Breaking News
Home / ಹುಬ್ಬಳ್ಳಿ (page 48)

ಹುಬ್ಬಳ್ಳಿ

ಮಸೀದಿಗಳಲ್ಲಿ ಧ್ವನಿವರ್ಧಕ: ಕಾನೂನು ಕೈಗೆತ್ತಿಕೊಳ್ಳಬಾರದು-ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ‘ಧ್ವನಿವರ್ಧಕಗಳಲ್ಲಿ ಶಬ್ದ ಎಷ್ಟಿರಬೇಕು ಎಂಬುದರ ಬಗ್ಗೆ ಪರೀಶಿಲಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ಹಾಗೂ ಹಿಂದೂಪರ ಸಂಘಟನೆಗಳು ನೀಡಿದ್ದ ಗಡುವು ಕುರಿತು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡುತ್ತದೆ. …

Read More »

ಕಮಲ ಕೋಟೆಯಲ್ಲಿ “ಕೈ’ ಕರಾಮತ್ತು

ಧಾರವಾಡ: ಏಳು ಸುತ್ತಿನ ಕೋಟೆ(ಏಳು ವಿಧಾನಸಭಾ ಕ್ಷೇತ್ರ) ಧಾರವಾಡ ಜಿಲ್ಲೆ 2008ರಿಂದ ಬಿಜೆಪಿ ಭದ್ರಕೋಟೆಯಾಗಿ ಮಾರ್ಪಾಟಾಗಿದ್ದರೂ ಕಾಂಗ್ರೆಸ್‌ 2013ರಲ್ಲಿ ಆರು ಸುತ್ತು ತನ್ನದಾಗಿಸಿಕೊಂಡು ಕೈಬಲ ತೋರಿಸಿತ್ತು. ಇದೀಗ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳನ್ನೂ ಗೆಲ್ಲಲೇಬೇಕೆನ್ನುವ ಲೆಕ್ಕಾಚಾರದಲ್ಲಿದೆ.   ಜೆಡಿಎಸ್‌ನಿಂದ ಜಿಲ್ಲೆಯಲ್ಲಿ ಖಾತೆ ತೆರೆದ ಕಟ್ಟಾಳು ಎನ್‌.ಎಚ್‌.ಕೋನರಡ್ಡಿ ಕೂಡ ಇದೀಗ ಕೈ ಹಿಡಿದಿದ್ದರಿಂದ ತೆನೆ ಹೊತ್ತ ಮಹಿಳೆಗೆ ಜಿಲ್ಲೆಯಲ್ಲಿ ಸಂಕಷ್ಟ ಎದುರಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಟಾನಿಕ್‌ ಆಗಿದ್ದ …

Read More »

ಹುಬ್ಬಳ್ಳಿ: ಮೊದಲ ಓಟದಲ್ಲಿಯೇ ಹಳಿತಪ್ಪಿದ ಪುಟಾಣಿ ರೈಲು

ಹುಬ್ಬಳ್ಳಿ: ಇಲ್ಲಿನ ಮಹಾತ್ಮಾಗಾಂಧಿ ಉದ್ಯಾನದಲ್ಲಿ ಶನಿವಾರ ಚಾಲನೆ ನೀಡಲಾದ ಪುಟಾಣಿ ರೈಲು ಮೊದಲ ಓಟದಲ್ಲಿಯೇ ಹಳಿತಪ್ಪಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಜಗದೀಶ ಶೆಟ್ಟರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಅನೇಕ ಗಣ್ಯರು ರೈಲಿನಲ್ಲಿ ಇದ್ದರು.   ಇಂದಿರಾ ಗಾಜಿನ ಮನೆ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಮುಕ್ತಾಯಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಜೋಶಿ ಚಾಲನೆ ನೀಡಿ, ಪುಟಾಣಿ ರೈಲಿನಲ್ಲಿ ಪ್ರಯಾಣಿಸಿದ್ದರು. ಐದು ಬೋಗಿಯಿರುವ ರೈಲಿನ ಮೊದಲ ಬೋಗಿಯಲ್ಲಿ …

Read More »

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಮೊಹಮ್ಮದ್ ಆರೀಫ್ ಪೊಲೀಸ್​ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಯಲ್ಲಿ ಚಿಕಿತ್ಸೆ

ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಆರೋಪಿ ಮೊಹಮ್ಮದ್ ಆರೀಫ್​​ ಪೊಲೀಸ್ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿರುವ ಈತ, ಟರ್ಪಂಟೈನ್​ ಕುಡಿದು ಸಾಯಲು ಪ್ರಯತ್ನಿಸಿದ್ದಾಗಿ ವರದಿಯಾಗಿದೆ. ತನ್ನ ಕಾಲಿಗೆ ಗಾಯವಾಗಿದೆ, ಹಾಗಾಗಿ ಟರ್ಪಂಟೈನ್​ ಕೊಡಿ ಎಂದು ಮೊಹಮ್ಮದ್ ಕೇಳಿದ್ದ. ಹಾಗಾಗಿ ಪೊಲೀಸರು ತಂದುಕೊಟ್ಟಿದ್ದರು. ಬಳಿಕ ಮೊಹಮ್ಮದ್ ಆರಿಪ್​ ಟರ್ಪಂಟೈನ್​​ನ್ನು ಕುಡಿದಿದ್ದಾನೆ. ಮೊಹಮ್ಮದ್​ ಆರಿಫ್​ ಜತೆಗಿದ್ದ ಇನ್ನೊಬ್ಬ ಆರೋಪಿ ಎಐಎಂಐಎಂ ಕಾರ್ಪೋರೇಟರ್ ನಜೀರ್ ಅಹಮದ್ ಹೊನ್ಯಾಳ ಕೂಡಲೇ ಆರಿಫ್​​ರನ್ನು ತಡೆದಿದ್ದಾನೆ. …

Read More »

ಕಷ್ಟಪಟ್ಟು ಓದಿ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದೇನೆ. ಸರ್ಕಾರ ಮುರುಪರೀಕ್ಷೆ ನಿರ್ಧಾರ ಮಾಡಿ ಬದುಕಿನ ಖುಷಿಯನ್ನೇ ಕೊಂದು ಹಾಕಿತು

ಹುಬ್ಬಳ್ಳಿ: ನನ್ನ ತಾಯಿಯ ₹1,500 ಪಿಂಚಣಿ ಹಣದಲ್ಲಿ ಕಷ್ಟಪಟ್ಟು ಓದಿ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದೇನೆ. ಸರ್ಕಾರ ಮುರುಪರೀಕ್ಷೆ ನಿರ್ಧಾರ ಮಾಡಿ ಬದುಕಿನ ಖುಷಿಯನ್ನೇ ಕೊಂದು ಹಾಕಿತು ಎಂದು 94ನೇ ರ್‍ಯಾಂಕ್‌ ಪಡೆದ ಚಿಕ್ಕೋಡಿಯ ಸಂತೋಷ್‌ ಕಾಂಬ್ಳೆ ಸೇನಾಪತಿ ನೋವು ತೋಡಿಕೊಂಡರು. ‘ಹುದ್ದೆಗೆ ಆಯ್ಕೆ ಮಾಡುವಂತೆ ನಾನು ಯಾರಿಗಾದರೂ ಹಣ ಕೊಟ್ಟಿದ್ದರೆ ಅದನ್ನು ವಾಪಸ್‌ ಕೊಡಲಿ; ಅದೇ ಹಣದಿಂದ ಊರಿನಲ್ಲಿಯೇ ಗ್ಯಾರೇಜ್‌ ಆರಂಭಿಸುತ್ತೇನೆ. ನಮ್ಮ ಕುಟುಂಬದ ಎಲ್ಲಾ ಆಸ್ತಿ ಮಾರಿದರೂ ₹3 …

Read More »

ಕುಡಿದು ಬಂದ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿ ಅಪ್ರಾಪ್ತ ಬಾಲಕ..!

ಧಾರವಾಡ : ಅಪ್ರಾಪ್ತ ಬಾಲಕನೊಬ್ಬ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪುಂಡಲೀಕ (43) ಎಂದು ಗುರುತಿಸಲಾಗಿದೆ. ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತಿದ್ದ ತಂದೆ ಯಿಂದ ರೋಸಿ ಹೋಗಿದ್ದ ಮಗ, ಕೊನೆಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಾಲಕ ಇನ್ನೂ 17 ವರ್ಷದವನಾಗಿದ್ದು, ತಂದೆಯ ಜೊತೆ ಕಳೆದ ನಾಲ್ಕು ದಿನಗಳ ಹಿಂದೆ ಕೂಡಾ ಜಗಳ ಮಾಡಿದ್ದ. ಆದರೂ ತಂದೆ ಕುಡಿದು …

Read More »

