Breaking News
Home / ಹುಬ್ಬಳ್ಳಿ (page 54)

ಹುಬ್ಬಳ್ಳಿ

ಮೋದಿ‌ ಸರ್ಕಾರದಲ್ಲಿ ಕಳೆದ 7 ವರ್ಷದಲ್ಲಿ ಬೆಲೆ ಏರಿಕೆ ಆಗಿಲ್ಲ- ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ.. ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ನಿರ್ಮಾಣದ ಕುರಿತು ಇಂದು ಸ್ಥಳೀಯರ ಸಲಹೆ ಸೂಚನೆಗಳನ್ನ ಪಡೆದಿದ್ದೇವೆ. ಫ್ಲೈ ಓವರ್‌ ನಿರ್ಮಾಣದ ಕುರಿತು ಸ್ಥಳೀಯರು ತಜ್ಞರ ಸಲಹೆ ಪಡೆಯಲಾಗಿದೆ. ಶಾಸಕ ಅರವಿಂದ ಬೆಲ್ಲದ್ ಹಾಗೂ ತಜ್ಞರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು. ಸ್ಥಳೀಯರ ಸಲಹೆ, ದೂರುಗಳಿದ್ರೆ ಅವುಗಳನ್ನ ಪರಿಗಣಿಸಲಾಗುವುದು ಎಂದಿದ್ದಾರೆ. ಭಾರತ ಬಂದ್ ಕರೆಗೆ ಜೋಶಿ ಆಕ್ರೋಶ ವ್ಯಕ್ತಪಡಿಸಿ.. ಬಹಳಷ್ಟು ಬಾರಿ ಭಾರತ ಬಂದ್​ಗೆ …

Read More »

ಓದಿದ್ದು ಎಂಜಿನಿಯರಿಂಗ್; ಕನ್ನಡದಲ್ಲಿ ಪರೀಕ್ಷೆ ಬರೆದು ಯುಪಿಎಸ್ಸಿಯಲ್ಲಿ ಸಾಧನೆ ಮಾಡಿದ ಶ್ರೀನಿವಾಸ್

ಹುಬ್ಬಳ್ಳಿ(ಸೆ. 24): ಈತ ದ್ದು ಎಂಜಿನಿಯರಿಂಗ್ ಪದವಿ. ಆದ್ರೆ ಯುಪಿಎಸ್ಸಿ (UPSC ) ಯಲ್ಲಿ ಪರೀಕ್ಷೆ ಬರೆದದ್ದು ಮಾತ್ರ ಕನ್ನಡದಲ್ಲಿ. ಆಂಗ್ಲ ಮಾಧ್ಯಮದಲ್ಲಿ ದರೂ ಮಾತೃಭಾಷೆ ಕನ್ನಡವಾಗಿದ್ದರಿಂದ ಯುಪಿಎಸ್ಸಿಯಲ್ಲಿಯೂ ಅದೇ ಕನ್ನಡವನ್ನು ಐಚ್ಛಿಕ (kannada optional in upsc) ವಿಷಯವನ್ನಾಗಿಸಿಕೊಂಡು, ಐದನೇಯ ಪ್ರಯತ್ನದಲ್ಲಿ ತೇರ್ಗಡೆ ಹೊಂದಿದ್ದಾರೆ. ಅಮೆರಿಕದಲ್ಲಿ ಲಕ್ಷಾಂತರ ರೂಪಾಯಿ ಸಂಬಳ ಬರೋ ನೌಕರಿ ಬಿಟ್ಟು ಬಂದು ಸಾಧನೆ ಮಾಡಿ ಅನೇಕರಿಗೆ ಸ್ಪೂರ್ತಿಯಾಗಿದ್ದಾರೆ. ಯು ಪಿ ಎಸ್ ಸಿ ಫಲಿತಾಂಶ …

Read More »

