Breaking News
Home / ಸಿನೆಮಾ (page 32)

ಸಿನೆಮಾ

ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬಧ್ರುವ ಸರ್ಜಾರ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಯುವ ಸಾಮ್ರಾಟ ದಿವಂಗತ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬ ಇಂದು ಆಗಿದ್ದು, ಇದೇ ದಿನ ಸಹೋದರ ಧ್ರುವ ಸರ್ಜಾರ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿರೋ ಗಣಪತಿ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ನೆರೆವೇರಿಸಿದ್ದಾರೆ. ಅಣ್ಣನ ಹುಟ್ಟಿದ ದಿನವನ್ನ ಧ್ರುವ ಹೊಸ ಸಿನಿಮಾ ಅನೌನ್ಸ್ ಮಾಡುವ ಮೂಲಕ ಆಚರಿಸಿದ್ದಾರೆ. ಧ್ರುವ ಹೊಸ ಸಿನಿಮಾಗೆ ನಂದಕಿಶೋರ್ ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಪೊಗರು ಚಿತ್ರದ …

Read More »

ಚಿರು ಸಮಾಧಿ ಬಳಿ ಹೋಗಿ, ಸುಂದರ್​ ರಾಜ್​ ಕುಟುಂಬ ಪೂಜೆ ನೆರವೇರಿಸಲಿದ್ದಾರೆ.

ಚಿರು ಸರ್ಜಾ ಹುಟ್ಟುಹಬ್ಬದ ಹಿನ್ನೆಲೆ, ಪತ್ನಿ ಮೇಘನಾ ರಾಜ್​ ಚಿರು ಸಮಾಧಿ ಬಳಿ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ ಅನ್ನೋದು ತಿಳಿದು ಬಂದಿದೆ. ಚಿರು ಸಮಾಧಿ ಬಳಿ ಹೋಗಿ, ಸುಂದರ್​ ರಾಜ್​ ಕುಟುಂಬ ಪೂಜೆ ನೆರವೇರಿಸಲಿದ್ದಾರೆ. ಸದ್ಯ ಮೇಘನಾ ರಾಜ್​ ಸರ್ಜಾ ತಮ್ಮ ಜೆ.ಪಿ.ನಗರದ ಮನೆಯಲ್ಲೇ ಇದ್ದಾರೆ. ಇನ್ನು, ಇಂದು ಮೇಘನಾರಾಜ್​ಗೆ ಹೆರಿಗೆ ಅಗುವ ಊಹಾಪೋಹಗಳಿಗೆ ತಂದೆ ಸುಂದರ್ ರಾಜ್ ತೆರೆ ಎಳೆದಿದ್ದಾರೆ. ‘ಇವತ್ತು ಮೇಘನಾ ಆಸ್ಪತ್ರೆಗೆ ಅಡ್ಮಿಟ್​ ಆಗೋದಿಲ್ಲ. ನಾವೆಲ್ಲರೂ …

Read More »

ಜಿಲ್ಲೆಯಲ್ಲಿ ಚಲನಚಿತ್ರ ಮಂದಿರಗಳು ಅ. 15ರಿಂದ ಪುನರಾರಂಭಗೊಳ್ಳುತ್ತಿಲ್ಲ.

ಬೆಳಗಾವಿ: ಕೋವಿಡ್-19 ಕಾರಣದಿಂದ ಹೇರಲಾಗಿದ್ದ ನಿರ್ಬಂಧದಿಂದ ವಿನಾಯಿತಿ ನೀಡಿದ್ದರೂ ಜಿಲ್ಲೆಯಲ್ಲಿ ಚಲನಚಿತ್ರ ಮಂದಿರಗಳು ಅ. 15ರಿಂದ ಪುನರಾರಂಭಗೊಳ್ಳುತ್ತಿಲ್ಲ. ಏಳು ತಿಂಗಳುಗಳಿಂದ ಚಲನಚಿತ್ರ ಮಂದಿರ ಮತ್ತು ಮಲ್ಟಿಪ್ಲೆಕ್ಟ್‌ಗಳನ್ನು ಬಂದ್ ಮಾಡಲಾಗಿದೆ. ನಗರದಲ್ಲಿ 6 ಏಕ ಪರದೆ ಚಲನಚಿತ್ರ ಮಂದಿರಗಳು ಹಾಗೂ 2 ಮಲ್ಟಿಪ್ಲೆಕ್ಸ್‌ಗಳಿವೆ. ಜಿಲ್ಲೆಯ ಚಲನಚಿತ್ರ ಮಂದಿರಗಳ ಸಂಖ್ಯೆ 30ಕ್ಕೂ ಜಾಸ್ತಿ ಇದೆ. ಇಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಪುನರಾರಂಭಿಸಲು ಮಾಲೀಕರು ಸದ್ಯಕ್ಕೆ ಉತ್ಸಾಹ ತೋರುತ್ತಿಲ್ಲ. ‘ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವುದು ಕಷ್ಟಕರವಾಗಿರುವುದು, …

