ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, ಸೆ.17 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ಎಲ್ಲಾ 17 ಆರೋಪಿಗಳನ್ನು ಅವರು ಇರುವ ಜೈಲುಗಳಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆದೇಶ ಹೊರಡಿಸಿದೆ. …
Read More »ಕಿತ್ತೂರು ಉತ್ಸವ’ ಬೆಳಗಾವಿಯಲ್ಲಿ ಒಂದು ದಿನ ಕಾರ್ಯಕ್ರಮ
ಚನ್ನಮ್ಮನ ಕಿತ್ತೂರು: ‘ಅ. 23 ರಿಂದ 25 ರವರೆಗೆ ಆಚರಿಸುವ ‘ರಾಣಿ ಚನ್ನಮ್ಮನ ಕಿತ್ತೂರು ಉತ್ಸವ’ದ ಅಂಗವಾಗಿ ಬೆಳಗಾವಿ ನಗರದವರ ಬೇಡಿಕೆಯಂತೆ ಒಂದು ದಿನ ಅಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಮಾಹಿತಿ ನೀಡಿದರು. ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿ, ‘ಕಿತ್ತೂರಲ್ಲಿಯೂ ಮೂರು ದಿನ ಅದ್ಧೂರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮ ಸೇರಿ ವಿವಿಧ ಕ್ರೀಡಾಕೂಟಗಳು ನಡೆಯಲಿವೆ’ ಎಂದರು. ‘ಬಾಲಿವುಡ್ ಕಲಾವಿದರನ್ನು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಮಂತ್ರಿಸುವ ಚಿಂತನೆ ನಡೆದಿದೆ. …
Read More »ಮನೆಯಲ್ಲಿ ವನ್ಯಜೀವಿ ಮಾಂಸ, ಜಿಂಕೆ ಕೊಂಬು ಪತ್ತೆ: ಇಬ್ಬರ ಬಂಧನ
ಖಾನಾಪುರ: ತಾಲ್ಲೂಕಿನ ಗೋಟಗಾಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಾಂಬೇಗಾಳಿ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವನ್ಯಜೀವಿ ಮಾಂಸ ಮತ್ತು ಜಿಂಕೆ ಕೊಂಬುಗಳನ್ನು ಅರಣ್ಯ ಅಧಿಕಾರಿಗಳು ಗುರುವಾರ ಪತ್ತೆಹಚ್ಚಿ, ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಜಾಂಬೇಗಾಳಿ ಗ್ರಾಮದ ಮಹ್ಮದಲಿ ಹಲಸಿಕರ, ಮೌಲಾಲಿ ಹಲಸಿಕರ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಾಡುಕೋಣದ ಮಾಂಸ ಮತ್ತು ಜಿಂಕೆಯ ಕೊಂಬುಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ಮತ್ತು ದಾಳಿ ಸಂದರ್ಭದಲ್ಲಿ ದೊರೆತ …
Read More »ದರ್ಶನ್ ನಡಿಗೆ ನೋಡಿ ‘ಹೌದು ಹುಲಿಯಾ’ ಎಂದ ಫ್ಯಾನ್ಸ್!
