Breaking News
Home / ಸಿನೆಮಾ (page 38)

ಸಿನೆಮಾ

2ನೇ ಮಗುವಿಗೆ ತಾಯಿಯಾಗುತ್ತಿದ್ದಾರೆ ಕರೀನಾ

ಮುಂಬೈ: ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ಸಂತಸದ ಸುದ್ದಿಯನ್ನ ಹಂಚಿಕೊಂಡಿದ್ದು, ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿರುವ ಕುರಿತು ತಿಳಿಸಿದ್ದಾರೆ.ಈ ಕುರಿತು ದಂಪತಿ ಹೇಳಿಕೆ ನೀಡಿದ್ದು, ನಮ್ಮ ಕುಟುಂಬಕ್ಕೆ ಮತ್ತೊಬ್ಬ ಸದಸ್ಯನ ಆಗಮನದ ನಿರೀಕ್ಷೆಯಲ್ಲಿರುವುದು ಸಂತಸ ತಂದಿದೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆ, ಬೆಂಬಲಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಡಿಸೆಂಬರ್ ರಲ್ಲಿ ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ದಂಪತಿಗೆ ತೈಮುರ್ ಅಲಿ ಖಾನ್ ಜನಸಿದ್ದಾನೆ. ಈ ಜೋಡಿಯು …

Read More »

ಕೆಜಿಎಫ್ ಅಧೀರನಿಗೆ ಕ್ಯಾನ್ಸರ್- ಶೀಘ್ರ ಚಿಕಿತ್ಸೆಗೆ ಅಮೆರಿಕಕ್ಕೆ ಹಾರಿದ ಸಂಜಯ್ ದತ್

ಮುಂಬೈ: ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಇದೀಗ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.ಈ ಸಂಬಂಧ ಪತ್ರಕರ್ತ ಕೋಮಲ್ ನಹ್ತಾ ಅವರು ಟ್ವೀಟ್ ಮಾಡಿ, ಸಂಜಯ್ ದತ್ ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ ಅಂತ ತಿಳಿಸಿದ್ದಾರೆ. ಇತ್ತ ಸಂಜಯ್ ದತ್ ಟ್ವೀಟ್ ಮಾಡಿ, ಸಿನಿಮಾದಿಂದ ಸಣ್ಣ ಬ್ರೇಕ್ ಪಡೆದುಕೊಳ್ಳುವುದಾಗಿ …

Read More »

ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್

ನವದೆಹಲಿ: ಅನುಷ್ಕಾಳನ್ನು ಭೇಟಿಯಾಗದಿದ್ದರೆ ಜೀವನದಲ್ಲಿ ನಾನು ಬದಲಾಗುತ್ತಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ. ಕೊರೊನಾ ಲಾಕ್‍ಡೌನ್ ನಂತರ ಭಾರತ ಕ್ರಿಕೆಟ್ ತಂಡ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಮನೆಯಲ್ಲೇ ಉಳಿದಿರುವ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇದ್ದಾರೆ. ಈಗ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಜೊತೆ ‘ಓಫನ್ ನೆಟ್ಸ್ ವಿತ್ ಅಗರ್ವಾಲ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್, ಪತ್ನಿಯನ್ನು ಹಾಡಿಹೊಗಳಿದ್ದಾರೆ …

Read More »

ಖಾತೆಯಲ್ಲಿಯ 15 ಕೋಟಿ ಹೋಗಿದ್ದು ಯಾರ ಖಾತೆಗೆ?ಪಂಚ ಸವಾಲುಗಳಿಗೆ ಉತ್ತರ ಬೇಕೆಂದ ಸುಶಾಂತ್ ತಂದೆ

ಮುಂಬೈ/ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ದಿನದಿಂದ ದಿನ ಜಟಿಲವಾಗುತ್ತಾ ಹೋಗ್ತಿದೆ. ಸುಶಾಂತ್ ತಂದೆ ಕೆಕೆ ಸಿಂಗ್ ನಟಿ ರಿಯಾ ಚಕ್ರವರ್ತಿ ಮತ್ತು ಇಂದ್ರಜಿತ್ ಚಕ್ರವರ್ತಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಕೆ ಸಿಂಗ್ ದೂರಿನಲ್ಲಿ ತಮಗೆ ಐದು ಪ್ರಶ್ನೆಗಳಿಗೆ ಉತ್ತರ ಬೇಕಂದಿದ್ದಾರೆ. ಪಂಚ ಸವಾಲುಗಳು: 1. 2019ಕ್ಕಿಂತ ಮೊದಲು ನನ್ನ ಮಗನಿಗೆ ಯಾವುದೇ ಸಮಸ್ಯೆ ಇರಲಿಲ್ಲ. ರಿಯಾಳ ಸಂಪರ್ಕಕ್ಕೆ …