ಸ್ವಾವಲಂಬನೆ ಬದುಕು; ಆಘಾತಕ್ಕೆ ಸಿಲುಕಿದ್ದ ಬದುಕಿಗೆ ಆಧಾರವಾದ ರೊಟ್ಟಿ

ಹುಬ್ಬಳ್ಳಿ: ಇದ್ದದ್ದು ಎರಡೇ ಎಕರೆ ಜಮೀನು ಆದರೂ ನೆಮ್ಮದಿ-ತೃಪ್ತಿಯಿಂದ ಬದುಕುತ್ತಿದ್ದ ಆ ಕುಟುಂಬಕ್ಕೆ ಬರಸಿಡಲಿನ ಆಘಾತ ಬಂದೆರಗಿತ್ತು. ತಾನಾಯಿತು ತನ್ನ ಮನೆಯಾಯಿತು ಎಂದುಕೊಂಡಿದ್ದ ಮಹಿಳೆ ಆಧಾರಸ್ತಂಭ ಕಳೆದುಕೊಂಡು ಇಡೀ ಕುಟುಂಬಕ್ಕೆ ಆಧಾರವಾಗಿ ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಂಕಷ್ಟ ಸಂದರ್ಭದಲ್ಲಿ ತರಬೇತಿ ಪಡೆದಿದ್ದೇನೆ. ಇದ್ದರೆ ಮನೆಯಲ್ಲಿರಲಿ ಎಂದು ಪಡೆದಿದ್ದ ರೊಟ್ಟಿ ಯಂತ್ರವೇ ಇದೀಗ ಆ ಕುಟುಂಬಕ್ಕೆ ಪ್ರಮುಖ ಆಧಾರವಾಗಿದೆ. ರೊಟ್ಟಿ ತಟ್ಟುವ ಮೂಲಕವೇ ಆ ಮಹಿಳೆ ಇಡೀ ಕುಟುಂಬ ನಿರ್ವಹಣೆ ಮಾಡುವ …

Read More »

ಹುಬ್ಬಳ್ಳಿ ಗಲಭೆ ಕೇಸ್ : ಮತ್ತೆ 8 ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 154 ಕ್ಕೆ ಏರಿಕೆಯಾಗಿದೆ.   ಗಲಭೆ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಬಂಧಿಸಿರುವ ಆರೋಪಿಗಳ ನೀಡಿರುವ ಸುಳಿವಿನ ಮೇರೆಗೆ ತಲೆಮರೆಸಿಕೊಂಡಿದ್ದ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಕೈಗೊಂಡಿದ್ದಾರೆ.   ಪೊಲೀಸ್ ವಶದಲ್ಲಿದ್ದ ಗಲಭೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ವಸೀಂ ಪಠಾಣ್‍ನನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು …

Read More »

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಕಿಚ್ಚನ ಬೆನ್ನಿಗೆ ನಿಂತ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಈಗಾಗಲೇ ಬೆಂಬಲ ಸೂಚಿಸಿದ್ದಾರೆ. ಆದರೆ ಇದೀಗ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸುದೀಪ್ ಪರ ನಿಂತಿದ್ದಾರೆ. ಚಿತ್ರನಟ ಸುದೀಪ್ ಹೇಳಿರುವ ಮಾತು ಸರಿಯಿದೆ. ಮಾತೃಭಾಷೆ ವಿಚಾರದಲ್ಲಿ ನಮ್ಮ‌ ನಿಲುವು ಸ್ಪಷ್ಟವಾಗಿದೆ. ಭಾಷಾವಾರು ಪ್ರಾಂತ್ಯಗಳು ರಚನೆಯಾದಾಗಲೇ ನಿರ್ಧಾರವಾಗಿದೆ. ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ.‌ ಅದೇ ವಿಚಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಗೌರವಿಸಬೇಕು. …

Read More »

ಮಳಲಿ: ಇದು ತೇರುಗಳ ಊರು

ಹುಬ್ಬಳ್ಳಿ: ದೇವರ ಮೂರ್ತಿಗಳ ಆಕರ್ಷಕ ಕೆತ್ತನೆ, ತೇರುಗಳ ಮೇಲೆ ಬದುಕಿನ ಮೌಲ್ಯ ಸಾರುವ ಸಾಲುಗಳು, ಸುಂದರವಾದ ಕಲಾಕೃತಿ ಹಾಗೂ ದಿನಪೂರ್ತಿ ಕೆಲಸ. ಕುಂದಗೋಳ ತಾಲ್ಲೂಕಿನ ಮಳಲಿ ಗ್ರಾಮದ ಮುರಳೀಧರ ಮಾನಪ್ಪ ಬಡಿಗೇರ ಅವರ ಶೆಡ್‌ನಲ್ಲಿ ನಿತ್ಯ ಕಂಡು ಬರುವ ದೃಶ್ಯಗಳಿವು.   ಮುರಳೀಧರ ಅವರು 1991ರಿಂದ ತೇರುಗಳನ್ನು ಕೆತ್ತನೆ ಮಾಡುವ, ಅವುಗಳಿಗೆ ಚೆಂದದ ರೂಪ ಕೊಟ್ಟು ಆಕರ್ಷಕವಾಗಿ ಕಾಣುವಂತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ 100ಕ್ಕೂ ಹೆಚ್ಚು ತೇರುಗಳನ್ನು ರಾಜ್ಯದ ವಿವಿಧ …

Read More »