Breaking News

ರಾಷ್ಟ್ರೀಯ

ಜೈಲಲ್ಲಿರುವ ರೌಡಿಯ ಪತ್ನಿಯ ಜತೆ ಅಕ್ರಮ ಸಂಬಂಧ: ರೌಡಿಶೀಟರ್‌ನ ಕುತ್ತಿಗೆ ಸೀಳಿ ಬರ್ಬರ ಕೊಲೆ!

ಬೆಂಗಳೂರು: ರಶೀದ್ ಮಲಬಾರಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದವನ ಕುಖ್ಯಾತ ರೌಡಿ ಶೀಟರ್‌ ಸೈಯದ್ ಕರೀಂ ಅಲಿ ಎಂಬಾತನನ್ನು ನಗರದಲ್ಲಿ ಕೊಲೆ ಮಾಡಲಾಗಿದೆ. ಬೇರೊಬ್ಬನ ಪತ್ನಿಯ ಜತೆ ಈತ ಅಕ್ರಮ ಸಂಬಂಧ ಹೊಂದಿದ್ದು ಅದೇ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಸೈಯದ್‌ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಗೋವಿಂದ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೈಯದ್‌ ಇನ್ನೋರ್ಚ ರೌಡಿ ಅನೀಸ್ ಎಂಬಾತನ …

Read More »

ಡ್ರೋನ್ ಗಳಲ್ಲಿ ಔಷಧಿ ವಿತರಣೆ ಕಾರ್ಯ ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರಾರಂಭ

ಚಿಕ್ಕಬಳ್ಳಾಪುರ:ಭಾರತದಲ್ಲಿ ವೈದ್ಯಕೀಯ ಸೇವೆಗಳಿಗೆ ಬದಲಾವಣೆ ತರಲು ಸಾಬೀತುಪಡಿಸುವ ಈ ಕ್ರಮದಲ್ಲಿ, ಡ್ರೋನ್ ಮೂಲಕ ಔಷಧಿ ವಿತರಣೆಯ ಪ್ರಯೋಗವನ್ನು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಶಂಬುಕಾ ನಗರದಲ್ಲಿ ಪ್ರಾರಂಭಿಸಲಾಗಿದೆ. ಮುಂದಿನ 40 ರಿಂದ 45 ದಿನಗಳವರೆಗೆ ಬೆಂಗಳೂರು ಮೂಲದ ಥ್ರೊಟಲ್ ಏರೋಸ್ಪೇಸ್ ಸಿಸ್ಟಮ್ಸ್ (ಟಿಎಎಸ್) ಪ್ರಯೋಗಗಳನ್ನು ನಡೆಸಲಿದೆ. ಚಿಕ್ಕಬಳ್ಳಾಪುರದಲ್ಲಿ ಈ ಪ್ರಯೋಗಕ್ಕಾಗಿ ಎರಡು ಮೆಡಿಕಾಪ್ಟರ್ ಡ್ರೋನ್‌ಗಳನ್ನು ಬಳಸಲಾಗುತ್ತಿದೆ.ಮೊದಲ ಡ್ರೋನ್ 15 ಕಿ.ಮೀ ವ್ಯಾಪ್ತಿಯೊಂದಿಗೆ 1 ಕೆ.ಜಿ ವರೆಗೆ ತಲುಪಿಸುವ ಸಾಮರ್ಥ್ಯವನ್ನು …

Read More »

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮಸ್ಯೆ: ಅಧಿಕಾರಿಗಳೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಸಭೆ

ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ತಾಲೂಕು ಪಂಚಾಯಿತಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ, ಸಲಹೆ ಸೂಚನೆ ನೀಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಗ್ರಾಮಗಳ ಜನರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ತಾಲೂಕು …

Read More »

ಗೋಕಾಕ ಸಾರ್ವಜನಿಕರ ಗಮನಕ್ಕೆ,ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ.

