Breaking News
Home / ಸಿನೆಮಾ (page 29)

ಸಿನೆಮಾ

ಚಿತ್ರದ ಅತಿ ಚೆಂದದ ಲಿರಿಕಲ್ ವಿಡಿಯೋ ಹಾಡಿನ ಕಚಗುಳಿ ಶುರು

ವಿಂಡೋಸೀಟ್’ ಚಿತ್ರದ “ಅತಿಚೆಂದದ ಹೂಗೊಂಚಲು ಕಿಟಕಿಯಾಚೆ ಕಂಡ ಹಾಗಿದೆ” ಹ್ಯಾಂಡ್ ಮೇಡ್ ಪೇಂಟಿಂಗ್ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ, ಫಸ್ಟ್ ಲುಕ್ ವಿಡಿಯೋ ತುಣುಕಿನಲ್ಲಿ ಈ ಹಾಡಿನ ಸಾಲು ಎಲ್ಲರ ಮನಸ್ಸಿಗೂ ಪ್ರಿಯವಾಗಿತ್ತು. ಯಾವಾಗ ಈ ಹಾಡು ಬಿಡುಗಡೆಯಾಗುತ್ತದೆ ಎಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ರು. ಇದೀಗ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಾಂಗ್ ‘ವಿಂಡೋಸೀಟ್’ ಚಿತ್ರತಂಡ ಬಿಡುಗಡೆ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡುತ್ತಿದೆ. ಎಲ್ಲರ ಬಾಯಲ್ಲೂ ಈಗ ಈ ಹಾಡಿನದ್ದೆ …

Read More »

ನಟಿ ಕಂಗನಾ ರಣಾವತ್ ಅವರುಕೆಜಿಎಫ್ ಅಧೀರ ಸಂಜಯ್ ದತ್ ಅವರನ್ನು ಭೇಟಿ

ಹೈದರಾಬಾದ್: ಸದ್ಯ ಸುದ್ದಿಯಲ್ಲಿರುವ  ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಕೆಜಿಎಫ್ ಅಧೀರ ಸಂಜಯ್ ದತ್ ಅವರನ್ನು ಭೇಟಿಯಾಗಿದ್ದಾರೆ.ಹೌದು. ಇಂದು ಬೆಳಗ್ಗೆ ಭೇಟಿಯಾಗಿರುವ ಕಂಗನಾ ಸಂಜಯ್ ದತ್ ಅವರನ್ನು ನೋಡಿ ಅಚ್ಚರಿಯೊಂದಿಗೆ ಖುಷಿಯಾಗಿದ್ದಾರೆ. ಅಲ್ಲದೆ ಅವರ ಆರೋಗ್ಯ ಇನ್ನಷ್ಟು ವೃದ್ಧಿಸಲು ಪ್ರಾರ್ಥೊಸೋಣ ಎಂದು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕಂಗನಾ, ಹೈದರಾಬಾದ್‍ನ ಹೋಟೆಲಿನಲ್ಲಿ ತಂಗಿರುವ ಸುದ್ದಿ ತಿಳಿದು ನಾನು ಇಂದು ಬೆಳಗ್ಗೆ ಸಂಜು ಅವರನ್ನು ನೋಡಲು ತೆರಳಿದೆ. ಈ …

Read More »

ಟ್ರೋಲ್ ಮಾಡಿದ ನೆಟ್ಟಿಗನಿಗೆ ಗಾಯಕಿ ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ತರಾಟೆಗೆ

