Breaking News

ಹುಬ್ಬಳ್ಳಿ

ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ : “ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ನೀವು ಸಿಎಂ ಆಗಲಿ ಎಂದು ಸ್ವಾಮೀಜಿಗಳು ಆಶೀರ್ವಾದ ಮಾಡಿದ್ದಾರೆ ಎಂದು ಕೇಳಿದ ಪ್ರಶ್ನೆಗೆ “ಧರ್ಮಗುರುಗಳು ಆಶೀರ್ವಾದ ಮಾಡುವಾಗ ನಾವು ಏನು ಹೇಳಲು ಸಾಧ್ಯ? ಅದು ಅವರ ಇಚ್ಛೆ. ಏನೇ ಇದ್ದರೂ ನಮ್ಮ ಪಕ್ಷವಷ್ಟೇ. ಪಕ್ಷ ಮುಖ್ಯ. ಪಕ್ಷ ಏನು …

Read More »

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಆದೇಶ: ಆಕ್ಷೇಪಣೆಗೆ ಕಾಲಾವಕಾಶ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿದ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಧಾರವಾಡ ಮಹಾನಗರ ಪಾಲಿಕೆ ರಚಿಸಿ ಸರ್ಕಾರಿ ರಾಜ್ಯ ಪತ್ರದಲ್ಲಿ ಮಂಗಳವಾರ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಆಕ್ಷೇಪಣೆ/ಸಲಹೆಗೆ 30 ದಿನಗಳ ಕಾಲಾವಕಾಶ ಕೂಡ ನೀಡಿದೆ. ಹುಬ್ಬಳ್ಳಿ – ಧಾರವಾಡ ಅವಳಿನಗರದ ಜನಸಂಖ್ಯೆ, ಜನಸಾಂದ್ರತೆ, ತೆರಿಗೆ, ತೆರಿಗೇತರ ಸಂಪನ್ಮೂಲ, ವಾರ್ಷಿಕ ತಲಾ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಶೇಕಡಾವಾರು, ಉದ್ಯೋಗ ಪ್ರಮಾಣವನ್ನು ಪರಿಗಣಿಸಿ ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಪದನಾಮೀಕರಣಗೊಳಿಸಲಾಗಿದೆ. ಹುಬ್ಬಳ್ಳಿ – …

Read More »

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಯಾಗಿದೆ. ದಶಕಗಳ ಬೇಡಿಕೆಯ ನಂತರ ಕರ್ನಾಟಕ ಸರ್ಕಾರ ಇಂದು ಅಧಿಕೃತ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ.

ಧಾರವಾಡ, ಜನವರಿ 21: ಹುಬ್ಬಳ್ಳಿ- ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಇತ್ತೀಚೆಗೆ ಸಚಿವ ಸಂಪುಟ ಸಭೆ ನಿರ್ಧಾರ ಮಾಡಿತ್ತು. ಇದೀಗ ಇಂದಿನಿಂದ ಅಧಿಕೃತವಾಗಿ  ಧಾರವಾಡ ಮಹಾನಗರ ಪಾಲಿಕೆ ಎಂದು ಕರ್ನಾಟಕ ಸರ್ಕಾರದಿಂದ ಅಧಿಕೃತ ಗೆಜೆಟ್ ನೋಟಿಫಿಕೇಶನ್​ ಹೊರಡಿಸಲಾಗಿದೆ. ಆ ಮೂಲಕ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಆಗಬೇಕು ಅನ್ನೋದು ದಶಕಗಳ ಬೇಡಿಕೆ ಕೊನೆಗೂ ಈಡೇರಿದೆ.ಹುಬ್ಬಳ್ಳಿ-ಧಾರವಾಡ ಮಹಾನಗರ ಬೇರ್ಪಡಿಸುವ ನಿರ್ಧಾರ ಯಾರೂ ತೆಗೆದುಕೊಂಡಿರಲೇ‌ ಇಲ್ಲ. ಕೊನೆಗೂ ಸಚಿವ ಸಂಪುಟ ಸಭೆಯಲ್ಲಿ …

Read More »

ಧಾರವಾಡ ಕೇಂದ್ರೀಯ ಬಸ್ ‌ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಗುರುತು ಪತ್ತೆಯಾಗಿಲ್ಲ. ಈ ಘಟನೆ ಸಿಸಿಟಿವಿಯಲ್ಲಿ ಸೆರೆ

ಧಾರವಾಡ : ಧಾರವಾಡ ಕೇಂದ್ರೀಯ ಬಸ್ ‌ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಗುರುತು ಪತ್ತೆಯಾಗಿಲ್ಲ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲು ಪೊಲೀಸರು ಪಾದಚಾರಿ ಮೇಲೆ ಬಸ್ ‌ಹರಿದಿದೆ ಎಂದು ತಿಳಿದಿದ್ದರು. ಆದರೆ, ಸಿಸಿಟಿವಿ ಪರಿಶೀಲನೆ ಬಳಿಕ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ. ಧಾರವಾಡ ಉಪನಗರ ಠಾಣೆಗೆ ಕೇಸ್ ವರ್ಗಾವಣೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಹಳಿಗೆ ಬಿದ್ದು, ಯುವಕ ಆತ್ಮಹತ್ಯೆ …

Read More »

