Breaking News

ರಾಷ್ಟ್ರೀಯ

ನೀರಿನಲ್ಲೂ ಪತ್ತೆಯಾದ ಕೋವಿಡ್ ವೈರಸ್​​​!

ಲಖನೌ : ಕೋವಿಡ್​ ಎರಡನೇ ಅಲೆಗೆ ಸಿಲುಕಿ ದೇಶಕ್ಕೆ ದೇಶವೇ ತತ್ತರಿಸಿರುವ ನಡುವೆ, ಈಗ ಇನ್ನೊಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದ್ದು, ನೀರಿನಲ್ಲಿ ಕೋವಿಡ್ ವೈರಸ್ ಪತ್ತೆಯಾಗಿರುವುದಾಗಿ ತಜ್ಞರು ಹೇಳಿದ್ದಾರೆ. ಇಂಡಿಯನ್ ಕೌನ್ಸಿಲ್ ಆಫ್​ ಮೆಡಿಕಲ್ ರಿಸರ್ಚ್ ( ಐಸಿಎಂಆರ್​) ಮತ್ತು ವಿಶ್ವ ಆರೋಗ್ಯ ಸಂಸ್ಥೆ ( ಡಬ್ಲ್ಯುಹೆಚ್​ಒ ) ಜಂಟಿಯಾಗಿ ಕೊಳಚೆ ನೀರಿನಲ್ಲಿ ವೈರಸ್ ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿತ್ತು.ಇದಕ್ಕಾಗಿ ಉತ್ತರ ಪ್ರದೇಶದ ಕೆಲ ಭಾಗಗಳಿಂದ ಕೊಳಚೆ ನೀರು …

Read More »

ಸನ್ನಿ ಲಿಯೋನ್‍ಗೆ ಬಟ್ಟೆ ತೊಡಿಸಿ ಸುಸ್ತಾದ ಆರ್ಮಿ ತಂಡ

ಮುಂಬೈ: ಮಾದಕ ನಟಿ ಸನ್ನಿ ಲಿಯೋನ್ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತಾರೆ. ನಾನಾ ವಿಚಾರಕ್ಕೆ ಸುದ್ದಿಯಾಗುವ ಬೇಬಿ ಡಾಲ್ ಬಟ್ಟೆ ತೊಟ್ಟುಕೊಳ್ಳಲು ಕಷ್ಟ ಪಡುತ್ತಿರುವ ವೀಡಿಯೋ ಸಖತ್ ವೈರಲ್ ಆಗಿದೆ. ಸನ್ನಿ ಲಿಯೋನ್ ರಿಯಾಲಿಟಿ ಶೋವೊಂದರಲ್ಲಿ ನಿರೂಪಕಿಯಾಗಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್‍ನ ಜನಪ್ರಿಯ Splitsvilla ಶೋಗೆ ನಿರೂಪಕಿಯಾಗಿದ್ದಾರೆ. ಇದೀಗ ಈ ಕಾರ್ಯಕ್ರಮಕ್ಕೆ ತಯಾರಾಗುತ್ತಿರುವ ಹಿನ್ನಲೆಯಲ್ಲಿ ತನಗೆ ಕಾಸ್ಟ್ಯೂಮ್ ತೊಡಿಸಲು ಕಷ್ಟ ಪಟ್ಟ ತಂಡವೊಂದರ ಚಿತ್ರವನ್ನು ಸನ್ನಿ ಲಿಯೋನ್ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ …

Read More »

ಶವ ಕೊಡಲು ಬಿಲ್ ಬಾಕಿ ಕೇಳಿದರೆ ಆಸ್ಪತ್ರೆ ನೋಂದಣಿ ರದ್ದು: ಸರ್ಕಾರ

ಮೈಸೂರು: ಕೋವಿಡ್ ಸೋಂಕಿತರು ಆಸ್ಪತ್ರೆಗಳಲ್ಲಿ ಮೃತಪಟ್ಟರೆ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರಿಸಲು ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿದರೆ. ಅಂತಹ ಆಸ್ಪತ್ರೆಗಳ ನೋಂದಣಿ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶಿಸಿದೆ. ರಾಜ್ಯದ ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರು ಮೃತಪಟ್ಟಲ್ಲಿ ಆಸ್ಪತ್ರೆಯ ಹಾಗೂ ಚಿಕಿತ್ಸೆಯ ಬಾಕಿ ವೆಚ್ಚವನ್ನು ಪಾವತಿಸಿದ ನಂತರವೇ ಶವವನ್ನು ಸಂಬಂಧಿಕರಿಗೆ ನೀಡುವಂತೆ ಷರತ್ತು ವಿಧಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಮೃತ ವ್ಯಕ್ತಿಯ ದೇಹವನ್ನು ಹಸ್ತಾಂತರಿಸುವ ವೇಳೆ ಆಸ್ಪತ್ರೆಯ …