ಮಗಳ ಹುಟ್ಟುಹಬ್ಬಕ್ಕೆ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಿಸಿದ ತಂದೆ

ಹುಬ್ಬಳ್ಳಿ: ಮಗಳ ಹುಟ್ಟುಹಬ್ಬವನ್ನು ವಿನೂತನವಾಗಿ ಅಚರಿಸಿದ ತಂದೆ, ರಸ್ತೆ ಸುರಕ್ಷತೆಯ ಜಾಗೃತಿಯನ್ನು ಮೂಡಿಸಿ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಿಸಿದ್ದಾರೆ. ನಗರದ ಯುವ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಹೆಬಸೂರು ತಮ್ಮ ಮಗಳು ಅಶ್ವಿಕಾಮಾನ್ಯಾ ಹೆಬಸೂರ ಎರಡನೇ ವರ್ಷದ ಹುಟ್ಟುಹಬ್ಬ ಆಚರಿಸಿದ್ದಾರೆ. ಇದರ ಅಂಗವಾಗಿ ಸಾರ್ವಜನಿಕರಿಗೆ ಹೆಲ್ಮೆಟ್ ವಿತರಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ಇರುವುದರಿಂದ ರಸ್ತೆ ಅಪಘಾತಗಳಲ್ಲಿ ಸಾಕಷ್ಟು ಸಾವು ಸಂಭವಿಸುತ್ತವೆ. ಹೀಗಾಗಿ ರಸ್ತೆ ಸುರಕ್ಷತೆ ಹಾಗೂ ಹೆಲ್ಮೆಟ್ ಜಾಗೃತಿ ಮೂಡಿಸಿದ್ದಾರೆ. ನಗರದ ಚೆನ್ನಮ್ಮ …

Read More »

ನಕಲಿ ಪೊಲೀಸ್​ ಹಾವಳಿ: ಕೈಯಲ್ಲಿ ದೊಣ್ಣೆ ಹಿಡಿದು ಪ್ರತಿಭಟನೆಗೆ ನಿಂತ ವಿದ್ಯಾರ್ಥಿಗಳು

ಧಾರವಾಡ: ಪೊಲೀಸರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಎಸ್ಕೇಪ್​ ಆದ ಘಟನೆ ನಗರದ ವಿವೇಕಾನಂದ ವೃತ್ತದ ಬಳಿ ನಡೆದಿದೆ.   ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿ ಓಡಿ ಹೋಗಿರೋ ಅಪರಿಚಿತ ವ್ಯಕ್ತಿಗಳ ವಿರುದ್ಧ ಪಿಜಿ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದು ಕೈಯಲ್ಲಿ ದೊಣ್ಣೆ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರ ಜೊತೆ ವಿದ್ಯಾರ್ಥಿಗಳು ಹಾಗೂ ಸ್ಥಳಿಯರ ನಡುವೆ ಮಾತಿನ …

Read More »

ಹುಬ್ಬಳ್ಳಿ: ಕೊವಿಡ್ ಬಳಿಕ ಮಕ್ಕಳನ್ನು ಕಾಡುತ್ತಿದೆ ನ್ಯುಮೋನಿಯಾ; ಒಂದೇ ವಾರದಲ್ಲಿ 7 ಮಕ್ಕಳು ಬಲಿ

ಹುಬ್ಬಳ್ಳಿ: ಕೊವಿಡ್ ಬಳಿಕ ಮಕ್ಕಳನ್ನು ನ್ಯುಮೋನಿಯಾ ಕಾಡುತ್ತಿದ್ದು, ಒಂದೇ ವಾರದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 7 ಮಕ್ಕಳು ಸಾವನ್ನಪ್ಪಿದ್ದಾರೆ. ನ್ಯಮೋನಿಯಾದಿಂದ ಬಳಲುತ್ತಿರುವ 163 ಮಕ್ಕಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿಲಾಗುತ್ತಿದೆ. ಸದ್ಯ ಕಿಮ್ಸ್‌ನ ಮಕ್ಕಳ ವಿಭಾಗದ ಬೆಡ್‌ಗಳು ಸಂಪೂರ್ಣ ಭರ್ತಿಯಾಗಿದ್ದು, 1 ವರ್ಷದ 95 ಮಕ್ಕಳಿಗೆ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 23 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆಯಿಂದ ಚಿಕ್ಕಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಕೆಮ್ಮು, ನೆಗಡಿ, …

Read More »

ಆತ್ಮೀಯ ಗೆಳೆಯನ ಅಗಲಿಕೆ: ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು. ನಿನ್ನೆ ನಿಧನರಾದ ಸ್ನೇಹಿತ ಹಾಘೂ ಸಂಬಂಧಿಕರಾದ ರಾಜು ಪಾಟೀಲ್​​ ಮನೆಗೆ ನೇರವಾಗಿ ತೆರಳಿದ್ದಾರೆ. ಹುಬ್ಬಳ್ಳಿಯ ಶಕ್ತಿ ನಗರದಲ್ಲಿರುವ ಮೃತ ರಾಜು ಪಾಟೀಲ್ ಮನೆಗೆ ಭೇಟಿ ನೀಡಿದ ಸಿಎಂ, ಸ್ನೇಹಿತನ ನಿಧನಕ್ಕೆ ಕಣ್ಣೀರ ವಿದಾಯ ಹೇಳಿದ್ದಾರೆ. ಬಳಿಕ ಕುಟುಂಬಸ್ಥರ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ.

