ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಯ ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಕ್ಕೆ ಸೇರಿದ ಆಸ್ತಿಯನ್ನು ಕಬಳಿಸಲು ಗುಂಪೊಂದು ಹುನ್ನಾರ ನಡೆಸಿದೆ ಎಂದು ಮಹಾಸಂಸ್ಥಾನದ ಪೀಠಾಧಿಪತಿ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ ಆರೋಪ ಮಾಡಿದರು. ‘ಈಚೆಗೆ ಮಠದೊಳಗೆ ಏಕಾಏಕಿ ನುಗ್ಗಿದ ಗುಂಪೊಂದು ಶಿಷ್ಯರ ಮೇಲೆ ಹಲ್ಲೆ ಮಾಡಿದೆ. ಈ ಕುರಿತು ಪ್ರಕರಣ ದಾಖಲಿಸಿದ್ದೇವೆ. ಅದೇ ಊರಿನವರೇ ಇದರಲ್ಲಿ ಭಾಗಿಯಾಗಿದ್ದಾರೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ‘ಮಹಾಸಂಸ್ಥಾನಕ್ಕೆ ಐತಿಹಾಸಿಕ ಹಿನ್ನೆಲೆ ಇದೆ. ಬೆಂಗಳೂರು ಸೇರಿ ರಾಜ್ಯದ …
Read More »ಕಾಡಿನಲ್ಲಿ ಕಳೆದುಹೋಗಿ 35 ಕೆಜಿ ಉಣ್ಣೆ ಬೆಳೆಸಿಕೊಂಡಿದ್ದ ಕುರಿ: ವಿಡಿಯೋ ಸಖತ್ ವೈರಲ್!
ಆಸ್ಟ್ರೇಲಿಯಾದ ಕಾಡೊಂದರಲ್ಲಿ ಸಿಕ್ಕಿರುವ ವಯಸ್ಸಾದ ಕುರಿಯೊಂದನ್ನು ರಕ್ಷಿಸಲಾಗಿದ್ದು, ಅದರ ಮೈಮೇಲೆ ಬೆಳೆದಿದ್ದ ಸುಮಾರು 35 ಕೆಜಿಯಷ್ಟು ಉಣ್ಣೆಯನ್ನು ತೆಗೆದು ಅದರ ದೇಹದ ಭಾರವನ್ನು ಇಳಿಸಲಾಗಿದೆ. ಈ ಕುರಿಗೆ ‘ಬರಾಕ್’ ಎಂದು ಹೆಸರು ಇಡಲಾಗಿದೆ. ಹೌದು, ಕುರಿಗಳು ಉಣ್ಣೆಗೆ ಪ್ರಸಿದ್ಧಿ. ಆದರೆ ಈ ಕುರಿ ಮೈಮೇಲೆ ಬೆಳೆದಿದ್ದ ಉಣ್ಣೆಯನ್ನು ನೋಡಿ ಸ್ವತಃ ಅದನ್ನು ರಕ್ಷಿಸಿದ ಜನರೇ ಬೆಚ್ಚಿಬಿದ್ದಿದ್ದಾರೆ. ತನ್ನ ಮೈಮೇಲೆಲ್ಲಾ ಉಣ್ಣೆ ಬೆಳೆಸಿಕೊಂಡಿರುವ ಈ ಕುರಿ ನೋಡಲು ಬೇರೆ ಪ್ರಾಣಿ ರೀತಿ …
Read More »1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ
ಗೋಕಾಕ : ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕೌಜಲಗಿಯಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಮಾತನಾಡಿದ ಅವರು, ಮನೆ ಮನೆಗೆ ಗಂಗೆ ಎಂಬ ವಿನೂತನ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಇದನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು. ಈಗಾಗಲೇ ಜಲಜೀವನ …
Read More »ತಮಿಳುನಾಡು: ಪರೀಕ್ಷೆ ಇಲ್ಲದೆ 9, 10, 11ನೇ ತರಗತಿ ವಿದ್ಯಾರ್ಥಿಗಳು ಪಾಸ್, ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60ಕ್ಕೆ ಏರಿಕೆ
