Breaking News
Home / ಹುಬ್ಬಳ್ಳಿ (page 40)

ಹುಬ್ಬಳ್ಳಿ

ರಾಜಕಾರಣದ ಸೋಂಕನ್ನು ಅಂಟಿಸಿಕೊಳ್ಳದ ಮಠಾಧೀಶ ಅಮ್ಮಿನಬಾವಿಯ ಶ್ರೀಶಾಂತಲಿಂಗ ಶಿವಾಚಾರ್ಯರು

ಧಾರವಾಡ : ತಮ್ಮ 89 ವರ್ಷಗಳ ಸುದೀರ್ಘ ಸನ್ಯಾಸದ ಬದುಕಿಗೆ ರಾಜಕಾರಣದ ಸೋಂಕನ್ನು ಅಂಟಿಸಿಕೊಳ್ಳದೇ ತಮ್ಮೊಳಗಿನ ತಪೋಬಲದಿಂದ ಸದಾಕಾಲವೂ ಭಕ್ತರ ಒಳಿತನ್ನೇ ಬಯಸಿರುವ ಅಮ್ಮಿನಬಾವಿಯ ಶ್ರೀಶಾಂತಲಿಂಗ ಶಿವಾಚಾರ್ಯರು ಓರ್ವ ಆದರ್ಶ ಮಠಾಧೀಶರೆನಿಸಿದ್ದಾರೆ ಎಂದು ಬೆಳಗಾವಿ ಜಿಲ್ಲೆ ಸವದತ್ತಿ ಮೂಲಿಮಠದ ಶ್ರೀಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಬಣ್ಣಿಸಿದರು. ಅವರು ತಾಲೂಕಿನ ಅಮ್ಮಿನಬಾವಿ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶ್ರೀಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳ 89ನೆಯ ವರ್ಧಂತಿ ಉತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಧರ್ಮ ಜಾಗೃತಿಗೆ ಮತ್ತು ಸಂಸ್ಕೃತಿ-ಸಂಸ್ಕಾರದ …

Read More »

ನೀವು ಸುಟ್ಟಿದ್ದು ಭಾವಚಿತ್ರವಲ್ಲ ಭಾರತ ಮಾತೆ‌ಯನ್ನು.. ಮುತಾಲಿಕ್​ ಆಕ್ರೋಶ

ಧಾರವಾಡ : ಧಾರವಾಡದಲ್ಲಿ ಸಾವರ್ಕರ್ ಫೋಟೋ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. ಸಾವರ್ಕರ್ ಭಾವಚಿತ್ರ ಸುಟ್ಟು ಹಾಕಿದ್ದು ಹೇಯ ಕೃತ್ಯ, ಇದು ದೇಶದ್ರೋಹಿ‌ ಕೃತ್ಯ. ನೀವು ಸುಟ್ಟಿದ್ದು ಭಾವಚಿತ್ರವಲ್ಲ, ಭಾರತ ಮಾತೆ‌ಯನ್ನು ಸುಡುತ್ತಿದ್ದೀರಿ ಎಂದು ಮುತಾಲಿಕ್​ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಮಾತನಾಡಿದ ಅವರು, ಸಾವರ್ಕರ್ ಅರ್ಧ ಜೀವನ ಜೈಲಿನಲ್ಲಿ ಕಳೆದವರು ನಿಮಗೆ ದೇಶಭಕ್ತಿ ಇಲ್ಲ. ನಿಮಗೆ ಸಿದ್ದರಾಮಯ್ಯ ಬೇಕು. ನಿಮ್ಮ ಉದ್ದೇಶ ಏನು? ಎಂದು …

Read More »

ಹುಬ್ಬಳ್ಳಿಯಲ್ಲಿ ಜೋರಾಯ್ತು ʻಸಾವರ್ಕರ್‌ ಕಿಚ್ಚುʼ : ಬಿಜೆಪಿ ಕಾರ್ಯಕರ್ತರಿಂದ ʻ ಎಂ.ಬಿ.ಪಾಟೀಲ್‌ ಕಾರಿಗೆ ಮುತ್ತಿಗೆ ʼ

ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತಷ್ಟು ಜೋರಾಯ್ತು ಸಾವರ್ಕರ್‌ ಕಿಚ್ಚು ಹೆಚ್ಚಾಗಿದ್ದು. ನಿನ್ನೆ ಕಾಂಗ್ರೆಸ್‌ ಕಾರ್ಯಕರ್ತರು ಸಾವರ್ಕರ್‌ ಫೋಟೋಗೆ ಬೆಂಕಿ ಹಾಕಿ ದಹನ ಮಾಡಿದ್ದಾರೆ. ಈ ಹಿನ್ನೆಲೆ ಇಂದು ಹುಬ್ಬಳ್ಳಿ ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ಎಂ.ಬಿ.ಪಾಟೀಲ್‌ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಹರಸಾಹಸ ಪಟ್ಟಿದ್ದಾರೆ. ಸಾವರ್ಕರ್‌ ಫೋಟೋ ಹಿಡಿದು ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದೆ.

