Breaking News

ರಾಷ್ಟ್ರೀಯ

ಕೊರೊನಾ ಹೋರಾಟಕ್ಕೆ ಸೂಪರ್ ಸ್ಟಾರ್ ರಜನಿ ನೆರವು; ₹50 ಲಕ್ಷ ದೇಣಿಗೆ

ಚೆನ್ನೈ: ನಟ ರಜನಿಕಾಂತ್ ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿ, ಕೊರೊನಾವೈರಸ್ ವಿರುದ್ಧದ ಹೋರಾಟಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 ಲಕ್ಷ ದೇಣಿಗೆಯನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ರಜನಿ ಕೊರೊನಾ ಲಸಿಕೆಯ 2ನೇ ಡೋಸ್‌ ಹಾಕಿಸಿಕೊಂಡಿದ್ದರು. ಕೊರೊನಾ ನಿರ್ಮೂಲನೆಗಾಗಿ ನಾನು ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 …

Read More »

ಕೋವಿಡ್: ಗಡಿ ಜಿಲ್ಲೆ ಶಿಕ್ಷಕರು ಗಢಗಢ…. ದೊಡ್ಡ ಬೆಲೆ ತೆರುತ್ತಿದೆ ಶಿಕ್ಷಕ ಸಮುದಾಯ…

ಕೋವಿಡ್ ಸೋಂಕಿಗೆ ಗಡಿ ಜಿಲ್ಲೆಯಲ್ಲಿ ಶಿಕ್ಷಕ ಸಮುದಾಯ ದೊಡ್ಡ ಬೆಲೆ ತೆತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 90 ಶಿಕ್ಷಕರು ಕೋವಿಡ್ ಸೋಂಕಿಗೆ ಶಿಕಾರಿಯಾಗಿದ್ದಾರೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 23, ಎರಡನೇ ಅಲೆಯಲ್ಲಿ 20 ಶಿಕ್ಷಕರು ಬಲಿಯಾಗಿದ್ದಾರೆ. ಹತ್ತು ಶಿಕ್ಷಕರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದವರಾಗಿದ್ದವರು ಎಂದು ಸರಕಾರಕ್ಕೆ ಮಾಹಿತಿ ಸಲ್ಲಿಸಲಾಗಿದೆ ಎಂದು ಬೆಳಗಾವಿ ಡಿಡಿಪಿಐ ಆನಂದ ಪುಂಡಲೀಕ ಅವರು “ಜನ ಜೀವಾಳ”ಕ್ಕೆ ಮಾಹಿತಿ ನೀಡಿದ್ದಾರೆ. …

Read More »

ಮ ಕೊರೊನಾಗೆ ಬೆಳಗಾವಿಯಲ್ಲಿ ಶಿಕ್ಷಕ ಅಣ್ಣ-ತಮ್ ಬಲಿ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಇದೀಗ ಶಿಕ್ಷಕರಾಗಿದ್ದ ಅಣ್ಣ-ತಮ್ಮ ಇಬ್ಬರೂ ಮಹಾಮಾರಿಗೆ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ತೋಪಿನಕಟ್ಟಿ ಸರ್ಕಾರಿ ಶಾಲೆ ಶಿಕ್ಷಕರಾಗಿದ್ದ ಸಹೋದರರಿಬ್ಬರೂ 4 ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಅಣ್ಣ ಪಿ.ಕೆ.ಕುಂಬಾರ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಇದರ ಬೆನ್ನಲ್ಲೆ ತಮ್ಮ ನಾರಾಯಣ ಕುಂಬಾರ್ ಗೂ ಸೋಂಕು ಹರಡಿತ್ತು. ಇಬ್ಬರಿಗೂ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಾಲ್ಕು …

Read More »

ಅರೆಸ್ಟ್ ಮಿ ಟೂ” : ಕೇಂದ್ರ ಸರ್ಕಾರಕ್ಕೆ ನನ್ನನ್ನೂ ಬಂಧಿಸಿ ಎಂದು ಕೇಳಿಕೊಂಡ ಗಾಂಧಿ

ನವ ದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನೀಭಾಯಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಟೀಕಿಸಿ ಹಾಕಿದ್ದ ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ 17 ಮಂದಿಯನ್ನು ರಾಷ್ಟ್ರ ರಾಜಧಾನಿ ಪೊಲೀಸರು ಬಂಧಿಸಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಆ ವಿರೋಧದ ಧ್ವನಿಗೆ ತಮ್ಮ ಧ್ವನಿ ಸೇರಿಸಿದ್ದಾರೆ. ಈ ಕುರಿತಾಗಿ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿರುವ ಗಾಂಧಿ …

Read More »