ದರ್ಶನ್ ಜೈಲಿನಲ್ಲಿ ಇದ್ದರೂ ಕೂಡ ದುರಹಂಕಾರ ಮಾತ್ರ ಇನ್ನೂ ಕಡಿಮೆ ಆಗಿಲ್ಲ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆದರೂ ಕೂಡ ದಾಸನ ದಿಮಾಕು ಮಾತ್ರ ಕೊಂಚವೂ ಇಳಿಕೆಯಾದಂತೆ ಕಾಣಿಸುತ್ತಿಲ್ಲ. ಮಾಧ್ಯಮಗಳನ್ನು ನೋಡಿ ದರ್ಶನ್ ಅಸಭ್ಯವಾಗಿ ಕೈ ಸನ್ನೆ ಮಾಡಿದ್ದು ಕ್ಯಾಮಾರದಲ್ಲಿ ಸೆರೆಯಾಗಿದೆ. ಹೌದು… ಕಳೆದ ದಿನ (ಸೆಪ್ಟೆಂಬರ್ 12) ಚಾರ್ಜ್ಶೀಟ್ ಪ್ರತಿ ಸಮೇತ ವಕೀಲರ ಜೊತೆ ವಿಜಯಲಕ್ಷ್ಮಿ ಕುಟುಂಬ ಬಳ್ಳಾರಿ ಜೈಲಿಗೆ ಭೇಟಿ ನೀಡಿತ್ತು. …
Read More »ಲವ್ ಜಿಹಾದ್ ವಿರುದ್ಧ ರಣಕಹಳೆ; ಗಣೇಶೋತ್ಸವದಲ್ಲಿ ಸಾಮೂಹಿಕ ಆಣೆ ಪ್ರಮಾಣ
ಗದಗ: ಹಿಂದೂ (Hindu) ಯುವತಿಯರನ್ನು ಮುಸ್ಲಿಂ (Muslim) ಯುವಕರು ಪ್ರೀತಿಸಿ ಮತಾಂತರಿಸಿ ಲವ್ ಜಿಹಾದ್ (Love Jihad) ನಡೆಸುತ್ತಿದ್ದಾರೆ ಎಂಬ ಆರೋಪ ಹಲವು ದಿನಗಳಿಂದ ಕೇಳಿ ಬರುತ್ತಿದೆ. ಹೀಗಾಗಿ ಲವ್ ಜಿಹಾದ್ ಅನ್ನ ತಡೆಯಬೇಕು (Preventing Love Jihad) ಎಂಬ ಉದ್ದೇಶದಿಂದ ಕೆಲ ರಾಜ್ಯ ಸರ್ಕಾರಗಳು, ಬಿಜೆಪಿ, ಆರ್ಎಸ್ಎಸ್ ಕೂಡ ಹಲವು ಬಾರಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದನ್ನ ನಾವು ನೋಡಿದ್ದೇವೆ. ಈಗ ರಾಜ್ಯದಲ್ಲೂ ಇಂತದ್ದೇ ಒಂದು ಜಾಗೃತಿ (Awareness) ಕಾರ್ಯಕ್ರಮ …
Read More »ಬಿಜೆಪಿಗೆ ಇಂದು ಆರೆಸ್ಸೆಸ್ ಪಾಠ; ಭಿನ್ನ ರಾಗ ಶಮನಕ್ಕೆ ಸಂಘ ಪ್ರಯತ್ನ?
ಬೆಂಗಳೂರು: ರಾಜ್ಯ ಬಿಜೆಪಿಯ ಒಳ ಬೇಗುದಿ ಶಮನಕ್ಕಾಗಿ ಕೊನೆಗೂ ಆರೆಸ್ಸೆಸ್ ಮಧ್ಯಪ್ರವೇಶ ಮಾಡಿದ್ದು, ಗುರುವಾರ ಸಂಘದ ಮುಖಂಡರು ಬಿಜೆಪಿ ನಾಯಕರಿಗೆ ಒಗ್ಗಟ್ಟಿನ ಪಾಠ ಮಾಡಲು ನಿರ್ಧರಿಸಿದ್ದಾರೆ. ಆರೆಸ್ಸೆಸ್ ವರಿಷ್ಠರಾದ ಬಿ.ಎಲ್. ಸಂತೋಷ್, ಮುಕುಂದ್, ಸುಧೀರ್ ಸಹಿತ ಹಿರಿಯರು ಭಾಗಿಯಾಗಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಡಾ| ರಾಧಾ ಮೋಹನ್ ಅಗರ್ವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಂಡಾಯದ ಪತಾಕೆ ಹಾರಿಸಿರುವ ಬಸನಗೌಡ ಪಾಟೀಲ್ …
Read More »ಹಿಡಿತದಲ್ಲಿ ಸಿಲುಕಿದ ಎಸ್ಐಟಿ: ಎಚ್.ಡಿ. ರೇವಣ್ಣ
ಹಾಸನ: ಎಸ್ಐಟಿ ರಾಜ್ಯ ಸರಕಾರದ ಹಿಡಿತದಲ್ಲಿದೆ. ವಾಲ್ಮೀಕಿ ನಿಗಮ ಹಗರಣದ ತನಿಖೆ ನಡೆಸಿದ ಎಸ್ಐಟಿ ಮಾಜಿ ಸಚಿವ ನಾಗೇಂದ್ರ ಹೆಸರನ್ನೇ ಕೈ ಬಿಟ್ಟು ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆದರೆ ಇದೇ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ. ನಾಗೇಂದ್ರ ಮೊದಲ ಆರೋಪಿ ಎಂದು ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಸರಕಾರದ ಹಿಡಿತದಲ್ಲಿ ಎಸ್ಐಟಿ ಸಿಲುಕಿದೆ ಎಂಬುದು ಗೊತ್ತಾಗುವುದಿಲ್ಲವೇ ? ಈಗ …