Read More »

ಸಿದ್ದರಾಮಯ್ಯ ಏಲ್ಲಿ ಬೇಕಾದ್ರು ಹೋಗಲಿ, ಮೊಟ್ಟೆ ಎಸೆಯಬೇಡಿ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ, ಆಗಸ್ಟ್‌ 19: ಸಾವರ್ಕರ್ ಭಾವಚಿತ್ರ ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆ ಖಂಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿದ್ದೂ ಕೂಡ ಸರಿಯಲ್ಲ ಎಂದು ಹೇಳಿದ್ದಾರೆ.   ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ ಅವರು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ತಪ್ಪು. ಸಿದ್ದರಾಮಯ್ಯ ವಿಪಕ್ಷ ನಾಯಕರು. ಅವರು ಏಲ್ಲಿ ಬೇಕಾದರೂ ಹೋಗಬಹುದು. ಅವರ ಮೇಲೆ ಮೊಟ್ಟೆ ಎಸೆಯುವ ಕ್ರಮ …

Read More »

ಸ್ವಾತಂತ್ರ್ಯ ಹೋರಾಟ; ಬಾಪು ಕೈಯಲ್ಲಿ ಹೂಂಕರಿಸಿದ್ದ ಬೆತ್ತ ಕನ್ನಡ ನೆಲದ್ದು

ಹುಬ್ಬಳ್ಳಿ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಕೈಗೊಂಡ ದಂಡಿಯಾತ್ರೆ ತನ್ನದೇ ಮಹತ್ವ ಪಡೆದುಕೊಂಡಿದೆ. ಸಾಬರಮತಿಯಿಂದ ದಂಡಿವರೆಗೆ ಸುಮಾರು 390 ಕಿ.ಮೀ. ಯಾತ್ರೆಯಲ್ಲಿ ಗಾಂಧೀಜಿ ಬಳಸಿದ್ದ ದೊಡ್ಡದಾದ ಬೆತ್ತ ಕನ್ನಡದ ನೆಲದ್ದು. ಅದನ್ನು ನೀಡಿದ್ದು ಕರ್ನಾಟಕದ ಮೊದಲ ರಾಷ್ಟ್ರಕವಿ ಎಂಬ ಖ್ಯಾತಿಯ ಮಂಜೇಶ್ವರ ಗೋವಿಂದ ಪೈಗಳು ಎನ್ನುವುದು ವಿಶೇಷ.   ದಂಡಿಯಾತ್ರೆಯಲ್ಲಿ ದೇಶದ ಸಹಸ್ರಾರು ಜನರು ಗಾಂಧೀಜಿ ಅವರನ್ನು ಹಿಂಬಾಲಿಸಿದ್ದರು. ಉತ್ತರ ಕನ್ನಡ, ಕರಾವಳಿ ಪ್ರದೇಶ ಸೇರಿ ದೇಶದ ವಿವಿಧೆಡೆಗಳಲ್ಲಿ ಉಪ್ಪಿನ ಸತ್ಯಾಗ್ರಹ …

Read More »

ಬಿಜೆಪಿಯವರ ಹರ್ ಘರ್ ತಿರಂಗಾ ಸ್ಲೋಗನ್ ಡೋಂಗಿ ರಾಜಕೀಯ ಎಂದ ವ ಸಿದ್ದರಾಮಯ್ಯ

ಹುಬ್ಬಳ್ಳಿ : ಬಿಜೆಪಿಯವರ ಹರ್ ಘರ್ ತಿರಂಗಾ ಸ್ಲೋಗನ್ ಡೋಂಗಿ ರಾಜಕೀಯ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಷ್ಟ್ರಧ್ವಜ ವಿಚಾರದಲ್ಲಿ ಡೋಂಗಿ ರಾಜಕೀಯ ಇರಬಾರದು ಅಂತ ಹೇಳಿದ್ದೆ. ಹಿಂದೆ ಆರ್ ಎಸ್ ಎಸ್ ನ ಕೆಲವರು ರಾಷ್ಟ್ರಧ್ವಜ ಬೇಡ ಅಂದಿದ್ದವರು. ನಮ್ಮ ರಾಷ್ಟ್ರಧ್ವಜ, ಸಂವಿಧಾನ, ಪ್ರಜಾಪ್ರಭುತ್ವ ವಿರೋಧ ಮಾಡಿದ್ದರು. ಆರ್ ಎಸ್ ಎಸ್ ನವರು ನಾಗರಪುರದ ಕಚೇರಿಯ ಮೇಲೆ ಎಂದಾದರೂ ತ್ರಿವರ್ಣ ಧ್ವಜ …

