Breaking News
Home / ಸಿನೆಮಾ (page 26)

ಸಿನೆಮಾ

ಟ್ರಾಫಿಕ್​ ಪೊಲೀಸರು ದಂಡ ಹಾಕಿದ್ದಾರೆ ಪೊಲೀಸರಿಗೆ ಧನ್ಯವಾದಗಳನ್ನ ಸಮರ್ಪಿಸುತ್ತೇನೆ.: ವಿವೇಕ್​ ಒಬೆರಾಯ್​

ಮುಂಬೈ : ಮಾಸ್ಕ್​ ಧರಿಸದೇ ಬೈಕ್​ ರೈಡ್​ ಮಾಡಿದ್ದಕ್ಕೆ ಮುಂಬೈ ಪೊಲೀಸರು ದಂಡ ಹಾಕಿದ್ದಾರೆ. ಟ್ರಾಫಿಕ್​ ಪೊಲೀಸರು ಅವರ ಕೆಲಸ ಮಾಡಿದ್ದಾರೆ ಎಂದು ನಟ ವಿವೇಕ್​ ಒಬೆರಾಯ್​ ಹೇಳಿದ್ದಾರೆ. ಮುಂಬೈ ಪೊಲೀಸರಿಗೆ ಧನ್ಯವಾದಗಳನ್ನ ಸಮರ್ಪಿಸುತ್ತೇನೆ. ಅವರು ಸುರಕ್ಷತೆ ಬಹಳ ಮುಖ್ಯ ಎಂಬುದನ್ನ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆ ವಿವೇಕ್​ ಸುರಕ್ಷಿತವಾಗಿರಿ, ಮಾಸ್ಕ್​ ಧರಿಸಿ, ಹೆಲ್ಮೆಟ್​ ಹಾಕಿ ಎಂದು ಟ್ವೀಟ್​ ಮಾಡಿದ್ದಾರೆ. ವಿವೇಕ್​ ಪತ್ನಿ ಪ್ರಿಯಾಂಕಾ ಜತೆ ಹರ್ಲೆ ಡೇವಿಡ್ಸನ್​ ಬೈಕ್​ನಲ್ಲಿ …

Read More »

ಫೆ.19ರಂದು1200 ಥಿಯೇಟರ್​​ಗಳಲ್ಲಿ ಬಿಡುಗಡೆಯಾಗಲಿದೆ ಧ್ರುವಾ ಸರ್ಜಾ ಅಭಿನಯದ ಪೊಗರು

ಬೆಂಗಳೂರು: ನಾಳೆ ಫೆಬ್ರವರಿ 19 ರಥಸಪ್ತಮಿ. ಆಯಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ (Dhruva Sarja) ಅಭಿಮಾನಿಗಳಿಗೆ ವಿಶೇಷ ದಿನ.. ಕಾರಣ ಧ್ರುವ ಸರ್ಜಾ ಅಭಿನಯದ, ಬಹುನಿರೀಕ್ಷಿತ ಪೊಗರು (Pogaru) ಸಿನಿಮಾ ನಾಳೆ ಬಿಡುಗಡೆಯಾಗಲಿದೆ. ಕೊರೊನಾ ಲಾಕ್​ಡೌನ್ ನಂತರ ಸ್ಯಾಂಡಲ್​ವುಡ್​ನಲ್ಲಿ ಸಿನಿಜಾತ್ರೆ ಶುರುವಾಗಿದೆ. ಆಯಕ್ಷನ್ ಪ್ರಿನ್ಸ್​ ಧ್ರುವ ಸರ್ಜಾ ಪೊಗದಸ್ತಾಗಿ ಬಿಗ್ ಸ್ಕ್ರೀನ್​ಗೆ ಎಂಟ್ರಿ ಕೊಡೋಕೆ ಕ್ಷಣಗಣನೆ ಶುರುವಾಗಿದೆ. ಇನ್ನು ಅಭಿಮಾನಿಗಳಂತೂ ಫುಲ್​ ಉತ್ಸಾಹದಲ್ಲಿದ್ದು, ತಮ್ಮ ನೆಚ್ಚಿನ ನಟನಿಗೆ ಆರತಿ ಎತ್ತಿ, …

Read More »

