ಮೈಸೂರು,ಜ.19- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷ್ಯ ಹೇಳುತ್ತಿದ್ದರೋ ಗೊತ್ತಿಲ್ಲ. ಈಗ ವಿರೋಧ ಪಕ್ಷದ ನಾಯಕರಾಗಿದ್ದರೂ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅದಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡುತ್ತಿರಬೇಕು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲಿಗೆ ಅವರ ಪಕ್ಷದಲ್ಲಾಗುತ್ತಿರುವುದನ್ನು …
Read More »ಕಟಾವ್ ಮಾಡಿ ಹಾಕಿದ್ದ 43 ಟನ್ ಕಬ್ಬನ್ನು ಒಂದೇ ರಾತ್ರಿಯಲ್ಲಿ ತಾನೊಬ್ಬನೇ ಟ್ರ್ಯಾಕ್ಟರ್ ಗೆ ಲೋಡ್ ಮಾಡಿ ಎಲ್ಲರಿಂದ ಸೈ ಎನಿಸಿಕೊಂಡಿದ್ದಾರೆ.
ಬಾಗಲಕೋಟೆ: ಸಾಧಿಸುವ ಛಲವೊಂದಿದ್ದರೆ ಏನುಬೇಕಾದರೂ ಸಾಧಿಸಬಹುದು ಎಂಬುದನ್ನು ಯುವ ಕಾರ್ಮಿಕರೊಬ್ಬರು ಒಂದೇ ರಾತ್ರಿಯಲ್ಲಿ ತೋರಿಸಿಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಯುವ ಶ್ರಮಜೀವಿ 43 ಟನ್ ಕಬ್ಬನ್ನು ಟ್ರ್ಯಾಕ್ಟರ್ ಗೆ ಲೋಡ್ ಮಾಡುವ ಮೂಲಕ ಸಾಧನೆ ಮಾಡಿ ಎಲ್ಲರಿಂದ ಸೈ ಎನಿಸಿಕೊಂಡಿದ್ದಾರೆ. ಕ್ಷೇತ್ರ ಯಾವುದಾದರೇನು ಸಾಧಕನಿಗೆ ಸಾಧನೆ ಸಹಜವಾಗಿ ಪ್ರಾಪ್ತವಾಗುತ್ತದೆ ಎಂಬುದಕ್ಕೆ ಸಾಕ್ಷಿಯಂತಿರುವ ಈ ಘಟನೆ ನಡೆದಿರುವುದು ಬಾಗಲಕೋಟೆಯಲ್ಲಿ. ಕಟಾವ್ ಮಾಡಿ ಹಾಕಿದ್ದ 43 ಟನ್ ಕಬ್ಬನ್ನು ಒಂದೇ ರಾತ್ರಿಯಲ್ಲಿ ತಾನೊಬ್ಬನೇ ಟ್ರ್ಯಾಕ್ಟರ್ …
Read More »ತಂದೆಯೊಬ್ಬ ಮಗಳ ಮೆಲೇಯೇ ನಿರಂತರ ಅತ್ಯಾಚಾರ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.
ಚೆನ್ನೈ: ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೆಲೇಯೇ ನಿರಂತರ ಅತ್ಯಾಚಾರ ನಡೆಸಿದ್ದು, ತಂದೆಯ ಕೃತ್ಯಕ್ಕೆ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ಆರೋಪಿಯ ಪತ್ನಿ ನಿಧನಹೊಂದಿದ್ದ ಬೆನ್ನಲ್ಲೇ ಆರೋಪಿ ಎರಡನೇ ವಿವಾಹವಾಗಿದ್ದ. ಕೆಲದಿನಗಳ ಸಂಸಾರದ ಬಳಿಕ ಎರಡನೇ ಪತ್ನಿಯಿಂದಲೂ ದೂರವಾಗಿದ್ದ. ಈ ವೇಳೆ ಮೊದಲ ಹೆಂಡತಿಯ ಮಗಳು 17 ವರ್ಷದ ಬಾಲಕಿ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಎರಡನೆ ಪತ್ನಿಯೂ ದೂರವಾದ ಬಳಿಕ ಮಗಳನ್ನು ಮನೆಗೆ …
Read More »ಕೊರೊನಾದಿಂದ ಪತ್ನಿಗೆ ಕಿಸ್ ಕೊಡಲಾಗ್ತಿಲ್ಲ: ಫಾರೂಖ್ ಅಬ್ದುಲ್ಲಾ
ಶ್ರೀನಗರ: ಕೊರೊನಾ ವೈರಸ್ ಬಂದಾಗಿನಿಂದ ಪತ್ನಿಗೆ ಕಿಸ್ ಕೊಡಲು ಆಗುತ್ತಿಲ್ಲ. ಮನಸ್ಸು ಬಯಸಿದರೂ ಅಪ್ಪಿಕೊಳ್ಳಲು ಸಹ ಆಗುತ್ತಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬುಲ್ಲಾ ಹೇಳಿದ್ದಾರೆ. ಭಾನುವಾರ ಶ್ರೀನಗರದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದ ಫಾರೂಖ್ ಅಬ್ದುಲ್ಲಾ ನೆರೆದಿದ್ದ ಜನರನ್ನ ಉದ್ದೇಶಿಸಿ ಸುಮಾರು 35 ನಿಮಿಷ ಮಾತನಾಡಿದರು. ಈ ವೇಳೆ ಕೊರೊನಾದಿಂದ ಜೀವನದಲ್ಲಾದ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ಹೇಳುತ್ತಿದ್ದರು. ಪತ್ನಿಗೆ ಮುತ್ತು ಕೊಡಲು ಮತ್ತು …
Read More »ಪದೇ ಪದೇ ಹೇಳಿಕೆ ನೀಡಿದ್ರೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಲ್ಲ; ಠಾಕ್ರೆ ಹೇಳಿಕೆಗೆ ಡಿಕೆಶಿ, ಕಿಡಿ
