Breaking News

ಹುಬ್ಬಳ್ಳಿ

ಶತಮಾನ ಕಂಡ ಶಾಲೆ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು

ಹುಬ್ಬಳ್ಳಿ: ಇಲ್ಲಿನ ಗಿರಣಿಚಾಳದಲ್ಲಿರುವ ಶತಮಾನ ಕಂಡ ಶಾಲೆ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ ಘಟನೆ ನಡೆದಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿರುವ ಕೃತ್ಯವಾಗಿದ್ದು, ಜಾಗ ಕಬಳಿಸುವ ಹುನ್ನಾರವಾಗಿದೆ ಎಂದು ಸ್ಥಳೀಯರು ಪ್ರತಿಭಟನೆ ನಡೆಸಿದರು. ಸುಮಾರು 135 ವರ್ಷಗಳ ಇತಿಹಾಸವುಳ್ಳ ಶಾಲೆಯಾಗಿದ್ದು, ಹಳೆ ಕಟ್ಟಡವನ್ನು ಕೆಡವಿದ್ದಾರೆ. ತಡರಾತ್ರಿ ಕಿಡಿಗೇಡಿಗಳು ಕಟ್ಟಡ ಕೆಡವಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಕೆಡವಿರುವ ಕಟ್ಟಡದಲ್ಲಿ 4 ಮತ್ತು 5ನೇ ವರ್ಗದ ತರಗತಿಗಳು ನಡೆಯುತ್ತಿದ್ದವು. ಬಾಗಿಲು ಹಾಗೂ ಗೋಡೆ ಭಾಗ ಕೆಡವಿದ್ದು, …

Read More »

ಸ್ಥಾನಕ್ಕೆ ಕುತ್ತು ಬಂದಿದ್ದರಿಂದ ಜಾತಿಯ ಲೇಪನ: ಜೋಶಿ ಟೀಕೆ

ಹುಬ್ಬಳ್ಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸ್ಥಾನ ಹೋಗುತ್ತದೆ ಎಂಬುದು ಗೊತ್ತಾದ ನಂತರ ಅದಕ್ಕೆ ಜಾತಿಯ ಲೇಪನ ಮಾಡುತ್ತಿದ್ಧಾರೆ’ ಎಂದು ಕೇಂದ್ರ ನಾಗರಿಕ ಸರಬರಾಜು ಮತ್ತು ಆಹಾರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ನಾಯಕನನ್ನು ತೆಗೆದು ಬೇರೆಯವರನ್ನು ಸಿ.ಎಂ ಮಾಡುವಂತೆ ನಾವು ಹೇಳಿಲ್ಲ. ಸಿದ್ದರಾಮಯ್ಯ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ರಾಜೀನಾಮೆ ಕೊಡಬೇಕು ಎಂಬುದಷ್ಟೇ ನಮ್ಮ ಆಗ್ರಹ. ಹಿಂದುಳಿದ ವರ್ಗದ ಎಸ್.ಬಂಗಾರಪ್ಪ ಅವರನ್ನು …

Read More »

ಧಾರವಾಡ ಕೆಐಎಡಿಬಿ ಅಕ್ರಮ ಪ್ರಕರಣ; ಸಿಐಡಿ ತನಿಖೆ ಬೆನ್ನಲ್ಲೇ ಎಂಟ್ರಿ ಕೊಟ್ಟ ಇಡಿ

ಧಾರವಾಡ, : ಧಾರವಾಡ ಕೆಐಎಡಿಬಿ(KIADB) ಕಚೇರಿ ಅಂದರೆ ಅಲ್ಲಿ ಅಕ್ರಮಗಳದ್ದೇ ಪಾರುಪತ್ಯ. ಕಳೆದ ವರ್ಷ ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ವ್ಹಿ. ಡಿ. ಸಜ್ಜನ್ ತಮ್ಮ ನಿವೃತ್ತಿಯ ಕೊನೆಯ ದಿನವೇ 30 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ‌ಬಂದಿತ್ತು. ಅದಕ್ಕೂ ಮುನ್ನ 20 ಕೋಟಿ ರೂ. ಡಬಲ್ ಪೇಮೆಂಟ್ ಹಗರಣವೂ ನಡೆದು, ಅದರಲ್ಲಿ ಸಜ್ಜನ್ ಮೊದಲನೇ ಆರೋಪಿ ಆಗಿ, ಜೈಲು ಕೂಡ ಕಂಡು ಬಂದಿದ್ದರು. ಡಬಲ್ …

Read More »

ಕೊಳಲು ವಾದಕ ವೇಣುಗೋಪಾಲ ಹೆಗಡೆ ನಿಧನ

ಧಾರವಾಡ: ಇಲ್ಲಿನ ರಾಧಾಕೃಷ್ಣನಗರ‌ ನಿವಾಸಿ, ಕೊಳಲು ವಾದಕ ವೇಣುಗೋಪಾಲ ಎಸ್‌.ಹೆಗಡೆ (41) ಬುಧವಾರ ನಿಧನರಾದರು. ಅವರಿಗೆ ತಾಯಿ, ಪತ್ನಿ, ಪುತ್ರ ಇದ್ದಾರೆ. ನಿತ್ಯಾನಂದ ಹಳದಿಪುರ ಅವರ ಶಿಷ್ಯರಾಗಿದ್ದ ವೇಣುಗೋಪಾಲ ಅವರು, ಕೊಳಲು ವಾದನದಲ್ಲಿ ಸಾಧನೆ ಮಾಡಿದ್ದರು. ಆಕಾಶವಾಣಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಮುಂಬೈನ ಐಟಿಸಿ ಸಂಶೋಧನಾ ಅಕಾಡೆಮಿಯ ಪ್ರಶಸ್ತಿ ಸಹಿತ ಹಲವು ಪುರಸ್ಕಾರಗಳು ಅವರಿಗೆ ಸಂದಿವೆ.