Read More »

ರಜನೀಕಾಂತ್​ ವಿರುದ್ಧ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ

ಚೆನ್ನೈ: ತಮಗೆ ಚೆನ್ನೈ ಪಾಲಿಕೆ ನೀಡಿದ್ದ ತೆರಿಗೆ ನೋಟಿಸ್​ ಅನ್ನು ಪ್ರಶ್ನಿಸಿ ಚಿತ್ರನಟ ರಜನೀಕಾಂತ್​ ವಿರುದ್ಧ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ. ಕಲ್ಯಾಣ ಮಂಟಪಕ್ಕೆ 6.50 ಲಕ್ಷ ಆಸ್ತಿ ತೆರಿಗೆ ವಿಧಿಸಿದ್ದ ಗ್ರೇಟರ್ ಚೆನ್ನೈ ಕಾರ್ಪೋರೇಷನ್ ವಿರುದ್ಧ ರಜನೀಕಾಂತ್​ ಕೋರ್ಟ್​ ಮೆಟ್ಟಿಲೇರಿದ್ದರು. ತಮಿಳುನಾಡಿನ ಕೊಡಂಬಕ್ಕಂನಲ್ಲಿ ರಜನಿಕಾಂತ್ ಅವರ ಕಲ್ಯಾಣ ಮಂಟಪವಿದ್ದು, ಅದರ ತೆರಿಗೆ ಹಣವನ್ನು ಕಟ್ಟುವಂತೆ ಜಾರಿ ಮಾಡಲಾಗಿದ್ದ ನೋಟಿಸನ್ನು ಅವರು ಪ್ರಶ್ನಿಸಿದ್ದರು. ಕಳೆದ ಏಪ್ರಿಲ್​ನಿಂದ ಸೆಪ್ಟಂಬರ್​ವರೆಗೆ ಅರ್ಧ ವರ್ಷದ ತೆರಿಗೆ ನೀಡುವಂತೆ …

Read More »

ಚಿರಂಜೀವಿ ಸರ್ಜಾ ಅಭಿನಯದ ಕಟ್ಟ ಕಡೆಯ ಚಿತ್ರ ‘ಶಿವಾರ್ಜುನ’ ರೀ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್

ದಿವಂಗತ ನಟ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಭಿನಯದ ಕಟ್ಟ ಕಡೆಯ ಚಿತ್ರ ‘ಶಿವಾರ್ಜುನ’ ರೀ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಚಿರಂಜೀವಿಯನ್ನು ಕಳೆದುಕೊಂಡು ದುಃಖದಲ್ಲಿದ್ದ ಅಭಿಮಾನಿ ಬಳಗಕ್ಕೆ ಈ ಸುದ್ದಿ ಕೇಳಿ ಮನದುಂಬಿ ಬಂದಿದೆ. ಮತ್ತೊಮೆ ಚಿರಂಜೀವಿ ಸರ್ಜಾರನ್ನ ಬೆಳ್ಳಿ ತೆರೆ ಮೇಲೆ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಶಿವಾರ್ಜುನ’ ಚಿತ್ರ ಮಾರ್ಚ್ 12ರಂದು ಸಂತೋಷ್ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿತ್ತು. ಮರು ದಿನವೇ ಸರ್ಕಾರ ಕೋವಿಡ್ 19 ಎಚ್ಚರಿಕೆಯ ಕ್ರಮವಾಗಿ ಚಿತ್ರಮಂದಿರವನ್ನು …

Read More »

ಮಾದಕ’ ನಟಿಯರು ಜೈಲಿಗೆ ತರಿಸಿಕೊಳ್ತಿದ್ದ ‘ಪಾರ್ಸಲ್’​ಗೆ ಜೈಲು ಸಿಬ್ಬಂದಿ ತಡೆ

ಬೆಂಗಳೂರು: ಇಷ್ಟು ದಿನ ಎಣ್ಣೆ ಸೀಗೆಕಾಯಿಯಂತಿದ್ದ ನಶೆರಾಣಿಯರಾದ ರಾಗಿಣಿ ಮತ್ತು ಸಂಜನಾರ ಕಾಟ ತಾಳಲಾರದೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಇಬ್ಬರಿಗೂ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಿದ್ದರು. ಇದೀಗ, ಸೈಲೆಂಟಾಗಿದ್ದ ರಾಗಿಣಿ ಮತ್ತೆ ತನ್ನ ಕಿಲಾಡಿ ಬುದ್ಧಿ ತೋರಿದ್ದಾಳೆ. ಬೆನ್ನು ನೋವು ಎಂಬ ನೆಪವೊಡ್ಡಿ ಜೈಲಿನಿಂದ ಹೊರ ಬರಲು ತಂತ್ರ ನಡೆಸುತ್ತಿರುವ ರಾಗಿಣಿ ತಮಗೆ ಬೇಕಾದ ವಸ್ತುಗಳನ್ನು ಕೊರಿಯರ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅಂದ ಹಾಗೆ, ತುಪ್ಪದ ಬೆಡಗಿ …

Read More »

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ …

Read More »

ಆರೋಗ್ಯ ಸಮಸ್ಯೆಯಿದ್ರೂ ರಾಗಿಣಿಗೆ ಸಿಗುತ್ತಿಲ್ಲ ಜಾಮೀನು!

