Breaking News

ಹುಬ್ಬಳ್ಳಿ

ಕೇಂದ್ರ ಸರ್ಕಾರ ಎಷ್ಟೇ ತೊಂದರೆ ಕೊಟ್ಟರೂ ನಮ್ಮ ಯೋಜನೆ ಅನುಷ್ಠಾನ ಖಚಿತ :ಎಂ ಬಿ ಪಾಟೀಲ್

ಹುಬ್ಬಳ್ಳಿ : ನಮ್ಮ ಸರ್ಕಾರ ಕೊಟ್ಟ ಮಾತಿಗೆ ತಪ್ಪಲ್ಲ. ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ಎಲ್ಲಾ ಗ್ಯಾರಂಟಿ ಸ್ಕೀಮ್‌ಗಳನ್ನು ಅನುಷ್ಠಾನ ಮಾಡುತ್ತೇವೆ. ಕೇಂದ್ರದವರು ಎಷ್ಟೇ ತೊಂದರೆ ಕೊಟ್ಟರೂ ನಾವು ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಬಡ ಜನರ ಅನ್ನದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಹಿನ್ನಡೆಯಾಗಿದ್ದರಿಂದ ಕಾಂಗ್ರೆಸ್​ ಮೇಲಿರುವ ಸೇಡನ್ನು …

Read More »

ಬಿಜೆಪಿಯಲ್ಲಿ ಅಶಿಸ್ತಿಗೆ ವಲಸಿಗರೇ ಕಾರಣ; ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ : ಕೆ.ಎಸ್​.ಈಶ್ವರಪ್ಪ

ಹುಬ್ಬಳ್ಳಿ : ಬಹಿರಂಗವಾಗಿ ಅಡ್ಜಸ್ಟ್‌ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವ. ಬಹಿರಂಗವಾಗಿ ಹೀಗೆ ಮಾತಾಡಬಾರದು. ನಾಲ್ಕು ಗೋಡೆಗಳ ಮಧ್ಯೆ ಮಾತಾಡಬೇಕು. ಬಿಜೆಪಿಯಲ್ಲಿ ಅಶಿಸ್ತು ಬರಲು ಮೂಲ ಕಾರಣ ವಲಸಿಗರೇ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಇದನ್ನೆಲ್ಲ ಅನುಭವಿಸುತ್ತಿದ್ದೇವೆ ಎಂದು ಪರೋಕ್ಷವಾಗಿ ಆಪರೇಷನ್ ಕಮಲದ ವಿರುದ್ದ ಬಿಜೆಪಿ ಹಿರಿಯ ಮುಖಂಡ ಕೆ.ಎಸ್​ ಈಶ್ವರಪ್ಪ ಅಸಮಾಧಾನ ಹೊರ ಹಾಕಿದ್ದಾರೆ. ನಗರದಲ್ಲಿಂದು ಜಂಟಿ ಪತ್ರಿಕಾಗೋಷ್ಠಿ ಏರ್ಪಡಿಸಿ …

Read More »

ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ: ರಾಮಲಿಂಗಾರೆಡ್ಡಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯದಲ್ಲಿ ಕೇಂದ್ರ ಸರ್ಕಾರದವರು ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ. ನಾವು ಕೇಂದ್ರದಿಂದ ಉಚಿತವಾಗಿ ಅಕ್ಕಿ ಕೇಳುತಿಲ್ಲ. ನಮ್ಮ ರಾಜ್ಯದ ಬಿಜೆಪಿ ಮುಖಂಡರೇ ಹೇಳಿಕೊಟ್ಟ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲ. ಇದಕ್ಕೆ ನೇರವಾಗಿ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಕಿಡಿಕಾರಿದರು. ಕೇಂದ್ರಕ್ಕೆ ನಾವೇನು …

Read More »

ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ: ರಾಮಲಿಂಗಾರೆಡ್ಡಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಅಕ್ಕಿ ಸಿಗದಿರೋದಕ್ಕೆ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯದಲ್ಲಿ ಕೇಂದ್ರ ಸರ್ಕಾರದವರು ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ. ನಾವು ಕೇಂದ್ರದಿಂದ ಉಚಿತವಾಗಿ ಅಕ್ಕಿ ಕೇಳುತಿಲ್ಲ. ನಮ್ಮ ರಾಜ್ಯದ ಬಿಜೆಪಿ ಮುಖಂಡರೇ ಹೇಳಿಕೊಟ್ಟ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲ. ಇದಕ್ಕೆ ನೇರವಾಗಿ ರಾಜ್ಯ ಬಿಜೆಪಿ ನಾಯಕರೇ ಕಾರಣ ಎಂದು ಕಿಡಿಕಾರಿದರು. ಕೇಂದ್ರಕ್ಕೆ ನಾವೇನು …

Read More »

ವಾರಾಂತ್ಯಕ್ಕೆಬಸ್ಸುಗಳು ಖಾಲಿ ಖಾಲಿ

ಧಾರವಾಡ: ಶಕ್ತಿ ಯೋಜನೆ ಆರಂಭವಾದಾಗಿನಿಂದ ಮಹಿಳೆಯರು ಸಾರಿಗೆ ಬಸ್ಸುಗಳು ಮೂಲಕ ದೂರದ ಊರುಗಳಿಗೆ ಹಾಗೂ ದೇವಸ್ಥಾನಗಳಿಗೆ ಹೋಗುವ ಮೂಲಕ ಆ ಯೋಜನೆಯ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಮಹಿಳೆಯರೇ ಹೆಚ್ಚಾಗಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿರುವುದರಿಂದ ಬಸ್ಸುಗಳು ಫುಲ್ ರಶ್ ಆಗುತ್ತಿವೆ. ಆದರೆ, ವಾರಾಂತ್ಯದಲ್ಲಿ ಮಹಿಳೆಯರಿಲ್ಲದೇ ಧಾರವಾಡದ ಹೊಸ ಬಸ್ ನಿಲ್ದಾಣ ಖಾಲಿ ಖಾಲಿ ಕಾಣಿಸುತ್ತಿತ್ತು. ಈ ನಿಲ್ದಾಣದಿಂದ ದೂರದ ದಾಂಡೇಲಿ, ಸವದತ್ತಿ, ವಿಜಯಪುರ ಸೇರಿದಂತೆ ಇತ್ಯಾದಿ ಊರುಗಳಿಗೆ ಹೋಗುವ ಬಸ್ಸುಗಳು ಮಹಿಳಾ ಪ್ರಯಾಣಿಕರ ಕೊರತೆ …

Read More »

ಮೋದಿ ಕೊಡುತ್ತಿರುವ 5 ಕೆಜಿ ಬಿಟ್ಟು, ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ಕೊಡಬೇಕು: ಜೋಶಿ

ಧಾರವಾಡ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಅಕ್ಕಿ ಆರೋಪ ವಿಚಾರಕ್ಕೆ ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್​ ಪಕ್ಷಕ್ಕೆ ತನ್ನ ಕೈಯಿಂದ ಅಕ್ಕಿ ಕೊಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸುಳ್ಳು ಹೇಳುತ್ತಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದು ತಿಂಗಳಾಯ್ತು. ಇನ್ನೂ ಒಂದು ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಈಗ ಕೊಡುತ್ತಿರುವ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರದ್ದು. ಅದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ನ್ಯಾಷನಲ್ …

Read More »

ಸೈನಿಕನ ಕೊಲೆ ಪ್ರಕರಣ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಧಾರವಾಡ ಹೈಕೋರ್ಟ್

ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಹೊನ್ನಳ್ಳಿಯಲ್ಲಿ ಸೈನಿಕನೊಬ್ಬ ಹತ್ಯೆಗೆ ಸಂಬಂಧಿಸಿದ ಅಪರಾಧ ಸಾಬೀತಾದ ಹಿನ್ನೆಲೆ ಧಾರವಾಡ ಹೈಕೋರ್ಟ್‌ ಏಳು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 34 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದೆ. ಸೈನಿಕ ನಿಂಗಪ್ಪ ಯಲಿವಾಳ ಎಂಬುವವರನ್ನು 2015ರ ಸೆ.20ರಂದು ಬಸವರಾಜ ಯಲಿವಾಳ ಹಾಗೂ ಇತರ ಆರು ಜನರು ಕೊಲೆ ಮಾಡಿದ್ದರು. ಕಲಘಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತ ನಿಂಗಪ್ಪ ಯಲಿವಾಳ ಹಾಗೂ ಆರೋಪಿಗಳ ಮಧ್ಯೆ …

Read More »

ನಾವು ನೀಡಿದ ಕಾರ್ಯಕ್ರಮ ಆಗಬಾರದು ಎಂಬ ಉದ್ದೇಶ BJPಗಿದೆ: ಸಂತೋಷ ಲಾಡ್,

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಅಕ್ಕಿ ಖರೀದಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು ಕೊಡುತ್ತಾರೆ. ಕೇಂದ್ರ ಸರ್ಕಾರವನ್ನು ಕೇಳಿ ಗ್ಯಾರೆಂಟಿ ಘೋಷಣೆ ಮಾಡಿದ್ರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪತ್ರದ ಮೂಲಕ ಅವರು ತಾನೇ ಕೊಟ್ಟಿದ್ದು. ಕಳೆದ ಬಾರಿ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರಕ್ಕೆ ಕೇಳಿ ಕೊಟ್ಟಿದ್ರಾ..?ಪ್ರಣಾಳಿಕೆ ಕೊಡುವಂತದ್ದು ರಾಜ್ಯಕ್ಕೆ ಸಂಬಂಧ ಪಟ್ಟಿದ್ದು. ಕೇಂದ್ರದವರು ಮಾತು ಕೊಟ್ಟು ವಾಪಸ್ ಪಡೆದ ಉದ್ದೇಶ ಏನು…? ನಾವು ನೀಡಿದ ಕಾರ್ಯಕ್ರಮ ಆಗಬಾರದು …

Read More »

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ:ಬೊಮ್ಮಾಯಿ

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತಾ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಬಿಜೆಪಿಯವರೇ ಅಕ್ಕಿ ಕೊಡಿಸಿ ಅಂದ್ರೆ ಸರಿಯಲ್ಲ: ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಮಾಡಿ ಮಾತನಾಡಿದ ಅವರು, ಇದೀಗ ಛತ್ತೀಸ್‌ಘಡದಿಂದ ಅಕ್ಕಿ …

Read More »

ಜೂನ್​ 26ರಂದು ಬೆಂಗಳೂರು- ಧಾರವಾಡ ವಂದೇ ಭಾರತ್‌ ರೈಲಿಗೆ ಪ್ರಧಾನಿ ಚಾಲನೆ

ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದ ಜನರ ಬಹುನಿರೀಕ್ಷಿತ ವಂದೇ ಭಾರತ್ ರೈಲು ಸಂಚಾರದ ಬಗ್ಗೆ ನೈಋತ್ಯ ರೈಲ್ವೆ ವಲಯದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಪ್ರತಿಷ್ಠಿತ ವಂದೇ ಭಾರತ್‌ ರೈಲು ಗುರುವಾರ ಬೆಂಗಳೂರು ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಬೆಂಗಳೂರು- ಧಾರವಾಡ ಮಾರ್ಗದಲ್ಲಿ ಸಂಚರಿಸಲು ಜೂನ್​​ 26ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡುವ ಮುನ್ನ ಸೋಮವಾರದಿಂದ ಪ್ರಾಯೋಗಿಕ ಚಾಲನೆ …

Read More »