Breaking News

ರಾಷ್ಟ್ರೀಯ

ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ಶೋಷಣೆ: ಸಮಿತಿ ರಚನೆ ಸಂಬಂಧ ಇಂದು ಮಹತ್ವದ ಸಭೆ

ಕನ್ನಡ ಚಿತ್ರರಂಗದಲ್ಲಿ ಕೇಳಿ ಬರುತ್ತಿರುವ ಲೈಂಗಿಕ ಶೋಷಣೆ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಸಮಿತಿ ರಚಿಸುವ ಕುರಿತಾಗಿ ಇಂದು ಮಹತ್ವದ ಸಭೆ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೆಪ್ಟೆಂಬರ್ 16ರಂದು ಬೆಳಿಗ್ಗೆ ಸಭೆ ನಡೆಸಲಿದೆ. ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಅವರು ರಾಜ್ಯ ಮಹಿಳಾ ಆಯೋಗದ ಮನವಿ ಮೇರೆಗೆ ಸಭೆ ಕರೆದಿದ್ದು, ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿದೆ ಎನ್ನಲಾದ ಲೈಂಗಿಕ ಶೋಷಣೆಯ ಕುರಿತಾಗಿ ಚರ್ಚೆ ನಡೆಸಲಾಗುವುದು. ಇದುವರೆಗೆ ಮಂಡಳಿಗೆ ಲೈಂಗಿಕ …

Read More »

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು

ಚಿಕ್ಕೋಡಿ: ಶಾಲಾ ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರ ತೋರಿಸುವುದು ಮತ್ತು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೋರ್ವನನ್ನು ಚಿಕ್ಕೋಡಿ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿಕ್ಕೋಡಿ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುವ ಕುರಿತು ವಿದ್ಯಾರ್ಥಿನಿಯರು ಅಳುತ್ತಾ ಮನೆಗೆ ಹೋದಾಗ ಬಾಲಕಿಗೆ ಪೋಷಕರು ಪ್ರಶ್ನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯ ತಂದೆ ಇತರ ಪೋಷಕರಿಗೆ ಮಾಹಿತಿ ನೀಡಿ ವಿಚಾರಿಸಿದಾಗ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ …

Read More »

ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್‌ ಜಾರಕಿಹೊಳಿ

ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್‌ ಜಾರಕಿಹೊಳಿ ಬೆಳಗಾವಿ: ಮುನಿರತ್ನನವರಿಗೆ ನಾವು ಬೈಯ್ಯುವಂತೆ ಹೇಳಿದ್ದೇವಾ? ಸಿಕ್ಕ ಸಿಕ್ಕ ಹಾಗೆ ಬಾಯಿಗೆ ಬಂದ ಹಾಗೇ ಬೈಯ್ಯವಂತೆ ಹೇಳಿದ್ವಾ? ಬೈಯ್ಯುವಂತೆ ಕಾಂಗ್ರೆಸ್ ನವರು, ಬಿಜೆಪಿಯವರು, ಜೆಡಿಎಸ್ ನವರು ಹೇಳಿದ್ರಾ? ತರಾತುರಿಯಲ್ಲಿ ನಾವು ಮಾಡಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರೆಸ್ಟ್ ಮಾಡಿದರೆ ಮಾಡಿದ್ದೀರಿ ಅಂತಾರೆ, ಮಾಡಿಲ್ಲ ಅಂದರೆ ಮಾಡಿಲ್ಲ ಎಂದು ಹೇಳುತ್ತಾರೆ …

Read More »

