Breaking News

ಹುಬ್ಬಳ್ಳಿ

ಜೂನ್​ 26ರಂದು ಬೆಂಗಳೂರು- ಧಾರವಾಡ ವಂದೇ ಭಾರತ್‌ ರೈಲಿಗೆ ಪ್ರಧಾನಿ ಚಾಲನೆ

ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದ ಜನರ ಬಹುನಿರೀಕ್ಷಿತ ವಂದೇ ಭಾರತ್ ರೈಲು ಸಂಚಾರದ ಬಗ್ಗೆ ನೈಋತ್ಯ ರೈಲ್ವೆ ವಲಯದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಪ್ರತಿಷ್ಠಿತ ವಂದೇ ಭಾರತ್‌ ರೈಲು ಗುರುವಾರ ಬೆಂಗಳೂರು ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಬೆಂಗಳೂರು- ಧಾರವಾಡ ಮಾರ್ಗದಲ್ಲಿ ಸಂಚರಿಸಲು ಜೂನ್​​ 26ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡುವ ಮುನ್ನ ಸೋಮವಾರದಿಂದ ಪ್ರಾಯೋಗಿಕ ಚಾಲನೆ …

Read More »

ಹು-ಧಾ ಮಹಾನಗರ ಪಾಲಿಕೆ ಕೈ ವಶ ಮಾಡಿಕೊಳ್ಳಲು ಶೆಟ್ಟರ್ ಗೆ ಟಾಸ್ಕ್ ಕೊಟ್ಟ ಡಿ ಕೆ ಶಿವಕುಮಾರ್

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ಕಾವು ಈಗಾಗಲೇ ರಂಗೇರಿದೆ. ಕಮಲ ಪಾಳೆಯದಲ್ಲಿದ್ದ ಅಧಿಕಾರವನ್ನು ಕಾಂಗ್ರೆಸ್​ ವಶ ಮಾಡಿಕೊಳ್ಳಲು ಕಾಂಗ್ರೆಸ್ ಸರ್ಕಸ್ ನಡೆಸಿದ್ದು, ಮಾಜಿ ಸಿಎಂ ಜಗದೀಶ್​ ಶೆಟ್ಟರ್‌ ಅವರಿಗೆ ಉಪಮುಖ್ಯಂತ್ರಿ ಡಿ ಕೆ ಶಿವಕುಮಾರ್ ಟಾಸ್ಕ್ ನೀಡಿದ್ದಾರೆ ಎನ್ನುವ ಮಾತು ಕಾಂಗ್ರೆಸ್ ಆಂತರಿಕ ವಲಯದಲ್ಲಿ ಕೇಳಿ ಬರುತ್ತಿದೆ.   ಇದೇ ತಿಂಗಳ ಜೂನ್​ 20ರಂದು ನಡೆಯಲಿರುವ ಮಹಾನಗರ ಪಾಲಿಕೆಗೆ ಮೇಯರ್, ಉಪಮೇಯರ್ ಚುನಾವಣೆಗೆ ಕಾಂಗ್ರೆಸ್ ನಾಯಕರು …

Read More »

ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಹತ್ಯೆ

ಧಾರವಾಡ : ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹತ್ಯೆಗೀಡಾದ ಮಹಿಳೆ ರೂಪಾ ಸವದತ್ತಿ ಎಂದು ತಿಳಿದುಬಂದಿದೆ. ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ ರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅವರಿಗಾಗಿ ಮನೆಯವರು ಹುಡುಕಾಟ ನಡೆಸಿದ್ದರು. ಆದರೆ, ಇಂದು ಬೆಳಿಗ್ಗೆ ರೂಪಾ ಅವರ ಶವ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಯಾರು ಕೊಲೆ ಮಾಡಿದವರು ಹಾಗೂ ಏತಕ್ಕಾಗಿ ಕೊಲೆ …

Read More »