ಧಾರವಾಡ ಕೇಂದ್ರೀಯ ಬಸ್​ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಧಾರವಾಡ : ಧಾರವಾಡ ಕೇಂದ್ರೀಯ ಬಸ್ ‌ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಗುರುತು ಪತ್ತೆಯಾಗಿಲ್ಲ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲು ಪೊಲೀಸರು ಪಾದಚಾರಿ ಮೇಲೆ ಬಸ್ ‌ಹರಿದಿದೆ ಎಂದು ತಿಳಿದಿದ್ದರು. ಆದರೆ, ಸಿಸಿಟಿವಿ ಪರಿಶೀಲನೆ ಬಳಿಕ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ. ಧಾರವಾಡ ಉಪನಗರ ಠಾಣೆಗೆ ಕೇಸ್ ವರ್ಗಾವಣೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಹಳಿಗೆ ಬಿದ್ದು, ಯುವಕ ಆತ್ಮಹತ್ಯೆ …

Read More »

ಬ್ಯಾಂಕ್​ ಅಧಿಕಾರಿಗಳ ಜೊತೆ ಹು-ಧಾ ಪೊಲೀಸ್​ ಕಮಿಷನರ್​ ಸಭೆ

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮತ್ತು ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ವಿವಿಧ ಬ್ಯಾಂಕ್​​ ಮತ್ತು ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಜೊತೆ ನಗರ ಪೊಲೀಸ್​ ಕಮಿಷನರ್​ ಎನ್​. ಶಶಿಕುಮಾರ್​ ಇಂದು ನಗರದ ಬಿವಿಬಿ ಕಾಲೇಜಿನಲ್ಲಿ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿ ಪೊಲೀಸ್​ ಕಮಿಷನರ್​ ಎನ್​. ಶಶಿಕುಮಾರ್, “ಬ್ಯಾಂಕ್​​ ಮತ್ತು ಹಣಕಾಸು ಸಂಸ್ಥೆಗಳ ಜೊತೆ ಎರಡು ಗಂಟೆ ಸುರಕ್ಷತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಮಾಲೋಚನಾ ಸಭೆ ನಡೆಸಲಾಯಿತು. ಸಭೆಯಲ್ಲಿ …

Read More »

ಧಾರವಾಡ ಶಹರ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ,

– ಧಾರವಾಡ ಶಹರ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ, ಓರ್ವ ಚಾಲಾಕಿ ಕಳ್ಳ ಅಂದರ್…. ಬಂಧಿತನಿಂದ 6ಲಕ್ಷ 45 ಸಾವಿರ ಮೌಲ್ಯದ ಚಿನ್ನಾಭರಣ ಜಪ್ತಿ… ಧಾರವಾಡ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಧಾರವಾಡ ಕವಲಗೇರಿ ರಸ್ತೆಯ ರಾಹುಲ್ ಗಾಂಧಿ‌ನಗರದಲ್ಲಿನ ಮನೆ ಕಳ್ಳತನ ಪ್ರಲರಣಕ್ಲೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವೈ- ಗದಗ ಮೂಲದ ಸುನೀಲ ಮುಳಗುಂದ ಬಂಧಿತ ಚಾಲಾಕಿ ಕಳ್ಳನಾಗಿದ್ದಾನೆ. ಕಳೆದ 2024 ಡಿಸೆಂಬರ 8 …

Read More »

ಬಿಜೆಪಿಯು ದ್ವೇಷ ಹಾಗೂ ಹಿಂಸೆಯ ರಾಜಕಾರಣ‌ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ದೂರಿದರು.

ಹುಬ್ಬಳ್ಳಿ: “ಬೆಳಗಾವಿಯಲ್ಲಿ ನಡೆಸುತ್ತಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ಬಿಜೆಪಿಯು ಕಾಂಗ್ರೆಸ್ ನಾಯಕರನ್ನು ಹೆದರಿಸುತ್ತಿದೆ” ಎಂದು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮುಡಾ ಹಗರಣದಲ್ಲಿ 300 ಕೋಟಿ ಆಸ್ತಿ ಜಪ್ತಿ ಮಾಡಿರುವುದಾಗಿ ಇ.ಡಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಮೂಲಕ ಬಿಜೆಪಿ ದ್ವೇಷ ಹಾಗೂ ಹಿಂಸೆಯ ರಾಜಕಾರಣ‌ ಮಾಡುತ್ತಿದೆ. ಕಾಂಗ್ರೆಸ್​ನ ಪ್ರಭಾವಿ …

Read More »

ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸ ಮಾಡುತ್ತೇವೆ : ಡಿ ಕೆ ಶಿ

ಹುಬ್ಬಳ್ಳಿ: ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ ಎನ್ನುವ ಮೂಲಕ ಬೆಳಗಾವಿಯಿಂದಲೇ ಕಾಂಗ್ರೆಸ್ ಪತನ ಎನ್ನುವ ಬಿಜೆಪಿ ಹೇಳಿಕೆಗೆ ಡಿಸಿಎಂ ಡಿ‌. ಕೆ ಶಿವಕುಮಾರ್ ತಿರುಗೇಟು ನೀಡಿದರು. ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗನಲ್ಲಿ ಜೈ ಬಾಪೂ, ಜೈ ಭೀಮ, ಜೈ ಸಂವಿಧಾನ ಕಾರ್ಯಕ್ರಮ ಜ. 21 ರಂದು ನಡೆಯಲಿದೆ. ಈ ಹಿನ್ನೆಲೆ ಜ. 18 ರಂದು ಪೂರ್ವಭಾವಿ …

Read More »

ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ:

ಹುಬ್ಬಳ್ಳಿ: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು ಈ ಕೆಳಗಿನಂತಿವೆ.. ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ: ರೈಲು ಸಂಖ್ಯೆ 07379 – …

Read More »