ಹೈದರಾಬಾದ್: ವ್ಯಾಪಾರದಲ್ಲಿ ಬಂದ ಹಣವನ್ನೆಲ್ಲ ಬ್ಯಾಂಕ್ ನಲ್ಲಿ ಠೇವಣಿಯಿಡದೇ ಪೆಟ್ಟಿಗೆಯಲ್ಲಿ ತುಂಬಿಟ್ಟ ಪರಿಣಾಮ ಲಕ್ಷಾಂತರ ರೂಪಾಯಿ ಗೆದ್ದಲು ಹಿಡಿದು ಹಾಳಾಗಿರುವ ಘಟನೆ ಹೈದರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮೈಲಾವರಂ ನಿವಾಸಿ ಬಿಜ್ಲಿ ಚಾಮಲಯ್ಯ ಹಂದಿ ವ್ಯಾಪಾರಿಯಾಗಿದ್ದು, ತಾವು ದುಡಿದ ಹಣವನ್ನೆಲ್ಲ ಬ್ಯಾಂಕ್ ನಲ್ಲಿಡದೇ ಶೇಖರಿಸಿ ಪೆಟ್ಟಿಗೆಯಲ್ಲಿ ತುಂಬಿಟ್ಟಿದ್ದಾರೆ. ಹಣ ಸುರಕ್ಷಿತವಾಗಿದೆಯೇ ಎಂಬುದನ್ನೂ ನೋಡಿಲ್ಲ. ವರ್ಷದ ಬಳಿಕ ಪೆಟ್ಟಿಗೆ ತೆಗೆದು ನೋಡಿದಾಗ ಇದೀಗ ಹಣ ಗೆದ್ದಲು ತಿಂದು ನಾಶವಾಗಿದೆ. ಇದರಿಂದ ಬೇಜಾರಾದ …
Read More »ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಮೂಡಲಗಿ ತಾಲೂಕಿನ ಅರಭಾವಿ (ಹಟ್ಟಿಗುಡ್ಡ) ಪಟ್ಟಣದ ಕುತುಬಸಾಬ ಬಾಗವಾನ ಅವರ ವಾರಸುದಾರರಿಗೆ ಇಂಧನ ಇಲಾಖೆಯಿಂದ 5ಲಕ್ಷ ರೂಗಳ ಪರಿಹಾರಧನದ ಚೆಕ್ನ್ನು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಕೆಎಮ್ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಿಂದ ಮಂಜೂರಾದ ಪರಿಹಾರ ಧನವನ್ನು ಕುಟುಂಬದವರು ಸದ್ಭಳಕೆ ಮಾಡಿಕೊಳ್ಳಬೇಕು. ಈ ಹಣವನ್ನು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಬ್ಯಾಂಕ್ನಲ್ಲಿ ಠೇವಣಿಯಾಗಿಟ್ಟು …
Read More »ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದು ಖಂಡಿತ ನಿಜ. ಕಾಂಗ್ರೆಸ್ ನ 15-20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ:
ವಿಜಯಪುರ : ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದು ಖಂಡಿತ ನಿಜ. ಕಾಂಗ್ರೆಸ್ ನ 15-20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೊಸ ಬಾಂಬ್ ಹಾಕಿದ್ದಾರೆ. ಇಲ್ಲನ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ,ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ. ಆದ್ರೆ ಸಧ್ಯ ನಮಗೆ ಅವಶ್ಯಕತೆ ಇಲ್ಲ ಎಂದು ನಾವೇ ಸುಮ್ಮನಾಗಿದ್ದೀವಿ, ಆದರೂ ಅವರೇ ನಮಗೆ ಕೇಳ್ತಿದ್ದಾರೆ ಎಂದರು. ಕಾಂಗ್ರೆಸ್ನಲ್ಲಿ ಅಸಮಧಾನವಿದ್ದಂತೆ ಕಾಣ್ತಿದೆ, ಮುಂದೆ ಚುನಾವಣೆಯಲ್ಲಿ ಅವರನ್ನ …
Read More »ರಾಜ್ಯದಲ್ಲಿ ಪೆಟ್ರೋಲ್ ಬೆಲೆ 100 ರುಗೆ ಏರಿಕೆ…?
