ಬೆಂಗಳೂರು – ರಾಜ್ಯದಲ್ಲಿ ಕೊರೋನಾದಿಂದ ತತ್ತರಿಸಿರುವ ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ. ಕೆಲವರು ಗುಳೆ ಹೋಗಿದ್ದರೆ ಇನ್ನು ಕೆಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಕಾರ ತಕ್ಷಣ ಅವರ ನೆರವಿಗೆ ಬರಬೇಕು ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಮಾತನಾಡಿದ ಅವರು ನೇಕಾರ ಸಮ್ಮಾನ್ ನಿಧಿಯನ್ನು 2 ಸಾವಿರ ರೂ.ಗಳಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ವಿದ್ಯುತ್ ಮಗ್ಗ ನೆಕಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು. ಜವಳಿ ಸಚಿವರು ನಮ್ಮ …
Read More »ಹುಬ್ಬಳ್ಳಿಗೆ ಬರುತ್ತಿದ್ದ ಇಬ್ಬರು ಕ್ರೀಡಾಪಟುಗಳ ದುರ್ಮರಣ: ಮೂವರಿಗೆ ಗಂಭೀರ ಗಾಯ
ವಿಜಯಪುರ: ಲಾರಿ ಹಾಗೂ ಥವೇರಾ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕ್ರೀಡಾಪಟುಗಳು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾರ ಕ್ರಾಸ್ ಬಳಿ ಸಂಭವಿಸಿದೆ. ಮಹಾರಾಷ್ಟ್ರದ ಸೊಲ್ಲಾಪುರದಿಂದ ಹುಬ್ಬಳ್ಳಿಯ ಕಬ್ಬಡ್ಡಿ ಟೂರ್ನಿಯಲ್ಲಿ ಭಾಗವಹಿಸಲು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೋಹೈಲ್ ಮತ್ತು ಮಹಾದೇವ ಎಂಬ 20 ವರ್ಷದ ಕ್ರೀಡಾಪಟುಗಳು ಸಾವಿಗೀಡಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಬಗ್ಗೆ ಮಾಹಿತಿ …
Read More »ಗರಿಗೆದರಿದ ಉಪಚುನಾವಣೆ ಕಣ : ಕಾಂಗ್ರೆಸ್-ಬಿಜೆಪಿ ಭರ್ಜರಿ ಪ್ರಚಾರ
ರಾಯಚೂರು : ಮಸ್ಕಿ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾ ಆರಂಭಿಸಿದ್ದಾರೆ. ಕಾಂಗ್ರಸ್ ದ್ವಿಚಕ್ರ ವಾಹನ ಹಾಗೂ ಮನೆ ಮನೆ ಪ್ರಚಾರಕ್ಕಿಳಿದಿದೆ. ಕಾಂಗ್ರೆಸ್ ನಾಯಕ ಬಸನಗೌಡ ತುರುವಿಹಾಳ ಬೂತ್ ಮಟ್ಟದಿಂದ ಮತಬೇಟೆ ಆರಂಭಿಸಿದ್ದಾರೆ. ಇತ್ತ ಬಿಜೆಪಿ ಪಕ್ಷದಿಂದಲೂ ಭರ್ಜರಿ ತಯಾರಿ ನಡೆಯುತ್ತಿದ್ದು, ಸಿಎಂ ಯಡಿಯೂರಪ್ಪ ನೇತೃತ್ವದ ಸಮಾವೇಶಕ್ಕೆ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಸ್ಕಿಯಲ್ಲಿ ಮಾರ್ಚ್ 20ರಂದು ಸಂಜೆ …
Read More »ಬೆಳಗಾವಿಯಲ್ಲಿ ನಿಗೂಢ ಸೋಂಕು : 10ಕ್ಕೂ ಹೆಚ್ಚು ಜಾನುವಾರುಗಳು ಸಾವು
ಬೆಳಗಾವಿ : ಜಿಲ್ಲೆಯ ಟಿಳಕವಾಡಿ ಭಾಗದಲ್ಲಿ ಹಲವು ದಿನಗಳಿಂದ ನಿಗೂಢ ಸೋಂಕು ಕಾಣಿಸಿಕೊಂಡ ಪರಿಣಾಮ 10ಕ್ಕೂ ಜಾರುವಾರು ಬಲಿಯಾಗಿವೆ. ಜಾನುವಾರುಗಳಿಗೆ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲಿ ಸಾವನ್ನಪ್ಪುತ್ತಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೊಸ ಸೋಂಕಿನ ಭೀತಿ ಆರಂಭವಾಗಿದೆ. ಪಶು ವೈದ್ಯರು ಮೃತ ಜಾನುವಾರುಗಳ ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ. ಜೀವನೋಪಾಯಕ್ಕೆ ಸಾಕಿದ್ದ ಜಾನುವಾರಗಳು ಸಾವನ್ನಪ್ಪಿರೋದು ಕಂಡು ಮಾಲೀಕರು ಕಣ್ಣೀರು ಹಾಕುತ್ತಿದ್ದರೆ, ಸಾರ್ವಜನಿಕರು ಭೀತಿಯಲ್ಲಿ ಇದ್ದಾರೆ.