ಚೆನ್ನೈ: ತಮಿಳುನಾಡು ಸರ್ಕಾರ 2020-21ನೇ ಸಾಲಿನ 9, 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಮುಂದಿನ ತರಗತಿಗೆ ತೇರ್ಗಡೆ ಮಾಡಿದ್ದು, ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷಕ್ಕೆ ಹೆಚ್ಚಿಸಿದೆ. 2020-21ನೇ ಸಾಲಿನ 9, 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಪಾಸ್ ಮಾಡಲಾಗಿದ್ದು, ಇದರ ಅನುಷ್ಠಾನದ ಬಗ್ಗೆ ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ …
Read More »ಸರ್ಕಾರ ಭರವಸೆ ನೀಡಿದ್ದ ಒಂದೇ ಒಂದು ಬೇಡಿಕೆಯನ್ನು ಈವರೆಗೂ ಈಡೇರಿಸಿಲ್ಲ; ಸಾರಿಗೆ ನೌಕರರ ಒಕ್ಕೂಟ
ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳು ಈಡೇರಿಸಿಲ್ಲ. 14 ಡಿಸೆಂಬರ್ 2020 ರಿಂದ ಈವರೆಗೂ ಬೇಡಿಕೆ ಈಡೇರಿಲ್ಲ. 75 ದಿನ ಕಳೆದರೂ ಸರ್ಕಾರ ಸಾರಿಗೆ ನೌಕರರ ಒಂದೇ ಒಂದು ಬೇಡಿಕೆ ಈಡೇರಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಸಾರಿಗೆ ನೌಕರರ ಒಕ್ಕೂಟದಿಂದ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು, ಕಳೆದ ಡಿಸೆಂಬರ್ನಲ್ಲಿ ಸಾರಿಗೆ ನೌಕರರು ನಡೆಸಿದ ಧರಣಿ ವೇಳೆ ಸರ್ಕಾರ ನೌಕರರ ಬೇಡಿಕೆ ಹೊರತುಪಡಿಸಿ …
Read More »ಪಂಚಮಸಾಲಿ ಮೀಸಲಾತಿ ಕುರಿತು ಸಂಜೆ ದುಂಡುಮೇಜಿನ ಸಭೆ
ಬೆಂಗಳೂರು,ಫೆ.25- ಶತಾಯಗತಾಯ ಲಿಂಗಾಯಿತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲೇಬೇಕೆಂಬ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಇಂದು ಸಂಜೆ ಮಹತ್ವದ ದುಂಡುಮೇಜಿನ ಸಭೆ ನಡೆಯಲಿದೆ. ಈ ಸಭೆಗೆ ಸಚಿವರು, ಶಾಸಕರು, ಸಮಾಜದ ಮುಖಂಡರು ಸೇರಿದಂತೆ ಅನೇಕರನ್ನು ಕೂಡಲಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿಗಳೇ ಖುದ್ದು ಆಹ್ವಾನಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮಾಜಿ ಶಾಸಕ ಹಾಗೂ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಮಹತ್ವದ …
Read More »ಕ್ರಿಕೆಟ್ ಬೆಟ್ಟಿಂಗ್ ಗೃಹ ಮಂತ್ರಿ ಕಿವಿಗೂ ಬಿತ್ತು
ಬೆಳಗಾವಿ. ಕ್ರಿಕೆಟ್ ಬೆಟ್ಟಿಂಗ್ ಅಷ್ಟೇ ಅಲ್ಲ ಹವಾಲಾ ಮತ್ತಿತರ ದಂಧೆಗಳಿಗೆ ಕಡಿವಾಣ ಹಾಕಲು ಪೊಲೀಸರು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಈ ದಂಗೆಯನ್ನು ಮಟ್ಟ ಹಾಕಲು ಕೇವಲ ಜಿಲ್ಲಾ ಪೊಲೀಸರು ಅಷ್ಟೇ ಅಲ್ಲ ಬೆಳಗಾವಿ ನಗರ ಪೊಲೀಸರು ತಯಾರಾಗಿ ಕುಳಿತಿದ್ದಾರೆ. ಗಮನಿಸಬೇಕಾದ ಸಂಗತಿ ಎಂದರೆ, ಬೆಟ್ಟಿಂಗ್ ದಂಧೆ ಸಮಗ್ರ ಮಾಹಿತಿ ಈಗ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಿವಿಗೂ ಬಿದ್ದಿದೆ. ಹೀಗಾಗಿ ಈ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದರಲ್ಲಿ ಎರಡು …
