ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿಯ ಸೃಷ್ಟಿ. ನಮ್ಮ ಸರ್ಕಾರವು ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಗುರುವಾರ (ನ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ …
Read More »ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್
ಹುಬ್ಬಳ್ಳಿ: ಸಂಸತ್ತಿನ ಜಂಟಿ ಸಂಸದೀಯ ಸಮಿತಿ ರಚನೆಯಾಗಿರುವುದು ವಕ್ಫ್ ತಿದ್ದುಪಡಿ ಮಸೂದೆ ಕುರಿತು. ಆದರೆ ಇವರು ವಿಜಯಪುರಕ್ಕೆ ಬರುತ್ತಿರುವುದು ಅನಧಿಕೃತ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿತಿ ರಚನೆ ಮಾಡುವ ಅಧಿಕಾರ ಕೇಂದ್ರ ಸರಕಾರಕ್ಕಿದೆ. ಆದರೆ ಜೆಪಿಸಿ ರಚಿಸಿರುವುದು ತಿದ್ದುಪಡಿ ಮಸೂದೆಗಾಗಿ ವಿನಃ ಇಲ್ಲಿ ವಕ್ಫ್ ಆಸ್ತಿ ವಿಚಾರವಾಗಿ ಅಲ್ಲ. ಇದರಲ್ಲಿ ಯಾವುದೇ ಗೊಂದಲ ಇರಲಿಲ್ಲ. ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ. ಇದಕ್ಕೆ …
Read More »ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
ಹುಬ್ಬಳ್ಳಿ: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಮುಖ್ಯ ಪೇದೆಯೊಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಕೇಶ್ವಾಪುರ ಠಾಣೆ ವ್ಯಾಪ್ತಿಯ ಶಬರಿ ನಗರದ ಎಂ.ಎ. ಖಾದಿರನವರ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈತನು ರವಿವಾರ ಮಧ್ಯಾಹ್ನ 9 ವರ್ಷದ ಬಾಲಕಿ ಪುಸಲಾಯಿಸಿ ಮನೆಗೆ ಕರೆಯಿಸಿ ಅನುಚಿತ ವರ್ತನೆ ತೋರಿದ್ದಾನೆ. ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಆಗಿರುವ ಈತನು ಮೂರು ಮಕ್ಕಳ ತಂದೆಯಾಗಿದ್ದರೂ ಇಂತಹ …
Read More »ರಾಷ್ಟ್ರಕ್ಕೆ ಅನ್ನ ನೀಡುವ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲು ಸಂಚು:ಮುನೇನಕೊಪ್ಪ
