ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್ ಡೌನ್ ಘೋಷಣೆ ಸರ್ಕಾರ ಮಾಡಿದೆ. ಕೆಲವಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಲಾಗಿತ್ತು …
Read More »ನಕಲಿ R,T,P,C,R,ವರದಿಯನ್ನು ನೀಡುತ್ತಿದ್ದ ಮೂವರ ಬಂಧನ
ನವದೆಹಲಿ, : ಜನರಿಗೆ ನಕಲಿ ಆರ್ಟಿ-ಪಿಸಿಆರ್ ವರದಿಯನ್ನು ನೀಡಿ ವಂಚಿಸುತ್ತಿದ್ದ ತಂಡವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಖಾಸಗಿ ಟೆಸ್ಟಿಂಗ್ ಲ್ಯಾಬ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಬಂಧಿತರಿಂದ ಒಂದು ಲ್ಯಾಪ್ಟಾಪ್, ನಕಲಿ ಬಿಲ್ಗಳು ಮತ್ತು ಎರಡು ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸನ್ನಿ ಹಾಗೂ ಆತನ ಇಬ್ಬರು ಸಹಾಯಕರಾದ ಜೀತೇಂದ್ರ ಸಾಹು ಮತ್ತು ಸುನಿಲ್ ಕುಮಾರ್ ಎಂಬವರು ಬಂಧಿತ ಆರೋಪಿಗಳು ಎಂದು ಪೊಲೀಸರು ವಿವರಗಳನ್ನು ನೀಡಿದ್ದಾರೆ. ಪೊಲೀಸರು …
Read More »ಸಿಎಂ ಬಿಎಸ್ವೈ ಸುದ್ದಿಗೋಷ್ಠಿ: ಲಾಕ್ಡೌನ್ ವಿಸ್ತರಣೆ ಜೊತೆಗೆ ಪರಿಹಾರದ ಪ್ಯಾಕೇಜ್ ಘೋಷಣೆ ಸಾಧ್ಯತೆ
ಬೆಂಗಳೂರು, ಮೇ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇ 19ರಂದು ಬೆಳಗ್ಗೆ 11.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟದ ಹಿರಿಯ ಸಹದ್ಯೋಗಿಗಳೊಂದಿಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಮೇ 24ರವರೆಗೆ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ವಿಸ್ತರಣೆ ಮಾಡುವುದು ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಗಳಿಗೆ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುವ …
Read More »ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 130 ಕ್ವಿಂಟಾಲ್ ಅಕ್ಕಿ ಪೊಲೀಸರ ವಶಕ್ಕೆ
ಕಲಬುರಗಿ: ಕರ್ನಾಟಕ ಸರ್ಕಾರದಿಂದ ಪಡಿತರ ಕಾರ್ಡ್ ದಾರರಿಗೆ ಹಂಚಿಕೆ ಆಗಬೇಕಾಗಿದ್ದ ಅಕ್ಕಿ ಕಾಳಸಂತೆಯಲ್ಲಿ ಮಹಾರಾಷ್ಟ್ರದ ಪಾಲಾಗುತ್ತಿರುವಾಗ ಜಿಲ್ಲೆಯ ಅಫಜಲಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ತುಳಜಾಪುರದ ಗುಲಾಬಚಂದ್ ರಾಠೋಡ ಎಂಬುವವರು ಈ ಅಕ್ಕಿ ಸಾಗಿಸುತ್ತಿದ್ದರು. ಅಫಜಲಪುರ ತಾಲೂಕಿನ ಬಳ್ಳೂರ್ಗಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ತಪಾಸಣೆ ವೇಳೆ ಈ ಅಕ್ರಮ ಪತ್ತೆಯಾಗಿದೆ. ಅಂದಾಜು 130 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಇದರ ಒಟ್ಟು ಮೌಲ್ಯ 2, 86,600 …
Read More »ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು
ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, …
Read More »ವೈದ್ಯರನ್ನೇ ಕಂಗೆಡಿಸಿದ ಮಾರಣಾಂತಿಕ Covid 2ನೇ ಅಲೆ.ಈವರೆಗೆ ಸಾವನ್ನಪ್ಪಿರುವ ವೈದ್ಯರೆಷ್ಟು
