Breaking News

ಹುಬ್ಬಳ್ಳಿ

ಮುಡಾ ಹಗರಣ ‘CBI’ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಜ.27ಕ್ಕೆ ಮುಂದೂಡಿಕೆ

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ.27ಕ್ಕೆ ಮುಂದೂಡಿದೆ. ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತಕುಮಾರ ಮಾತನಾಡಿ, “ಮುಡಾ ಹಗರಣ ಸಂಬಂಧ ಎರಡ್ಮೂರು ಬಾರಿ ವಿಚಾರಣೆ ಬೆಂಗಳೂರನಲ್ಲಿ ನಡೆದಿತ್ತು. ಮುಡಾ ಹಗರಣ ಸಂಬಂಧ ಲೋಕಾಯುಕ್ತದಲ್ಲಿ ಎಫ್‌ಐಆರ್ ಆಗಿದೆ. ಆ ತನಿಖೆ ಪ್ರಮಾಣಿಕವಾಗಿ ಆಗಬೇಕೆಂದು ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದೆವು. ಲೋಕಾಯುಕ್ತ ರಾಜ್ಯ ಸರ್ಕಾರದ ಕೈ …

Read More »

45 ರೌಡಿಶೀಟರ್​ಗಳ ಗಡಿಪಾರು ಮಾಡಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ

ಹುಬ್ಬಳ್ಳಿ: ಅವಳಿ- ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 45 ಮಂದಿ ರೌಡಿಶೀಟರ್‌ಗಳಿಗೆ ಗಡಿಪಾರು ಮಾಡಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೌಡಿಶೀಟರ್‌ಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೊಲೆ, ಸುಲಿಗೆ, ಮಾದಕ ವಸ್ತು ಮಾರಾಟ ಹಾಗೂ ಸೇವನೆ, ಮಟ್ಕಾ, ಭೂ ಮಾಫಿಯಾ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್​ಗಳಿಂದ …

Read More »

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮಾಜ ವಿಧ್ರೋಹಿಗಳಿಗೆ ಶಕ್ತಿ ಬಂದಂತಾಗಿದೆ: ಜೋಶಿ‌ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮಾಜ ವಿಧ್ರೋಹಿಗಳಿಗೆ ಶಕ್ತಿ ಬಂದಂತಾಗಿದೆ. ಅಧಿಕಾರಕ್ಕೆ ಬಂದಾಗೆಲ್ಲ ಪಿಎಫ್​ಐ, ಎಸ್​ಡಿಪಿಐ ಮೇಲಿನ ಕೇಸ್​ಗಳನ್ನ ಹಿಂಪಡೆದ ಹಿನ್ನೆಲೆ ಕೆಲವರಿಗೆ ಶಕ್ತಿ ಬಂದಿದೆ. ಹೀಗಾಗಿ ಹಸು ಕೆಚ್ಚಲು ಕೊಯ್ಯುವ ಮಟ್ಟಕ್ಕೆ ಬಂದಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ‌ಜೋಶಿ‌ ರಾಜ್ಯ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದರು. ನಗರದಲ್ಲಿಂದು ‌ಮಾತನಾಡಿದ‌ ಅವರು, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕ್ರಿಮಿನಲ್​ಗಳಿಗೆ ಧೈರ್ಯ ಬಂದಿದೆ. ಏನಾದರೂ ಆದ್ರೆ ರಕ್ಷಿಸಿಸುತ್ತಾರೆ ಅನ್ನೋ ಧೈರ್ಯ ಹುಟ್ಟಿಕೊಂಡಿದೆ. …

Read More »

ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,

ಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ ಉದ್ಯೋಗಿಗಳಿಗೆ ಜನವರಿ 26ರವರೆಗೆ ರಜೆ ಘೋಷಣೆ ಮಾಡಲಾಗಿದೆ.   ಕಳೆದ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಬೋನಿಗೆ ಬೀಳದೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಕ್ಯಾಮೆರಾದಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಆದರೆ ಕಾರ್ಯಾಚರಣೆ ವೇಳೆ ಇನ್ನೂ ಪತ್ತೆಯಾಗದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.   …

Read More »

ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಒಪ್ಪದ ವ್ಯಕ್ತಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ : ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಒಪ್ಪದಿದ್ದಾಗ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸೋನಿಯಾಗಾಂಧಿ ನಗರದ ನಿವಾಸಿಯಾದ ಕುಮಾರ್ ಬೆಟಗೇರಿ (57) ಎಂಬಾತ ಮೃತ ವ್ಯಕ್ತಿಯಾದ್ರೆ, ದೇವಾಂಗಪೇಟೆ ನಿವಾಸಿಯಾದ ಗೌಸ್ ಮೊಹಮ್ಮದ್ ನದಾಫ್ (40) ಎಂಬಾತ ಬಂಧಿತ ಆರೋಪಿ. ಗೌಸ್ ಮೊಹಮ್ಮದ್ ಡಿ. 22 ರಂದು ಸುಳ್ಳ ರೋಡ್ ಇಂದ್ರಪ್ರಸ್ಥ ಲೇಔಟ್​ನಲ್ಲಿ ಕುಮಾರ್ ಬೆಟಗೇರಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದು, ಈ ಕುರಿತು …

Read More »