ಮುಂಬೈ: ಬಾಲಿವುಡ್ ಗಾಯಕಿ ಸೋನಾ ಮೋಹಪತ್ರಾ ಅವರು ಡ್ರೆಸ್ ಬಗ್ಗೆ ಕಾಮೆಂಟ್ ಮಾಡಿ ನೆಟ್ಟಿಗನ ಚಳಿ ಬಿಡಿಸಿದ ಘಟನೆಯೊಂದು ನಡೆದಿದೆ. ಹೌದು. ‘ಐ ನೆವರ್ ಆಸ್ಕ್ ಫಾರ್ ಇಟ್’ ಎಂಬ ಟ್ವಿಟ್ಟರ್ ಅಭಿಯಾನವೊಂದಕ್ಕೆ ಕೈ ಜೋಡಿಸಿರುವ ಸೋನಾ, ತಮ್ಮ ಕಾಲೇಜು ದಿನಗಳಲ್ಲಿ ಚುಡಾಯಿಸುವ ಹಾಗೂ ಲೈಂಗಿಕ ಕಿರುಕುಳ ಎದುರಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಟ್ರೋಲ್ ಮಾಡಿದ ನೆಟ್ಟಿಗನಿಗೆ ಗಾಯಕಿ ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. …

Read More »

ಸದ್ಯ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಆಕ್ಟ್ 1978.

ಬೆಂಗಳೂರು: ಸದ್ಯ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಆಕ್ಟ್ 1978. ಸಿನಿಮಾ ರಿಲೀಸ್ ಆಗಿ ಇನ್ನೂ 3 ದಿನ ಕಳೆದಿಲ್ಲ, ಎಲ್ಲರ ಬಾಯಲ್ಲೂ ಇದರದ್ದೇ ಮಾತು. ಅಷ್ಟೇ ಅಲ್ಲ ಈ ಸಿನಿಮಾವನ್ನ ಸ್ಟಾರ್ ನಟರು ಮೆಚ್ಚಿಕೊಂಡಿದ್ದು ಚಿತ್ರತಂಡಕ್ಕೆ ಮತ್ತಷ್ಟು ಸ್ಪೂರ್ತಿ ನೀಡಿದೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರತಂಡಕ್ಕೆ ಮತ್ತಷ್ಟು ಬಲ ತುಂಬಲು ಕೈ ಜೋಡಿಸಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ …

Read More »

ಕಿರುತೆರೆ ನಟಿ ಸಾವು ಕಾರಣ ಏನು ಗೊತ್ತಾ…?

ಮುಂಬೈ: ಕಿರುತೆರೆ ನಟಿಯೊಬ್ಬರು ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ಸಹನಟ ರೋಹನ್ ಮೆಹ್ರಾ ತಿಳಿಸಿದ್ದಾರೆ.ನಟಿಯನ್ನು ಲೀನಾ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಕ್ಲಾಸ್ ಆಫ್ 2020 ಹಾಗೂ ಸೆಥ್ ಜೀ ಧಾರಾವಾಹಿಗಳಲ್ಲಿ ನಟಿಸಿದ್ದರು. ನಟಿ ಶನಿವಾರ ದೆಹಲಿಯಲ್ಲಿ ಮೃತಪಟ್ಟಿರುವುದಾಗಿ ಲೀನಾ ಸಹನಟ ಮೆಹ್ರಾ ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ಸಂಬಂಧ ಇನ್‍ಸ್ಟಾದಲ್ಲಿ ಲೀನಾ ಜೊತೆಗಿನ ಫೋಟೋ ಹಾಕಿ ಬರೆದುಕೊಂಡಿರುವ ರೋಹನ್, ಕಳೆದ ವರ್ಷ ಇದೇ ಸಮಯದಲ್ಲಿ ಕ್ಲಾಸ್ ಆಫ್ 2020 ಶೂಟಿಂಗ್ ನಲ್ಲಿದ್ದೆವು. …

Read More »

