Home / ಸಿನೆಮಾ (page 20)

ಸಿನೆಮಾ

‘ಕ್ರಿಶ್’ ಚಿತ್ರಕ್ಕೆ 15 ವರ್ಷದ ಸಂಭ್ರಮ: ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ ಹೃತಿಕ್

ಬಾಲಿವುಡ್ ನಟ ಹೃತಿಕ್ ರೋಷನ್ ನಟನೆಯ ಕ್ರಿಶ್ ಮೊದಲ ಸರಣಿ ಬಿಡುಗಡೆಯಾಗಿ 15 ವರ್ಷಗಳು ಕಳೆದಿವೆ. ಈಗಾಗಲೇ ಕ್ರಿಶ್ 3 ಸರಣಿಗಳನ್ನು ಯಶಸ್ವಿಯಾಗಿ ಮುಗಿಸಿದೆ. ಚಿತ್ರಾಭಿಮಾನಿಗಳ ನೆಚ್ಚಿನ ಸರಣಿಗಳಲ್ಲಿ ಕ್ರಿಶ್ ಕೂಡ ಒಂದು. 15 ವರ್ಷ ತುಂಬಿದ ಸಂತಸದಲ್ಲೇ ಹೃತಿಕ್ ಅಭಿಮಾನಿಗಳಿಗೆ ಮತ್ತೊಂದು ಸರ್ಪ್ರೈಸ್ ನೀಡಿದ್ದಾರೆ. ಕ್ರಿಶ್ 4 ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದಾರೆ. ವಾರ್ ಸಿನಿಮಾ ಬಳಿಕ ಹೃತಿಕ್ ಅಧಿಕೃತವಾಗಿ ಯಾವುದೇ ಅನೌನ್ಸ್ ಮಾಡಿರಲಿಲ್ಲ. ಇದೀಗ ಕ್ರಿಶ್ 4ನೇ …

Read More »

ಟೀಂ ಇಂಡಿಯಾ ಕಟ್ಟಿದ್ದು ‘ದಾದ’ ಅಲ್ಲ, ದ್ರಾವಿಡ್: ಕುತೂಹಲ ಕೆರಳಿಸಿದ ರೈನಾ ಮಾತು

ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರ ಸುರೇಶ್ ರೈನಾ ತಮ್ಮ ಆತ್ಮಕತೆ ‘ಬಿಲೀವ್’ ಪುಸ್ತಕದಲ್ಲಿ ಹಲವು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಅದರಲ್ಲೂ ಟೀಂ ಇಂಡಿಯಾ ಕಟ್ಟಿದ್ದು, ಸೌರವ್ ಗಂಗೂಲಿ, ಧೋನಿ ಅಲ್ಲ, ಬದಲಾಗಿ ರಾಹುಲ್ ದ್ರಾವಿಡ್ ಎನ್ನುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ‘ದಾದ’ ಒಬ್ಬರೇ ತಂಡ ಕಟ್ಟಿದರು ಎಂದು ನಾನೆಲ್ಲಿಯೂ ಹೇಳಿಕೊಂಡಿಲ್ಲ ಎಂದ ರೈನಾ ದ್ರಾವಿಡ್ ಬಗ್ಗೆ ವಿಶೇಷವಾಗಿ ಹೊಗಳಿದ್ದಾರೆ. ‘ರಾಹುಲ್ ನಮಗೆ ಕುಟುಂಬ ಸದಸ್ಯರಂತಿದ್ದರು. ಕಿರಿಯ ಆಟಗಾರರಿಗಾಗಿ ಯಾವತ್ತೂ …

Read More »

ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದ ಬಗ್ಗೆ ನಿತ್ಯ ಹೊಸ ಹೊಸ ಅಪ್​ಡೇಟ್​ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ರಿಲೀಸ್​ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಸಿನಿಮಾ ಹೇಗಿರಲಿದೆ ಎನ್ನುವ ಬಗ್ಗೆ ಉಪ್ಪೇನಾ ನಿರ್ದೇಶಕ ಬುಚಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದಾರೆ. ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ …

Read More »

