Breaking News

ಹುಬ್ಬಳ್ಳಿ

ಹುಲ್ಲು ತಿನ್ನಲು ಹೋಗಿ ಸೆಪ್ಟಿಕ್ ಟ್ಯಾಂಕನಲ್ಲಿ ಬಿದ್ದ ಎಮ್ಮೆ

ಹುಲ್ಲು ತಿನ್ನಲು ಹೋಗಿದ್ದ ಎಮ್ಮೆಯೊಂದು ಗೃಹ ಬಳಕೆ ಸೆಪ್ಟಿಕ್ ಟ್ಯಾಂಕನಲ್ಲಿ ಬಿದ್ದು ಕೆಲಕಾಲ ಒದ್ದಾಡಿದ ಘಟನೆ ಧಾರವಾಡದ ಯರಿಕೊಪ್ಪ ಗ್ರಾಮದಲ್ಲಿಂದು ನಡೆದಿದ್ದು, ಕೊನೆಗೆ ಅಗ್ನಿ ಶಾಮಕದಳದ ಸಿಬ್ಬಂದಿ ಎಮ್ಮೆಯನ್ನು ರಕ್ಷಣೆ ಮಾಡಿದ್ದಾರೆ. ಧಾರವಾಡ ತಾಲ್ಲೂಕಿನ ಯರಿಕೊಪ್ಪ ಗ್ರಾಮದ ಈ ದುರ್ಘಟನೆ ನಡೆದಿದೆ. ಗ್ರಾಮದ ನಿವಾಸಿ ಶಿವಪುತ್ರಪ್ಪಾ ಅಂಗಡಿಯವರು ಪ್ರತಿದಿನದಂತೆ ಇವತ್ತು ಕೂಡಾ ಹುಲ್ಲು ತಿನ್ನಲು ಎಮ್ಮೆಯನ್ನು ಮನೆಯಿಂದ ಬಿಚ್ಚಿ ಹೊರಗಡೆ ಹೊಡೆದಿದ್ದಾರೆ. ಈ ಸಮಯದಲ್ಲಿ ಹುಲ್ಲು ತಿನ್ನುತ್ತಲೇ ಹೋದ ಎಮ್ಮೆ …

Read More »

ಶಾಲೆಯಿಂದ ಹೊರಬಂದಿದ್ದ ಮಗುವಿನ ಮೇಲೆ ಮಂಗದಾಳಿ

ಶಾಲೆಯಿಂದ ಹೊರಬಂದಿದ್ದ ಮಗುವಿನ ಮೇಲೆ ಮಂಗವೊಂದು ದಾಳಿ ಮಾಡಿ ವಿದ್ಯಾರ್ಥಿನಿಗೆ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಧಾರವಾಡದ ಗರಗ ಗ್ರಾಮದಲ್ಲಿ ಇಂದು ನಡೆದಿದ್ದು, ಮಂಗ ದಾಳಿಯ ಭಯಾನಕ ದೃಶ್ಯ ಸ್ಥಳೀಯ ಸಿಸಿಟಿಯಲ್ಲಿ ಸೆರೆಯಾಗಿದೆ. ಧಾರವಾಡ ತಾಲ್ಲೂಕಿನ ಗರಗ ಗ್ರಾಮದ ನಿವಾಸಿ ಇಕರಾ ಗಡಕಾರಿ (8) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಉರ್ದು ಶಾಲೆಯಲ್ಲಿ 2ನೇ ತರಗತಿ ಒದುತ್ತಿದ್ದು, ಶಾಲೆ ಆಟದ ಸಮಯದಲ್ಲಿ ವಿದ್ಯಾರ್ಥಿನಿ ಶಾಲೆಯಿಂದ ಆಚ್ಚೆ ಬಂದು …

Read More »