ಲಾಕ್‍ಡೌನ್ ಬಳಿಕ ಮಾಲ್ಡಿವ್ಸ್ ನಟಿ ಮಣಿಯರ ಹಾಟ್‍ಸ್ಪಾಟ್

ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಬೆಡಗಿ ಶಾನ್ವಿ ಶ್ರೀವಾಸ್ತವ್ ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದಾರೆ. ಮಾಲ್ಡಿವ್ಸ್ ಕಡಲ ಕಿನಾರೆಯಲ್ಲಿ ಕಾಲ ಕಳೆಯುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಶಾನ್ವಿ ಶ್ರೀವಾಸ್ತವ್ ಎರಡ್ಮೂರು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಇತ್ತೀಚೆಗೆ ಕಸ್ತೂರಿ ಮಹಲ್ ಸಿನಿಮಾವನ್ನು ಸಹ ಒಪ್ಪಿಕೊಂಡಿದ್ದಾರೆ. ಚಿತ್ರದಲ್ಲಿ ನಟಿಸುತ್ತಿರುವ ಕುರಿತು ಇತ್ತೀಚೆಗೆ ಟ್ವೀಟ್ ಮಾಡಿ ಬಹಿರಂಗಪಡಿಸಿದ್ದಾರೆ. ದಿನೇಶ್ ಬಾಬು ನಿರ್ದೇಶನದ ಕಸ್ತೂರಿ ಮಹಲ್ ಚಿತ್ರಕ್ಕೆ ಆರಂಭದಲ್ಲಿ ಡಿಂಪಲ್ ಕ್ವೀನ್ ರಚಿತಾರಾಮ್ ಆಯ್ಕೆಯಾಗಿದ್ದರು. ಆದರೆ ಅವರು …

Read More »

ಫಿಜಿಯೋಥೆರಪಿಸ್ಟ್ ಒಬ್ಬರನ್ನು ಸೀಕ್ರೆಟ್ ಆಗಿ ಮದುವೆಯಾಗಿದ್ದಾರಂತೆ ಪ್ರಭುದೇವ್..?

ಚೆನ್ನೈ,ನ.20- ಭಾರತದ ಮೈಕಲ್ ಜಾಕ್ಸನ್ ಎಂದೇ ಖ್ಯಾತಿಯಾಗಿರುವ ನಟ ಪ್ರಭುದೇವ್ ಅವರು ಬಿಹಾರ ಮೂಲದ ಫಿಜಿಯೋಥೆರಪಿಸ್ಟ್ ಒಬ್ಬರನ್ನು ರಹಸ್ಯವಾಗಿ ವಿವಾಹವಾಗಿದ್ದಾರೆ ಎಂಬ ಮಾಹಿತಿಯನ್ನು ನೃತ್ಯ ಸಂಯೋಜಕ ನಿರ್ದೇಶಕರೊಬ್ಬರು ಬಹಿರಂಗಪಡಿಸಿದ್ದಾರೆ. ಪ್ರಭುದೇವ ಕಳೆದ ಸೆಪ್ಟೆಂಬರ್‍ನಲ್ಲೇ ಬಿಹಾರ ಮೂಲದ ಫಿಜಿಯೋಥೆಪಿಸ್ಟ್‍ನ್ನು ರಹಸ್ಯವಾಗಿ ವಿವಾಹವಾಗಿದ್ದು, ಅವರ ವಿವಾಹ ಮಹೋತ್ಸವು ಮುಂಬೈ ನಿವಾಸ ಗ್ರೀನ್ ಎಕರೆಸ್‍ನಲ್ಲಿ ನಡೆಯಿತು ಎಂದು ಹೇಳಿದ್ದಾರೆ. ತಮ್ಮ ಬೆನ್ನಿನ ಸಮಸ್ಯೆಗೆ ಈ ವೈದ್ಯೆ ಬಳಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಭುದೇವ್, ಪರಸ್ಪರ ಇಷ್ಟಪಟ್ಟು …

Read More »

ಬಾಲಿವುಡ್ ನಟ ಸಲ್ಮಾನ್ ಖಾನ್ ಐಸೋಲೇಶನ್‍ಗೆ..!

