ಬೆಂಗಳೂರು: ರಾಜ್ಯ ಸರ್ಕಾರ ಇಷ್ಟು ದಿನ ಮೈಮರೆತು ಕುಳಿತಿದ್ದ ಕಾರಣ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದ್ದರೆ ರಾಜ್ಯದಲ್ಲಿ ಮಾತ್ರ ಕಳೆದ ಮೂರು ವಾರಗಳಿಂದ ತೀವ್ರತೆ ಶೇ.39ರಷ್ಟು ಹೆಚ್ಚಾಗಿದೆ. ಹೀಗಾಗಿ, ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ಸರ್ಕಾರ ಮನಸ್ಸು ಮಾಡಿದಂತೆ ಕಾಣುತ್ತಿದೆ. ಸರ್ಕಾರದ ಬತ್ತಳಿಕೆಯಲ್ಲಿದ್ದ ಮತ್ತೆ ಹಳೇ ನಿಯಮಗಳನ್ನು ಒಂದೊಂದಾಗಿ ಜಾರಿ ಮಾಡುತ್ತಿದೆ.ಮೊನ್ನೆಯಷ್ಟೇ …
Read More »ನನ್ನ ಹತ್ತಿರ ಹೆಲ್ಮೆಟ್ ಕೊಳ್ಳೋಕೂ ದುಡ್ಡಿಲ್ಲ. ಇನ್ನು ಮಾಸ್ಕ್ಗೆ ದಂಡ ಎಲ್ಲಿಂದ ಕಟ್ಟೋದು
ಬೆಂಗಳೂರು: ನಗರದಲ್ಲಿ ಮಾಸ್ಕ್ ಧರಿಸದವರಿಗೆ ಬಿಬಿಎಂಪಿ ಮಾರ್ಷಲ್ಗಳು ದಂಡ ವಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮಾರ್ಷಲ್ಗಳು ಕಾರ್ಯಾಚರಣೆಗೆ ಮುಂದಾದರು. ಈ ನಡುವೆ ಸರ್ ನನ್ನ ಹತ್ತಿರ ಕಾಸಿಲ್ಲ. ಹಾಗಾಗಿ ಮಾಸ್ಕ್ ಕೊಳ್ಳೋಕೆ ಆಗ್ಲಿಲ್ಲ. ಬೇಕಿದ್ರೆ ನನ್ ಬ್ಯಾಗ್ ಚೆಕ್ ಮಾಡಿ ಅಂತಾ ಯುವಕನೊಬ್ಬ ಮಾರ್ಷಲ್ಗಳಿಗೆ ಹೇಳಿದ್ದಾನೆ. ಮಾರ್ಷಲ್ಗಳು ಪ್ರಶ್ನಿಸುತ್ತಿದ್ದಂತೆ ಜೇಬಿನಲ್ಲಿ ಕೈಹಾಕಿ ಮಾಸ್ಕ್ಗಾಗಿ ಹುಡುಕಾಟ ನಡೆಸಿದನು. ಬಳಿಕ ಮಾಸ್ಕ್ ಹಾಕಿಲ್ಲ, ಫೈನ್ ಕಟ್ಟಿ ಅಂತಿದ್ದ ಹಾಗೆ ಗಳಗಳನೆ ಅಳಲು …
Read More »2017-18ರಲ್ಲಿನ ಪ್ರಕರಣಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ:R.ಅಶೋಕ್
ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್ ಹೇಳಿದ್ದಾರೆ. 50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು …
Read More »35 ವರ್ಷದ ಶಾಸಕ ಪ್ರಭು 19 ವರ್ಷದ ಸೌಂದರ್ಯ ಎಂಬಾಕೆ ಜೊತೆ ಮದುವೆ
ಚೆನ್ನೈ: ತಮಿಳುನಾಡಿದ ಕಲ್ಲಕುರಿಚಿ ಎಐಎಡಿಎಂಕೆಯ 35 ವರ್ಷದ ಶಾಸಕ ಪ್ರಭು 19 ವರ್ಷದ ಸೌಂದರ್ಯ ಎಂಬಾಕೆ ಜೊತೆ ಮದುವೆಯಾಗಿದ್ದಾನೆ. ಇದೀಗ ಈ ವಿವಾಹ ಸುದ್ದಿಯೂ ತಮಿಳುನಾಡಿನಾದ್ಯಂತ ಕಾಡ್ಗಿಚ್ಚಿನಂತೆ ಹರಡಿದೆ. ಇದೊಂದು ಅಂತರ್ಜಾತಿ ವಿವಾಹವಾಗಿದ್ದು, ವಧುವಿನ ತಂದೆ ಎಸ್.ಸ್ವಾಮಿನಾಥನ್ ಮದುವೆ ದಿನವೇ ವಧು-ವರರ ಮುಂದೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಈ ವಿವಾಹ ಭಾರೀ ವಿವಾದ ಸೃಷ್ಟಿಸಿದೆ. ಇವರ ಮದುವೆ ಅಕ್ಟೋಬರ್ 5 ಅಂದರೆ ಸೋಮವಾರ ನಡೆದಿದೆ. ಪ್ರಭು …
Read More »ರೈಲ್ವೇ ಟ್ರ್ಯಾಕ್ ನಲ್ಲಿ ರೈಲು ಮಾತ್ರ ಚಲಿಸುತ್ತೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ.ಟ್ರ್ಯಾಕ್ ನಲ್ಲಿ ಬೈಕ್ ಓಡಿಸುತ್ತಾರೆ ಅಚ್ಚರಿಯಾದರೂ ಸತ್ಯ.
