ ಪಡೆದಿತ್ತು. ಇದೀಗ ಅದೇ ಸಾಲಿಗೆ ಮಗದೊಂದು ಅಕ್ರಮ ಸೆರ್ಪಡೆಯಾಗಿರುವ ಆರೋಪ ಕೇಳಿ ಬಂದಿದೆ. ಅದೆನೆಪ್ಪಾ …

Read More »

ಪೊಲೀಸ್ ಠಾಣೆಯಲ್ಲೇ ಬೈಕ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ.

ಚಾಮರಾಜನಗರ: ಪೊಲೀಸ್ ಠಾಣೆಯ ಗೇಟ್​​ನ ಬೀಗ ಮುರಿದು ಒಳ ನುಗ್ಗಿ ಜಪ್ತಿ ಮಾಡಿ ಇಡಲಾಗಿದ್ದ ಬೈಕ್​​ ಕದ್ದಿರುವ ಘಟನೆ ಚಾಮರಾಜನಗರದ ಸಿಇಎನ್ ಠಾಣೆಯಲ್ಲಿ ನಡೆದಿದೆ. ಬೈಕ್ ಕದ್ದೊಯ್ದಿದ್ದ ಚಾಮರಾಜನಗರದ ಅರ್ಫಾಜ್ ಹಾಗೂ ಇಮ್ರಾನ್ ಎಂಬ ಆರೋಪಿಗಳನ್ನು ಪಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ತಡರಾತ್ರಿ ಅರ್ಫಾಜ್ ಮತ್ತು ಇಮ್ರಾನ್ ಕಾಂಪೌಂಡ್ ಹಾರಿ ಠಾಣಾ ಆವರಣಕ್ಕೆ ಬಂದು ಗೇಟಿನ ಬೀಗ ಮುರಿದಿದ್ದಾರೆ‌‌. ಬಳಿಕ, ಎನ್​​ಡಿಪಿಎಸ್ ಕಾಯ್ದೆಯಡಿ ಜಪ್ತಿ ಮಾಡಿದ್ದ ಹೊಂಡಾ ಶೈನ್ ಬೈಕ್​ನ್ನು …

Read More »