Read More »

ಆಕೆ ನನ್ನ ಮಗನಿಗೆ ಓವರ್ ಡೋಸ್ ಮಾತ್ರೆ ನೀಡಿದ್ದಾಳೆ:ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ರಿಯಾ ಚಕ್ರವರ್ತಿ ಅವರ ವಿರುದ್ಧ ದೂರು ನೀಡಿದ್ದು, ಆಕೆ ನನ್ನ ಮಗನಿಗೆ ಓವರ್ ಡೋಸ್ ಮಾತ್ರೆ ನೀಡಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುಶಾಂತ್ ಸಿಂಗ್ ಸಾವನ್ನಪ್ಪಿ ಒಂದು ತಿಂಗಳ ನಂತರ ಅವರ ತಂದೆ ಕೆಕೆ ಸಿಂಗ್ ಅವರು, ಇಂದು ಪೊಲೀಸರಿಗೆ ದೂರು ನೀಡಿದ್ದು, ರಿಯಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಜೊತೆಗೆ ಆಕೆ ನನ್ನ ಮಗನನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ …

Read More »

ವರಮಹಾಲಕ್ಷ್ಮಿ ಹಬ್ಬಕ್ಕೆ ಅಪ್ಪು ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್

ಬೆಂಗಳೂರು: ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಹಾಗೂ ಸಂತೋಷ್ ಆನಂದ್‍ರಾಮ್ ಕಾಂಬಿನೇಷನ್ ಸಿನಿಮಾ ‘ಯುವರತ್ನ’ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ವೈರಸ್ ಎಂಬ ಮಹಾಮಾರಿಯಿಂದಾಗಿ ಅನಿವಾರ್ಯವಾಗಿ ಮುಂದೂಡಲಾಗಿದೆ. ಈ ಮಧ್ಯೆ ನಿರ್ದೇಶಕ ಸಂತೋಷ್ ಅವರು ಟ್ವೀಟ್ ಮಾಡಿ, ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿ ಬಳಗಕ್ಕೆ ಇದು ಸಮರ್ಪಣೆ ಎಂದು ಬರೆದುಕೊಂಡಿದ್ದಾರೆ.ಕೊರೊನಾ ಭೀತಿ ಎದುರಾಗದಿದ್ದಲ್ಲಿ ಏಪ್ರಿಲ್ 3ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿತ್ತು. ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಂತೋಷ್ ಆನಂದರಾಮ್ …

Read More »

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ರಹಸ್ಯ ಬಯಲು

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಕುರಿತಾದ ಫಾರೆನ್ಸಿಕ್ ಲ್ಯಾಬ್ ರಿಪೋರ್ಟ್ ಬಂದಿದೆ. ಅಂಗಾಂಗಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಸುಶಾಂತ್ ಮೃತದೇಹದ ಮೇಲೆ ಯಾವುದೇ ಬಲ ಪ್ರಯೋಗವಾಗಿಲ್ಲ. ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನುವುದು ದೃಢಪಟ್ಟಿದೆ. ಸುಶಾಂತ್ ಸಿಂಗ್ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಅವರ ಸಾವಿನ ಕುರಿತಂತೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಕೈಗೊಂಡಿದ್ದರು. ನೇಣು‌ ಬಿಗಿದ ಕಾರಣ ಉಸಿರುಗಟ್ಟಿ ಅವರು ಸಾವನ್ನಪ್ಪಿದ್ದಾರೆ. …

Read More »