ಅಪ್ಪನ ಸಿನಿಮಾದ ಟ್ರೈಲರ್ ರಿಲೀಸ್ ಮಾಡುತ್ತಿದ್ದಾನೆ ಜೂ.ಚಿರು

ನಟ ಚಿರಂಜೀವಿ ಸರ್ಜಾ ನಟನೆಯ ರಾಜಮಾರ್ತಾಂಡ ಸಿನಿಮಾದ ಟ್ರೈಲರ್ ರಿಲೀಸ್ ಗೆ ದಿನಾಂಕ ನಿಗದಿಯಾಗಿದೆ. ಚಿರು ಇಲ್ಲದಿದ್ದರೂ ಅವರ ಸಿನಿಮಾಗಳ ಮೇಲಿನ ಕ್ರೇಜ್ ಇನ್ನು ಕಮ್ಮಿ ಆಗಿಲ್ಲ. ಸದ್ಯ ರಿಲೀಸ್ ಗೆ ರೆಡಿಯಾಗಿರುವ ರಾಜಮಾರ್ತಾಂಡ ಸಿನಿಮಾದ ಮೇಲು ನಿರೀಕ್ಷೆ ಹೆಚ್ಚಾಗಿದೆೆ. ವಿಶೇಷ ಎಂದರೆ ರಾಜಮಾರ್ತಂಡ ಸಿನಿಮಾದ ಟ್ರೈಲರ್ ಅನ್ನು ವಿಶೇಷ ಅತಿಥಿಯೊಬ್ಬರು ಬಿಡುಗಡೆ ಮಾಡುತ್ತಿದ್ದಾರೆ. ಮತ್ಯಾರು ಅಲ್ಲ ಚಿರಂಜೀವಿ ಮತ್ತು ಮೇಘನಾ ರಾಜ್ ಪುತ್ರ ಜೂ.ಚಿರು. ಪುಟ್ಟ ಪೋರ ಜೂ …

Read More »

Dhruva Sarja: ಟಾಲಿವುಡ್​ ಸಿನಿಪ್ರಿಯರ ಕ್ಷಮೆ ಯಾಚಿಸಿದ ಧ್ರುವ ಸರ್ಜಾ..!

ಸ್ಯಾಂಡಲ್​ವುಡ್​ ಅಂಗಳದಲ್ಲಿ ಸಖತ್​ ಸದ್ದು ಮಾಡುತ್ತಿರುವ ಸಿನಿಮಾ ಪೊಗರು. ಧ್ರುವ ಸರ್ಜಾ ಅಭಿನಯದ ಹಾಗೂ ನಂದ ಕಿಶೋರ್​ ನಿರ್ದೇಶನದ ಈ ಸಿನಿಮಾದ ರಿಲೀಸ್​ಗೆ ಇವತ್ತೂ ಸೇರಿದಂತೆ ಎರಡು ದಿನದ ನಂತರ ಬಾಕಿ ಇದೆ. ಪೊಗರು ಕನ್ನಡ, ತಮಿಳು ಹಾಗೂ ತೆಲುಗಿನಲ್ಲಿ ರಿಲೀಸ್ ಆಗಲಿದೆ. ಇದೇ ಮೊದಲ ಸಲ ಧ್ರುವ ಸರ್ಜಾ ಟಾಲಿವುಡ್ ಪ್ರೇಕ್ಷಕರಿಗೆ ಪರಿಚಯವಾಗಲಿದ್ದಾರೆ. ಕೆಜಿಎಫ್​ ಸಿನಿಮಾದ ನಂತರ ಕನ್ನಡದ ಬಹುತೇಕ ಸಿನಿಮಾಗಳು ತೆಲುಗು ಹಾಗೂ ತಮಿಳಿನಲ್ಲಿ ತೆರೆ ಕಾಣಲಿವೆ. …

Read More »

ಹೊಸ ಚಿತ್ರದಲ್ಲಿ ಕುರಿ ಪ್ರತಾಪ್​ ಹೀರೋ.. ಆದ್ರೆ ನಾಯಕಿಯ ಭೇಟಿಗೆ ಅವಕಾಶವೇ ಇಲ್ಲ!

ಕಾಮಿಡಿಯನ್​ಗಳಾಗಿ ಕಾಣಿಸಿಕೊಂಡ ನಂತರ ಹೀರೋ ಆಗುವ ಪ್ರಯತ್ನವನ್ನು ಕನ್ನಡ ಚಿತ್ರರಂಗದಲ್ಲಿ ಅನೇಕರು ಮಾಡಿದ್ದಾರೆ. ಇದರಲ್ಲಿ ಕೆಲವರು ಯಶಸ್ಸು ಕಂಡರೆ, ಇನ್ನೂ ಕೆಲವರು ಸೋತಿದ್ದಾರೆ. ಈಗ ಕನ್ನಡದ ಹಾಸ್ಯ ನಟ ಕುರಿ ಪ್ರತಾಪ್​ (Kuri Prathap) ಇದೇ ರೀತಿಯ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಹೀರೋ ಆಗಿ ತೆರೆಮೇಲೆ ಬರುತ್ತಿದ್ದಾರೆ. ಚಿತ್ರಕ್ಕೆ ‘ಆರ್​ಸಿ ಬ್ರದರ್’​ ಎಂದು ನಾಮಕರಣ ಮಾಡಲಾಗಿದೆ. ನಿರ್ದೇಶಕ ಪ್ರಕಾಶ್​ ಕುಮಾರ್​ ಈ ಚಿತ್ರಕ್ಕೆ ಆಯಕ್ಷನ್ …