ಹುಬ್ಬಳ್ಳಿ: ತುಷ್ಟೀಕರಣ ನೀತಿ ಮುಂದುವರಿದರೆ ಮತ್ತೊಂದು ರೈತರ ದಂಗೆ ನಡೆಯುವ ಸಾಧ್ಯೆತೆಯಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನವಲಗುಂದದ ರೈತರು ತಮ್ಮ ಜಮೀನು, ಮನೆ ಮತ್ತು ಖಾಲಿ ಆಸ್ತಿ ಸಂಬಂಧ ಅಧಿಕೃತ ದಾಖಲೆಗಳನ್ನು ಪಡೆಯುವಂತೆ ಅವರು ಒತ್ತಾಯಿಸಿದರು. ರಾಷ್ಟ್ರಕ್ಕೆ ಅನ್ನ ನೀಡುವ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲು ಸಂಚು ಮಾಡುತ್ತಿದ್ದಾರೆ. ಸರಕಾರದ ಸುಗ್ರೀವಾಜ್ಞೆ ವಿರುದ್ಧ ನವಲಗುಂದದ ರೈತರು ಈ ಹಿಂದೆ ನಡೆಸಿದ …
Read More »ನರಕ ಚತುರ್ದಶಿ; ಲಕ್ಷ್ಮಿ ಪೂಜೆ ಸಂಭ್ರಮ
ಹುಬ್ಬಳ್ಳಿ: ನಗರದೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ಗುರುವಾರ ನಗರದ ವಿವಿಧೆಡೆ ನರಕ ಚತುರ್ದಶಿ ಹಾಗೂ ಲಕ್ಷ್ಮಿ ಪೂಜೆಯನ್ನು ಸಂಭ್ರಮದಿಂದ ನೆರವೇರಿಸಲಾಯಿತು. ಹಬ್ಬದ ಪ್ರಯುಕ್ತ ಬೆಳಿಗ್ಗೆಯೇ ಮನೆ ಎದುರು ಶುಚಿಗೊಳಿಸಿ ರಂಗೋಲಿ ಹಾಕಿ, ಬಾಗಿಲಿಗೆ ತಳಿರು ತೋರಣ ಕಟ್ಟಿದ್ದರು. ಸಂಜೆ ಮನೆ ಮುಂದೆ, ತುಳಸಿಕಟ್ಟೆ ಎದುರು ದೀಪ ಹಚ್ಚಿ ಜನರು ಸಂಭ್ರಮಿಸಿದರು. ಲಕ್ಷ್ಮಿ ಪೂಜೆ ಅಂಗವಾಗಿ ಕೆಲವು ವ್ಯಾಪಾರಿಗಳು ಅಂಗಡಿಗಳನ್ನು ಬಗೆಬಗೆಯ ವಿದ್ಯುತ್ ದೀಪಗಳಿಂದ ಅಲಂಕರಿಸಿ, ಸಂಜೆ ವೇಳೆಗೆ ಪೂಜೆ …
Read More »ದೀಪಾವಳಿಗೆ ಆಕಾಶಬುಟ್ಟಿ ಹೊಳಪು
ಧಾರವಾಡ: ‘ಬೆಳಕಿನ ಹಬ್ಬ’ ದೀಪಾವಳಿಗೆ ಕಣ್ಣು ಕೋರೈಸುವ `ದೇಸಿ ಆಕಾಶಬುಟ್ಟಿ’ಗಳು ಮತ್ತು ತರಹೇವಾರಿ `ಮಣ್ಣಿನ ಹಣತೆ’ಗಳು ನಗರದ ಮಾರುಕಟ್ಟೆಗೆ ಬಂದಿದ್ದು, ಗ್ರಾಹಕರಿಗೆ ಹಬ್ಬದ ಸಂಭ್ರಮವನ್ನು ಹೆಚ್ಚಿಸಿವೆ. ಬಟ್ಟೆ, ಕಟ್ಟಿಗೆ, ಮಿಂಚಿನ ಹಾಳೆ, ಉಲನ್ ದಾರದಿಂದ ತಯಾರಿಸಿದ ವಿಭಿನ್ನ ಶೈಲಿಯ ಆಕಾಶಬುಟ್ಟಿಗಳನ್ನು ನೋಡುಗರ ಗಮನ ಸೆಳೆಯುತ್ತಿವೆ. ಸ್ಟಾರ್, ಗಣಪ, ಲಕ್ಷ್ಮೀ ಬಣ್ಣದ ಬಟ್ಟೆಗಳು ಸೇರಿದಂತೆ 50ಕ್ಕೂ ಹೆಚ್ಚು ವಿವಿಧ ಬಗೆಯ ಆಕಾಶಬುಟ್ಟಿಗಳು ಮಾರುಕಟ್ಟೆಯಲ್ಲಿ ಸಿಗುತ್ತಿವೆ. ಪ್ರತಿ ವರ್ಷ ಚೀನಾದ ಆಕಾಶಬುಟ್ಟಿಗಳು ಮಾರುಕಟ್ಟೆಗೆ …
Read More »‘ಹಸಿರು’ ದೀಪಾವಳಿಗೆ ಇರಲಿ ಆದ್ಯತೆ
ಹುಬ್ಬಳ್ಳಿ: ದೀಪಾವಳಿ ಹಬ್ಬವೆಂದರೆ ಎಲ್ಲೆಡೆ ಸಡಗರ. ಹಬ್ಬದಲ್ಲಿ ದೀಪಗಳಿಗೆ ಎಷ್ಟು ಮಹತ್ವ ಇದೆಯೋ ಅಷ್ಟೇ ಮಹತ್ವವನ್ನು ಜನರು ಪಟಾಕಿಗಳಿಗೂ ನೀಡುತ್ತಾರೆ. ಪಟಾಕಿಗಳೆಂದರೆ ಮಕ್ಕಳಿಂದ ಹಿಡಿದು ಎಲ್ಲರಿಗೂ ಅಚ್ಚುಮೆಚ್ಚು. ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ, ಅ.31ರಿಂದ ನ.2ರವರೆಗೆ ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿಗಳನ್ನು ಹಾರಿಸಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನೂ ನೀಡಿದೆ. ಪಟಾಕಿ ಹಚ್ಚಿದಾಗ ಬರುವ ಶಬ್ದ, ವಿವಿಧ ಬಣ್ಣ, …