Read More »ಮೋದಿ ಪ್ರಧಾನ ಸಲಹೆಗಾರ ಪಿ.ಕೆ ಸಿನ್ಹಾ ರಾಜೀನಾಮೆ PM Modi’s principal advisor P K Sinha resigns
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸಲಹೆಗಾರರಾಗಿದ್ದ ಪ್ರದೀಪ್ ಕುಮಾರ್ ನಿನ್ಹಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಪಿಕೆ ಸಿನ್ಹಾ ಅವರು ಈ ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. 1977ನೇ ಬ್ಯಾಚ್ ನ ನಿವೃತ್ತಿ ಐಎಎಸ್ ಅಧಿಕಾರಿಯಾಗಿರುವ ಸಿನ್ಹಾ ಅವರನ್ನ 2019ರ ಆಗಸ್ಟ್ ತಿಂಗಳಲ್ಲಿ ಮೋದಿಯವರ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಇದಲ್ಲದೆ ಸಿನ್ಹಾ ಅವರು ನಾಲ್ಕು ವರ್ಷಗಳ ಕಾಲ ಕ್ಯಾಬಿನೆಟ್ …
Read More »ಬಾಲಸುಟ್ಟ ಶಿವಸೇನೆ ಹುಲಿ : ಬೆಳಗಾವಿ ಕೇಂದ್ರಾಡಳಿತವಾಗದು ಎಂದು ಕೇಂದ್ರ ಸ್ಪಷ್ಟನೆ
ಹೊಸದಿಲ್ಲಿ/ ಮುಂಬಯಿ : ಬೆಳಗಾವಿ ವಿಚಾರಕ್ಕೆ ಕೈಹಾಕಿದ ಶಿವಸೇನೆ ಬಾಲ ಸುಟ್ಟುಕೊಂಡಿದೆ. “ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವ ಪ್ರಸ್ತಾವ ಸರಕಾರದ ಮುಂದಿಲ್ಲ’ ಎನ್ನುವ ಮೂಲಕ ಉದ್ಧವ್ ಠಾಕ್ರೆಯ “ಮಹಾಉದ್ಧಟತನ’ದ ಕನಸಿಗೆ ಕೇಂದ್ರ ಸರಕಾರ ತಣ್ಣೀರು ಎರಚಿದೆ. ತನ್ನ ಮುಖವಾಣಿ “ಸಾಮ್ನಾ’ದಲ್ಲಿ ಶಿವಸೇನೆ “ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು’ ಎಂದಿತ್ತು. ಲೋಕಸಭೆಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಖಾತೆಯ ಸಹಾಯಕ ಸಚಿವ ನಿತ್ಯಾನಂದ ರಾಯ್, “ಕಾಲ ಕಾಲಕ್ಕೆ ಕೆಲವರು ಮತ್ತು ಸಂಘಟನೆಗಳು ಬೆಳಗಾವಿಯನ್ನು …
Read More »ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ 22,57,469 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ
ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ 22,57,469 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಒಟ್ಟು ಮತದಾರರ ಪೈಕಿ 11,36,293 ಪುರುಷ, 11,21,101 ಮಹಿಳೆ ಮತ್ತು 75 ಇತರ ಮತದಾರರಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 18,11,642 ಮತದಾರರಿದ್ದರೆ, ಬಸವಕಲ್ಯಾಣದಲ್ಲಿ 2,39,473 ಮತ್ತು ಮಸ್ಕಿ (ಪರಿಶಿಷ್ಟ ಪಂಗಡ)ದಲ್ಲಿ 2,06,354 ಮತದಾರರಿದ್ದಾರೆ. ಬೆಳಗಾವಿಯಲ್ಲಿ …
Read More »ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತು ಬಸವರಾಜ್ ಬೊಮ್ಮಾಯಿ ಮಾಹಿತಿ!