ನಟ ಧ್ರುವ ಸರ್ಜಾ, ಪ್ರೇರಣಾ ಆಸ್ಪತ್ರೆಯಿಂದ ಡಿಸ್ಚಾರ್ಜ್…………

ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ನಿನ್ನೆ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಬ್ಬರಿಗೂ ಹೋಂ ಕ್ವಾರಂಟೈನ್ ನಲ್ಲಿರುವಂತೆ ಸೂಚನೆ ನೀಡಲಾಗಿದೆ. ಇಬ್ಬರಿಗೂ ನಿನ್ನೆ ಕೊರೊನಾ ಸೋಂಕು ಇರುವುದು ದೃಢ ಪಟ್ಟಿತ್ತು. ಕೊರೊನಾ ಸೋಂಕು ದೃಢ ಪಟ್ಟಿರುವ ಬಗ್ಗೆ ಟ್ವೀಟ್ ಮಾಡಿ ಧ್ರುವ ಸರ್ಜಾ ಮಾಹಿತಿ ನೀಡಿದ್ದರು. ಆದರೆ ಕೊರೊನಾ ಸೋಂಕಿನ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿದ್ದ ಅವರಿಗೆ ಮನೆಯಲ್ಲೇ ಚಿಕಿತ್ಸೆ ಪಡೆಯಲು ವೈದ್ಯರು ಸೂಚಿಸಿ ಆಸ್ಪತ್ರೆಯಿಂದ …

Read More »

ಮಯೂರಿ ಬರ್ತ್‍ಡೇ ಸಂಭ್ರಮಕ್ಕೆ ಕಿಕ್ಕೇರಿಸಿತು ‘ಆದ್ಯಂತ’ ಫಸ್ಟ್ ಲುಕ್!

ಕಿರುತೆಯಿಂದ ಕಲಾಯಾನ ಆರಂಭಿಸಿ ಹಿರಿತೆರೆಯಲ್ಲೂ ಯಶಸ್ವಿ ನಾಯಕಿಯಾಗಿ ನೆಲೆ ಕಂಡುಕೊಂಡಿರುವವರು ಮಯೂರಿ ಕ್ಯಾತರಿ. ಪ್ರಬುದ್ಧವಾದ ನಿರ್ಧಾರಗಳ ಮೂಲಕ ಚೆಂದದ ಪಾತ್ರಗಳನ್ನ ಆಯ್ಕೆ ಮಾಡಿಕೊಳ್ಳುತ್ತಿರೋ ಮಯೂರಿ ಇತ್ತೀಚೆಗಷ್ಟೇ ಸಾಂಸಾರಿಕ ಜೀವನಕ್ಕೆ ಅಡಿಯಿರಿಸಿದ್ದಾರೆ. ಆ ಖುಷಿಯಲ್ಲಿರೋ ಅವರ ಪಾಲಿಗೆ ಈ ಬಾರಿಯ ಹುಟ್ಟುಹಬ್ಬ ನಿಜಕ್ಕೂ ಸ್ಪೆಷಲ್ಲು. ಅದನ್ನು ಮತ್ತೂ ಕಳೆಗಟ್ಟಿಸುಯವಂತೆ ‘ಆದ್ಯಂತ’ ಚಿತ್ರದ ಚೆಂದದ ಫಸ್ಟ್ ಲುಕ್ ಬಿಡುಗಡೆಗೊಂಡಿದೆ.   ಆದ್ಯಂತ ಮಯೂರಿ ನಾಯಕಿಯಾಗಿ ನಟಿಸಿರೋ ಚಿತ್ರ. ಅವರ ಪಾಲಿಗಿದು ಮಹತ್ವಾಕಾಕ್ಷೆಯ ಮೈಲಿಗಲ್ಲು. …

Read More »

ಕನ್ನಡ ಹಿರಿಯ ನಟಿ ಜಯಂತಿಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು: ಕನ್ನಡ ಹಿರಿಯ ನಟಿ ಜಯಂತಿ ಅವರು ಅನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯಂತಿ ಅವರು ಹಲವು ದಿನಗಳಿಂದ ಅಸ್ತಮ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅನಾರೋಗ್ಯದಿಂದ ಬಳುತ್ತಿರುವ ಜಯಂತಿ ಅವರಿಗೆ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಸತೀಶ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಜಯಂತಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಅವರ ಮಗ ಕೃಷ್ಣಕುಮಾರ್, ಅಸ್ತಮ ಸಮಸ್ಯೆಯಿಂದ ಎರಡು …

Read More »