Read More »

ಅಭಿನವ ಕಾಡಸಿದ್ದೇಶ್ವರ ಸ್ವಾಮಿಜಿ ಕಾರು ಅಪಘಾತ

ಬಾಗಲಕೋಟೆ: ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸ್ವಾಮೀಜಿ ಸೇರಿದಂತೆ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾ ಬಳಿ ಸ್ವಾಮೀಜಿ ಅವರ ಕಾರು ನೀಲಗಿರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಹಾಗೂ ಕಾರು ಚಾಲಕ ಸೇರಿದಂತೆ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣತಪ್ಪಿ ನೀಲಗಿರಿ ಮರಕ್ಕೆ ಡಿಕ್ಕಿ …

Read More »

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ 2ರ ಬಿಲ್​​ ಕಲೆಕ್ಟರ್ ವೆಂಕಟೇಶ ದಾಸರ್​ ಎಸಿಬಿ ಬಲೆಗೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubli-Dharwad Municipal Corporation ) ವಲಯ 2ರ ಬಿಲ್​​ ಕಲೆಕ್ಟರ್ ವೆಂಕಟೇಶ ದಾಸರ್​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಪಹಣಿ ನೀಡಲು ಬಾರ್ & ರೆಸ್ಟೋರೆಂಟ್ ಒಂದರಲ್ಲಿ ಗುರುರಾಜ ಗಾಳಿ ಎಂಬುವರಿಂದ 6,000 ರೂ. ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಎಸಿಬಿ ಡಿವೈಎಸ್​ಪಿ ಮಹಾಂತೇಶ್ವರ ಜಿದ್ದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವೆಂಕಟೇಶ ದಾಸರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು IPS​ ಅಧಿಕಾರಿಗಳ ವರ್ಗಾವಣೆ ಬೆಂಗಳೂರು: ಸರ್ಕಾರ ಇಬ್ಬರು IPS​ ಅಧಿಕಾರಿಗಳನ್ನು …

Read More »

ಹುಬ್ಬಳ್ಳಿಯ ಬಿವಿಬಿ ಕಾಲೇಜ್​ ಕ್ಯಾಂಪಸ್‌ನಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಕಾರು ಅಪಘಾತವಾಗಿದೆ.

ಹುಬ್ಬಳ್ಳಿ: ಹುಬ್ಬಳ್ಳಿಯ (Hubli) ಬಿವಿಬಿ (BVB) ಕಾಲೇಜ್​ ಕ್ಯಾಂಪಸ್‌ನಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ( Basavaraj Horatti ) ಅವರ ಕಾರು ಅಪಘಾತವಾಗಿದೆ. ಬೈಕ್ ಸವಾರ ಕೆಂಚಪ್ಪಗೆ ಗಂಭೀರ ಗಾಯವಾಗಿದ್ದು, ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಕೆಂಚಪ್ಪ ಸವದತ್ತಿ ‌ಮೂಲದ ಜೆಸಿಬಿ ಆಪರೇಟರ್ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯ ಬಿವಿಬಿ ಕಾಲೇಜ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮವೊಂದು …

Read More »

ಮತ್ತೆ ಸಿ ಎಂ ಬದಲಾವಣೆ ಚರ್ಚೆ ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿದ್ದೇನು?

ಹುಬ್ಬಳ್ಳಿ: ಸದ್ಯ ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ‌ ಇಲ್ಲ. ನನಗೆ ಪಕ್ಷದ ವರಿಷ್ಠರು ಕರೆ ಮಾಡಿ ಸಿಎಂ ಹುದ್ದೆ ಬಗ್ಗೆ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಈ ರೀತಿಯಾಗಿ ಗಾಳಿ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು. ಸಿದ್ದರಾಮೋತ್ಸವದಿಂದ ಬಿಜೆಪಿಗೆ ಏನು ಆಗಿಲ್ಲ. ಆದರೆ, ಆ ಕಾರ್ಯಕ್ರಮದಿಂದ ಕಾಂಗ್ರೆಸ್​​ಗೆ ಸೈಡ್ …

Read More »