Read More »ಅಡ್ಡಿ: ಪಿಎಸ್ಐ ಪರೀಕ್ಷೆ ಮತ್ತೆ ಮುಂದೂಡಿಕೆ
ಬೆಂಗಳೂರು: ಅಭ್ಯರ್ಥಿಗಳಿಗೆ ಆಗುತ್ತಿದ್ದ ಅನನು ಕೂಲ ಮತ್ತು ಆ ಸಂಬಂಧ ನ್ಯಾಯಾ ಲಯದ ಸೂಚನೆ ಮೇರೆಗೆ ಸರಕಾರ ಕೊನೆಗೂ ಮತ್ತೂಮ್ಮೆ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ. ಇದರೊಂದಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷೆ ಬರೆಯಲಿರುವ 102 ಅಭ್ಯರ್ಥಿಗಳು ನಿಟ್ಟುಸಿರು ಬಿಡು ವಂತಾಗಿದೆ. ಸೂಕ್ತ ದಿನಾಂಕ ವನ್ನು ಒಂದೆರಡು ದಿನಗಳಲ್ಲಿ ಪ್ರಕ ಟಿಸ ಲಾಗುವುದು ಎಂದು ಗೃಹ ಸಚಿವ ಡಾ| ಪರಮೇಶ್ವರ್ ಹೇಳಿದ್ದಾರೆ. 402 ಪಿಎಸ್ಐಗಳ ನೇಮಕಾತಿಗಾಗಿ ಸೆ. 22ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿ ವೇಳಾಪಟ್ಟಿ ಯನ್ನೂ ಪ್ರಕಟಿಸಿತ್ತು. ಆದರೆ …
Read More »ಗಣೇಶ ವಿಸರ್ಜನೆ ವೇಳೆ 6 ಅಂಗಡಿ ಭಸ್ಮ,7 ಬೈಕ್ ಹಾನಿ,1 ಕಾರು ಜಖಂ
ನಾಗಮಂಗಲ (ಮಂಡ್ಯ): ಬುಧವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭ ಕೋಮುಸಂಘರ್ಷ ಏರ್ಪಟ್ಟ ಪರಿಣಾಮ ನಾಗಮಂಗಲ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ. ಪರಿಸ್ಥಿತಿ ಹತೋಟಿಯಲ್ಲಿದ್ದರೂ ಸೆ. 14ರ ವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಗಲಭೆಯಲ್ಲಿ 6 ಅಂಗಡಿಗಳು ಸುಟ್ಟು ಕರಕಲಾಗಿವೆ. 7 ಬೈಕ್ ಹಾನಿಗೀಡಾಗಿವೆ. 1 ಕಾರಿನ ಗಾಜು ಪುಡಿಗೈಯಲಾಗಿದೆ. ಪ್ರಕರಣ ಸಂಬಂಧ ಗುರುವಾರ 150 ಮಂದಿ ವಿರುದ್ಧ ನಾಗಮಂಗಲ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 53ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ …
Read More »ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ವಿಶ್ವದಾದ್ಯಂತ ಕಚ್ಚಾತೈಲದ ದರ ಸ್ವಲ್ಪ ಸಮಯದವರೆಗೆ ನಿರಂತರವಾಗಿ ಕಡಿಮೆಯಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಕಚ್ಚಾತೈಲ ದರ ದೀರ್ಘಕಾಲದವರೆಗೆ ಕಡಿಮೆಯಾದರೆ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆ ಮಾಡಲು ಪರಿಗಣಿಸಬಹುದು ಎಂದು ಹೇಳಿದ್ದಾರೆ. ಸರ್ಕಾರ ಪೆಟ್ರೋಲ್, …
Read More »