Read More »2 ದಿನ ಫಾರ್ಮ್ ಹೌಸ್ ನಲ್ಲಿರಿಸಿ ಯುವತಿ ಮೇಲೆ ಅತ್ಯಾಚಾರ :ಬಿಜೆಪಿ ನಾಯಕ ಸೇರಿ ನಾಲ್ವರು ಅರೆಸ್ಟ್
ಮಧ್ಯಪ್ರದೇಶ : ಶಾಲಾ ಶಿಕ್ಷಕ ಹಾಗೂ ಸ್ಥಳೀಯ ಬಿಜೆಪಿ ನಾಯಕ ಸೇರಿ ನಾಲ್ವರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.20 ವರ್ಷದ ಯುವತಿಯನ್ನು 2 ದಿನ ಫಾರ್ಮ್ ಹೌಸ್ನಲ್ಲಿರಿಸಿ ನಾಲ್ವರು ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಫೆ. 18ರಂದು ಈ ಘಟನೆ ನಡೆದಿದ್ದು, ದಿನಸಿ ಸಾಮಾನುಗಳನ್ನು ತರಲು ಯುವತಿ ಹೋಗಿದ್ದಳು. ಈ ವೇಳೆ ಅಡ್ಡಗಟ್ಟಿದ ಕಾಮುಕರು ಆಕೆಯನ್ನು ಫಾರ್ಮ್ …
Read More »UPSC’ ಕೊನೆಯ ಅವಕಾಶದ ಅಭ್ಯರ್ಥಿಗಳಿಗೆ ಸುಪ್ರೀಂಕೋರ್ಟ್ ನಿಂದ ಬಿಗ್ ಶಾಕ್!
ನವದೆಹಲಿ: 2020ರ ಅಕ್ಟೋಬರ್ʼನಲ್ಲಿ ಕೊನೆಯ ಪ್ರಯತ್ನ ನಡೆಸಿದ ಅಭ್ಯರ್ಥಿಗಳಿಗೆ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಯುಪಿಎಸ್ ಸಿ ಪರೀಕ್ಷೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಆಗದ ಕೊನೆಯ ಅವಕಾಶದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ. ಸಿವಿಲ್ ಸರ್ವೀಸ್ ಎಕ್ಸಾಮಿನೇಷನ್ 2020ರಲ್ಲಿ ಕೊನೆಯ ಪ್ರಯತ್ನ ಮಾಡಿದ್ದ ಅರ್ಜಿದಾರರು, ಕೋವಿಡ್-19 …
Read More »ಅಂತರ ತಾಲೂಕಾ ಹಾಗೂ ಗೋಕಾಕ ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ
ಗೋಕಾಕ: ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ ವತಿಯಿಂದ ದಿ. 26 ರಂದು ಸಂಜೆ 5 ಗಂಟೆಗೆ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅಂತರ ತಾಲೂಕಾ ಹಾಗೂ ಗೋಕಾಕ ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಅಸೋಸಿಯೇಷನ ಕಾರ್ಯದರ್ಶಿ ರಮೇಶ ಕಳ್ಳಿಮನಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಈ ಸ್ಪರ್ಧೆಯಲ್ಲಿ 55, 60, 65, ಹಾಗೂ 65+ ಕೆಜಿ ದೇಹ ತೂಕದ ಸ್ಪರ್ಧಾಳುಗಳಿಗೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು …
Read More »
Laxmi News 24×7