ರಾಷ್ಟ್ರೀಯ

15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್‌ 1ರ ಬಳಿಕ ಸಾಧ್ಯವಾಗುವುದಿಲ್ಲ…?

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿರುವ ಪ್ರಸ್ತಾವನೆಯು ಅಂತಿಮಗೊಂಡರೆ, 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್‌ 1ರ ಬಳಿಕ ಸಾಧ್ಯವಾಗುವುದಿಲ್ಲ. ಸರ್ಕಾರದ ಎಲ್ಲಾ ವಾಹನಗಳಿಗೆ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರೋದ್ಯಮಗಳು, ಮಹಾನಗರ ಪಾಲಿಕೆ ಮತ್ತು ಸ್ವಾಯತ್ತ ಸಂಸ್ಥೆಗಳ ಎಲ್ಲಾ ವಾಹನಗಳಿಗೂ ಇದು ಅನ್ವಯವಾಗಲಿದೆ. ಈ ಕುರಿತು ಸಚಿವಾಲಯವು ಶನಿವಾರ ಟ್ವೀಟ್ ಮಾಡಿದೆ. ಕರಡು ನಿಯಮಗಳ ಕುರಿತು ಪ್ರತಿಕ್ರಿಯೆ, ಸಲಹೆ, …

Read More »

ತ್ರಿವರ್ಣ ಧ್ವಜ, ಭಾರತದ ನಕ್ಷೆ ಇರುವ ಕೇಕ್‌ ಕತ್ತರಿಸುವುದು ‘ಅವಮಾನವಲ್ಲ’ : ಮದ್ರಾಸ್ ಹೈಕೋರ್ಟ್

ಚನ್ನೈ: ತ್ರಿವರ್ಣ ಧ್ವಜ ಮತ್ತು ಅಶೋಕ ಚಕ್ರ ವಿನ್ಯಾಸವಿರುವ ಕೇಕ್ ಕತ್ತರಿಸುವುದರಿಂದ 1971ರ ರಾಷ್ಟ್ರೀಯ ಗೌರವ ಕಾಯಿದೆ 1971ರ ಅಡಿಯಲ್ಲಿ ‘ಅವಮಾನ’ ವಲ್ಲವೆಂದು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್.ಆನಂದ್ ವೆಂಕಟೇಶ್ ಅವರಿದ್ದ ನ್ಯಾಯಾಪೀಠ ತೀರ್ಪು ನೀಡಿದೆ. ಈ ಮೂಲಕ ಅವರು 2013ರಲ್ಲಿ ಕೇಕ್ ಕತ್ತರಿಸುವ ಪ್ರಕರಣದ ಬಗ್ಗೆ ಕೊಯಮತ್ತೂರ್ ಮ್ಯಾಜಿಸ್ಟ್ರೇಟ್ ಅವರು ಆರಂಭಿಸಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿ, ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಸ್ವಾಭಿಮಾನದ ಹಲವು ಮಹತ್ವದ ಮಾಹಿತಿಗಳನ್ನು ನ್ಯಾಯಾಪೀಠ ತಿಳಿಸಿದೆ. …

Read More »

ಮಾರ್ಚ್ 22, 2020 : ಸರಿ ಒಂದು ವರ್ಷದ ಹಿಂದೆ ಈ ದಿನ ಏನಾಯಿತು ನೆನಪಿದೆಯೇ? ಇಲ್ಲಿದೆ ವೈರಲ್ ವಿಡೀಯೋ

ನವದೆಹಲಿ : ಮಾರ್ಚ್ 22, 2020 ರ ದಿನವನ್ನು ಯಾರು ಮರೆಯಲು ಸಾಧ್ಯವಿಲ್ಲ? ಪ್ರಧಾನಿ ನರೇಂದ್ರ ಮೋದಿ ಅವರ ಮನವಿ ಮೇರೆಗೆ ಭಾರತದ ಜನತೆ ಮನೆಗಳಲ್ಲಿ ಬಂಧಿಯಾಗಿ, ನಂತರ ಸಂಜೆ ಕೊರೋನಾ ಯೋಧರಿಗೆ ಗೌರವವನ್ನು ವ್ಯಕ್ತಪಡಿಸಲು ಐದು ನಿಮಿಷಗಳ ಕಾಲ ಚಪ್ಪಾಳೆ ತಟ್ಟಿದರು. 2020ರ ಮಾರ್ಚ್ 22ರ ದಿನವನ್ನು ಜನತಾ ಕರ್ಫ್ಯೂ ಎಂದು ಕರೆಯಲಾಗುತ್ತದೆ. ಇಂದು, ಸಾರ್ವಜನಿಕ ಕರ್ಫ್ಯೂ ಆಗಿ ಒಂದು ವರ್ಷ ಕಳೆದಿದೆ. ಅನೇಕ ಮೋಜಿನ ನೆನಪುಗಳು ಜನರ …

