Breaking News

ಹುಬ್ಬಳ್ಳಿ

ಜನಸೇವೆಯ ಜೊತೆಗೆ ಸಾಂಪ್ರದಾಯಿಕತೆಗೆ ಒತ್ತು: ನೈರುತ್ಯ ರೈಲ್ವೆ ವಲಯದಲ್ಲಿ ಮಹತ್ವದ ಕಾರ್ಯ…!

ಹುಬ್ಬಳ್ಳಿ: ಜನರಿಗೆ ಗುಣಮಟ್ಟದ ಸಾರಿಗೆ ಸೇವೆ ನೀಡುವ ಮೂಲಕ ಜನಮನ್ನಣೆ ಪಡೆದಿರುವ ನೈರುತ್ಯ ರೈಲ್ವೆ ಈಗ ದೇಶದ ಸಾಂಪ್ರದಾಯಿಕತೆ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಭಾರತೀಯ ರೈಲ್ವೆ ಸಚಿವಾಲಯದ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯನ್ನು ‘ವೋಕಲ್‌ ಫಾರ್‌ ಲೋಕಲ್‌’ ಎಂಬ ದೃಷ್ಟಿಕೋನದಿಂದ ಪ್ರಾರಂಭಿಸಿದೆ. ಜನಸೇವೆಯ ಜೊತೆಗೆ ಸಾಂಪ್ರದಾಯಿಕತೆಗೆ ಒತ್ತು: ನೈರುತ್ಯ ರೈಲ್ವೆ ವಲಯದಲ್ಲಿ ಮಹತ್ವದ ಕಾರ್ಯ…! ಸ್ಥಳೀಯರೇ ತಯಾರಿಸಿದ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ಒದಗಿಸುವುದು ಮತ್ತು …

Read More »

ಪ್ರತ್ಯೇಕ ವಂಚನೆ ಪ್ರಕರಣ: ದುಪ್ಪಟ್ಟು ಹಣ ಕೊಡುವುದಾಗಿ 18 ಲಕ್ಷ ರೂ. ಪಂಗನಾಮ

ಹುಬ್ಬಳ್ಳಿ: ದುಪ್ಪಟ್ಟು ಹಣ ಕೊಡುವುದಾಗಿ ನಂಬಿಸಿ 18 ಲಕ್ಷ ರೂ. ಪಡೆದು ವಂಚಿಸಿರುವ ಪ್ರಕರಣ ಉಪನಗರ ಠಾಣೆಯಲ್ಲಿ ದಾಖಲಾಗಿದೆ. ಹೈದರಾಬಾದ್ ಮೂಲದ ರಾಮಕೃಷ್ಣ ಗೋಶಕೊಂಡಾ, ಅಕ್ಕಿಆಲೂರಿನ ಮಾಸೂಮ್ ಎನ್.ಎಂಬುವವರು ಮೋಸ ಮಾಡಿದ್ದಾರೆ ಎಂದು ಇಲ್ಲಿನ ಇಸ್ಲಾಂಪುರ ಪ್ರದೇಶದ ಜುಲಾಮ್ ಮೊಹಿದ್ದೀನ್ ಎಂಬುವರು ದೂರು ನೀಡಿದ್ದಾರೆ. ಟ್ರೇಡಿಂಗ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದರೆ 45 ದಿನಗಳಲ್ಲಿ 2 ಪಟ್ಟು ಹಣ ಕೊಡುವುದಾಗಿ ನಂಬಿಸಿ, 10 ಲಕ್ಷ ರೂ. ಬ್ಯಾಂಕ್ ಅಕೌಂಟ್ ಹಾಗೂ 8 …

Read More »