ಬೆಂಗಳೂರು, ಮಾ. 16: ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂಬ ವಿಶ್ವಾಸವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದವರು ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ಕಳೆದ ಬಾರಿ ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ …
Read More »Big breakingಬೆಳಗಾವಿ ಲೋಕಸಭಾ ಚುನಾವಣೆ ದಿನಾಂಕ ನಿಗದಿ…ಯಾವಾಗ ಗೊತ್ತಾ..?
ಬೆಳಗಾವಿ: ಬಹುದಿನದ ಜನರ ನಿರೀಕ್ಷೆ ಬೆಳಗಾವಿಯ ಲೋಕಸಭಾ ಚುನಾವಣೆ ದಿನಾಂಕ ಏಪ್ರಿಲ್ 17ರಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ… ಬೆಳಗಾವಿ ಲೋಕಸಭಾ ಚುನಾವಣೆ ಕಾವು ಜೋರಾಗಿಯೇ ಇತ್ತು ಒಂದು ಲೋಕಸಭೆ ಹಾಗೂ ಮೂರು ವಿಧಾನ ಸಭಾ ಚುನಾವಣೆ ನಡೆಸಲು ಮುಂದಾಗಿದೆನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕ 30 ಲೋಕಸಭೆ ಸೇರಿದಂತೆ ರಾಜ್ಯದ 3 ಉಪಚುನಾವಣೆಗಳ ದಿನಾಂಕ ಪ್ರಕಟವಾಗಿದೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭೆ ಹಾಗೂ ಇನ್ನೆರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. …
Read More »ಸುದೀಪ್ ‘ಬೆಳ್ಳಿಹಬ್ಬ’: 25 ವರ್ಷದ ಪಯಣಕ್ಕೆ ಶುಭಹಾರೈಸಿದ ಸಿಎಂ ಯಡಿಯೂರಪ್ಪ>ಭಾವುಕರಾದ ಸುದೀಪ್
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಕಿಚ್ಚ ಸುದೀಪ್ ಅವರಿಗಾಗಿ (ಮಾರ್ಚ್ 15) ರಂದು ‘ಸುದೀಪ್ ಬೆಳ್ಳಿಹಬ್ಬ’ ಆಯೋಜಿಸಲಾಗಿತ್ತು. ಸಿಎಂ ಯಡಿಯೂರಪ್ಪ, ನಟ ಶಿವರಾಜ್ ಕುಮಾರ್, ರವಿಚಂದ್ರನ್, ರಮೇಶ್ ಅರವಿಂದ್, ರವಿಶಂಕರ್, ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಹಾಗೂ ಇನ್ನೂ ಕೆಲವು ಸಿನಿ ಹಾಗೂ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕಿಚ್ಚ ಸುದೀಪ್, ‘ನನಗಿಂತಲೂ ಹಿರಿಯರು ಇಲ್ಲಿದ್ದಾರೆ. ನನಗಿಂತಲೂ ಮುಂಚೆ ಅವರು ಸಿನಿಯಾನ ಆರಂಭಿಸಿದ್ದಾರೆ, ಅವರ ನೆರಳಿನಲ್ಲಿ ನಾನು …
Read More »
Laxmi News 24×7