Breaking News
Home / ಹುಬ್ಬಳ್ಳಿ (page 2)

ಹುಬ್ಬಳ್ಳಿ

ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ್ಯು. ನಾಲ್ವರಿಗೆ ಗಾಯ

ಧಾರವಾಡ : ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಕಲ್ಲೆ ನಡೆದಿದೆ. ಮಹಾದೇವಿ ವಗೆಣ್ಣವರ (30) ಎಂಬ ಮಹಿಳೆಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿ. ಉಳಿದಂತೆ ಸುರೇಶ ವಗೆಣ್ಣವರ, ಶ್ರೀಧರ ವಗೆಣ್ಣವರ, ಚಿನ್ನಪ್ಪ ವಗೆಣ್ಣವರ ಹಾಗೂ ಗಂಗವ್ವ ವಗೆಣ್ಣವರ ಎಂಬುವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗ್ಯಾಸ್ ಲಿಕೇಜ್ ಆಗಿತ್ತು. ಏಕಾಏಕಿ ಸ್ಪಾರ್ಕ್ ಆಗಿ ಸಿಲಿಂಡ‌ರ್ ಸ್ಫೋಟಗೊಂಡಿದೆ. ಇದರಿಂದ ಮನೆ ತುಂಬ …

Read More »

ಮೋದಿಗೆ ಬೈಯಲು ಹೈಕಮಾಂಡ್ ಆರ್ಡರ್ ಆಗಿದೆ”: ಸಂತೋಷ್ ಲಾಡ್ ಹೇಳಿದ್ದಾಗಿ ಪ್ರಲ್ಹಾದ್ ಜೋಶಿ ಹೇಳಿಕೆ

ಹುಬ್ಬಳ್ಳಿ, ಮಾ.19: ಪ್ರಧಾನಿನರೇಂದ್ರ ಮೋದಿ(Narendra Modi) ಹಾಗೂ ತಮ್ಮ ವಿರುದ್ಧ ನಿತಂತರವಾಗಿ ಟೀಕಿಸುತ್ತಿರುವ ಸಚಿವ ಸಂತೋಷ್ ಲಾಡ್ (Santosh Lad) ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟಾಂಗ್ ಕೊಟ್ಟಿರುವ ವಿಡಿಯೋ ವೈರಲ್ (Viral Video) ಆಗುತ್ತಿದೆ. ಮೋದಿ ಅವರಿಗೆ ಯಾಕೆ ಬೈಯುತ್ತಿದ್ದೀಯಾ ಎಂದು ಕೇಳಿದಾಗ, ಸಚಿವ ಸ್ಥಾನ ಉಳಿಸಿಕೊಳ್ಳಲು ಬೈಯುತ್ತಿದ್ದೇವೆ ಎಂದು ಸಂತೋಷ್ ಲಾಡ್ ಹೇಳಿದ್ದಾಗಿ ಜೋಶಿ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಲ್ಹಾದ್ ಜೋಶಿ, ವಿಮಾನದಲ್ಲಿ ನಾನು ಮತ್ತು ಸಂತೋಷ್ ಲಾಡ್ ಒಟ್ಟಿಗೆ …

Read More »

ವಿಶ್ವ ಚಾಂಪಿಯನ್‌ಶಿಪ್‌ಗೆ ವಿರೂಪಾಕ್ಷಗೌಡ ಪಾಟೀಲ ಅರ್ಹತೆ

ಹುಬ್ಬಳ್ಳಿ: ಇಲ್ಲಿನ ಅಕ್ಕಿಹೊಂಡದ ತಂಬದ ಓಣಿ ನಿವಾಸಿ ವಿರೂಪಾಕ್ಷಗೌಡ ಪಾಟೀಲ ಅವರು 44ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2024ರ 80 ವರ್ಷ ಮೇಲ್ಪಟ್ಟವರ 800 ಮೀಟರ್‌ ಹಾಗೂ 1,500 ಮೀಟರ್‌ ಓಟದಲ್ಲಿ ತಲಾ ಒಂದು ಬೆಳ್ಳಿ ಪದಕ ಜಯಿಸಿದ್ದಾರೆ.   ಈ ಮೂಲಕ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ. ಫೆಬ್ರುವರಿ 13ರಿಂದ 17ರವರೆಗೆ ಪುಣೆಯಲ್ಲಿ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಡೆದಿತ್ತು ಎಂದು ಪ್ರಕಟಣೆ ತಿಳಿಸಿದೆ.