Read More »

ತುರ್ತು ಸೇವೆಗೆ ಆಂಬುಲೆನ್ಸ್‌ ವ್ಯವಸ್ಥೆ

ಕಾರಟಗಿ: ‘ಕ್ಷೇತ್ರದಲ್ಲಿ ಕೊರೊನಾ ಸೋಂಕಿತರು ಸೇರಿದಂತೆ ವಿವಿಧ ರೋಗಿಗಳಿಗೆ ತುರ್ತು ಆರೋಗ್ಯ ಸೇವೆ ಸಮರ್ಪಕವಾಗಿ ದೊರೆಯಲಿ ಎನ್ನುವ ಉದ್ದೇಶದಿಂದ ವೈಯಕ್ತಿಕ ವೆಚ್ಚದಲ್ಲಿ 2 ಆಮ್ಲಜನಕ ಸಹಿತ ಆಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜನರು ಅಗತ್ಯ ಸಂದರ್ಭದಲ್ಲಿ ಪ್ರಯೋಜನಾ ಪಡೆಯಬಹುದು’ ಎಂದು ಶಾಸಕ ಬಸವರಾಜ ದಢೇಸೂಗೂರು ಹೇಳಿದರು. ಭಾನುವಾರ ತಮ್ಮ ಕಚೇರಿ ಬಳಿ ಆಂಬುಲೆನ್ಸ್‌ ಹಸ್ತಾಂತರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕ್ಷೇತ್ರದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವುದು ಕಳವಳಕಾರಿ ಸಂಗತಿ. ಗ್ರಾಮೀಣ ಪ್ರದೇಶದ ರೋಗಿಗಳು ಚಿಕಿತ್ಸೆಗಾಗಿ …

Read More »

ಕೊರೋನ ಇಂದ ಪಾರಾಗಲು ಪಾರಿಜಾತ ಎಲೆಯ ಕಷಾಯ ಕುಡಿಯಿರಿ: ಅವಧುತ ವಿನಯ್ ಗುರೂಜಿ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಕೊರೋನಗೆ ಮದ್ದು ಒಂದನ್ನು ಹೇಳಿದ್ದು, ಪಾರಿಜಾತ ಎಲೆಯ ಕಷಾಯ ಮಾಡಿ ಕುಡಿಯಿರಿ ಎಂದಿದ್ದಾರೆ. ಎಲ್ಲರೂ ಪಾರಿಜಾತ ಎಲೆಯ ಕಷಾಯ ಕುಡಿಯುವಂತೆ ತಮ್ಮ ಭಕ್ತರಿಗೆ ಸಂದೇಶವನ್ನೂ ಅವರು ರವಾನಿಸಿರುವ ಇವರು, ಕಷಾಯ ತಯಾರಿಸುವ ವಿಧಾನವನ್ನೂ ತಿಳಿಸಿದ್ದಾರೆ . ಅವರು ತಿಳಿಸಿರುವ ಪ್ರಕಾರ ಐದು ಪಾರಿಜಾತದ ಎಲೆ , ಕಾಳುಮೆಣಸು , ಶುಂಠಿ , ಲಿಂಬೆಹಣ್ಣಿನ ರಸ ಹಾಕಿ ಕುದಿಸಿ ಕುಡಿದರೆ …

Read More »