Read More »

ಚೇತನ್ ಹೊಸ ಚಿತ್ರ ‘100 ಕ್ರೋರ್ಸ್’ ಫಸ್ಟ್ ಲುಕ್ ರಿಲೀಸ್

ನಟ ಚೇತನ್ ಟಾಲಿವುಡ್ ಕಡೆಗೆ ಹೊರಟಿದ್ದು ಇವರ “100 ಕ್ರೋರ್ಸ್’ ಶೀರ್ಷಿಕೆಯ ನೂತನ ಚಿತ್ರ ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿದ್ದು, ಚಿತ್ರದ ಫಸ್ಟ್ ಲುಕ್ ಅನ್ನು ನಿರ್ದೇಶಕ ಸುನಿ ಬಿಡುಗಡೆಗೊಳಿಸಿದ್ದಾರೆ. ಆಕ್ಷನ್-ಪ್ಯಾಕ್ಡ್ ಕಮರ್ಷಿಯಲ್ ಡ್ರಾಮಾದಲ್ಲಿ ಚೇತನ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಏಕಕಾಲದಲ್ಲಿ ಎರಡು ಭಾಷೆಗಳಲ್ಲಿ ತಯಾರಾದ ಚಿತ್ರಕ್ಕೆ ಸಂಭಾಷಣಾಗಾರ ವಿರಾಟ್ ಚಕ್ರವರ್ತಿ ಆಕ್ಷನ್ ಕಟ್ ಹೇಳಿದ್ದಾರೆ. “100 ಕ್ರೋರ್ಸ್’ ಚಿತ್ರಕ್ಕೆ ಸಾಯಿ ಕಾರ್ತೀಕ್ ಸಂಗೀತ ನೀಡುತ್ತಿದ್ದು …

Read More »

ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್‌ರ ಮನಗೆದ್ದ ಕಬ್ಬಿನ ಗದ್ದೆ ಡ್ಯಾನ್ಸ್‌

ಹಳೇ ಹಾಡುಗಳ ಮರುಸೃಷ್ಟಿ ಸಿನೆಮಾದಲ್ಲಿ ಹೊಸತಲ್ಲ. ಆದರೆ, ಹಳೇ ಸಿನೆಮಾದ ಜನಪ್ರಿಯ ಹಾಡನ್ನು ಇಲ್ಲೊಬ್ಬಳು ಹುಡುಗಿ ಕಬ್ಬಿನ ಗದ್ದೆ ನಡುವೆ ಅಭಿನಯಿಸಿ, ತೋರಿಸಿ ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್‌ರ ಮನಸ್ಸು ಗೆದ್ದಿದ್ದಾಳೆ. 1957ರ ‘ಮದರ್‌ ಇಂಡಿಯಾ’ ಚಿತ್ರದಲ್ಲಿ ನಟಿ ನರ್ಗೀಸ್‌ ಗದ್ದೆಗಳ ಮಧ್ಯದಲ್ಲಿ ‘ಘೂಂಘಾಟ್‌ ನಹೀಂ ಖೂಲೂನ್‌ ಸೈಯಾ ಟೊರೆ ಆಗೆ…’ ಎಂಬ ಹಾಡಿಗೆ ನರ್ತಿಸಿದ್ದರು. ಲತಾ ಮಂಗೇಶ್ಕರ್‌ ಕಂಠದಿಂದ ಹೊಮ್ಮಿದ್ದ ಈ ಹಾಡಿನ ಜನಪ್ರಿಯತೆ ಮನಗಂಡ ಉತ್ತರಪ್ರದೇಶದ ಅಮೊಹಾ …

Read More »