BJP ನಾಯಕರಿಗೆ ನಾನು ಹೇಳಿದ್ದು ಇಂದು ಅರಿವಾಗಿದೆ: ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ನಾನು ಹಿಂದೆ ಯಡಿಯೂರಪ್ಪ ಕಣ್ಣೀರನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗುತ್ತೆ ಎಂದಿದ್ದೆ‌. ಇಂದು ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ ಎಂದು ಶಿರಹಟ್ಟಿ ಫಕ್ಕಿರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ತಾಲೂಕಿನ ನೂಲ್ವಿ ಕ್ರಾಸ್ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಬಂದ ಸಂದರ್ಭದಲ್ಲಿ ಆ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೆ ತಿನ್ನಬಾರದ ಪೆಟ್ಟು ತಿನ್ನುತ್ತಾರೆ ಎಂದರು.   ನಾನು ಅಂದು ಒಬ್ಬ ವ್ಯಕ್ತಿ ಉದ್ದೇಶಿಸಿ ಹೇಳಿರಲಿಲ್ಲ. ಯಡಿಯೂರಪ್ಪ …

Read More »

ಮೋದಿ-ಜೋಶಿ ರಾಜಕೀಯ ನಿವೃತ್ತಿ ಪಡೆಯುತ್ತಾರಾ?: ಶೆಟ್ಟರ್‌

ಹುಬ್ಬಳ್ಳಿ: ನನಗೆ ರಾಜಕೀಯ ನಿವೃತ್ತಿಗೆ ಬಿಜೆಪಿ ನಾಯಕರು ಹೇಳುತ್ತಾರೆ. ನಾಲ್ಕು ಬಾರಿ ಮುಖ್ಯಮಂತ್ರಿ, ಎರಡು ಬಾರಿ ಪ್ರಧಾನಿ ಆಗಿರುವ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಬಿಡುತ್ತಾರೆಯೇ? ನಾಲ್ಕು ಬಾರಿ ಸಂಸದರಾಗಿರುವ, ಕೇಂದ್ರದಲ್ಲಿ ಸಚಿವರಾಗಿರುವ ಪ್ರಹ್ಲಾದ ಜೋಶಿ ರಾಜಕೀಯ ಬಿಡುತ್ತಾರೆಯೇ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಪ್ರಶ್ನಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿಯವರೆಗೆ ಜನರ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ರಾಜಕೀಯದಲ್ಲಿ ಎಲ್ಲರೂ ಇರಬೇಕಾಗುತ್ತದೆ. ಏಣಿ ಹತ್ತಿ ನಿಚ್ಚಣಿಕೆ ತೆಗೆದು …

Read More »

ಬಿಜೆಪಿ ನಾಯಕರು ನನ್ನನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದಾರೆ:ಶೆಟ್ಟರ್

ಹುಬ್ಬಳ್ಳಿ: ನನ್ನ ಗುರಿಯಿರುವುದು ಈ ಬಾರಿ ಶಾಸಕನಾಗಿ ಆಯ್ಕೆಯಾಗಿ 24X7 ಕುಡಿಯುವ ನೀರು ಯೋಜನೆ ಜಾರಿ ಮಾಡುವುದು. ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವುದು. ಆದರೆ ಬಹಳ ಜನ ನಾನು ಸೋಲಬೇಕು ಎಂದು ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿನಡೆಸಿದ ಹುಬ್ಬಳ್ಳಿ-ದಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಆಗಿರುವ ಶೆಟ್ಟರ್, ಬಿಜೆಪಿ ನಾಯಕರು ನನ್ನನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು. ನಾನು ಕಾಂಗ್ರೆಸ್ …

Read More »