ಸರ್ಕಾರದ ವಿನಾಶಕಾರಿ ನೀತಿಯಿಂದ ಕೊರೊನಾ 3ನೇ ಅಲೆ : ರಾಹುಲ್ ಗಾಂಧಿ

ನವದೆಹಲಿ : ಕೊರೊನಾ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಷ್ಟ್ರೀಯ ಲಸಿಕಾ ವಿತರಣಾ ಯೋಜನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಸರ್ಕಾರದ ವಿನಾಶಕಾರಿ ನೀತಿ, ಸಂತ್ರಸ್ತರ ಶವ ನದಿಯಲ್ಲಿ ತೇಲುತ್ತಿರುವುದರ ಕುರಿತಾಗಿ ಗಂಗಾ ಮಾತೆ ದುಃಖಿಸುವಂತೆ ಮಾಡಿದ್ದಾರೆ. ಭಾರತ ಸರ್ಕಾರದ ಲಸಿಕೆ ವಿತರಣಾ ಯೋಜನೆ ವಿನಾಶಕಾರಿ ಮೂರನೇ ಅಲೆಯನ್ನು ಖಚಿತಪಡಿಸುತ್ತದೆ. ಇದನ್ನು ಮತ್ತೆ ಸರಿದೂಗಿಸಲು …

Read More »

ಮಾನವೀಯತೆಯ ಮೂಲಕ ಅಂತ್ಯ ಸಂಸ್ಕಾರ ಮಾಡುವ ರಬಕವಿಯ ಮುಸ್ಲಿಂ ಯುವಕರು

ಬನಹಟ್ಟಿ : ಮಹಾಮಾರಿ ಕೋವಿಡ್‌ನಿಂದಾಗಿ ಪ್ರತಿ ನಿತ್ಯ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಶವ ಸಂಸ್ಕಾರ ಮಾಡಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ, ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯ ಮುಸ್ಲಿಂ ಯುವಕರು ಜಾತ್ಯತೀತ ಭಾವನೆಯಿಂದ ಅಂತ್ಯ ಸಂಸ್ಕಾರ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ರಬಕವಿಯ ಅಂಜುಮನ್ ಇಸ್ಲಾಂ ಮುಸ್ಲಿಂ ಜಮಾತನ ಮುಖಂಡರ ಚಿಂತನೆ ಮೂಲಕ ಯುವಕರ ತಂಡ ರಚನೆ ಮಾಡಿ, ಅಂತ್ಯಸಂಸ್ಕಾರ ಮಾಡಲು ಸಜ್ಜಾಗಿದ್ದಾರೆ. ಯಾವುದೇ ಜಾತಿ ಭೇದ ನೋಡದೆ, ಅವರ …

Read More »

ಬ್ಲಾಕ್ ಫಂಗಲ್ ಪೀಡಿತ ಯುವಕನ ಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ ಡಿಸಿಎಂ ಸವದಿ

ಚಿಕ್ಕೋಡಿ:ರಾಜ್ಯಾದ್ಯಂತ ಕೊವಿಡ್ ಎರಡನೆಯ ಅಲೆಯ ನಡುವೆಯೆ ಕೊವಿಡ್ ಚಿಕಿತ್ಸೆ ಪಡೆದು ಗುಣಮುಖರಾದವರನ್ನು ಭಾಧಿಸುತ್ತಿರುವ ಕಪ್ಪು ಶಿಲಿಂಧ್ರ (ಬ್ಲಾಕ್ ಫಂಗಲ್ ಇಂಪೆಕ್ಷನ್) ರೋಗ ಹಲವರಲ್ಲಿ ಕಂಡು ಬರುತ್ತಿದೆ.ಆರಂಭದಲ್ಲಿ ಗಲ್ಲ,ಮೂಗು,ಕಣ್ಣಿನ ರೆಪ್ಪೆಯ ಮೇಲ್ಭಾಗದಲ್ಲಿ ಬಾವು ಕಾಣಿಸಿಕೊಂಡು ನಂತರದಲ್ಲಿ ದೇಹದ ಒಳಭಾಗಕ್ಕೆ ಹರಡಿ ಜೀವಕ್ಕೆ ಎರವಾಗುತ್ತಿರುವ ಈ ಕಾಯಿಲೆ ಕೋವಿಡ್ ಚಿಕಿತ್ಸೆ ಪಡೆದವರಲ್ಲಿ ಕಂಡುಬರುತ್ತಿರುವದು ತೀವ್ರ ತಲೆನೋವಾಗಿ ಪರಿಣಮಿಸಿದೆ. ಚಿಕಿತ್ಸೆಗೆ ಬಳಕೆ ಆಗುವ ಔಷಧಿಗಳ ಅಡ್ಡಪರಿಣಾಮ ಎಂದು ಹೇಳುತ್ತಿದ್ದರೂ ಕೂಡ ಕೋವಿಡ್ ಗಿಂತ ಮುಂದುವರೆದ …

Read More »

ಕ್ಷಮೆ ಕೇಳಲಿ ಎಂದ ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆಗೈದ ಶಾಸಕ ಸಾರಾ ಮಹೇಶ್!