ಬಡ ವಿದ್ಯಾರ್ಥಿಯೊಬ್ಬನಿಗೆ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯ ಮಾಡಿದ ಕೆ ಎಲ್ ರಾಹುಲ್

ಹುಬ್ಬಳ್ಳಿ: ಭಾರತದ ಶ್ರೇಷ್ಠ ಕ್ರಿಕೆಟ್​ ಆಟಗಾರ ಕೆ ಎಲ್ ರಾಹುಲ್​ ಬಡ ವಿದ್ಯಾರ್ಥಿಯೊಬ್ಬನಿಗೆ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯ ಮಾಡಿ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಹಲಿಂಗಪುರದ ಅಮೃತ ಮಾವಿನಕಟ್ಟಿ ಎಂಬ ವಿದ್ಯಾರ್ಥಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಮರ್ಸ್​ ವಿಭಾಗದಲ್ಲಿ 600ಕ್ಕೆ 571 ಅಂಕಗಳನ್ನು ಪಡೆದು ಉತ್ತೀರ್ಣನಾಗಿದ್ದಾರೆ. ಬಡ ಕುಟುಂಬದಿಂದ ಬಂದಿರುವ ಈತ ಹೆಚ್ಚಿನ ವಿದ್ಯಾಭ್ಯಾಸ ನಡೆಸಲು ಆಸಕ್ತಿ ಹೊಂದಿದ್ದ. ಆದರೆ ಕುಟುಂಬದ ಆರ್ಥಿಕ ಪರಿಸ್ಥಿತಿ ಸರಿ ಇರದ ಕಾರಣ ಮುಂದಿನ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ …

Read More »

ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್‌ ವಿಸ್ತರಣೆಗೆ ₹ 273 ಕೋಟಿ ಬಿಡುಗಡೆ, ಶೀಘ್ರದಲ್ಲಿ ಅಭಿವೃದ್ಧಿ ಕಾರ್ಯ ಆರಂಭ: ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಸ್ಪಂದಿಸಿ ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್‌ ವಿಸ್ತರಣೆಗೆ ರೂ. 273 ಕೋಟಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಹುಬ್ಬಳ್ಳಿ-ಧಾರವಾಡ ರಾಜ್ಯದ 2ನೇ ಅತಿ ದೊಡ್ಡ ನಗರವಾಗಿದೆ. ಧಾರವಾಡದಲ್ಲಿ ಭಾರತೀಯ ತಾಂತ್ರಿಕ ಸಂಸ್ಥೆ (IIIT) …

Read More »

M.B.ಪಾಟೀಲ್‌ಗೆ ಪಿತ್ತ ನೆತ್ತಿಗೇರಿದೆ ಪ್ರಹ್ಲಾದ್‌ ಜೋಶಿ

ಧಾರವಾಡ : ಎಂಬಿ ಪಾಟೀಲ್‌ಗೆ ಪಿತ್ತ ನೆತ್ತಿಗೇರಿದೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಚಕ್ರವರ್ತಿ ಸೂಲಿಬೆಲೆ ಬಗ್ಗೆ ಸಚಿವ ಎಂಬಿ ಪಾಟೀಲ್ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕೇಂದ್ರದಲ್ಲಿ ನಮ್ಮ ಸರಕಾರವಿದ್ದರೂ ನಾವು ಸಂಯಮದಿಂದ ವರ್ತಿಸಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಟೀಕೆ-ಟಿಪ್ಪಣೆಗಳು ಸಹಜ. ಇವರು ಮಾಡುತ್ತಿರುವುದನ್ನು ನೋಡಿ ಹಿಟ್ಲರ್ ಸರ್ಕಾರ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. …

Read More »

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ತಾಂತ್ರಿಕ ಸ್ಪರ್ಶ: ಕ್ಷಣಾರ್ಧದಲ್ಲಿಯೇ ಆರೋಗ್ಯ ತಪಾಸಣೆ ವರದಿ ಆನ್​ಲೈನ್​ನಲ್ಲಿ ಲಭ್ಯ..