ಕಾಂಗ್ರೆಸ್​​ಗೆ ಧಮ್​ ಇದ್ದರೆ ಜಗದೀಶ್​ ಶೆಟ್ಟರ್​​ರನ್ನು ಸಿಎಂ ಎಂದು ಘೋಷಿಸಲಿ: ಯತ್ನಾಳ್

ಹುಬ್ಬಳ್ಳಿ: ಕಾಂಗ್ರೆಸ್​ನವರಿಗೆ ಧಮ್ ಇದ್ದರೆ ಲಿಂಗಾಯತ ಶೆಟ್ಟರ್‌ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಕಾಂಗ್ರೆಸ್​ ಪಕ್ಷಕ್ಕೆ ಬಸನಗೌಡ ಪಾಟೀಲ್​ ಯತ್ನಾಳ್​ ಸವಾಲೆಸೆದಿದ್ದಾರೆ. ನಗರದಲ್ಲಿಂದು ಮಾತನಾಡಿದ ಬಸನಗೌಡ, ಲಿಂಗಾಯುತ ವಿಚಾರ ಮಾತನಾಡುತ್ತ ಶಾಸಕ ಬಸನಗೌಡ ಅವರು ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು. ಲಿಂಗಾಯತ ಜಪ ಮಾಡುತ್ತಿರುವುದು ಕಾಂಗ್ರೆಸ್, ಅವರಿಗೆ ಈಗ ಲಿಂಗಾಯತರ ಮೇಲೆ ಪ್ರೀತಿ ಬಂದಿದೆ. ಕಾಂಗ್ರೆಸ್​ನವರಿಗೆ ಧಮ್ ಇದ್ದರೆ ಲಿಂಗಾಯತ ಶೆಟ್ಟರ್‌ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ ಎಂದು …

Read More »

ಯಾರೇ ಬಂದರು ಭಯ ಪಡುವ ಪ್ರಶ್ನೆಯೇ ಇಲ್ಲ. ಹುಬ್ಬಳ್ಳಿಯ ಜನ ನನ್ನ ಕೈಬಿಡುವುದಿಲ್ಲ:ಶೆಟ್ಟರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಅಖಾಡ ಕ್ಷಣ ಕ್ಷಣಕ್ಕೂ ರಂಗೆರುತ್ತಿದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ಸೋಲಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಣ ತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಸಾಲು ಸಾಲು ಸಭೆ, ವರಿಷ್ಠರಿಂದ ಮತಯಾಚನೆ ಮೂಲಕ ರಣತಂತ್ರ ಹೆಣೆಯುತ್ತಿದ್ದಾರೆ. ತತ್ವ ಸಿದ್ಧಾಂತಗಳಿಲ್ಲದ ಪಕ್ಷ ಕಾಂಗ್ರೆಸ್ ಜೊತೆ ಕೈ ಜೋಡಿಸಿರುವ ಶೆಟ್ಟರ್ ಅವರನ್ನು ಸೋಲಿಸುವುವ ಜವಾಬ್ದಾರಿ ನಾನು ತೆಗೆದುಕೊಂಡಿದ್ದೇನೆ ಎಂದು ಗುಡಿಗಿದ್ದಾರೆ. ಯಡಿಯೂರಪ್ಪ ಹೇಳಿಕೆಗಳಿಗೆ ಜಗದೀಶ್ ಶೆಟ್ಟರ್ ಕೌಂಟರ್ …

Read More »

2023: ಬಿಜೆಪಿ ಬಂಡಾಯ ಅಭ್ಯರ್ಥಿ ತವಣಪ್ಪ ಅಷ್ಟಗಿ ಕಾಂಗ್ರೆಸ್ ಸೇರ್ಪಡೆ

ಧಾರವಾಡ: ಬಿಜೆಪಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಂಡಾಯವೆದ್ದು ಧಾರವಾಡ ಗ್ರಾಮೀಣ-71 ರ ವಿಧಾನಸಭಾ ಮತಕ್ಷೇತ್ರಕ್ಕೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ತವನಪ್ಪ ಅಷ್ಟಗಿ ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಕ್ಷೇತ್ರದಲ್ಲಿ ಹೊಸ ಸಂಚಲನ ‌ಸೃಷ್ಠಿಸಿದ್ದಾರೆ.   ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತವನಪ್ಪ ಅಷ್ಟಗಿ ಬಿಜೆಪಿ ವರಿಷ್ಠರು ಮಣೆ ಹಾಕದೇ ಹಾಲಿ ಶಾಸಕ ಅಮೃತ ದೇಸಾಯಿ ಅವರಿಗೆ ಈ ಸಲವೂ ಟಿಕೆಟ್ ನೀಡಿದ್ದರಿಂದ ಅಷ್ಟಗಿ ಮುನಿಸಿಕೊಂಡಿದ್ದರು. ಇದಲ್ಲದೇ ನಿಗಮ ಮಂಡಳಿ …