ರೈಲ್ವೇ ಇಲಾಖೆ ಆಲಸ್ಯವೋ ಅಥವಾ ನಿರ್ಲಕ್ಷ್ಯವೋ ಗೊತ್ತಿಲ್ಲ ಕೂದಲೆಳೆಯ ಅಂತರದಲ್ಲಿ ತಪ್ಪಿದ ಅಪಘಾತ

ಹುಬ್ಬಳ್ಳಿ: ರೈಲ್ವೇ ಇಲಾಖೆ ಆಲಸ್ಯವೋ ಅಥವಾ ನಿರ್ಲಕ್ಷ್ಯವೋ ಗೊತ್ತಿಲ್ಲ ಸಂಭವಿಸಬಹುದಾಗಿದ್ದ ದೊಡ್ಡ ಅಪಘಾತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಅತ್ಯಂತ ಜನದಟ್ಟಣೆಯ ಪ್ರದೇಶ ಹಾಗೂ ಹುಬ್ಬಳ್ಳಿ-ಗದಗ ಎನ್‌ಎಚ್-63 ರಸ್ತೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಹುಬ್ಬಳ್ಳಿಯ ರೈಲ್ವೇ ನಿಲ್ದಾಣದ ( Hubballi Railway Station) ಬಳಿ ಬೃಹತ್ ಗಾತ್ರದ ಕಬ್ಬಿಣದ ಕಂಬ (Iron Pillar) ನೆಲಕ್ಕೆ ಅಪ್ಪಳಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮಧ್ಯಾಹ್ನ 12:30ರ ವೇಳೆಗೆ ಕಂಬ ಉರುಳಿ ಬೀಳುತ್ತಿರುವ ದೃಶ್ಯ …

Read More »

ವಾಯವ್ಯ ಸಾರಿಗೆಯಲ್ಲಿ2 ಕೋಟಿ ಗಡಿ ತಲುಪಿದ ಮಹಿಳಾ ‘ಶಕ್ತಿ’ ಸಂಚಾರ:

ಹುಬ್ಬಳ್ಳಿ: ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಡಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ ಎರಡು ಕೋಟಿಯ ಗಡಿ ತಲುಪಿದೆ. ಪ್ರಯಾಣದ ಟಿಕೆಟ್ ಮೌಲ್ಯ 50 ಕೋಟಿ ರೂಪಾಯಿ ದಾಟಿದೆ. ಯೋಜನೆ ಜಾರಿಯಾಗಿ 16 ದಿನ ಕಳೆದಿದ್ದು ಮಹಿಳಾ ಪ್ರಯಾಣಿಕರು ಭರ್ಜರಿ ಸಂಚಾರ ನಡೆಸುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಜೂನ್ 26 ರಂದು 14,85,663 …

Read More »

ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ: ಸಚಿವ ಸಂತೋಷ ಲಾಡ್

ಹುಬ್ಬಳ್ಳಿ: ರಾಜ್ಯದ ಜನಕ್ಕೆ ಅಕ್ಕಿ ಕೊಡುತ್ತೇವೆ ಅಂತಾ ಹೇಳಿದ್ದು ನಮ್ಮ ಪ್ರಣಾಳಿಕೆಯಲ್ಲಿ. ಹಾಗಾಗಿ ನಾವು ಬಿಜೆಪಿಯವರನ್ನು ಕೇಳಿ ಪ್ರಣಾಳಿಕೆಯಲ್ಲಿ ಸೇರಿಸಬೇಕಾದ ಅವಶ್ಯಕತೆ ಇರಲಿಲ್ಲ. ಮುಂಬರುವ ದಿನಗಳಲ್ಲಿ ಪ್ರಾಮಾಣಿಕವಾಗಿ ಜನರಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್​ ಲಾಡ್ ಭರವಸೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಈ ವಿಷಯ ತಿಳಿಸಿದರು. ಫುಡ್ ಕಾರ್ಪೋರೇಶನ್ ಅವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ಬರೆದುಕೊಟ್ಟಿದ್ದರು. ಈಗ ಹಿಂಪಡೆದಿದ್ದಾರೆ. …

Read More »

ಉಸ್ತುವಾರಿ ಸಚಿವ ಲಾಡ್ ಅವರಿಂದ ಅಬಕಾರಿ ಅಧಿಕಾರಿಗೆ ಖಡಕ್ ಎಚ್ಚರಿಕೆ

ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಸಾರಾಯಿ ಧಂಧೆ ಎಗ್ಗಿಲ್ಲದೆ ಸಾಗುತ್ತಿದ್ದು. ಈಗ ಮುಂದುವರಿದು ಹಳ್ಳಿಗಳಿಗೂ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಈ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಅಬಕಾರಿ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡರು.   ಅಕ್ರಮ ಸಾರಾಯಿ ಮಾರಾಟ ಮಾಡುವುದು ಧಾರವಾಡದಲ್ಲಿ ಅತಿಯಾಗಿ ನಡೆಯುತ್ತಿದೆ. ನೀವು ಇನ್ನೂ 2 ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಾನು ನಿಮ್ಮ ಮೇಲೆ ಕಠಿಣ …

Read More »