ಗೋಕಾಕ ಸಾರ್ವಜನಿಕರ ಗಮನಕ್ಕೆ, ದಿನಾಂಕ: 22.06.2021 ರಂದು ಮಾತ್ರ ಗೋಕಾಕ ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ 1. ಮಯೂರ್ ಸ್ಕೂಲ್ 2. ಅಕ್ಕಮಹಾದೇವಿ ದೇವಸ್ಥಾನ ಬಣಗಾರ್ ಗಲ್ಲಿ 3. ಸಿಟಿ PHC, ಗೊಂಬಿ ಗುಡಿ ಹತ್ತಿರ 4. ನ್ಯೂ ಇಂಗ್ಲಿಷ್ ಸ್ಕೂಲ್ ( ಸರಕಾರಿ ಆಸ್ಪತ್ರೆ ಬದಲಾಗಿ) ಗಳಲ್ಲಿ ಮಾತ್ರ ಲಸಿಕಾ ಮೇಳ (vaccin camp) ನಡೆಯಲಿದ್ದು, ಇವನ್ನು ಹೊರತು ಪಡಿಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹಾಗು ಇತರ ಕಡೆಗಳಲ್ಲಿ …

Read More »

ಮಹಿಳೆ ಹೆಸರಲ್ಲಿ ಅಶ್ಲೀಲ ಚಾಟಿಂಗ್‌ ; ಥಳಿಸಿ ಪೋಲೀಸರಿಗೆ ಒಪ್ಪಿಸಿದ ಮಹಿಳೆ

ಮಡಿಕೇರಿ : ಯುವತಿಯ ಹೆಸರನ್ನು ಹಾಕಿಕೊಂಡು ನಕಲಿ ಪ್ರೊಪೈಲ್‌ ಮಾಡಿ ಫೇಸ್​ಬುಕ್​ನಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮೆಸೇಜ್​ ಮಾಡುತಿದ್ದ ಯುವಕನನ್ನು ಉಪಾಯವಾಗಿ ಕರೆಸಿಕೊಂಡು ಥಳಿಸಿ, ನಂತರ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಇಲ್ಲಿಗೆ ಸಮೀಪದ ಹಾಕತ್ತೂರಿನ ಅಶ್ರಫ್‌ ಎಂಬ ಯುವಕ ಕಳೆದ 15 ದಿನಗಳಿಂದ ಅರುಣಾ ಎಂಬ ಯುವತಿಯ ಹೆಸರಿನ ಮೂಲಕ ಮಹಿಳೆಯೊಬ್ಬರೊಂದಿಗೆ ಅಶ್ಲೀಲವಾಗಿ ಚಾಟಿಂಗ್​ ಮಾಡುತ್ತಿದ್ದ. ಮಹಿಳೆಯು ಈ ರೀತಿ ಚಾಟಿಂಗ್‌ ಮಾಡಬಾರದೆಂದು ಎಚ್ಚರಿಕೆ ನೀಡಿದ್ದರೂ ಈ …

Read More »

ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ತುಮಕೂರು: ಭಯೋತ್ಪಾದನೆ, ಭ್ರಷ್ಟಾಚಾರ, ಅತ್ಯಾಚಾರ, ಲವ್ ಜಿಹಾದ್, ಗೋಹತ್ಯೆಯ ವಿರುದ್ಧ ನಾನು ಹೋರಾಟ ಮಾಡುತಿದ್ದೇನೆ. ಆದರೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪದೇಪದೆ ವಿಚಾರಣೆ ನೆಪದಲ್ಲಿ ನನಗೆ ಮಾನಸಿಕ ಕಿರುಕುಳ ನೀಡುತಿದ್ದು, ಅನೇಕ ಬಾರಿ ವಿಚಾರಣೆಗೆಂದು ಕರೆದು ಸುಳ್ಳು ಆರೋಪದಡಿ ಬಂಧಿಸಿದ್ದಾರೆ. ಹಿಂದೂ ಸಮಾಜ ನನ್ನ ಬೆಂಬಲಕ್ಕೆ ನಿಲ್ಲದಿರುವುದು ತುಂಬಾ ನೋವು ತಂದಿದೆ. ನನಗೆ ಪೊಲೀಸರ ಕಿರುಕುಳ ಸಹಿಸಲಾಗುತ್ತಿಲ್ಲ. ನನಗೆ ದಯಾಮರಣ ನೀಡಿ ಎಂದು ರಾಜ್ಯಪಾಲರಿಗೆ ಮಧುಗಿರಿಮೋದಿ ಮನವಿ ಪತ್ರ ಸಲ್ಲಿಸಿದ್ದಾರೆ. …

Read More »

ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರ..?