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಸ್ವತಃ ಐಸೋಲೇಶನ್‍ಗೆ ಒಳಗಾಗಿದ್ದಾರೆ. ಕಾರು ಚಾಲಕ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಕೋವಿಡ್ 19 ಪಾಸಿಟವ್ ಕಂಡುಬಂದ ಹಿನ್ನೆಲೆಯಲ್ಲಿ ಸಲ್ಮಾನ್ ಈ ನಿರ್ಧಾರಕ್ಕೆ ಬಂದಿದ್ದಾರೆ. ಸೋಂಕು ತಾಗಿದ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರೊಂದಿಗೆ ಸಂಪರ್ಕಕ್ಕೆ ಬಂದ ಕಾರಣ ಸಲ್ಮಾನ್ ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ. ಸಲೀಮ್ ಖಾನ್ ಮತ್ತು ಸಲ್ಮಾಖಾನ್‍ರ ವಿವಾಹ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಕೆಲವೇ ದಿನಗಳಲ್ಲಿ …

Read More »

ಬಾಲಿವುಡ್ ನಟಿ ಕಂಗನಾ ರನಾವತ್ ಹಾಗೂ ಆಕೆಯ ಸಹೋದರಿ ರಂಗೋಲಿಗೆ ಮುಂಬೈ ಪೊಲೀಸರು ಸಮನ್ಸ್

ಮುಂಬೈ, ನ.18- ಸಮಾಜದ ಶಾಂತತೆಯನ್ನು ಕದಡುವಂತಹ ಫೋಸ್ಟ್ ಮಾಡಿದ್ದರ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಕಂಗನಾ ರನಾವತ್ ಹಾಗೂ ಆಕೆಯ ಸಹೋದರಿ ರಂಗೋಲಿಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 23 ರಂದು ನಟಿ ಕಂಗನ ರನಾವತ್ ಹಾಗೂ ಆಕೆಯ ಸಹೋದರಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಸಾಮಾಜಿಕ ಜಾಲಗಳಲ್ಲಿ ದ್ವೇಷ ಹರಡುವಂತಹ ಟ್ವಿಟ್ ಮಾಡುವ ಸಂಬಂಧ ಕಂಗನಾಗೆ ಅಕ್ಟೋಬರ್ 21 ಹಾಗೂ ನವೆಂಬರ್ …

Read More »

ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದು ಎಂಜಾಯ್ ಮಾಡುತ್ತಿದ್ದಾರೆ. ನಟಿ ಪ್ರಣೀತಾ

ಬೆಂಗಳೂರು: ನಟಿ ಪ್ರಣೀತಾ ಸುಭಾಷ್ ಸಖತ್ ಬ್ಯುಸಿಯಾಗಿದ್ದು, ಬಹುಭಾಷಾ ನಟಿಯಾಗಿ ಬೆಳೆದಿದ್ದಾರೆ. ಸ್ಯಾಂಡಲ್‍ವುಡ್‍ನಿಂದ ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಸಹ ಮಿಂಚುತ್ತಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ಬಿಡುವು ಮಾಡಿಕೊಂಡು ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದು ಎಂಜಾಯ್ ಮಾಡುತ್ತಿದ್ದಾರೆ.ಲಾಕ್‍ಡೌನ್ ಬಳಿಕ ಪ್ರಣಿತಾ ಶೂಟಿಂಗ್‍ನಲ್ಲಿ ಭಾಗವಹಿಸಿದ್ದರು. ಬಾಲಿವುಡ್ ಸಿನಿಮಾ ಹಂಗಾಮಾ-2 ಚಿತ್ರೀಕರಣದ ಬಳಿ ಬ್ರೇಕ್ ಪಡೆದಿರುವ ಅವರು ಮಾಲ್ಡಿವ್ಸ್ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ತಮ್ಮ ಮಾಲ್ಡಿವ್ಸ್ ಡೇಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದು, ಡೈವಿಂಗ್ …

Read More »