ಪಾಟ್ನಾ: ಸಾಮಾನ್ಯವಾಗಿ ರೈಲ್ವೇ ಟ್ರ್ಯಾಕ್ ನಲ್ಲಿ ರೈಲು ಮಾತ್ರ ಚಲಿಸುತ್ತೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ. ಹೆಚ್ಚೆಂದರೆ ಜನ ಟ್ರ್ಯಾಕ್ ನಲ್ಲಿ ನಡೆದುಕೊಂಡು ಹೋಗಬಹುದು ಅಷ್ಟೆ. ಆದರೆ ಈ ಟ್ರ್ಯಾಕ್ ನಲ್ಲಿ ಬೈಕ್ ಓಡಿಸುತ್ತಾರೆ ಅಚ್ಚರಿಯಾದರೂ ಸತ್ಯ. ಹೌದು. ಪ್ರಯಾಣಿಕರ ರೈಲು ಆಗಿರಲಿ ಅಥವಾ ಪ್ರಯಾಣಿಕರಿಗೆ ಸರಕು ಸಾಗಟ ಮಾಡುವ ರೈಲುಗಳು ಓಡಲು ಹಳಿಗಳ ಮಿತಿಯನ್ನು ನಿಗದಿಪಡಿಸಲಾಗಿದೆ. ಈ ಹಳಿಯಲ್ಲಿ ಬೇರೆ ಯಾವುದೇ ವಾಹನ ಚಲಿಸುವುದನ್ನು ನಿಷೇಧಿಸಲಾಗಿದೆ. ಆದರೆ ಬಿಹಾರದ …
Read More »ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟುಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಡಿಕೆಶಿ ಒಬ್ಬರೇ ಟಾರ್ಗೆಟ್ ಯಾಕೆ?
ಬೆಳಗಾವಿ: ಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಕಾಂಗ್ರೆಸ್ ನವರೇ ಟಾರ್ಗೆಟ್ ಯಾಕೆ ? ಎಂದು ಖಾರವಾಗಿ ಪ್ರಶ್ನಿಸಿರುವ ಕೆಪಿಸಿಸಿ ಕರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಯಾರೂ ಹರಿಶ್ಚಂದ್ರ ಇರುವುದಿಲ್ಲ, ಆದ್ರೆ ಎಲ್ಲದಕ್ಕೂ ಇತಿ ಮೀತಿ ಇರಬೇಕು. ಪ್ರಹ್ಲಾದ ಜೋಶಿ ತಮ್ಮ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮುಚ್ಚಿಟ್ಟಿದ್ದಾರೆ. ನಮ್ಮ ಸರ್ಕಾರವನ್ನು 10 ಪರ್ಸೆಂಟೆಜ್ …
Read More »ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಸಾಂಸಾರಿಕ ಜೀವನಕ್ಕೆ ಕಾಲಿಡಲಿದ್ದಾರೆ.