ಹುಬ್ಬಳ್ಳಿಯಲ್ಲಿ ಡ್ರಗ್ ಪೆಡ್ಲರ್​ಗಳ ಪರೇಡ್

ಹುಬ್ಬಳ್ಳಿ: “ಹೊಸವರ್ಷ ಆಚರಣೆ ವೇಳೆ ಅಕ್ರಮ ಚಟುವಟಿಕೆಗಳು ಹೆಚ್ಚಾಗಿರುತ್ತವೆ. ಬೇರೆ ಬೇರೆ ಊರುಗಳಿಂದ ಹುಬ್ಬಳ್ಳಿಗೆ ಬರುವವರ ಸಂಖ್ಯೆ ಕೂಡ ಹೆಚ್ಚಾಗಿರುತ್ತೆ. ಈ ಸಂದರ್ಭದಲ್ಲಿ ಅಪರಾಧ ಕೃತ್ಯಗಳು ನಡೆಯುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ಮಾದಕ ವಸ್ತುಗಳ ಪೆಡ್ಲರ್ ಪರೇಡ್ ನಡೆಸಲಾಗಿದೆ” ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದರು. ನಗರದ ಹಳೇ ಸಿಎಆರ್ ಮೈದಾನದಲ್ಲಿ ಡ್ರಗ್​ ಪೆಡ್ಲರ್ ಪರೇಡ್ ನಡೆಸಿ ಪೆಡ್ಲರ್ಸ್​ಗೆ ಖಡಕ್​ ವಾರ್ನಿಂಗ್​ ಕೊಟ್ಟ ಪೊಲೀಸ್ ಕಮಿಷನರ್ …

Read More »

ಹುಬ್ಬಳ್ಳಿ ಗ್ಯಾಸ್​ ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೇ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು

ಹುಬ್ಬಳ್ಳಿ: ಇಲ್ಲಿನ ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡ‌ರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ(58) ಹಾಗೂ ಸಂಜಯ ಸವದತ್ತಿ (20) ಎಂಬ ಇಬ್ಬರು ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದರು. ಬಳಿಕ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ರಾಜು ಮೂಗೇರಿ (21) ಕೂಡ …

Read More »

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ತಡೆ ಮಾಸಾಚಾರಣೆ…. ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ತಿಳುವಳಿಕೆ ನೀಡಿದ ಪೊಲೀಸರು ಅಧಿಕಾರಿಗಳು.

ಧಾರವಾಡ ಉಪನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚಾರಣೆಯನ್ನು ಆಚರಣೆ ಮಾಡಲಾಯಿತು. ಕಾಲೇಜು ವಿದ್ಯಾರ್ಥಿಗಳಿಗೆ ಅಪರಾಧಗಳ ಸೇರಿ ಕಾನೂನು ಕುರಿತು ಪೊಲೀಸ್ ಅಧಿಕಾರಿಗಳು ತಿಳಿವಳಿಕೆ ನೀಡಿದರು. ಉಪನಗರ ಪೊಲೀಸ ಠಾಣೆ ವ್ಯಾಪಿಯ ನಗರದ ಮದೀನಾ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮ ನಡೆದಿದ್ದು, ಎಸಿಪಿ ಪ್ರಶಾಂತ ಸಿದ್ಧಗೌಡರವರು ವಿದ್ಯಾರ್ಥಿಗಳಿಗೆ ಅಪರಾಧ ಸೇರಿ ಕಾನೂನುಗಳ ಕುರಿತು ತಿಳುವಳಿಕೆ ನೀಡುವ ಮೂಲಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಕರೆ ನೀಡಿದರು. ಅಲ್ಲದೆ ಇದೇ …

Read More »

ಪಂಚಮಸಾಲಿ ಮೀಸಲಾತಿಗೆ ಕಾನೂನಲ್ಲಿ ಅವಕಾಶವಿಲ್ಲ;ಸಾದ್ ಅಬ್ಬಯ್ಯ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಮತ್ತು ಕೊಳೆಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲವೆಂದು ಅಚ್ಚರಿಯ ಮಾತನ್ನಾಡಿದರು. ಮೀಸಲಾತಿ ಕೇಳುವುದು ಕಾನೂನುಬಾಹಿರ ಯಾಕೆಂದರೆ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಅದರ ಪ್ರತಿನಿಧಿಗಳೇ ಸುಪ್ರೀಮ್ ಕೋರ್ಟ್ ಗೆ ಅಫಿಡವಿಟ್ ಒಂದನ್ನು ಸಲ್ಲಿಸಿ ಪಂಚಮಸಾಲಿಗಳಿಗೆ ಮೀಸಲಾತಿ ನೀಡಲು ಅವಕಾಶವಿಲ್ಲ ಎಂದು ಹೇಳಿದ್ದರು, ಈಗ ಸುಮ್ಮನೆ ತೋರಿಕೆಗೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅವರು …

Read More »

ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ: ಬೆಲ್ಲದ

ಹುಬ್ಬಳ್ಳಿ, ಡಿಸೆಂಬರ್​​ 14: ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಮುಸ್ಲಿಮರೆಂದರೆ ಪ್ರೀತಿ. ಅವರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡುತ್ತಾರೆ ಎಂದು ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ ಇವರು ಮುತ್ತು ಕೊಡುತ್ತಾರೆ, ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರಿಗೆ ಮುತ್ತು ಕೊಡುತ್ತಾರೆ, ಕುಕ್ಕರ್ ಬಾಂಬ್ ಇಟ್ಟವರಿಗೂ ಮುತ್ತು ಕೊಡುತ್ತಾರೆ. ಆದರೆ ಶಾಂತ ರೀತಿಯಿಂದ ಹೋರಾಟ ಮಾಡಿದ ನಮ್ಮ …

Read More »