ಮೈಸೂರು: ಚಾಮರಾಜನಗರ ಆಕ್ಸಿಜನ್​ ದುರಂತ ನಡೆದಾಗ ನನ್ನ ವಿರುದ್ಧ ಆರೋಪ ಮಾಡಿದವರು ಕ್ಷಮೆ ಕೇಳಲಿ ಎಂಬ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿಕೆಗೆ ಮಾಜಿ ಸಚಿವ ಸಾ.ರಾ. ಮಹೇಶ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ​ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಸಾ.ರಾ. ಮಹೇಶ್​, ಒಬ್ಬ ಕನ್ನಡಿಗ ದಲಿತ ಡಿಸಿಯನ್ನು ಕೇವಲ 28 ದಿನಕ್ಕೆ ವರ್ಗಾವಣೆ ಮಾಡಿಸಿದ್ದು ಸುಳ್ಳಾ? ಎಂದು ಪ್ರಶ್ನೆಯನ್ನು ಆರಂಭಿಸಿದರು. ಪ್ರಶ್ನೆಗಳ ಸವಾಲನ್ನು ಮುಂದುವರಿಸಿದ ಸಾ.ರಾ.ಮಹೇಶ್​, ಹಾಸನದ ಪ್ರಕರಣದಲ್ಲಿ ತಕ್ಷಣ ನಿಮ್ಮ ಪರ …

Read More »

ಕೊರೋನಾ ಸಂತ್ರಸ್ತೆಯ ಮೇಲೆ ಆಯಂಬುಲೆನ್ಸ್ ಸಹಾಯಕನಿಂದ ಲೈಂಗಿಕ ದೌರ್ಜನ್ಯ

ಕೊಚ್ಚಿ : ಕೊರೋನಾ ಸೋಂಕಿಗೆ ತುತ್ತಾಗಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯ ಮೇಲೆ ಆಯಂಬುಲೆನ್ಸ್ ಸಹಾಯಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕೇರಳದ ಮಲ್ಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಏಪ್ರಿಲ್ 27 ರಂದು ಈ ಘಟನೆ ನಡೆದಿದ್ದು, ಕೊರೋನಾ ಸೋಂಕಿಗೆ ತುತ್ತಾಗಿದ್ದ ರೋಗಿ ಚೇತರಿಸಿಕೊಂಡ ಬಳಿಕ ವೈದ್ಯರಿಗೆ ಈ ಸಂಬಂಧ ಮಾಹಿತಿ ನೀಡಿದ್ದಾರೆ . ಪ್ರಕರಣ ದಾಖಲಾದ ನಂತರ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಕಳೆದ ವರ್ಷ ಕೂಡ ಕೇರಳದ ಇದೇ …

Read More »

ಲಾಕ್​ಡೌನ್​ ನಡುವೆ ಹೆಣ್ಣು ಮಕ್ಕಳ ಕಳ್ಳಸಾಗಾಟ: ವಿಚಾರಣೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ!

ಮಲ್ಕಂಗಿರಿ: ಲಾಕ್​ಡೌನ್​ ನಡುವೆಯೇ ಕೆಲ ದುಷ್ಕರ್ಮಿಗಳು ನೀಚ ಕೃತ್ಯಕ್ಕೆ ಕೈ ಹಾಕಿದ್ದು, ಅಮಾಯಕ ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆ ದಂಧೆ ನೂಕಲ ಅವರನ್ನು ಕಳ್ಳಸಾಗಾಣೆ ಮಾಡುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ. ಹೆಣ್ಣುಮಕ್ಕಳನ್ನು ಒಡಿಶಾದ ಭೈರಾಪುತ್ರ ವಲಯದ ಕುಡುಮುಲುಗುಮ್ಮ ಗ್ರಾಮದಿಂದ ಕದ್ದು ಸಾಗಿಸಲಾಗುತ್ತಿತ್ತು. ಲಾಕ್​ಡೌನ್​ ಪರಿಶೀಲನೆ ವೇಳೆ ಶುಕ್ರವಾರ ಘಟನೆ ಬೆಳಕಿಗೆ ಬಂದಿದೆ. ಮಲ್ಕಂಗಿರಿ ತಹಸೀಲ್ದಾರ್​ ವಿಜಯ್​ ಮಂದಾಂಗಿ ಲಾಕ್​ಡೌನ್​ ಪರಿಶೀಲನೆ ಮಾಡುವಾಗ ವಾಹನವೊಂದರಲ್ಲಿ ಹೆಣ್ಣು ಮಕ್ಕಳು ಕುಳಿತಿದ್ದನ್ನು ಗಮನಿಸಿದ್ದಾರೆ. ಅವರ ಬಳಿ …

Read More »