ಇಂದಿನಿಂದ ಝೊಮ್ಯಾಟೋ ಉದ್ಯೋಗಿಗಳಿಗೆ ಕೊವೀಡ್ ಲಸಿಕೆ ವಿತರಣೆ: ಸಿಇಒ ಘೋಷಣೆ

ದೆಹಲಿ: ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲೂ ಕೆಲಸ ಮಾಡಿದ ಝೊಮ್ಯಾಟೋ ಆನ್‍ಲೈನ್ ಫುಡ್ ಆರ್ಡರ್ ಕಂಪನಿಯ ಉದ್ಯೋಗಿಗಳು, ಸಿಬ್ಬಂದಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಸಂಸ್ಥೆಯ ಸಿಇಒ ದೀಪಿಂದರ್ ಗೋಯಲ್ ತಿಳಿಸಿದ್ದಾರೆ. ಹೀಗಾಗಿ ಜೊಮ್ಯಾಟೋದ ಸುಮಾರು 1.5 ಲಕ್ಷ ಉದ್ಯೋಗಿಗಳು ಕಂಪನಿಯ ವತಿಯಿಂದ ಉಚಿತವಾಗಿ ಕೊರೊನಾ ಲಸಿಕೆ ಪಡೆಯಲಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಈಗಾಗಲೇ ಲಸಿಕೆ ವಿತರಣೆ ನಡೆಯುತ್ತಿದ್ದು, ಸಾವಿರಕ್ಕೂ ಹೆಚ್ಚು ಮಂದಿ ವ್ಯಾಕ್ಸಿನೇಶನ್ ಮಾಡಿಸಿಕೊಂಡಿದ್ದಾರೆ. ಇಂದಿನಿಂದ ಮುಂಬೈ ಮತ್ತು ಬೆಂಗಳೂರಿನಲ್ಲಿರುವ ಝೊಮ್ಯಾಟೋ …

Read More »

ಪುತ್ರನನ್ನು ಕಳೆದುಕೊಂಡ ತಂದೆ-1 ಕೋಟಿ ಪರಿಹಾರ ಕೊಟ್ಟ ಕೇಜ್ರಿವಾಲ್

ನವದೆಹಲಿ: ಕೊರೊನಾ ವಾರಿಯರ್ ಆಗಿರುವ ವೈದ್ಯರೊಬ್ಬರು ಕೋವಿಡ್‍ಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬರೋಬ್ಬರಿ 1ಕೋಟಿ ರೂಪಾಯಿ ಹಣವನ್ನು ಪರಿಹಾರವಾಗಿ ಕೊಟ್ಟಿದ್ದಾರೆ. ಡಾ. ಅನಾಸ್(26) ಮೃತ ವೈದ್ಯರಾಗಿದ್ದಾರೆ. ಇವರು ಕೊರೊನಾ ಸೋಂಕಿನಿಂದ ಇತ್ತೀಚೆಗಷ್ಟೇ ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಅರವಿಂದ್ ಕೇಜ್ರಿವಾಲ್ ಅವರು ಸಹಾಯವನ್ನು ಮಾಡಿದ್ದಾರೆ. ಮೃತ ಡಾ. ಅನಾಸ್ ಅವರ ಮನೆಗೆ ಭೇಟಿನೀಡಿ ಅವರ ತಂದೆಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು …

Read More »

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣ ಸಂಬಂಧ ಮೂಡಿಗೆರೆ ತಾಲೂಕಿನ ಗೋಣಿಬೀಡು ಪಿಎಸ್​ಐ ಅರ್ಜುನ್​ ವಿರುದ್ಧ ಶನಿವಾರ ಎಫ್​ಐಆರ್​ ದಾಖಲಾಗಿದೆ. ಯುವಕ ಪುನೀತ್ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪುನೀತ್​ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ. ವಿವಾಹಿತ ಮಹಿಳೆಗೆ ಫೋನ್​ ಮಾಡಿದ ಆರೋಪ ಮೇಲೆ ಪುನೀತ್​ನನ್ನು ವಿಚಾರಣೆಗಾಗಿ ಅರ್ಜುನ್​ ಠಾಣೆಗೆ ಕರೆದೊಯ್ದಿದ್ದರು. ವಿಚಾರಣೆ ಸಂದರ್ಭದಲ್ಲಿ ಜಾತಿನಿಂದನೆ ಮಾಡಿ, ಮೂತ್ರ ಕುಡಿಸಿದ್ದಾರೆಂದು ಅರ್ಜುನ್​ ವಿರುದ್ಧ ಪುನೀತ್​ ಗಂಭೀರ …

Read More »

ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ

  ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …

Read More »

ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ 420 ವೈದ್ಯರು ಕೊರೊನಾಗೆ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರುಗಳೇ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಕೊರೊನಾ 2ನೇ ಅಲೆಯಲ್ಲಿ ದೇಶದಲ್ಲಿ ಈವರೆಗೆ ಬರೋಬ್ಬರಿ 420 ವೈದ್ಯರು ಸೋಂಕಿಗೆ ಸಾವನ್ನಪ್ಪಿದ್ದಾರೆ. ಇದರಲ್ಲಿ 100 ವೈದ್ಯರು ದೆಹಲಿಯೊಂದರಲ್ಲಿಯೇ ಮೃತಪಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಮಂಡಳಿ (IMA) ಮಾಹಿತಿ ನೀಡಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಮಹಾಮಾರಿಗೆ ತುತ್ತಾಗುತ್ತಿರುವುದು ದುರಂತ.

Read More »