50 ದೇಶಗಳಲ್ಲಿ ವಿಕ್ರಾಂತ್ ರೋಣ ರಿಲೀಸ್; 3ಡಿ ರೂಪದಲ್ಲಿರಲಿದೆ: ಸುದೀಪ್

ಕಿಚ್ಚ ಸುದೀಪ್‌ ನಟನೆಯ ‘ವಿಕ್ರಾಂತ್‌ ರೋಣ’ ಚಿತ್ರದ ಟೀಸರ್‌ ಹಾಗೂ ಕಟೌಟ್‌ ದುಬೈನಲ್ಲಿರುವ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್‌ ಖಲೀಫಾ ಮೇಲೆ ರಾರಾಜಿಸಿ ವಿಶ್ವದ ಗಮನಸೆಳೆದಿತ್ತು. ಇದರ ಬೆನ್ನಲ್ಲೇ ಹಲವು ಭಾಷೆಗಳಲ್ಲಿ ತೆರೆಯ ಮೇಲೆ ಬರಲಿರುವ ಈ ಚಿತ್ರವು 3ಡಿ ರೂಪದಲ್ಲಿ ಇರಲಿದೆ ಎಂದು ಸುದೀಪ್‌ ತಿಳಿಸಿದ್ದಾರೆ. ಚಂದನವನದಲ್ಲಿ ಸುದೀಪ್‌ 25 ವಸಂತಗಳನ್ನು ಪೂರೈಸಿದ ಅಂಗವಾಗಿ ವಿಕ್ರಾಂತ್‌ ರೋಣ ಚಿತ್ರತಂಡವು ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಸುದೀಪ್‌ ಈ ಕುರಿತು …

Read More »

ನಾಯಕ ನಟನಾಗಿ ಮಿಂಚಲು ಮುಂದಾದ ‘ಪುರುಷೋತ್ತಮ’ ಜಿಮ್ ರವಿ

ಬೆಂಗಳೂರು, ಫೆ.10- ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಬಾಡಿಬಿಲ್ಡರ್ ಜಿಮ್ ರವಿ ಅವರು ಈಗ ನಾಯಕನಟರಾಗಿ ಮಿಂಚಲು ಮುಂದಾಗಿದ್ದಾರೆ. ಈಗಾಗಲೇ ಜಿಮ್ ರವಿ ಅವರು ರಾಜ್ಯ, ರಾಷ್ಟ್ರ ಅಷ್ಟೇ ಏಕೆ ಅಂತ ರಾಷ್ಟ್ರಮಟ್ಟದಲ್ಲೂ ಬಾಡಿ ಬಿಲ್ಡಿಂಗ್‍ನಲ್ಲಿ ಹೆಸರು ಮಾಡಿದ್ದಾರೆ. ಅಲ್ಲದೆ, ಕಿರುತೆರೆ, ಹಿರಿತೆರೆಯಲ್ಲೂ ನಟಿಸಿದ್ದಾರೆ. ಕಳೆದ ಬಾರಿ ಬಿಗ್‍ಬಾಸ್ ರಿಯಾಲಿಟಿ ಶೋನಲ್ಲಿ ಅವರು ಮಿಂಚಿದ್ದರು. ಇದೀಗ ಚಲನಚಿತ್ರದಲ್ಲಿ ನಾಯಕನಾಗಿ ನಟಿಸುವ ಮೂಲಕ ಅಭಿಮಾನಿಗಳ ಮನಗೆಲ್ಲಲು ಸಿದ್ಧರಾಗಿದ್ದಾರೆ. ರವಿ ಅವರು ಕಳೆದ …

Read More »

ಚಿತ್ರಮಂದಿರಕ್ಕೆ ಮಾತ್ರ ಏಕೆ ಶೇ.50ರಷ್ಟು ಪ್ರೇಕ್ಷಕರ ನಿರ್ಬಂಧ ಪುನಿತ್ ರಾಜ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

ಬೆಂಗಳೂರು : ಖಾಸಗಿ ಸಮಾರಂಭಕ್ಕೆ, ಕಾರ್ಯಗಾರಕ್ಕೆ, ಸಾರ್ವಜನಿಕ ಪ್ರಯಾಣಕ್ಕೆ, ಮಾರ್ಕೆಟ್, ಪ್ರವಾಸಿ ಸ್ಥಳಗಳಲ್ಲಿ ಜನಸಾಮಾನ್ಯರ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಆದ್ರೇ ಚಿತ್ರಮಂದಿರದಲ್ಲಿ ಚಿತ್ರವೀಕ್ಷಿಸಲು ಏಕೆ 50ರಷ್ಟು ಪ್ರೇಕ್ಷಕರಿಗೆ ಮಾತ್ರವೇ ಅವಕಾಶದ ನಿರ್ಬಂಧ ಎಂಬುದಾಗಿ ನಟ ಪುನಿತ್ ರಾಜ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಕುರಿತಂತೆ ನಟ ಧೃವ ಸರ್ಜಾ ಅವರ ಬೆಂಬಲಕ್ಕೆ ನಿಂತು ಟ್ವಿಟ್ ಮಾಡಿರುವಂತ ನಟ ಪುನಿತ್ ರಾಜ್ ಕುಮಾರ್, ಖಾಸಗಿ ಸಮಾರಂಭಗಳು, ಪೂಜಾ ಸ್ಥಳಗಳು, …

Read More »