ಸಂಚಾರಿ ವಿಜಯ್​ ರೀತಿಯಲ್ಲೇ ಅಪಘಾತದಲ್ಲಿ ಮೃತಪಟ್ಟ ಸ್ಯಾಂಡಲ್​ವುಡ್​ ಕಲಾವಿದರಿವರು

ನಟ ಸಂಚಾರಿ ವಿಜಯ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರನ್ನು ಕಳೆದುಕೊಂಡಿದ್ದು ಚಿತ್ರರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಅಂದಹಾಗೆ, ಸ್ಯಾಂಡಲ್​ವುಡ್​ನಲ್ಲಿ ಈ ಮೊದಲು ಕೂಡ ಸಾಕಷ್ಟು ಕಲಾವಿದರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರ ಬಗ್ಗೆ ಇಲ್ಲಿದೆ ಮಾಹಿತಿ. ಸೌಂದರ್ಯಾ: ಅದು 2004ರ ಏಪ್ರಿಲ್ 17. ನಟಿ ಸೌಂದರ್ಯಾ ಬೆಂಗಳೂರಿನಿಂದ ಕರೀಮ್ ನಗರಕ್ಕೆ ತೆರಳಿ, ಬಿಜೆಪಿ ಪರ ಪ್ರಚಾರ ಮಾಡುವವರಿದ್ದರು. ಅಗ್ನಿ ಏರೋಸ್ಪೋರ್ಟ್ಸ್ ಒಡೆತನದ ನಾಲ್ಕು ಆಸನಗಳ ಮಿನಿ ವಿಮಾನ ಸೆಸ್ಸಾನಾ 180ಯನ್ನು ಬೆಳಗ್ಗೆ …

Read More »

ಇಂದು ಬೆಳಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, 38 ವರ್ಷದ `ಸಂಚಾರಿ ವಿಜಯ್’ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ. ಶನಿವಾರ ರಾತ್ರಿ 11:45ರ ಸುಮಾರಿಗೆ ಬೆಂಗಳೂರಿನ ಜೆಪಿನಗರದ 7ನೇ ಹಂತದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿಗೆ ವಿಜಯ್ ತಲುಪಿದ್ದರು. ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಹೀಗಾಗಿ ವಿಜಯ್ ಅವರ ಅಂಗಾಗವನ್ನು ದಾನ …

Read More »

ಸುಶಾಂತ್‌ ಸಿಂಗ್ ಸಾವನ್ನಪ್ಪಿ 1 ವರ್ಷ ಕಳೆದರೂ ಮುಗಿದಿಲ್ಲ CBI ತನಿಖೆ; ನಿಗೂಢವಾಗಿದೆ ಸಾವಿನ ರಹಸ್ಯ!

ಮುಂಬೈ (ಜೂನ್ 14): ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೀಡಾಗಿ ಇಂದಿಗೆ ಒಂದು ವರ್ಷವಾಗಿದೆ. ಜೂನ್ 14,2020 ರಂದು ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕಳೆದ ವರ್ಷ ಬಿಹಾರ ಪೊಲೀಸರು ದಾಖಲಿಸಿದ್ದ ಕೊಲೆ ಪ್ರಕರಣವನ್ನು ವಹಿಸಿಕೊಂಡ ಸಿಬಿಐ ಇದುವರೆಗೆ ತನ್ನ ತನಿಖೆಯ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಕಳೆದ ವರ್ಷ ಆಗಸ್ಟ್‌ನಲ್ಲಿ ಬಿಹಾರ ಪೊಲೀಸರು ಪ್ರಕರಣವನ್ನು ವಹಿಸಿಕೊಂಡ ಕೂಡಲೇ ಸಿಬಿಐ ಹಲವಾರು ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸಿದರೂ, ಈ …

Read More »

ಸಂಚಾರಿ ವಿಜಯ್‌ ಸತ್ತಿಲ್ಲ, ಆಸ್ಪತ್ರೆ ವೈದ್ಯರಿಂದ ಸ್ಪಷ್ಟೀಕರಣ

ಬೆಂಗಳೂರು: ಸಂಚಾರಿ ವಿಜಯ್‌ ಸತ್ತಿಲ್ಲ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಅಂತ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ.ಅರುಣ್‌ ನಾಯ್ಕ್‌ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ಸಂಚಾರಿ ವಿಜಯ್‌ ಸಹೋದರ) ಸಿದ್ದೇಶ್ವರ್‌ ಅವರು ನಮ್ಮ ಅಣ್ಣ (ಸಂಚಾರಿ ವಿಜಯ್‌) ಅವರನ್ನು ಜೀವಂತವಾಗಿ ಇಡುವ ನಿಟ್ಟಿನಲ್ಲಿ ಅವರ ಅಂಗಾಗಳ ದಾನಕ್ಕೆ ಮುಂದಾಗಿದ್ದೇವೆ, ಅವರು ನಮ್ಮೊಂದಿಗೆ ಇಲ್ಲ ಅಂತ ಹೇಳುವುದಕ್ಕೆ ಬೇಸರವಾಗುತ್ತಿದೆ ಅಂತ ಹೇಳಿದ್ದರು.   ಈ ನಡುವೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಆಪೋಲೋ …

Read More »

ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ರಾಧಿಕಾ ಪಂಡಿತ್

ಬೆಂಗಳೂರು: ಕೊರೊನಾ ವೈರಸ್ ಮತ್ತು ಲಾಕ್‍ಡೌನ್‍ನಿಂದ ಉಂಟಾಗಿರುವ ಕಷ್ಟದ ಪರಿಸ್ಥಿತಿಯಲ್ಲಿ ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ ಅವರು ಎಲ್ಲರಿಗೂ ಧೈರ್ಯ ತುಂಬಲು ಇನ್‍ಸ್ಟಾಗ್ರಾಮ್‍ನಲ್ಲಿ ಹೊಸ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅವರು ಕೆಲವು ವಿಚಾರಗಳನ್ನು ಬರೆದುಕೊಂಡಿದ್ದಾರೆ. ಕೊರೊನಾ ವೈರಸ್ ಹಾವಳಿಯಿಂದ ಅನೇಕರ ಬದುಕು ತತ್ತರಿಸಿ ಹೋಗಿದೆ. ಈ ಕಠಿಣ ಸಂದರ್ಭದಲ್ಲಿ ಅನೇಕ ನಟ, ನಟಿಯರು ಸಹಾಯ ಮಾಡಿದ್ದಾರೆ. ನಟ ಯಶ್ ಇತ್ತೀಚೆಗಷ್ಟೇ ಅವರು 1.5 ಕೋಟಿ ರೂ.ಗಿಂತಲೂ ಹೆಚ್ಚು ಹಣವನ್ನು ಸಿನಿಮಾರಂಗದ …

Read More »

ಮೇ 31, ಜೂನ್ 1 ರಂದು ಸಿನಿಮಾ ಕಲಾವಿದರಿಗೆ ಉಚಿತ ಕೋವಿಡ್ ಲಸಿಕೆ

ಚಿತ್ರರಂಗದ ಸದಸ್ಯರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಮೇ 31 ಹಾಗೂ ಜೂನ್ 1 ರಂದು ಎರಡು ದಿನಗಳ ಕಾಲ ಸ್ಯಾಂಡಲ್‌ವುಡ್ ಇಂಡಸ್ಟ್ರಿಯ ನೋಂದಾಯಿತ ಕಲಾವಿದರಿಗೆ ಲಸಿಕೆ ನೀಡಲು ಕಾರ್ಯಕ್ರಮ ಆಯೋಜನೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಭವನ ಕಟ್ಟಡದಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಡಿಸಿಎಂ ಅಶ್ವಥ್ ನಾರಾಯಣ, ಸಂಸದೆ ಸುಮಲತಾ ಚಾಲನೆ ನೀಡಲಿದ್ದಾರೆ. ಈ ವೇಳೆ ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಕಲಾವಿದರ ಸಂಘದ ಕಾರ್ಯದರ್ಶಿ …

Read More »

ಗೆಳತಿ ಮಲೈಕಾ ಮನೆ ಸಮೀಪದಲ್ಲೇ ವಿಲ್ಲಾ ಖರೀದಿಸಿದ ಅರ್ಜುನ್ ಕಪೂರ್; ಬೆಲೆ ಎಷ್ಟು?

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಇತ್ತೀಚಿಗಷ್ಟೆ ಐಷಾರಾಮಿ ಮನೆ ಖರೀಸಿದ ಬೆನ್ನಲ್ಲೇ ಮತ್ತೋರ್ವ ನಟ ಅರ್ಜುನ್ ಕಪೂರ್ ಮನೆ ಖರೀದಿ ವಿಚಾರವಾಗಿ ಸುದ್ದಿಯಾಗಿದ್ದಾರೆ. ಅರ್ಜುನ್ ಮುಂಬೈನಲ್ಲಿ ವಿಲ್ಲಾ ಕೊಂಡುಕೊಂಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಮುಂಬೈನ ಹೃದಯ ಭಾಗದಲ್ಲಿ ಅರ್ಜುನ್ ಕಪೂರ್ ಸ್ಕೈ ವಿಲ್ಲಾ ಖರೀದಿ ಮಾಡಿದ್ದಾರಂತೆ. ಈ ವಿಲ್ಲಾ ಮುಂಬೈನ ಬಾಂದ್ರಾದಲ್ಲಿರುವ ಗೆಳತಿ ಮಲೈಕಾ ಅರೋರ ಅವರ ಮನೆಯ ಸಮೀಪವೇ ಇದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಅರ್ಜುನ್ …

Read More »