ಕೇಂದ್ರ ಸರ್ಕಾರ ಎಷ್ಟೇ ತೊಂದರೆ ಕೊಟ್ಟರೂ ನಮ್ಮ ಯೋಜನೆ ಅನುಷ್ಠಾನ ಖಚಿತ :ಎಂ ಬಿ ಪಾಟೀಲ್

ಹುಬ್ಬಳ್ಳಿ : ನಮ್ಮ ಸರ್ಕಾರ ಕೊಟ್ಟ ಮಾತಿಗೆ ತಪ್ಪಲ್ಲ. ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ಎಲ್ಲಾ ಗ್ಯಾರಂಟಿ ಸ್ಕೀಮ್‌ಗಳನ್ನು ಅನುಷ್ಠಾನ ಮಾಡುತ್ತೇವೆ. ಕೇಂದ್ರದವರು ಎಷ್ಟೇ ತೊಂದರೆ ಕೊಟ್ಟರೂ ನಾವು ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಬಡ ಜನರ ಅನ್ನದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಹಿನ್ನಡೆಯಾಗಿದ್ದರಿಂದ ಕಾಂಗ್ರೆಸ್​ ಮೇಲಿರುವ ಸೇಡನ್ನು …

Read More »

ಬಿಜೆಪಿಯಲ್ಲಿ ಅಶಿಸ್ತಿಗೆ ವಲಸಿಗರೇ ಕಾರಣ; ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ : ಕೆ.ಎಸ್​.ಈಶ್ವರಪ್ಪ

ಹುಬ್ಬಳ್ಳಿ : ಬಹಿರಂಗವಾಗಿ ಅಡ್ಜಸ್ಟ್‌ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವ. ಬಹಿರಂಗವಾಗಿ ಹೀಗೆ ಮಾತಾಡಬಾರದು. ನಾಲ್ಕು ಗೋಡೆಗಳ ಮಧ್ಯೆ ಮಾತಾಡಬೇಕು. ಬಿಜೆಪಿಯಲ್ಲಿ ಅಶಿಸ್ತು ಬರಲು ಮೂಲ ಕಾರಣ ವಲಸಿಗರೇ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಇದನ್ನೆಲ್ಲ ಅನುಭವಿಸುತ್ತಿದ್ದೇವೆ ಎಂದು ಪರೋಕ್ಷವಾಗಿ ಆಪರೇಷನ್ ಕಮಲದ ವಿರುದ್ದ ಬಿಜೆಪಿ ಹಿರಿಯ ಮುಖಂಡ ಕೆ.ಎಸ್​ ಈಶ್ವರಪ್ಪ ಅಸಮಾಧಾನ ಹೊರ ಹಾಕಿದ್ದಾರೆ. ನಗರದಲ್ಲಿಂದು ಜಂಟಿ ಪತ್ರಿಕಾಗೋಷ್ಠಿ ಏರ್ಪಡಿಸಿ …

Read More »

ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ: ರಾಮಲಿಂಗಾರೆಡ್ಡಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯದಲ್ಲಿ ಕೇಂದ್ರ ಸರ್ಕಾರದವರು ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ. ನಾವು ಕೇಂದ್ರದಿಂದ ಉಚಿತವಾಗಿ ಅಕ್ಕಿ ಕೇಳುತಿಲ್ಲ. ನಮ್ಮ ರಾಜ್ಯದ ಬಿಜೆಪಿ ಮುಖಂಡರೇ ಹೇಳಿಕೊಟ್ಟ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲ. ಇದಕ್ಕೆ ನೇರವಾಗಿ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಕಿಡಿಕಾರಿದರು. ಕೇಂದ್ರಕ್ಕೆ ನಾವೇನು …

Read More »

ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ: ರಾಮಲಿಂಗಾರೆಡ್ಡಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯದಲ್ಲಿ ಕೇಂದ್ರ ಸರ್ಕಾರದವರು ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ. ನಾವು ಕೇಂದ್ರದಿಂದ ಉಚಿತವಾಗಿ ಅಕ್ಕಿ ಕೇಳುತಿಲ್ಲ. ನಮ್ಮ ರಾಜ್ಯದ ಬಿಜೆಪಿ ಮುಖಂಡರೇ ಹೇಳಿಕೊಟ್ಟ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲ. ಇದಕ್ಕೆ ನೇರವಾಗಿ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಕಿಡಿಕಾರಿದರು. ಕೇಂದ್ರಕ್ಕೆ ನಾವೇನು …

Read More »