Breaking News

ಹುಬ್ಬಳ್ಳಿ

ಚೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು

ಹುಬ್ಬಳ್ಳಿ: ಚೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು ಜೋರಾಗಿದೆ. ಮೂವರು ಯುವಕರು ಬುಲೆಟ್ ಬೈಕಿನಲ್ಲಿ ಆಗಮಿಸಿ ಮಗನ ಮದುವೆ ಸಂಭ್ರಮದಲ್ಲಿದ್ದ ರೌಡಿ ಶೀಟರ್ ಮೇಲೆ ನಾಲ್ಕು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಮೂರು ಗುಂಡು ರೌಡಿ ಶೀಟರ್ ಫ್ರೋಟ್ ಇರ್ಫಾನ್‍ಗೆ ತಗುಲಿದ ಪರಿಣಾಮ ರೌಡಿ ಶೀಟರ್ ಸ್ಥಿತಿ ಗಂಭೀರವಾಗಿದೆ. ಧಾರವಾಡದ ರೌಡಿಶೀಟರ್ ಇರ್ಫಾನ್ ಮೇಲೆಯೇ ಅಪರಿಚಿತರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಹಳೇ ಹುಬ್ಬಳ್ಳಿಯ ವಿಶಾಲ …

Read More »

ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಪುತ್ರಿ ಬ್ರಹ್ಮಣಿ ಮಗುವಿಗೆ ಕಲಘಟಗಿ ತೊಟ್ಟಿಲು ಸಿದ್ಧವಾಗುತ್ತಿದೆ.

ಹುಬ್ಬಳ್ಳಿ: ದೇಶಾದ್ಯಂತ ಹೆಸರುವಾಸಿಯಾಗಿರುವ ಧಾರವಾಡ ಜಿಲ್ಲೆಯ ಕಲಘಟಗಿ ಬಣ್ಣದ ತೊಟ್ಟಿಲು ತನ್ನದೇ ಆದ ಮಹತ್ವವನ್ನು ಹೊಂದಿದೆ. ಇದೀಗ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಪುತ್ರಿ ಬ್ರಹ್ಮಣಿ ಮಗುವಿಗೆ ಕಲಘಟಗಿ ತೊಟ್ಟಿಲು ಸಿದ್ಧವಾಗುತ್ತಿದೆ. ಕಲಘಟಗಿ ಕಲಾವಿದ ಮಾರುತಿ ಬಳಿಯೇ ಸುಮಾರು ಮೂರು ತಿಂಗಳಿನಿಂದ ತೊಟ್ಟಿಲು ತಯಾರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ತೊಟ್ಟಿಲಿನಲ್ಲಿ ಕೃಷ್ಣನ ಬಾಲ ಲೀಲೆ ಮೂಡಿಬಂದಿರುವುದು ತೊಟ್ಟಿಲಿನ ಮೆರಗನ್ನು ಮತ್ತಷ್ಟು ಹೆಚ್ಚಿಸಿದೆ. ಕಲಘಟಗಿ ತೊಟ್ಟಿಲು ಕಲಾವಿದನ ಕೈ ಚಳಕದಿಂದ ನೋಡುಗರ …

Read More »