ಬೆಳಗಾವಿ :  ಸಿಡಿ ಪ್ರಕರಣದ ನಂತ್ರ, ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಶತಾಯಗತಾಯ ಮತ್ತೆ ಸಚಿವರಾಗಬೇಕು ಎನ್ನುವಂತ ಕಸರತ್ತಿನಲ್ಲಿಯೂ ತೊಡಗಿರುವಂತ ಅವರು, ಮಂತ್ರಿ ಸ್ಥಾನ ಸಿಗದೇ ಇದ್ದರೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸರ್ಕಾರದ ವಿರುದ್ಧವೇ ಸೆಡ್ಡು ಹೊಡೆಯಲಿದ್ದಾರೆ ಎನ್ನಲಾಗುತ್ತಿದೆ.   ಸಿಡಿ ಪ್ರಕರಣದ ನಂತ್ರ, ಬೆಂಗಳೂರಿನಿಂದಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರ ಉಳಿದು, …

Read More »

ಕಿರಿಯ ವಯಸ್ಸಿನಲ್ಲಿ ವಾಯು ಸೇನೆಗೆ ಬೆಳಗಾವಿ ಯುವಕ ಆಯ್ಕೆ.

ಬೆಳಗಾವಿ:-ಸ್ಥಳೀಯ ಲಕ್ಷ್ಮೀ ನಗರದ ಯುವಕ ಗಿರೀಶ ಸದಾಶಿವ ಬಿಳ್ಳೂರ ಎನ್ ಡಿಎ ಪರೀಕ್ಷೆ ಪಾಸಾಗಿದ್ದು, ವಾಯು ಸೇನೆಯ ಪ್ಲಾಯಿಂಗ್ ಆಪೀಸರ್( ಫೈಟರ್ ಪೈಲಟ್) ಹುದ್ದೆಯನ್ನು ಅಲಂಕರಿಸಲಿದ್ದಾರೆ. ಸೇನಾಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆ ಗಿರೀಶ ಆಯ್ಕೆಯಾಗಿದ್ದು, ಶೀಘ್ರವೇ ಹೈದರಾಬಾದಿನ ದುಂಡಿಗಲ್ ಕೇಂದ್ರದಲ್ಲಿ ತರಬೇತಿ ಪಡೆದು, ಬಿದರನ ವಾಯು ನೆಲೆಯಾದ ಹೌಕ್ಸ್ (ಹಕೀಂ ಪೇಠ) ಪ್ರಥಮ ಸೇವೆ ಸಲ್ಲಿಸಿದ್ದಾರೆ. ಶನಿವಾರ ಹೈದರಾಬಾದನಲ್ಲಿ ಜರುಗಿದ ವಾಯು ಸೇನೆಯ ಉನ್ನತಾಧಿಕಾರಿಗಳ ತರಬೇತಿ ಕೇಂದ್ರದಲ್ಲಿ ದೇಶದ ಸೇನೆಯಲ್ಲಿಯ ಉನ್ನತ …

Read More »

ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಕಾರಣ ಉಡುಪಿ, ಶಿವಮೊಗ್ಗ ಸೇರಿದಂತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದಿನಿಂದ ಅನ್ ಲಾಕ್ ಪ್ರಕ್ರಿಯೆಗೆ ಒಳಪಟ್ಟ 16 ಜಿಲ್ಲೆಗಳೊಂದಿಗೆ ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ …

Read More »

ಕೊರೊನಾ ಗಂಡಾಂತರ ಕಾಲದಲ್ಲಿ ನಮ್ಮ ದೇಶದ ಯೋಗ ಭರವಸೆಯ ಆಶಾ ಕಿರಣವಾಗಿದೆ : ಪ್ರಧಾನಿ ಮೋದಿ

ನವದೆಹಲಿ: ಕೊರೊನಾ ಗಂಡಾಂತರ ಕಾಲದಲ್ಲಿ ನಮ್ಮ ದೇಶದ ಯೋಗ ಭರವಸೆಯ ಆಶಾ ಕಿರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 7ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮಾತನಾಡಿದ ಅವರು, ಭಾರತದಲ್ಲಿ ಕೊರೋನಾ ವೈರಸ್ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಸಾರ್ವಜನಿಕ ಸಭೆ, ಸಮಾರಂಭ-ಕಾರ್ಯಕ್ರಮಗಳು ನಡೆದಿಲ್ಲ. ಆದರೂ ಜನರಲ್ಲಿ ಯೋಗದ ಬಗ್ಗೆ ಇರುವ ಉತ್ಸಾಹ, ಆಸಕ್ತಿ ಇನ್ನೂ ಕಡಿಮೆಯಾಗಿಲ್ಲ ಎಂದರು. ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು …

Read More »