Read More »

ಕೇಂದ್ರ ಸರಕಾರ ದೇಶದ ಕೆಲವು ಉನ್ನತ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ರೈತರ ಆದಾಯ ಹಾಗೂ ಭವಿಷ್ಯ ಕಸಿಯಲು ಬಯಸಿದೆ

ರಾಯಪುರ, ಮಾ. 17: ನೂತನ ಮೂರು ಕೃಷಿ ಕಾಯ್ದೆಗಳ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ರವಿವಾರ ತನ್ನ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರಕಾರ ದೇಶದ ಕೆಲವು ಉನ್ನತ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ರೈತರ ಆದಾಯ ಹಾಗೂ ಭವಿಷ್ಯ ಕಸಿಯಲು ಬಯಸಿದೆ ಎಂದು ಹೇಳಿದ್ದಾರೆ. ರಾಜ್ಯ ಸರಕಾರದ ಎರಡು ಯೋಜನೆಗಳ ಅಡಿಯಲ್ಲಿ ಜಾನುವಾರು ಸಾಕುವವರು ಹಾಗೂ ರೈತರಿಗೆ ನಗದು ವಿತರಿಸಲು ಚತ್ತೀಸ್ಗಢದ …

Read More »

ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡಿ ತೋರಿಸು: ಯತ್ನಾಳ್‍ಗೆ ರೇಣುಕಾಚಾರ್ಯ ಸವಾಲ್

ದಾವಣಗೆರೆ: ನಿನಗೆ ಸವಾಲು​ ಹಾಕ್ತೀನಿ.. ತಾಕತ್ತಿದ್ದರೆ ಮುಖ್ಯಮಂತ್ರಿಗಳನ್ನ ಬದಲಾವಣೆ ಮಾಡಿ ನೋಡು ಅಂತ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳೆಗೆ ಸವಾಲೆಸೆದಿದ್ದಾರೆ. ಪಂಚರಾಜ್ಯಗಳ ಚುನಾವಣೆಯ ನಂತರ ನೂರಕ್ಕೆ ನೂರರಷ್ಟು ಸಿಎಂ ಬದಲಾವಣೆ ಖಚಿತ ಎಂದು ಯತ್ನಾಳ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ರೇಣುಕಾಚಾರ್ಯ ಏಕವಚನದಲ್ಲೇ​​ ಯತ್ನಾಳ್​ ವಿರುದ್ಧ ಕಿಡಿಕಾರಿದ್ದಾರೆ. ​ರಾಜ್ಯದಲ್ಲಿ ಬಿಜೆಪಿಯನ್ನ ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ, ಅನಂತಕುಮಾರ್​. ಯಡಿಯೂರಪ್ಪನವರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರಮೋದಿ …

Read More »

ಕೊರೋನಾ‌ ಎರಡನೇ ಅಲೆ: ಬೆಂಗಳೂರಿನ ಈ 10 ಏರಿಯಾಗಳ ಕಡೆ ಹೋಗಲೇ ಬೇಡಿ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಎರಡನೇ ಬಾರಿಗೆ ಕೊರೋನಾ‌ ಸುಳಿಯಲ್ಲಿದೆ. ಇಂದು ನಗರದ ಒಂದೇ ಅಪಾರ್ಟ್ಮೆಂಟ್ ನಲ್ಲಿ ಏಳು ಪ್ರಕರಣಗಳು ಬೆಳಕಿಗೆ ಬಂದಿದೆ. ಜೊತೆಯಲ್ಲಿ ಬೆಂಗಳೂರಿನ ಈ 10 ಏರಿಯಾಗಳು ಕೊರೋನ ಹಾಟ್ ಸ್ಪಾಟ್ ಅಂತ ಬಿಬಿಎಂಪಿ ವರದಿ ಹೇಳುತ್ತಿದೆ. ಸತತ ಐದನೇ ದಿನವೂ ನಗರದಲ್ಲಿ ಸಾವಿರದ ಗಡಿ ದಾಟಿದ ಕೊರೋನಾ ರಣಕೇಕೆ ಹಾಕಿದೆ. ಇದರ ಬೆನ್ನಲ್ಲೇ ನಗರದ ನಾಗಸಂಧ್ರದ ಶೋಭಾ ಅಪಾರ್ಟ್ಮೆಂಟ್ ವೊಂದರಲ್ಲೇ ಏಳು ಪ್ರಕರಣಗಳು ಪತ್ತೆಯಾಗಿದೆ. ಒಂದೇ …