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆ ಉತ್ತರ ಕರ್ನಾಟಕದ ಅತೀ ದೊಡ್ಡ ಸರ್ಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.‌ ನಿತ್ಯ ಹತ್ತಕ್ಕೂ ಹೆಚ್ಚು ಜಿಲ್ಲೆಗಳ ಸಾವಿರಾರು ರೋಗಿಗಳು ಇಲ್ಲಿಗೆ ಬರುತ್ತಾರೆ. ಹೀಗೆ ಬರುವ ರೋಗಿಗಳು ಗಂಟೆಗಟ್ಟಲೆ ಕಾಯಲೇ ಬೇಕಾಗುತ್ತಿತ್ತು. ಆದರೆ ಇದೀಗ ಎಕ್ಸರೇ, ಸ್ಕ್ಯಾನಿಂಗ್ ಹಾಗೂ ರಕ್ತ ತಪಾಸಣೆ ರಿಪೋರ್ಟ್ ಅನ್ನು ಆನ್‌ಲೈನ್‌ನಲ್ಲೇ ನೀಡುವ ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿರುವ ವಿಚಾರವು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡ ಕಿಮ್ಸ್: ಕರ್ನಾಟಕ ವಿಜ್ಞಾನ ಮತ್ತು ವೈದ್ಯಕೀಯ …

Read More »

 ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಹೊಸ ತಿರುವು

ಹುಬ್ಬಳ್ಳಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿವಾಹಿತ ಮಹಿಳೆ ಜೊತೆ ಯುವಕ ಹೊಂದಿದ್ದ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ‌ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ ಮಲಗಿದ್ದ ನಿಂಗಪ್ಪ ನವಲೂರ (33) ಎಂಬ ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣ ಜಿಲ್ಲೆಯಲ್ಲಿ ಆತಂಕಕ್ಕೆ …

Read More »

ತಾಯಿ ಕೆಲಸಕ್ಕೆ ಹೋದಾಗ ಆತ್ಮಹತ್ಯೆ ಶರಣಾದ ಸಹೋದರಿಯರು

ಹುಬ್ಬಳ್ಳಿ : ನೇಣು ಬಿಗಿದುಕೊಂಡು ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಇಂದು ನಡೆದಿದೆ. ಕಾವೇರಿ ಹಡಪದ (17) ಮತ್ತು ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಾಯಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ಇವರು ವಾಸವಾಗಿದ್ದರು. ತಾಯಿ‌ ಕೆಲಸಕ್ಕೆಂದು ಹೊರಗಡೆ ಹೋದಾಗ ಸೀರೆಯಿಂದ ನೇಣು ಬಿಗಿದುಕೊಂಡು ಅಕ್ಕ ಮತ್ತು …

Read More »

ಗ್ಯಾರಂಟಿಗಳಲ್ಲಿ ಗೊಂದಲಗಳಿವೆ, ಕಾಂಗ್ರೆಸ್​ನವರು​ ಜನರಿಗೆ ಮೋಸ ಮಾಡಿದ್ದಾರೆ: ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ: ಒಡಿಶಾದ ರೈಲು ದುರಂತ ಎಲ್ಲರಿಗೂ ನೋವು, ದುಃಖವನ್ನು ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ರೈಲು ಅಪಘಾತ ನಡೆಯದಂತೆ ನೋಡಿಕೊಳ್ಳಲಾಗಿತ್ತು. ಆದರೆ ಈಗ ಬಹುದೊಡ್ಡ ದುರಂತ ಸಂಭವಿಸಿ, 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್​ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪರಿಹಾರ ಕಾರ್ಯಗಳು ಭರದಿಂದ ನಡೆಯುತ್ತಿವೆ ಎಂದು ತಿಳಿಸಿದರು. ಘಟನೆಯ …

Read More »