ಹೈದರಾಬಾದ್: ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಸಾಂಸಾರಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಮದ್ವೆಯ ಮಾಹಿತಿಯನ್ನ ಕಾಜಲ್ ಹಂಚಿಕೊಂಡಿದ್ದಾರೆ. ನಾನು ಇದೇ ಅಕ್ಟೋಬರ್ 30ರಂದು ಗೌತಮ್ ಕಿಟ್ಚು ಅವರನ್ನು ಮುಂಬೈನಲ್ಲಿ ಮದುವೆ ಆಗುತ್ತಿದ್ದೇನೆ. ಮದುವೆಗೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನ ಮಾತ್ರ ಆಹ್ವಾನಿಸಲಾಗಿದೆ. ಹೊಸ ಜೀವನಕ್ಕೆ ಕಾಲಿಡಲು ನಾನು ಥ್ರಿಲ್ ಆಗಿದ್ದೇನೆ. ಇಷ್ಟು ದಿನ ನೀವು ತೋರಿಸಿದ ಅನಿಯಮಿತ ಪ್ರೀತಿಗೆ ಅಭಾರಿಯಾಗಿದ್ದು, ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಲಿ. ಹೊಸ …
Read More »ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್ ಹೆದರುವ ಮಗ ಅಲ್ಲ.ಯಾವುದಕ್ಕೂ ಜಗ್ಗಲ್ಲ: ಡಿಕೆಶಿ
ಬೆಂಗಳೂರು: ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್ ಹೆದರುವ ಮಗ ಅಲ್ಲ. ಇದು ಸದ್ಯಕ್ಕೆ ಮುಗಿಯುವುದಿಲ್ಲ. ಚುನಾವಣೆ ನಡೆಯುವವರೆಗೂ ಇರುತ್ತದೆ ಎಂದು ಡಿಕೆಶಿ ಹೇಳಿದ್ದಾರೆ ಸಿಬಿಐ ದಾಳಿ ಬಳಿಕ ನಿವಾಸದಿಂದ ಹೊರಬಂದು ಕಾರ್ಯರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 30 ವರ್ಷಗಳಿಂದ ಇರುವ ಎಲ್ಲ ಮಂತ್ರಿಗಳು ಹರಿಶ್ಚಂದ್ರನ ಮೊಮ್ಮಕ್ಕಳು. ಈಗ ನನಗೆ ರಾಜಕೀಯವಾಗಿ ತೊಂದರೆ ನೀಡುತ್ತಿದ್ದರಲ್ಲ ಅವರೆಲ್ಲ ಚೆನ್ನಾಗಿರಲಿ ಎಂದರು.ನಾನು ನನ್ನ ಸಹೋದರ, ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ನಿಮ್ಮ ಅಭಿಮಾನಕ್ಕೆ ತಲೆ …
Read More »ಬೆಳಗ್ಗೆ 6 ಗಂಟೆಯಿಂದ ಸಿಬಿಐ ನಡೆಸುತ್ತಿದ್ದ ದಾಳಿ ಅಂತ್ಯ
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ಇಂದು ಬೆಳಗ್ಗೆ 6 ಗಂಟೆಯಿಂದ ಸಿಬಿಐ ನಡೆಸುತ್ತಿದ್ದ ದಾಳಿ ಅಂತ್ಯಗೊಂಡಿದೆ. ವಾಡಿಕೆಯ ಪ್ರಕಾರ ಸಿಬಿಐ,ಇಡಿ ಮುಂತಾದ ತನಿಖಾ ಸಂಸ್ಥೆಗಳು ದಾಳಿ ನಡೆಸಿದ ಬಳಿಕ, ಆರೋಪಿಗಳನ್ನು ತತ್ಕ್ಷಣ ಬಂಧಿಸುವುದಿಲ್ಲ. ಅಕಸ್ಮಾತ್ ಆರೋಪಿಗಳು ವಿದೇಶಕ್ಕೆ ಪರಾರಿಯಾಗುವ ಅಥವಾ ಸಾಕ್ಷ್ಯ/ದಾಖಲೆಗಳನ್ನು ನಾಶ ಪಡಿಸುತ್ತಾರೆ ಎಂಬ ಗುಮಾನಿ ಬಂದ್ರೆ ಬಂಧನಕ್ಕೆ ಮುಂದಾಗುತ್ತದೆ. ಪ್ರಸ್ತುತ, ಡಿ.ಕೆ.ಶಿವಕುಮಾರ್ ಮನೆ ಸೇರಿ ಹಲವೆಡೆ ಸಿಬಿಐ ದಾಳಿ ನಡೆಸಿದ …
Read More »ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ, ಕುಗ್ಗಲ್ಲ – ಸಿಬಿಐ ದಾಳಿಗೆ ಡಿ.ಕೆ ಸುರೇಶ್ ಪ್ರತಿಕ್ರಿಯೆ
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು ಎಂದು ಸಿಬಿಐ ದಾಳಿಗೆ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಡಿ.ಕೆ.ಸುರೇಶ್ ಟ್ವೀಟ್ ಮಾಡುವ ಮೂಲಕ ಸಿಬಿಐ ದಾಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. “ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ” …
Read More »