ಪ್ರವಾಸಿಗರಿಬ್ಬರಿಂದ ತಾಜ್​ ಮಹಲ್​ ಗಾರ್ಡನ್​ನಲ್ಲಿ ಮೂತ್ರ ವಿಸರ್ಜನೆ! ತನಿಖೆಗೆ ಆದೇಶ

ನವದೆಹಲಿ: ಜಗತ್ತಿನ ಏಳು ಅದ್ಭುತಗಳಲ್ಲಿ ಒಂದಾದ ಐತಿಹಾಸಿಕ ಸ್ಮಾರಕ ತಾಜ್ ಮಹಲ್ ಉದ್ಯಾನವನದಲ್ಲಿ ಇಬ್ಬರು ಪ್ರವಾಸಿಗರು ಮೂತ್ರ ವಿಸರ್ಜನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆ ತನಿಖೆಗೆ ಆದೇಶಿಸಿದ್ದು, ಭದ್ರತಾ ಕ್ರಮಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ವೈರಲ್​ ಆಗುತ್ತಿರುವ ವಿಡಿಯೋವನ್ನು ಯಾವಾಗ ಸೆರೆಹಿಡಿಯಲಾಗಿದೆ ಮತ್ತು ಯಾರು ಅದನ್ನು ವೈರಲ್ ಮಾಡಿದ್ದಾರೆ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ. ವೈರಲ್​ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಉದ್ಯಾನಗಳಲ್ಲಿ ಭದ್ರತಾ ಸಿಬ್ಬಂದಿ …

Read More »

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಚಿಕ್ಕೋಡಿ: ‘ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ವಿಚಾರದಲ್ಲಿ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಕಾಂಗ್ರೆಸ್ ಸರ್ಕಾರ ಮತೀಯ ಶಕ್ತಿಗಳನ್ನು ಪ್ರೋತ್ಸಾಹಿಸುತ್ತಿದೆ. ಕರ್ನಾಟಕ ರಾಜ್ಯವನ್ನು ಮತ್ತೊಂದು ತಾಲಿಬಾನ್, ಬಾಂಗ್ಲಾದೇಶ ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೊರಟಿದ್ದಾರೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲಕುಮಾರ ಕಿಡಿಕಾರಿದರು.   ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದ ನೇತೃತ್ವದಲ್ಲಿ ಕಚೇರಿಯ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡ ಜಿಲ್ಲಾ ಮಟ್ಟದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ …

Read More »

ಉತ್ತಮ ಸೇವೆ ಸಲ್ಲಿಸಲು ಸಹಕಾರ ಸಂಘಕ್ಕೆ ಸಲಹೆ: ಪವನ್ ಕತ್ತಿ

ಹುಕ್ಕೇರಿ: ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಉತ್ತಮ ಸೇವೆ ನೀಡುವ ಸಂಘ ಸಂಸ್ಥೆಗಳು ದೀರ್ಘಾವಧಿ ಸೇವೆ ಸಲ್ಲಿಸಲು ಸಾಧ್ಯ ಎಂದು ಬೆಲ್ಲದ ಬಾಗೇವಾಡಿ ಅರ್ಬನ್ ಸಹಕಾರ ಬ್ಯಾಂಕ್ ಅಧ್ಯಕ್ಷ ಪವನ್ ಕತ್ತಿ ಹೇಳಿದರು. ಶುಕ್ರವಾರ ತಾಲ್ಲೂಕಿನ ಶಿರಗಾಂವ ಗ್ರಾಮದಲ್ಲಿ ‘ಶಿರಗಾಂವ ಸೌಹಾರ್ದ ಸಹಕಾರ ಸಂಘ’ ಉದ್ಘಾಟಿಸಿ ಮಾತನಾಡಿದರು.   ‘ಸಹಕಾರದಿಂದ ಆರ್ಥಿಕ ವ್ಯವಹಾರದ ಜತೆ ರೈತರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಬೀಜ, ರಸಗೊಬ್ಬರ ಮತ್ತು ಕ್ರಮಿನಾಶಕ ಔಷಧ ಮಾರಾಟ ಪ್ರಾರಂಭಿಸಿರುವುದು ಶ್ಲಾಘನೀಯ’ ಎಂದರು. ಸಹಕಾರ ಸಂಘದ …

Read More »