Read More »

ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಕೈ ಕೈ ಮಿಲಾಯಿಸಿದ ಮುಖಂಡರು

ಮಳವಳ್ಳಿ: ‘ಸರ್ಕಾರದ ನಡೆ ಗ್ರಾಮದ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಸಮ್ಮುಖದಲ್ಲೇ ಶನಿವಾರ ಕಾಂಗ್ರೆಸ್‌-ಜೆಡಿಎಸ್‌ ಸದಸ್ಯರು ಮಾತಿನ ಚಕಮಕಿ ನಡೆದಿ ಕೈಕೈ ಮಿಲಾಯಿಸಲು ಮುಂದಾದರು. ‌ತಾಲ್ಲೂಕಿನ ಬಿಜಿಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮದಲ್ಲಿ ತಾ.ಪಂ.ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡುತ್ತಾ ಮಾಜಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಹೆಸರು ಪ್ರಸ್ತಾಪಿಸಿದರು. ಬಹು ನಿರೀಕ್ಷಿತ ಪೂರಿಗಾಲಿ ಹನಿ ನೀರಾವರಿ ಕಾಮಗಾರಿ ಕುಂಠಿತವಾಗಿದ್ದು, ಕಾಮಗಾರಿ ಪೂರ್ಣಗೊಳಿಸುವಂತೆ …

Read More »

ಎಸ್​ಐಟಿ ಎದುರು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ.. ಮಾಜಿ ಶಾಸಕ ನಾಗರಾಜ್ ಮೂಲಕ ಹಣಕ್ಕೆ ಡಿಮ್ಯಾಂಡ್?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿಡಿ ಕೇಸ್ ಸಂಬಂಧ ವಿಚಾರಣೆಗೆ ಕರೆದಿದ್ದ SIT ಗೆ ಮಾಜಿ ಸಚಿವ ಜಾರಕಿಹೊಳಿ ಅನೇಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ SITಗೆ ರಮೇಶ್ ಏನು ಉತ್ತರ ಕೊಟ್ಟಿದ್ದಾರೆ. ಏನೆಲ್ಲಾ ಪ್ರಶ್ನೆಗಳನ್ನು ಕೇಳಲಾಯಿತು ಎಂಬ ರೋಚನ ಸುದ್ದಿ ಇಲ್ಲಿದೆ. ವಿಚಾರಣೆಗೆ ಕರೆದಿದ್ದ SIT ಸಿಡಿ ಮಾಡಿದ್ಯಾರು ಅನ್ನೋ ಕುರಿತು ಜಾರಕಿಹೊಳಿಯನ್ನ ಪ್ರಶ್ನಿಸಿದ್ದಾರೆ. ಸದಾಶಿವನಗರ ಠಾಣೆಗೆ ನೀಡಿದ ದೂರಿನಲ್ಲಿ ಹಣ …

Read More »

ಬೆಳಗಾವಿ ಲೋಕಸಭಾ ಉಪಚುನಾವಣೆ : ಕೈ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್

ಮೈಸೂರು : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ ಹೆಸರನ್ನು ಶಿಫಾರಸ್ಸು ಮಾಡಿದ್ದೇವೆ. ಬಹುತೇಕ ಸತೀಶ್ ಜಾರಕಿಹೊಳಿಗೆ ಟಿಕೆಟ್ ಫೈನಲ್ ಆಗಲಿದೆ ಎಂದಿದ್ದಾರೆ.   ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೀವಿ ಎಂಬ ಸಿಎಂ ಸವಾಲು ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಯಡಿಯೂರಪ್ಪ ಇನ್ನೇನು ಸೋಲುತ್ತೀನಿ …

Read More »

ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ : ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ ಕಣಕ್ಕೆ?

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.   ಬಸವಕಲ್ಯಾಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ಶಾಸಕ ಬಿ. ನಾರಾಯಣ ರಾವ್ ಅವರ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಈ ಉಪಚುನಾವಣೆಗೆ ಬಿಜೆಪಿ ಬಿ.ವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಪಕ್ಷದ ಪ್ರಮುಖ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. …

Read More »