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಜೈಲು ಸೇರಿರುವ ‘ನಶೆ’ರಾಣಿ ರಾಗಿಣಿಗೆ ಹೊಸ ಸಮಸ್ಯೆ ಎದುರಾಗಿದೆ. ಆರೋಗ್ಯ ಸಮಸ್ಯೆಯಿದ್ರೂ ನಟಿಗೆ ಜಾಮೀನು ಸಿಗುತ್ತಿಲ್ಲ. ಜಾಮೀನು ಪಡೆಯಲು ಅವಕಾಶವಿದ್ರೂ ಅರ್ಜಿ ಸಲ್ಲಿಸಿಲ್ಲ. ಯಾಕಂದ್ರೆ ರಾಗಿಣಿ ಹಿರಿಯ ವಕೀಲರ ಹುಡುಕಾಟದಲ್ಲಿದ್ದಾರೆ. ಹೌದು ರಾಗಿಣಿ ಸಂಬಂಧಿಕರು ಹೈಕೋರ್ಟ್ ಮುಂದೆ ವಾದಿಸಲು ಯಾರು ಸೂಕ್ತವೆಂದು ಲಾಯರ್​ನ ಹುಡುಕಾಟದಲ್ಲಿದ್ದಾರೆ. ರಾಗಿಣಿ ಈ ಪ್ರಕರಣದಲ್ಲಿ ಈಗಾಗಲೇ ಒಬ್ಬರು ವಕೀಲರನ್ನು ಬದಲಿಸಿದ್ದಾರೆ. ವಕೀಲ ಸುದರ್ಶನ್ ಬದಲಿಗೆ ಕಲ್ಯಾಣ್​ಕೃಷ್ಣ ಬಂಡಾರು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ …

Read More »

ಬಿಗ್ ಬಿ ಯಾವತ್ತಿಗೂ ಬ್ಯುಸಿ ಬೀ!

ಬಾಲಿವುಡ್​ನಲ್ಲೀಗ ಅತ್ಯಂತ ಚಲಾವಣೆಯಲ್ಲಿರುವ ಅಥವಾ ಲಾಕ್​ಡೌನ್ ಹೊರತಾಗಿಯೂ ಬಹಳ ಬ್ಯುಸಿಯಾಗಿರುವ ನಟ ಯಾರೆಂದು ಊಹಿಸಬಲ್ಲಿರಾ ? ನಿಮಗೆ ಆಶ್ಚರ್ಯವಾಗಬಹುದು . ಕೊವಿಡ್ -19 ಸೋಂಕಿಗೆ ಹೆದರಿ ಬಹಳಷ್ಟು ನಟ – ನಟಿಯರು ತಮ್ಮ ಮನೆಗಳಿಂದ ಆಚೆ ಬರುತ್ತಿಲ್ಲ . ಆದರೆ , ತನ್ನ ಕುಟುಂಬದ ಕೆಲವು ಸದಸ್ಯರೊಂದಿಗೆ ಖುದ್ದು ಸೋಂಕಿಗೊಳಗಾಗಿ ಮೂರು ವಾರಗಳ ಕಾಲ ಮುಂಬೈನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ ಬಾಲಿವುಡ್​ನ ಮೆಗಾ ಸ್ಟಾರ್ ಅಮಿತಾಬ್ ಬಚ್ಚನ್ ಈಗ ದಿನವಿಡೀ ಕೆಲಸ ಮಾಡಿಕೊಂಡೇ ಇದ್ದಾರೆ . ಹೌದು , ನಿನ್ನೆಯಷ್ಟೇ ( ಅಕ್ಟೋಬರ್ 11) ತಮ್ಮ 78 ನೇ ಹುಟ್ಟಹಬ್ಬವನ್ನು ಬಹಳ ಸರಳ ರೀತಿಯಲ್ಲಿ ಕುಟುಂಬದ …

Read More »

ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಸಿನಿ ಚಿತ್ತಾರ

ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರವಿದೆ. ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ‌ಬಿರುಸಿನಿಂದ ಸಾಗಿದೆ.‌ ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಹಾರಾರ್ ಥ್ರಿಲ್ಲರ್ …

Read More »