ಆ.16ರಿಂದ ಬೆಂಗಳೂರು-ಹುಬ್ಬಳ್ಳಿ-ದೆಹಲಿ ವಿಮಾನ ಸಂಚಾರ ಪುನರಾರಂಭ

ಹುಬ್ಬಳ್ಳಿ, – ಲಾಕ್‍ಡೌನ್ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ಸ್ಥಗಿತಗೊಳಿಸಿದ್ದ ಸ್ಟಾರ್ ಏರ್ ವಿಮಾನ ಆಗಸ್ಟ್ 16ರಿಂದ ಬೆಂಗಳೂರು- ಹುಬ್ಬಳ್ಳಿ- ದೆಹಲಿ (ಹಿಂಡಾನ್) ನಡುವೆ ಸಂಚಾರ ಪುನರಾರಂಭಿಸಲಿದೆ. ವಾರದಲ್ಲಿ ನಾಲ್ಕು ದಿನ ಸೋಮವಾರ, ಮಂಗಳವಾರ, ಶುಕ್ರವಾರ ಹಾಗೂ ಭಾನುವಾರ ವಿಮಾನ ಸಂಚರಿಸಲಿದೆ. ಈಗಾಗಲೇ ಆನ್‍ಲೈನ್ ಬುಕ್ಕಿಂಗ್ ಶುರು ಮಾಡಲಾಗಿದೆ. ಶೀಘ್ರದಲ್ಲೇ ಮುಂಬೈ, ಅಹಮದಾಬಾದ್ ಸಂಚಾರ ಆರಂಭಿಸುವ ಸಾಧ್ಯತೆ ಇದೆ. ಲಾಕ್‍ಡೌನ್‍ಗೂ ಮುನ್ನ ನಿತ್ಯ 14 ವಿಮಾನ ಹಾರಾಡುತ್ತಿದ್ದವು. ಬಳಿಕ ಎಲ್ಲ ಸ್ಥಗಿತಗೊಂಡಿದ್ದವು. …

Read More »

ಬಸ್‌ನಲ್ಲಿ ಕಲ್ಲು ತುಂಬಿ ಸಾಗಿಸಿದರು!

ಹುಬ್ಬಳ್ಳಿ: ಕುಂದಗೋಳ-ಹುಬ್ಬಳ್ಳಿ ನಡುವೆ ಸಂಚರಿಸುವ ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ, ಸಿಬ್ಬಂದಿ ಗುರುವಾರ ಕಲ್ಲು ಸಾಗಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸೂರು ರಸ್ತೆ ಬಳಿ ರಸ್ತೆ ವಿಭಜಕ ಕಾಮಗಾರಿ ನಡೆಯುತ್ತಿದ್ದು, ಮೊದಲು ರಸ್ತೆಗೆ ಹಾಕಲಾಗಿದ್ದ ಕಲ್ಲುಗಳನ್ನು ತೆಗೆಯಲಾಗಿದೆ. ಗೋಕುಲ ರಸ್ತೆಯ ಬಸ್‌ ಡಿಪೊದಲ್ಲಿ ಉದ್ಯಾನ ಕಾಮಗಾರಿ ನಡೆಯುತ್ತಿರುವುದರಿಂದ, ಅಲ್ಲಿಗೆ ಈ ಕಲ್ಲುಗಳನ್ನು ಸಾಗಿಸಲು ಸಿಬ್ಬಂದಿ ಬಸ್‌ ಬಳಕೆ ಮಾಡಿಕೊಂಡಿದ್ದಾರೆ. ರಸ್ತೆ ಮೇಲಿದ್ದ ಕಲ್ಲುಗಳನ್ನು ಐದಾರು ಸಿಬ್ಬಂದಿ ಸೇರಿ ಬಸ್‌ಗೆ ತುಂಬಿದ್ದಾರೆ. 50ಕ್ಕಿಂತಲೂ …

Read More »

ಕೊರೊನಾ ಗೆದ್ದು ಬಂದ ಸಂಚಾರಿ ಪೊಲೀಸ್ ಠಾಣೆ ಸೇನಾನಿಗಳಿಗೆ ಸ್ವಾಗತ ಸನ್ಮಾನ

ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಶತಾಯ ಗತಾಯ ಹೋರಾಟ ಮಾಡುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಬೆನ್ನುಬಿಡದೇ ಕಾಡುತಿದೆ. ಕೊರೊನಾ ವೈರಸ್ ವಿರುದ್ಧ ಹೋರಾಡಿ ಜಯಗಳಿಸಿದ ಜಿಲ್ಲೆಯ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಗಳಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಪೂರ್ವ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಗಳಾದ ಪಿ.ಬಿ.ಕಾಟೆ, ಎನ್.ಸಿ.ಪೂಜಾರ, ಗದಿಗೆಪ್ಪ ಕಿತ್ತೂರ ಅವರು ಕೊರೊನಾ ವೈರಸ್ ನಿಂದ ಗುಣಮುಖರಾಗಿ ಇಂದು ವೃತ್ತಿಗೆ ಆಗಮಿಸಿದ್ದು, ಎಲ್ಲರಲ್ಲಿಯೂ ಸಂತೋಷದ ವಾತಾವರಣ ನಿರ್ಮಾಣವಾಯಿತು …