Read More »ಪಹಣಿಯಲ್ಲಿ ವಕ್ಫ್ ಹೆಸರು: ನ.5ರಂದು ತಹಶೀಲ್ದಾರ್ ಬಳಿ ಹಾಜರಾಗಲು ರೈತರಿಗೆ ಸೂಚನೆ
ಧಾರವಾಡ: ತಾಲ್ಲೂಕಿನ ಉಪ್ಪಿನಬೆಟಗೇರಿಯ ಕೆಲವು ರೈತರ ಪಹಣಿಯಲ್ಲಿ ‘ಜಮೀನು ವಕ್ಫ್ ಆಸ್ತಿಗೆ ಒಳಪಟ್ಟಿರುತ್ತದೆ’ ಎಂದು ನಮೂದಾಗಿರುವ ಕುರಿತು ಚರ್ಚಿಸಲು ನವೆಂಬರ್ 5ರಂದು ತಹಶೀಲ್ದಾರ್ ಕಚೇರಿಗೆ ಹಾಜರಾಗುವಂತೆ ರೈತರಿಗೆ ಮೌಖಿಕವಾಗಿ ತಿಳಿಸಲಾಗಿದೆ. ಗ್ರಾಮ ಆಡಳಿತಾಧಿಕಾರಿ (ವಿಎ) ಚೈತನ್ಯ ಮಳಿಯೆ ಅವರು ಮಂಗಳವಾರ ರೈತರ ಮನೆಗಳಿಗೆ ತೆರಳಿ ಮಾಹಿತಿ ನೀಡಿದ್ದಾರೆ. ಜಮೀನಿನ ದಾಖಲೆಗಳೊಂದಿಗೆ ತಹಶೀಲ್ದಾರ್ ಕಚೇರಿಗೆ ಹಾಜರಾಗಲು ತಿಳಿಸಿದ್ಧಾರೆ. ‘ನಮ್ಮದು ಪಿತ್ರಾರ್ಜಿತ ಆಸ್ತಿ. ನಮ್ಮ ಜಮೀನಿನ ಪಹಣಿಯಲ್ಲಿ ‘ವಕ್ಫ್’ ಎಂದು ಯಾಕೆ ನಮೂದಾಗಿದೆ …
Read More »ವಕ್ಫ್ ಕಾನೂನು ತೆಗೆದು ಹಾಕುವುದೇ ಸೂಕ್ತ: ಸಚಿವ ಜೋಶಿ
ಧಾರವಾಡ: ಭಾರತದಲ್ಲಿ ವಕ್ಫ್ ಕಾನೂನು ಮಾಡಿದ್ದೇ ತಪ್ಪು. ಮೊದಲಿದನ್ನು ತೆಗೆದು ಹಾಕುವುದೇ ಸೂಕ್ತ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರು ಕಾಲದಲ್ಲಿ ಕಾಂಗ್ರೆಸ್ ಅದೇಕೆ ವಕ್ಪ್ ಕಾನೂನು ಮಾಡಿತೋ ಗೊತ್ತಿಲ್ಲ. ಆದರೆ, 2013ರಲ್ಲಿ ವಕ್ಫ್ ಗೆ ಮತ್ತೆ ಅಪರಿಮಿತ ಅಧಿಕಾರ ಕೊಟ್ಟಿದ್ದೇಕೆ? ದೇಶದಲ್ಲಿ ವಕ್ಫ್ ಕಾನೂನು ಮಾಡಿದ್ದೇ ಮೊದಲ ತಪ್ಪು. ಅಂತದ್ದರಲ್ಲಿ ಸುಪ್ರೀಂಕೋರ್ಟ್ ಸಹ ಪ್ರಶ್ನಿಸದಂತಹ …
Read More »ಶಿಗ್ಗಾವಿ ಬೈ ಎಲೆಕ್ಷನ್ : ನಾಳೆ ಅಜ್ಜಂಪೀರ್ ಖಾದ್ರಿ ಸ್ವಇಚ್ಛೆಯಿಂದ ನಾಮಪತ್ರ ಹಿಂಪಡೆಯುತ್ತಾರೆ : ಸಚಿವ ಜಮೀರ್ ಅಹ್ಮದ್
ಹುಬ್ಬಳ್ಳಿ : ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲವೆಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದ್ದು ಈ ಹಿನ್ನಲೆಯಲ್ಲಿ ನಾಳೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ …
Read More »
Laxmi News 24×7