Read More »

BJP ಸರಕಾರದಲ್ಲಿ ಭ್ರಷ್ಟಾಚಾರ ಇದ್ದದ್ದು ನಿಜ: ಶೆಟ್ಟರ್‌

ಹುಬ್ಬಳ್ಳಿ: ಬಿಜೆಪಿ ಸರಕಾರದಲ್ಲಿ ಶೇ.40 ಪರ್ಸಂಟೇಜ್‌ ಕಮಿಷನ್‌ ಇತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಭ್ರಷ್ಟಾಚಾರ ಇದ್ದದ್ದು ನಿಜ. ಆರೋಗ್ಯ ಇಲಾಖೆ ಕಾರ್ಯ ವೈಖರಿ ಕುರಿತು ಸದನದಲ್ಲಿ ಮಾತನಾಡುವಾಗ ಪ್ರಸ್ತಾವಿಸಿದ್ದೆ ಎಂದು ಜಗದೀಶ ಶೆಟ್ಟರ್‌ ತಿಳಿಸಿದರು.   ಮಾಧ್ಯಮ ಸಂವಹನ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿನ ಕಿಮ್ಸ್‌ನಲ್ಲಿ 30 ವೈದ್ಯರು ಹಾಗೂ ಹಾವೇರಿ ವೈದ್ಯಕೀಯ ಕಾಲೇಜಿಗೆ 70 ವೈದ್ಯರ ನೇಮಕಾತಿಗೆ ಸಂದರ್ಶನ ಮುಗಿದು ಒಂದು ವರ್ಷವಾದರೂ ನೇಮ ಕಾತಿ …

Read More »

ಮಹದಾಯಿಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಆಗಬೇಕಾಗಿದ್ದ ಯೋಜನೆಯೊಂದು 47 ವರ್ಷಗಳಿಂದಲೂ ಕಡತಗಳಲ್ಲಿಯೇ ಉಸಿರಾಡುತ್ತಿದೆ.

ಹುಬ್ಬಳ್ಳಿ: ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಆಗಬೇಕಾಗಿದ್ದ ಯೋಜನೆಯೊಂದು 47 ವರ್ಷಗಳಿಂದಲೂ ಕಡತಗಳಲ್ಲಿಯೇ ಉಸಿರಾಡುತ್ತಿದೆ. ಧಾರವಾಡ, ಬೆಳಗಾವಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ನೂರಾರು ಗ್ರಾಮಗಳಲ್ಲಿ ಎರಡು ತಲೆಮಾರುಗಳೇ ದಾಟಿ ಹೋಗಿವೆ. ಆದರೂ ಮಹದಾಯಿಯ ನೀರು ಸಿಕ್ಕಿಯೇ ಇಲ್ಲ. 2002ರಲ್ಲಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಯ ಹೆಸರಿನಲ್ಲಿ ಆಗಿನ ನೀರಾವರಿ ಸಚಿವ ಎಚ್‌.ಕೆ. ಪಾಟೀಲರು ಈ ಯೋಜನೆಗೆ ಮರುಜೀವ ಕೊಟ್ಟರು. ಆ ಬಳಿಕ ಕುಡಿಯುವ ನೀರಿನ ಸಮಸ್ಯೆಯೊಂದು ರಾಜಕೀಯ ಪಕ್ಷಗಳಿಗೆ ಮತ …

Read More »