ನವದೆಹಲಿ, ಫೆಬ್ರವರಿ 17: ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಬುಧವಾರ(ಫೆ.17) ಮತ್ತೊಮ್ಮೆ ತೈಲ ದರ ಏರಿಕೆ ಮಾಡಿದ್ದು, ಸತತವಾಗಿ ಒಂಭತ್ತನೇ ದಿನದಂದು ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಎರಡನೇ ಬಾರಿಗೆ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಲೇ ಇದೆ. ಬುಧವಾರದಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ತಲಾ 25 ಪೈಸೆ ಏರಿಕೆ ಕಂಡಿದೆ. ರಾಜಸ್ಥಾನದಲ್ಲಿ ಅತಿ …
Read More »ಪ್ರಿಯಕರನೊಂದಿಗೆ ಪಲ್ಲಂಗ ಸುಖಕ್ಕಾಗಿ ಪತಿಯನ್ನೇ ಕೊಂದ ಪತ್ನಿ!
ಯಮುನನಗರ : ವಿವಾಹೇತರ ಸಂಬಂಧಕ್ಕಾಗಿ 26 ವರ್ಷದ ಪತಿಯನ್ನು ಪತ್ನಿಯೊಬ್ಬಳು ತನ್ನ ಪ್ರೇಮಿಯ ಜೊತೆ ಸೇರಿ ಕತ್ತು ಹಿಸುಕಿ ಕೊಂದ ಘಟನೆ ಹರಿಯಾಣದ ಯಮುನನಗರದ ಖಿಜ್ರಾಬಾದ್ ನಲ್ಲಿ ನಡೆದಿದೆ. ಆರೋಪಿ ಹಾಗೂ ಸಂತ್ರಸ್ತನಿಗೆ 4 ವರ್ಷಗಳ ಹಿಂದೆ ವಿವಾಹವಾಗಿದ್ದು, ಒಂದು ಮಗುವಿದೆ. ಆದರೆ ಪತ್ನಿ ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು, ಹೀಗಾಗಿ ಪ್ರೇಮಿಯ ಜೊತೆ ಸೇರಿ ಪತಿಯನ್ನು ಕೊಂದು ಮನೆಯ ಒಳಗೆ ಹೂತು ಹಾಕಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು …
Read More »EPFO ಚಂದಾದಾರರಿಗೊಂದು ಮಹತ್ವದ ಮಾಹಿತಿ: ಇನ್ಮುಂದೆ ಆನ್ಲೈನ್ ನಲ್ಲಿ ಸಿಗಲ್ಲ ಈ ಸೇವೆ
ನೌಕರರ ಭವಿಷ್ಯ ನಿಧಿ ಸಂಸ್ಥೆ, ಆನ್ಲೈನ್ ಸೇವೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಸದಸ್ಯರಿಗೆ ಆನ್ಲೈನ್ ಮಾಧ್ಯಮದ ಮೂಲಕ ಪ್ರೊಫೈಲ್ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲು ಅನುಮತಿ ನೀಡುವುದಿಲ್ಲ. ಆನ್ಲೈನ್ ಮೂಲಕ ಪ್ರೊಫೈಲ್ ತಿದ್ದುಪಡಿ ಮಾಡಿದ್ರೆ ದಾಖಲೆಗಳು ಹೊಂದಿಕೆಯಾಗದಿರುವ ಸಾಧ್ಯತೆಯಿದೆ. ಇದು ವಂಚನೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಈ ಸಂಬಂಧ ಇಪಿಎಫ್ಒ ಪ್ರಾದೇಶಿಕ ಕಚೇರಿಗಳು ಮತ್ತು ಸದಸ್ಯ ಸಂಸ್ಥೆಗಳಿಗೆ ಈಗಾಗಲೇ ಸುತ್ತೋಲೆ ಹೊರಡಿಸಿದೆ. ಯಾವುದೇ ಕಾಗದದ ಪುರಾವೆ ಇಲ್ಲದೆ, ಯಾವುದೇ ನೌಕರ ದಾಖಲೆಯನ್ನು …
Read More »ರೈತರ ಪ್ರತಿಭಟನೆ ಪರ ಧ್ವನಿಯೆತ್ತಿ ವಿವಾದಕ್ಕೀಡಾದ ಗಾಯಕಿ ರಿಹಾನ್ನಾ ಮೇಲೆ ಮತ್ತೊಂದು ವಿವಾದ