ರಾಜ್ಯ ಸರ್ಕಾರ ದಿವಾಳಿಯಾಗಿದೆ: ಪ್ರಹ್ಲಾದ ಜೋಶಿ‌

ರಾಜ್ಯ ಸರ್ಕಾರ ದಿವಾಳಿಯಾಗಿದೆ: ಪ್ರಹ್ಲಾದ ಜೋಶಿ‌ ಹುಬ್ಬಳ್ಳಿ: ರೈತರ ಹೆಸರು ಹೇಳಿ ಹಾಲಿನ‌ ದರ ಹಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ, ಇದೊಂದು ದಿವಾಳಿ ಸರ್ಕಾರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ‌ (Prahlada Joshi) ಆಕ್ರೋಶ‌ ವ್ಯಕ್ತಪಡಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ರೈತರಿಗೆ ಹಾಲು ಉತ್ಪಾದನೆ ಪ್ರೋತ್ಸಾಹ ಧನ ಸ್ಥಗಿತಗೊಳಿಸಿತು. ಇದೀಗ ರೈತರ ಹೆಸರಲ್ಲಿ ದರ‌ ಹಚ್ಚಿಸಿ ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿದೆ. ದರ ಹೆಚ್ಚಳದ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಕಿಲ್ಲಾ ತೊರಗಲ್ಲ ಗ್ರಾಮದ ಶ್ರೀ ದುರ್ಗಾ ದೇವಿಯ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ …

Read More »

ದೇವರಿಗೂ ಕಳ್ಳರ ಕಾಟ: ಗಣಪತಿ ಮೂರ್ತಿಯನ್ನೇ ಕದ್ದೊಯ್ದ ಖದೀಮರು

ಬೆಂಗಳೂರು: ಮನೆಗಳ್ಳತನ, ಸರಗಳ್ಳತನ, ಹಣ, ಬೈಕ್ ಕಳ್ಳತನ ಮಾಡುವವರನ್ನು, ದೇವರ ಮೂರ್ತಿ ಮೇಲಿನ ಚಿನ್ನಾಭರಣಗಳನ್ನು ಕದಿಯುವವರನ್ನು ನೊಡಿದ್ದೇವೆ. ಆದರೆ ಇದೀಗ ದೇವರ ಮೂರ್ತಿಯನ್ನೂ ಕಳ್ಳರು ಬಿಡುತ್ತಿಲ್ಲ. ಕಳ್ಳರಿಗೆ ದೇವರ ಮೇಲೂ ಸ್ವಲ್ಪವೂ ಭಯ-ಭಕ್ತಿ ಎಂಬುದು ಇದ್ದಂತಿಲ್ಲ. ದೇವರಾದರೇನು? ಯಾರಾದರೇನು? ಕದಿಯುವುದೇ ಕಾಯಕವನ್ನಾಗಿ ಮಾಡಿಕೊಂಡಿರುವ ಖದೀಮರು ಗಣಪತಿಯ ಮೂರ್ತಿಯನ್ನೇ ಕದ್ದು ಪರಾರುಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಡರಾಯನಹಳ್ಳಿಯ ಅಂದ್ರಳ್ಳಿ ಮುಖ್ಯ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ರಾತ್ರೋರಾತ್ರಿ ಗಣಪತಿ ಮೂರ್ತಿಯನ್ನು …

Read More »

ಸದ್ಯಕ್ಕೆ ನಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ : ಯತ್ನಾಳ್‌

ಬೆಂಗಳೂರು,ಸೆ.13-ಪಕ್ಷದಲ್ಲಿ ಉಂಟಾಗಿದ್ದ ಸಣ್ಣಪುಟ್ಟ ಸಮಸ್ಯೆಗಳನ್ನು ಸಂಘ ಪರಿವಾರದ ನಾಯಕರು ಪರಿಹರಿಸಿದ್ದಾರೆ. ಸದ್ಯಕ್ಕೆ ನಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿಯ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ಪಷ್ಟಪಡಿಸಿದ್ದಾರೆ.   ರಾಜಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸಭೆ ಬಳಿಕ ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ ಎಂದು ಪರಿವಾರದ ನಾಯಕರಿಗೆ ನಮ ತೀರ್ಮಾನವನ್ನು ತಿಳಿಸಿದ್ದೇವೆ. ನಮಲ್ಲಿ ಗೊಂದಲ ಮತ್ತು ಭಿನ್ನಾಭಿಪ್ರಾಯಗಳು ಇಲ್ಲವೇ ಇಲ್ಲ. ನಾಯಕತ್ವ ಪ್ರಶ್ನೆಯೂ …

Read More »