Read More »

ಕುಡಿದು ವಾಹನ ಚಾಲನೆ: 3 ದಿನಗಳಲ್ಲಿ ₹9.60 ಲಕ್ಷ ದಂಡ ಸಂಗ್ರಹ!

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರದಲ್ಲಿ ಕುಡಿದು ವಾಹನ ಚಲಾಯಿಸಿದವರ ವಿರುದ್ಧ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಕಳೆದ ವಾರಾಂತ್ಯದ ಮೂರು ದಿನಗಳಲ್ಲಿ 96 ಪ್ರಕರಣಗಳನ್ನು ದಾಖಲಿಸಿಕೊಂಡು ₹9.60 ಲಕ್ಷ ದಂಡ ಸಂಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮೂರು ಮತ್ತು ಧಾರವಾಡದಲ್ಲಿ ಒಂದು ಸಂಚಾರ ಪೊಲೀಸ್‌ ಠಾಣೆಯಿದ್ದು, ಕಳೆದ ಶುಕ್ರವಾರ, ಶನಿವಾರ ಮತ್ತು ಭಾನುವಾರ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಕುಡಿದು ವಾಹನ ಚಲಾಯಿಸುವವರ ಪತ್ತೆಗೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದ್ದರು. ಉತ್ತರ ಸಂಚಾರ …

Read More »

ಖಾಲಿ ಹುದ್ದೆಗಳ ಭರ್ತಿಗೆ ಕ್ರಮವಹಿಸಿ: ಬಸವರಾಜ ಹೊರಟ್ಟಿ

ಧಾರವಾಡ: ‘ಸರ್ಕಾರಿ ನೌಕರರು ಇಂದು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ನೌಕರರ ಮೇಲಿನ ಒತ್ತಡ ಕಡಿಮೆ ಮಾಡಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದ ಗೌರಮ್ಮ ಹಿರೇಮಠ (ರಪಾಟಿ) ಕಲ್ಯಾಣ ಮಂಟಪದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ವತಿಯಿಂದ ಭಾನುವಾರ ಆಯೋಜಿಸಿದ್ದ 2023-24ನೇ ಸಾಲಿನ ಪ್ರತಿಭಾ ಪುರಸ್ಕಾರ, ಸದಸ್ಯರ ಸಾಮಾನ್ಯ ಸಭೆ ಮತ್ತು 7ನೇ ವೇತನ …

Read More »

ಟ್ರಾನ್ಸ್‌ಫಾರ್ಮರ್‌ ಅವ್ಯವಸ್ಥೆಗೆ ಬಳಲಿದ ರೈತ!

ಹುಬ್ಬಳ್ಳಿ: ಹೊಸದಾಗಿ ಕೃಷಿ ಪಂಪ್‌ಸೆಟ್‌ ಅಳವಡಿಸುವುದನ್ನು ಸ್ಥಗಿತಗೊಳಿಸಿರುವ ಸರ್ಕಾರ ಒಂದೆಡೆಯಾದರೆ, ಕೆಟ್ಟುಹೋಗಿರುವ ಹಳೆಯ ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಾಯಿಸಲು ಹೆಸ್ಕಾಂ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ರೈತರು ತೀವ್ರ ಕಷ್ಟ ಎದುರಿಸುತ್ತಿದ್ದಾರೆ. ಇದು ಕೇವಲ ರೈತರ ಜೀವನದ ಮೇಲಲ್ಲದೇ ಕೃಷಿ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುವ ಅಪಾಯ ತಂದೊಡ್ಡಿದೆ. ಕಳೆದ ವರ್ಷಕ್ಕಿಂತ ಮುಂಚೆ ಸರ್ಕಾರವೇ ರೈತರ ಜಮೀನುಗಳಲ್ಲಿ ನೀರಾವರಿ ಪಂಪ್‌ಸೆಟ್‌ ಅಳವಡಿಸುತ್ತಿತ್ತು. ಇದಕ್ಕಾಗಿ ಬೇಕಾದ ವಿದ್ಯುತ್‌ ತಂತಿ, ಕಂಬ, ಟ್ರಾನ್ಸ್‌ಫಾರ್ಮರ್‌ಗಳನ್ನು ಪೂರೈಸುತ್ತಿತ್ತು. 5-6 …

Read More »