ಕೋವಿಡ್ ಒಂದನೇ ಮತ್ತು ಎರಡನೇ ಅಲೆಗೆ ದೇಶದಲ್ಲಿನ ಜನರು ತತ್ತರಿಸಿ ಹೋಗಿದ್ದು, ಎರಡನೇ ಅಲೆಯಲ್ಲಿ ಮಧ್ಯವಯಸ್ಕರು, ಯುವಕರು ಸಾವಿಗೀಡಾಗುತ್ತಿರುವುದು ಮತ್ತಷ್ಟು ಗಾಬರಿಗೆ ಕಾರಣವಾಗಿದೆ. ಈ ಮಾರಣಾಂತಿಕ ಕೋವಿಡ್ ಸೋಂಕು ಜನಸಾಮಾನ್ಯರಷ್ಟೇ ವೈದ್ಯರನ್ನು ಕಂಗೆಡಿಸಿದೆ ಎಂಬುದಕ್ಕೆ ಈ ವರದಿ ಸಾಕ್ಷಿ. ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯ ಕಿರಿಯ ರೆಸಿಡೆಂಟ್ ಡಾಕ್ಟರ್ ಅನಾಸ್ ಮುಜಾಹಿದ್(26ವರ್ಷ) ಕೋವಿಡ್ ನಿರ್ವಹಣೆಯ ತಜ್ಞರಾಗಿದ್ದರು. ಆದರೆ ಕೋವಿಡ್ ಪಾಸಿಟಿವ್ ಬಂದ ಗಂಟೆಯೊಳಗೆ ಡಾ.ಅನಾಸ್ ಕೊನೆಯುಸಿರೆಳೆದಿದ್ದರು. ಈ ವರ್ಷದ …
Read More »ಲಾಕ್ಡೌನ್ ನಿರ್ಧಾರವನ್ನು ಜಿಲ್ಲಾಧಿಕಾರಿಗಳಿಗೆ ಬಿಟ್ಟ ಪ್ರಧಾನಿ ಮೋದಿ
ನವದೆಹಲಿ: ಕರೊನಾ ವೈರಸ್ ಬಿಕ್ಕಟ್ಟು ಹಿನ್ನೆಲೆಯಲ್ಲಿ 9 ರಾಜ್ಯಗಳ ಸಿಎಂ, 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ಪ್ರಧಾನಿ ಮೋದಿ ಜಿಲ್ಲಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ, ಲಾಕ್ಡೌನ್ ನಿರ್ಧಾರವನ್ನು ಜಿಲ್ಲಾಧಿಕಾರಿಗಳಿಗೆ ಬಿಟ್ಟರು. ಕರೊನಾ ನಿಯಂತ್ರಿಸಲು ಎಲ್ಲರು ಒಗ್ಗಟಾಗಿ ಕೆಲಸ ಮಾಡಬೇಕು. ಕರೊನಾ ವಾರಿಯರ್ಸ್ಗೆ ಸ್ಫೂರ್ತಿ ತುಂಬಿರಿ. ನಿಮ್ಮ ಸ್ಫೂರ್ತಿದಾಯಕ ಮಾತುಗಳಿಂದ ವಾರಿಯರ್ಸ್ಗೆ ವಿಶ್ವಾಸ ಹೆಚ್ಚುತ್ತದೆ. ಕರೊನಾ ನಿಯಂತ್ರಿಸಲು ಯಾವುದೇ ಮಾರ್ಗವಿದ್ದರೂ ಅದನ್ನು ಅಳವಡಿಸಿಕೊಳ್ಳಿ ಎಂದು ಪ್ರಧಾನಿ …
Read More »ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ
ನವ ದೆಹಲಿ : ಕೋ-ವಿನ್ ಪೋರ್ಟಲ್ ಮುಂದಿನ ವಾರದಲ್ಲಿ ಹಿಂದಿ ಮತ್ತು 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ಅಧ್ಯಕ್ಷತೆಯಲ್ಲಿ ಇಂದು(ಸೋಮವಾರ, ಮೇ 17) ನಡೆದ ಕೋವಿಡ್ ಸೋಂಕಿನ ಕುರಿತು ಉನ್ನತ ಮಟ್ಟದ ಮಂತ್ರಿಗಳ 26 ನೇ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಸಂದರ್ಭ ಮಾತನಾಡಿದ ಹರ್ಷವರ್ಧನ್, ಕೋವಿಡ್ ರೂಪಾಂತರಗಳ ಬಗ್ಗೆ ಅಧ್ಯಯನ ಮಾಡಲು ಇನ್ನೂ 17 …
Read More »ಮೆಕ್ಸಿಕೋದ ಆಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ
ಫ್ಲೋರಿಡಾ: ಮೆಕ್ಸಿಕೋದ ಆಯಂಡ್ರಿಯಾ ಮೆಝಾ (26) ಅವರು 2020ರ ವಿಶ್ವ ಸುಂದರಿಯಾಗಿ ಆಯ್ಕೆಯಾಗಿದ್ದಾರೆ. ಅಂತಿಮ ಸುತ್ತಿನಲ್ಲಿದ್ದ ಬ್ರೆಜಿಲ್ನ ಜ್ಯೂಲಿಯಾ ಗಾಮ (28), ಪೆರು ದೇಶದ ಜೆನಿಕ್ ಮೆಸಿಟಾ (27) ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನ ಪಡೆದಿದ್ದಾರೆ. ರವಿವಾರ ರಾತ್ರಿ ನಡೆದ 69ನೇ ವಿಶ್ವಸುಂದರಿ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಅವರು, 74 ದೇಶಗಳ ಸುಂದರಿಯರನ್ನು ಹಿಂದಿಕ್ಕಿ ಅಗ್ರಪಟ್ಟವನ್ನು ತಮ್ಮದಾಗಿಸಿಕೊಂಡರು. 2019ರ ವಿಶ್ವಸುಂದರಿ ದಕ್ಷಿಣ ಆಫ್ರಿಕಾದ ಜೊಜಿಬಿನಿ ಟುನ್ಸಿ ಅವರು, ವಿಶ್ವಸುಂದರಿ …
Read More »ಅತ್ತೆಯ ಒಡವೆ ಅಳಿಯ ದಾನ ಮಾಡಿದಂತೆ ಪ್ರಧಾನಿ ನಡೆ: ದಿನೇಶ್ ಗುಂಡೂರಾವ್
ಬೆಂಗಳೂರು, : ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟ ಮಾದರಿಯಲ್ಲಿಯೇ ಪ್ರಚಾರಕ್ಕಾಗಿ ಕೋವಿಡ್ ಲಸಿಕೆಯನ್ನು ವಿದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಟೀಕಿಸಿದರು. ಸೋಮವಾರ ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ. ಇದು ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಆಗಿದೆ ಎಂದರು. ವಿದೇಶಗಳಲ್ಲೂ ಕೋವಿಡ್ ಲಸಿಕೆ …
Read More »
Laxmi News 24×7