ಕಲಬುರ್ಗಿ (ಜನವರಿ 18); ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಗಡಿ ವಿಚಾರದಲ್ಲಿ ನೀಡಿರೋ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ. ಕಾಂಗ್ರೆಸ್ ನಾಯಕರೂ ಠಾಕ್ರೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಠಾಕ್ರೆ ನೂರು ಬಾರಿ ಹೇಳಿಕೆ ನೀಡಿದ್ರೂ ಬೆಳಗಾವಿ ಮಾತ್ರ ನಮ್ಮದೇ ಆಗಿರುತ್ತದೆಯೇ ಹೊರತು, ಮಹಾರಷ್ಟ್ರಕ್ಕೆ ಸೇರಲ್ಲ. ಠಾಕ್ರೆ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳೋ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಕಲಬುರ್ಗಿಗೆ ಆಗಮಿಸಿದ …
Read More »ಮಹಾ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಖಂಡಿಸಿ..ಬೆಳಗಾವಿಯಲ್ಲಿ ಉದ್ಧವ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ..!
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಡೋಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ರಾಜ್ಯಾಧ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿವೆ. ಗಡಿ ವಿಚಾರದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ …
Read More »ಗಡಿ ವಿಚಾರದಲ್ಲಿ ಮಹಾ ಸಿಎಂ ಉದ್ಧವ್ ಉದ್ಧಟತನ ಪ್ರದರ್ಶನ..ಸಿಎಂ ಬಿಎಸ್ವೈ ಆಕ್ರೋಶ
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಉದ್ಧವ್ ಠಾಕ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಟ್ವೀಟ್ ಮೂಲಕ ತಕ್ಕ ಉತ್ತರ ನೀಡಿರುವ ಸಿಎಂ ಬಿಎಸ್ವೈ ಹೀಗಿರುವಾಗ …
Read More »ಬೆಳಗಾವಿ ಒಂದಿಂಚೂ ಜಾಗ ಬಿಡುವ ಪ್ರಶ್ನೆ ಇಲ್ಲ: ಸಚಿವ ರಮೇಶ ಜಾರಕಿಹೊಳಿ ಮಹಾ ಸಿಎಂಗೆ ತಿರುಗೇಟು!!
ಬೆಳಗಾವಿ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ …
Read More »ಬೆಳಗಾವಿ ನಮ್ಮದು, ಮಹಾರಾಷ್ಟ್ರ ಸಿಎಂ ಠಾಕ್ರೆಗೆ ಸಿದ್ಧರಾಮಯ್ಯ ಖಡಕ್ ವಾರ್ನಿಗ್
ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ ಸಿಎಂ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ಉದ್ಧವ್ ಠಾಕ್ರೆ ನೀಡಿರುವುದು ಅಧಿಕಪ್ರಸಂಗತನದ ಹೇಳಿಕೆ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವ ಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ …
Read More »ಕಾನೂನು ಉಲ್ಲಂಘನೆ ಬಿಜೆಪಿಗೆ ಹೊಸದಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News* ಬೆಳಗಾವಿ : ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಪಡೆಸಿಕೊಂಡು ಬೆಳಗಾವಿಯಲ್ಲಿ’ ಜನಸೇವಕ ಸಮಾವೇಶ’ ಹಮ್ಮಿಕೊಂಡಿದ್ದು, ಕಾನೂನು ಉಲ್ಲಂಘನೆ ಮಾಡುವುದೇ ಅವರ ಕೆಲಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ …
Read More »
Laxmi News 24×7