ನ್ಯೂಯಾರ್ಕ್: ಭಾರತದಲ್ಲಿನ ರೈತರ ಪ್ರತಿಭಟನೆ ಪರ ಧ್ವನಿಯೆತ್ತಿ, ವಿವಾದಕ್ಕೀಡಾಗಿದ್ದ ಖ್ಯಾತ ಪಾಪ್ ಗಾಯಕಿ ರಿಹಾನ್ನಾ ಮತ್ತೂಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಗಣೇಶನ ಪದಕವುಳ್ಳ ನೆಕ್ಲೇಸ್ ಧರಿಸಿ, ಟಾಪ್ಲೆಸ್ನಲ್ಲಿ ಪೋಸು ಕೊಟ್ಟ ಫೋಟೋವೊಂದನ್ನು ರಿಹಾನ್ನಾ ಟ್ವಿಟರಿನಲ್ಲಿ ಪೋಸ್ಟ್ ಮಾಡಿದ್ದಾರೆ. “ಅರೆಬೆತ್ತಲೆ ರೂಪದ ರಿಹಾನ್ನಾ, ತನ್ನ ಮೈಮಾಟದ ಪ್ರದರ್ಶನಕ್ಕಾಗಿ ಹಿಂದೂ ದೇವರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಮುಗಿಲು ಮುಟ್ಟಿದೆ. “ಭಾರತವನ್ನು, ಹಿಂದೂ ಧರ್ಮವನ್ನು ಅವಹೇಳನ ಮಾಡುವುದನ್ನು ನಿಲ್ಲಿಸಿ’ ಎಂದು …
Read More »ವಿವಾದಿತ ಸ್ಥಳದಿಂದ ಚೀನ ಅಕ್ರಮ ಟೆಂಟು ತೆರವು : ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ
ಹೊಸದಿಲ್ಲಿ: ಲಡಾಖ್ನ ಎಲ್ಎಸಿಯ ವಿವಾದಿತ ಸ್ಥಳದಿಂದ ಚೀನ ಸೇನೆ ವಾಪಸಾತಿ ಕೈಗೊಳ್ಳುತ್ತಿರುವ ವೀಡಿಯೊವೊಂದನ್ನು ಭಾರತೀಯ ಸೇನೆ ಮಂಗಳವಾರ ಬಿಡುಗಡೆ ಮಾಡಿದೆ. ಹಿಮಬೆಟ್ಟದ ನೆತ್ತಿ ಮೇಲೆ ಹೂಡಿದ್ದ ಅಕ್ರಮ ಟೆಂಟ್ಗಳನ್ನು ಪಿಎಲ್ಎ ಸೈನಿಕರು ಕೀಳುತ್ತಿರುವ ದೃಶ್ಯಗಳು ವೀಡಿಯೋದಲ್ಲಿವೆ. ಯುದ್ದೋಪಕರಣಗಳನ್ನು ಹೊತ್ತು ಪರ್ವತದಿಂದ ಇಳಿಯುತ್ತಾ, ತಮಗಾಗಿ ಕಾಯುತ್ತಿರುವ ಟ್ರಕ್ನತ್ತ ಚೀನೀ ಸೈನಿಕರು ಧಾವಿಸುತ್ತಿರುವ ದೃಶ್ಯಗಳನ್ನು ಝೂಮ್ ನೋಟದಲ್ಲಿ ವೀಡಿಯೋ ತೋರಿಸಿದೆ. ನಿರ್ಮಾಣಗಳು ಉಡೀಸ್: ಅಲ್ಲದೆ ಈ 10 ತಿಂಗಳಲ್ಲಿ ಸೈನಿಕರು ತಂಗಲು, ಯುದ್ದೋಪಕರಣಗಳನ್ನು …
Read More »ಪಿಎಂ ಕೇರ್ಸ್ ಲೆಕ್ಕವನ್ನೇ ಕೊಡದವರು ರಾಮ ಮಂದಿರ ಹಣದ ಲೆಕ್ಕಾ ಕೊಡ್ತಾರ?; ಸಿದ್ದರಾಮಯ್ಯ
ಬೆಂಗಳೂರು (ಫೆಬ್ರವರಿ 16); ಕೊರೋನಾ ಸಂದರ್ಭದಲ್ಲಿ ಜನರಿಂದ ಸಂಗ್ರಹಿಸಲಾದ ಪಿಎಂ ಕೇರ್ಸ್ ಹಣದ ಲೆಕ್ಕವನ್ನೇ ಕೊಡದವರು, ಇದೀಗ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲು ಮುಂದಾಗಿರುವ ಹಣದ ಲೆಕ್ಕ ಕೊಡ್ತಾರಾ? ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ನೇರಾ ನೇರ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡುತ್ತಿದ್ದಂತೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಿದ್ದರು. ಅಲ್ಲದೆ, ದೇವಾಲಯ …
Read More »ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ …
Read More »
Laxmi News 24×7