Read More »

ಹುಬ್ಬಳ್ಳಿ: ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ

ಹುಬ್ಬಳ್ಳಿ: ಹೋಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಇರುವ ಕಾರಣ ಇಲ್ಲಿನ ಎಸ್‌ಎಸ್‌ಎಸ್ ರೈಲು ನಿಲ್ದಾಣದಿಂದ ಅಹಮದಾಬಾದ್ ನಿಲ್ದಾಣದ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ (07311/ 07312) ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾರ್ಚ್ 24ರಂದು 07311 ಸಂಖ್ಯೆಯ ರೈಲು ಹುಬ್ಬಳ್ಳಿ ನಿಲ್ದಾಣದಿಂದ ಸಂಜೆ 7.30ಕ್ಕೆ ಹೊರಟು, ಮರುದಿನ ಸಂಜೆ 7.20ಕ್ಕೆ ಅಹಮದಾಬಾದ್ ನಿಲ್ದಾಣ ತಲುಪಲಿದೆ.   ಮಾರ್ಚ್ 25ರಂದು 07312 ಸಂಖ್ಯೆಯ ರೈಲು ಅಹಮದಾಬಾದ್ ನಿಲ್ದಾಣದಿಂದ ರಾತ್ರಿ …

Read More »

ಬೆಳಗಾವಿಯಿಂದ ಸ್ಪರ್ಧೆ ಖಚಿತ: ಅಧಿಕೃತ ಘೋಷಣೆಯಷ್ಟೇ ಬಾಕಿ- ಶೆಟ್ಟರ್‌?

ಹುಬ್ಬಳ್ಳಿ: ‘ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಭೇಟಿಯಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದೇನೆ. ಟಿಕೆಟ್‌ ನನಗೆ ನೀಡಲು ತೀರ್ಮಾನವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ’ ಎಂದು ಜಗದೀಶ ಶೆಟ್ಟರ್‌ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬೆಳಗಾವಿಯಿಂದ ಸ್ಪರ್ಧಿಸುವಂತೆ ವರಿಷ್ಠರು ಸೂಚಿಸಿದ್ದರು. ಇದಲ್ಲದೇ, ಬೆಳಗಾವಿ ನಾಯಕರ ಜೊತೆ ಚರ್ಚಿಸಿದ ನಂತರ ಸ್ಪರ್ಧಿಸಲು …

Read More »

ಸಮುದ್ರದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ: ಖರ್ಗೆ

ಹುಬ್ಬಳ್ಳಿ, ಫೆಬ್ರವರಿ 27: ಪ್ರಧಾನಿ ನರೇಂದ್ರ ಮೋದಿ (Narendra Modi)ಸಮುದ್ರದ ಆಳದಲ್ಲಿ ನವಿಲುಗರಿ ನೆಟ್ಟರೆ ಚಿಗುರುತ್ತಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಮಜುನ ಖರ್ಗೆ (Mallikarjun Kharge) ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ (Jagadish Shettar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ. ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ. ಇಡೀ ದೇಶ ಆರಾಧನೆ ಮಾಡುವ ಪವಿತ್ರ ಸ್ಥಳಗಳನ್ನು ಅಭಿವೃದ್ಧಿ ಮಾಡುತ್ತಿದ್ದಾರೆ …

Read More »

ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಹಿಂದೂಗಳ ಮೇಲೆ ಹಲ್ಲೆ ಹೆಚ್ಚುತ್ತಿದೆ: ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಯಾವ ರಾಜ್ಯದಲ್ಲಿ ಅಧಿಕಾರದಲ್ಲಿ ಇರುತ್ತದೆಯೋ ಅಲ್ಲೆಲ್ಲಾ ಹಿಂದೂಗಳ ಮೇಲೆ, ಯಾತ್ರಾರ್ಥಿಗಳ ಮೇಲೆ ಹಲ್ಲೆ, ಬೆದರಿಕೆ ಪ್ರಕರಣಗಳು ನಡೆಯುತ್ತವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು. ಹೊಸಪೇಟೆಯಲ್ಲಿ ಅಯೋಧ್ಯೆಯ ಯಾತ್ರಿಗಳಿಗೆ ಬೆದರಿಕೆ ಹಾಕಿದ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಹೀಗಾಗುತ್ತದೆ ಎಂದರು. ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಅಂತಹವರು ತುಷ್ಟೀಕರಣಕ್ಕಾಗಿ, ಮತ ಬ್ಯಾಂಕ್‌ ಗಾಗಿ ಉತ್ತೇಜನ ಕೊಡುತ್ತಾರೆ. ಬೆದರಿಕೆ ಹಾಕಿದವರನ್ನು …

Read More »

ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಸಿಂಪತಿ ಇತ್ತು: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಪ್ರಕರಣದ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಮೊದಲಿನಿಂದಲೂ ಅನುಕಂಪ(Sympathy) ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ.   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ …

Read More »

ಅಳಿಯ ಅನಾಥ.. ಲಕ್ಷ್ಮೀ ಹೆಬ್ಬಾಳ್ಕರ್‌ ವರಸೆ.. ಟಿಕೆಟ್‌ಗೆ ಶಕ್ತಿ ಪ್ರದೇಶ

ಹುಬ್ಬಳ್ಳಿ(Hubli) ಬಳಿಯ ಗಿರಣಿ ಚಾಳ್ ಮೈದಾನದಲ್ಲಿ ರಜತ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಜತ ಸಂಭ್ರಮದ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಅಳಿಯ ರಜತ್(Rajath) ಉಳ್ಳಾಗಡ್ಡಿ ಮಠ ಶಕ್ತಿ ಪ್ರದರ್ಶನ ಮಾಡಿದ್ರು. ಹತ್ತಾರು ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ್ರು. ಮಹಿಳಾ(Women) ಮತ್ತು ಮಕ್ಕಳ(Child) ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ರಜತ್ ಉಳ್ಳಾಗಡ್ಡಿ ಮಠ ನನ್ನ ಅಳಿಯ ಅನ್ನೋ ಕಾರಣಕ್ಕೆ ರಾಜಕಾರಣದಲ್ಲಿ ಬಂದಿಲ್ಲ. ನನ್ನ ಮಗಳನ್ನು …

Read More »

ಕಿಮ್ಸ್‌ ಪಕ್ಕದ ಚರಂಡಿಯಲ್ಲಿ ಶವ ಪತ್ತೆ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್‌ ಆಸ್ಪತ್ರೆಯ ಹಾಸ್ಟೆಲ್‌ ಆವರಣ ಗೋಡೆಗೆ ಹೊಂದಿಕೊಂಡ ಚರಂಡಿಯಲ್ಲಿ ಅಪರಿಚಿತ ಶವವೊಂದು ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ಚರಂಡಿ ಸ್ವಚ್ಛತೆ ಕೈಗೊಂಡಿದ್ದ ಸಂದರ್ಭದಲ್ಲಿ ಶವದ ಅಸ್ಥಿಪಂಜರ ಮತ್ತು ತಲೆಬುರುಡೆ ಸಿಕ್ಕಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಹಲವು ತಿಂಗಳುಗಳ ಹಿಂದೆಯೇ ದೇಹ ಚರಂಡಿಗೆ ಬಿದ್ದಿರಬಹುದು ಎನ್ನುವ ಅನುಮಾನವಿದ್ದು, ಇದು ಕೊಲೆಯೋ ಅಥವಾ ಸಹಜ ಸಾವಾಗಿದೆಯೋ …

Read More »