ಚಂದ್ರಶೇಖರ್‌ ಗುರೂಜಿ ಹತ್ಯೆ ಆರೋಪಿ ಜಾಮೀನು ಅರ್ಜಿ ವಜಾ

ಹುಬ್ಬಳ್ಳಿ,ಆ.3- ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಆರೋಪಿಗೆ ಜಾಮೀನು ನೀಡಲು ಧಾರವಾಡ ಹೈಕೋರ್ಟ್‌ ನಿರಾಕರಿಸಿದೆ. ನ್ಯಾಯಮೂರ್ತಿ ಎಸ್‌‍.ರಾಚಯ್ಯ ಅವರಿದ್ದ ಏಕ ಸದಸ್ಯ ಪೀಠ ದುಮವಾಡ ಗ್ರಾಮದ ನಿವಾಸಿ ಆರೋಪಿ ಮಹಾಂತೇಶ ಶಿರೂರ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಇದೊಂದು ಪೂರ್ವ ನಿಯೋಜಿತ ಕೊಲೆಯಾಗಿದ್ದು, ಸಮಾಜದಲ್ಲಿ ಆತಂಕ ಸೃಷ್ಠಿಸಿದೆ.   ಅಷ್ಟೇ ಅಲ್ಲ ಗುರೂಜಿ ಕುಟುಂಬ ಸೇರಿದಂತೆ ಸಾಕ್ಷಿಗಳಿಗೆ ತೊಂದರೆಯಾಗುವ ಸಾದ್ಯತೆ ಇದೆ ಎಂದು ಕಾರಣ ನೀಡಿ …

Read More »

ಹೆಚ್ಚು ನೀರು ಬೇಡುವ ಬೆಳೆ: ರೈತ ಕುಟುಂಬಕ್ಕೆ ‘ಸುಗಂಧರಾಜ’ ಆಸರೆ

ಉಪ್ಪಿನಬೆಟಗೇರಿ: ಧಾರವಾಡ ತಾಲ್ಲೂಕಿನ ಕನಕೂರ, ಚಂದನಮಟ್ಟಿ ಹಾಗೂ ತಲವಾಯಿ ಗ್ರಾಮಗಳ ಬಳಿ ಸಾಗಿದರೆ ಸುಗಂಧರಾಜ ಹೂವಿನ ಘಮಲು ಹಿತಾನುಭವ ನೀಡುತ್ತದೆ. ಇಲ್ಲಿನ ರೈತರು ಸುಗಂಧರಾಜ ಹೂವು ಬೆಳೆಯುವ ಮೂಲಕ, ಜೀವನ ನಿರ್ವಹಣೆ ಮಾರ್ಗ ಕಂಡುಕೊಂಡಿದ್ದಾರೆ. ಹತ್ತು ವರ್ಷಗಳಿಂದ ಸುಗಂಧರಾಜ ಹೂವಿನ ಕೃಷಿ ನಡೆಸುತ್ತಿರುವ ರೈತರು, ಈ ಭಾಗದ ಪುಷ್ಪಕೃಷಿಗೆ ಹೊಸ ಆಯಾಮ ನೀಡಿದ್ದಾರೆ. ಜಮೀನಿನ ಫಲವತ್ತತೆ ಕಾಪಾಡಲು ಸಗಣಿ ಗೊಬ್ಬರ ಬಳಸುತ್ತಾರೆ. ಇದರಿಂದ ಬೆಳೆ ಸಮೃದ್ಧವಾಗಿ, ಗಿಡದ ತುಂಬ ಹೂವು …

Read More »

ಜೈಲಲ್ಲಿರುವ ನಟ ದರ್ಶನ್ ಕೈ ಸೇರಲಿದೆ ‘ಹುಬ್ಬಳ್ಳಿ ಸಿದ್ಧಾರೂಢ ಮಠದ ಕೃತಿ’

ಹುಬ್ಬಳ್ಳಿ, ಆಗಸ್ಟ್ 01: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪದಲ್ಲಿ ನಟ ದರ್ಶನ್ ಬೆಂಗಳೂರು ಸೆಂಟ್ರಲ್ ಜೈಲು ಸೇರಿದ್ದಾರೆ. ನಟ ದರ್ಶನ್ ಹುಬ್ಬಳ್ಳಿಗೆ ಹೋದಾಗ ಅಲ್ಲಿನ ಶ್ರೀ ಸಿದ್ಧರೂಢ ಮಠಕ್ಕೆ ಕೆಲವು ಭಾರಿ ಭೇಟಿ ನೀಡಿದ್ದರು. ಶ್ರೀಗಳ ಗದ್ದುಗೆಯ ಆಶೀರ್ವಾದ ಪಡೆಯುತ್ತಿದ್ದರು. ಇದೀಗ ಇದೇ ಮಠದ ಪ್ರಸಾದ ಮತ್ತು ಕೃತಿ ಕೋರಿಯರ್ ಮೂಲಕ ಜೈಲಿಗೆ ಕಳಹಿಸಲಾಗಿದೆ. ಹೌದು, ಕೊಲೆ ಆರೋಪಿಯಾಗಿ ಸುಮಾರು 50 ದಿನಗಳಿಂದ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿರುವ ನಟ …

Read More »