Read More »

ಆ್ಯಂಟಿಜೆನ್ ಟೆಸ್ಟ್‌ಗೆ ಹೆದರಿ ಮಾರುಕಟ್ಟೆಯನ್ನೇ ಬಂದ್ ಮಾಡಿದ ವ್ಯಾಪಾರಸ್ಥರು!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಹಾವಳಿ ಜೋರಾಗುತ್ತಿದಂತೆ ಜಿಲ್ಲಾಡಳಿತ ಆ್ಯಂಟಿಜೆನ್ ಟೆಸ್ಟ್‍ಗೆ ಮುಂದಾಗಿದೆ. ನಗರದ ಜನನಿಬಿಡ ಪ್ರದೇಶ, ಮಾರುಕಟ್ಟೆಗಳಲ್ಲಿ ಆ್ಯಂಟಿಜೆನ್ ಟೆಸ್ಟ್ ಮಾಡಲಾಗುತ್ತಿದೆ. ಆದರೆ ಈ ಟೆಸ್ಟ್ ಗೆ ಹೆದರಿ ಹುಬ್ಬಳ್ಳಿಯಲ್ಲಿ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳನ್ನ ಬಂದ್ ಮಾಡಿದ್ದಾರೆ.   ಹುಬ್ಬಳ್ಳಿಯ ದುರ್ಗದ ಬೈಲ್ ಸೇರಿದಂತೆ ಅವಳಿನಗರದ 15 ಕಡೆಗಳಲ್ಲಿ ಧಾರವಾಡ ಜಿಲ್ಲಾಡಳಿತ ಇಂದಿನಿಂದ ರ‍್ಯಾಪಿಡ್ ಟೆಸ್ಟ್ ಆರಂಭಿಸಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹುಬ್ಬಳ್ಳಿಯ ದುರ್ಗದ ಬೈಲ್ ಗೆ ಭೇಟಿ …

Read More »

ಕುಮಾರಸ್ವಾಮಿ ಅವರೀಗೇ ಬಿಜೆಪಿ ಮೇಲೆ ಸ್ವಲ್ಪ ಲವ್ ಆಗಿದೆ.:ಹೊರಟ್ಟಿ

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿಕೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಕುರಿತು ಸಾಫ್ಟ್ ಕಾರ್ನರ್ ಹೊಂದಿರುವುದು ಸತ್ಯ. ಈ ಕುರಿತು ಕುಮಾರಸ್ವಾಮಿ ಹಾಗೂ ಎಚ್.ಡಿ.ದೇವೇಗೌಡರು ಸಭೆ ಕರೆದು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. , ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರ ಮೇಲೆ ಸಾಫ್ಟ್ ಕಾರ್ನರ್ ಹೊಂದಿರುವುದು ಸತ್ಯ. ಆದರೆ ಅವರು …

Read More »

ಪಾಕ್ ಪರ ಘೋಷಣೆ ಪ್ರಕರಣ- ಆರೋಪಿಗಳಿಗೆ ಕಾಶ್ಮೀರಕ್ಕೆ ತೆರಳಲು ನ್ಯಾಯಾಲಯ ನಿರಾಕರಣೆ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು ತಮ್ಮ ಮೂಲ ಸ್ಥಳಕ್ಕೆ ಹೋಗಲು ಅರ್ಜಿ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಅರ್ಜಿಯನ್ನು ಹುಬ್ಬಳ್ಳಿಯ ಎರಡನೇ ಜೆಎಂಎಫ್‍ಸಿ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.ಫೆಬ್ರವರಿ 15 ರಂದು ಕೆಎಲ್‍ಇ ಕಾಲೇಜಿನಲ್ಲಿ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ವಿದ್ಯಾರ್ಥಿಗಳ ಜಾಮೀನಿಗೆ ಸಂಬಂಧಿಸಿದಂತೆ ಬೆಂಗಳೂರಿನ ವಕೀಲರ ತಂಡ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಿತ್ತು. ಈ ವೇಳೆ …

Read More »

ವಾಯವ್ಯ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗದಿಂದ ಎಸಿ ಬಸ್ ಸಂಚಾರ ಆರಂಭ

ಹುಬ್ಬಳ್ಳಿ: ಲಾಕ್‍ಡೌನ್ ಪರಿಣಾಮ ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಳಿಸಲಾಗಿದ್ದ ಎಸಿ ಬಸ್‍ಗಳ ಸಂಚಾರವನ್ನು ಸರ್ಕಾರದ ಅನುಮತಿ ಮೇರೆಗೆ ಸೋಮವಾರದಿಂದ ಪುನರಾರಂಭಿಸಲಾಗುತ್ತಿದೆ. ಮೊದಲ ಹಂತದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರು ಮತ್ತು ಮೈಸೂರಿನ ನಡುವೆ ಎಸಿ ಸ್ಲೀಪರ್ ಮತ್ತು ವೋಲ್ವೋ ಬಸ್‍ಗಳ ಸಂಚಾರ ಆರಂಭಿಸಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ತಿಳಿಸಿದ್ದಾರೆ. ಬಸ್ ಹೊರಡುವ ಸಮಯದ ವಿವರ: ಹುಬ್ಬಳ್ಳಿಯಿಂದ ಬೆಂಗಳೂರಿಗೆ ವೋಲ್ವೊ ಬಸ್ ಮಧ್ಯಾಹ್ನ 3 ಗಂಟೆಗೆ ಮತ್ತು ರಾತ್ರಿ 10.30ಕ್ಕೆ ಹೊರಡುತ್ತದೆ. ಎಸಿ …

Read More »

ಪೊಲೀಸ್ ಠಾಣೆ ಎದುರಲ್ಲೇ ಇರುವ ಶ್ವಾನವೊಂದು, ಕೊರೊನಾ ಸೊಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದ ಕೊರೊನಾ ವಾರಿಯರ್ ಗೆ ಸ್ವಾಗತ ಮಾಡಿಕೊಂಡಿದೆ.

ಧಾರವಾಡ: ಯಾವತ್ತೂ ಧಾರವಾಡದ ಪೊಲೀಸ್ ಠಾಣೆ ಎದುರಲ್ಲೇ ಇರುವ ಶ್ವಾನವೊಂದು, ಕೊರೊನಾ ಸೊಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದ ಕೊರೊನಾ ವಾರಿಯರ್ ಗೆ ಸ್ವಾಗತ ಮಾಡಿಕೊಂಡಿದೆ. ಕಳೆದ 15 ದಿನಗಳ ಹಿಂದೆ ನಗರದ ಶಹರ ಪೊಲೀಸ್ ಠಾಣೆಯ ಮಹಿಳಾ ಮುಖ್ಯ ಪೇದೆಗೆ ಕೊರೊನಾ ಸೊಂಕು ತಗುಲಿತ್ತು. ಗುಣಮುಖರಾಗಿ ಇವತ್ತು ಮುಖ್ಯ ಪೇದೆ ಕರ್ತವ್ಯಕ್ಕೆ ಹಾಜರಾಗಲು ಠಾಣೆಗೆ ಬಂದಾಗ ಎಸಿಪಿ ಅನುಷಾ ಮುಖ್ಯ ಪೇದೆಯನ್ನು ಸ್ವಾಗತಿಸಿಕೊಂಡರು. ಇದೇ ವೇಳೆ ಸ್ಥಳದಲ್ಲಿದ್ದ ಈ …

Read More »