Read More »

ನನ್ನನ್ನು ಬದುಕಿಸಬೇಡಿ, ಸಾಯಬೇಕು: ಧಾರವಾಡದ ಆಸ್ಪತ್ರೆಯಲ್ಲೇ ಶುಶ್ರೂಷಕಿ ಆತ್ಮಹತ್ಯೆ ಯತ್ನ

ಧಾರವಾಡ): ಧಾರವಾಡದ ಹೆಬ್ಬಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಶುಶೂಷಕಿ ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕಮಲಾ ನಾಗೇಶ್ವರರಾವ್, ಆತ್ಮಹತ್ಯೆಗೆ ಯತ್ನಿಸಿದ ಶುಶ್ರೂಷಕಿಯಾಗಿದ್ದಾರೆ. ಇವರು ಹಿರಿಯ ಆರೋಗ್ಯ ಶುಶ್ರೂಷಕಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೇಲಾಧಿಕಾರಿಗಳ ಕಿರುಕುಳ ನೀಡುತ್ತಿರುವುದಾಗಿ ಹೇಳಿದ ಇವರು ತಾವು ಸಾಯಬೇಕು, ನನ್ನನ್ನು ಬದುಕಿಸಬೇಡಿ ಎಂದು ಹೇಳುತ್ತಲೇ ಆಸ್ಪತ್ರೆ ಕೊಠಡಿಯಲ್ಲೇ ನೇಣು ಬಿಗಿದುಕೊಂಡಿದ್ದಾರೆ. ಕೂಡಲೇ ಇವರನ್ನು ಇತರೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ …

Read More »

ಹುಬ್ಬಳ್ಳಿ: ಪಬ್ ನಲ್ಲಿ ರೇಡಿಯೋ ಜಾಕಿಯ ಸ್ನೇಹಿತರಿಂದ ಗಲಾಟೆ

ಹುಬ್ಬಳ್ಳಿ: ಕುಡಿದ ಅಮಲಿನಲ್ಲಿ ರೇಡಿಯೋ ಜಾಕಿಯ ಸ್ನೇಹಿತರು ಗಲಾಟೆ ಮಾಡಿಕೊಂಡಿರುವ ಘಟನೆ ನಗರದ ಗೋಕುಲ ರಸ್ತೆಯಲ್ಲಿರುವ ಐಸ್ ಕ್ಯೂಬ್ ಪಬ್ ನಲ್ಲಿ ನಡೆದಿದೆ. ಆರ್​ಜೆ ಮೇಘಾ ಮತ್ತು ಆಕೆಯ ಸ್ನೇಹಿತರಾದ ಪ್ರವೀಣ, ಕೃತಿಕಾ, ಹರ್ಷ, ಶ್ರೀನಿವಾಸ, ಶರಣ್ಯ, ಶೈಲೇಶ್ ಎಂಬುವವರು ಭಾನುವಾರ ರಾತ್ರಿ ಐಸ್ ಕ್ಯೂ ಪಬ್​ಗೆ ತೆರಳಿದ್ದರು. ಈ ವೇಳೆ ಪ್ಲೇಟ್​ನಲ್ಲಿ ಸಾಸ್​ ಹಾಕಿದ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ ಶುರುವಾಗಿದೆ. ಜಗಳ ತಾರಕ್ಕೇರಿದ್ದು ಕುಡಿದ ನಶೆಯಲ್ಲಿ ಬಾಟಲಿ …

Read More »

ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಮೇಯರ್, ಉಪಮೇಯರ್ ಸ್ಥಾನ ಬಿಜೆಪಿಗೆ: ಜಗದೀಶ್ ಶೆಟ್ಟರ್ ವಿಶ್ವಾಸ

ಹುಬ್ಬಳ್ಳಿ, ಸೆ. 12: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮೇಯರ್ ಹಾಗೂ ಉಪಮೇಯರ್ ಗಾದಿಯನ್ನು ಬಿಜೆಪಿಯವರೇ ಅಲಂಕರಿಸಲಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ರವಿವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಎರಡು ಬಾರಿ ಆಡಳಿತ ನಡೆಸಿದೆ. ಈ ಬಾರಿಯೂ ಜನರ ಆಶೀರ್ವಾದದಿಂದಾಗಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದರು. ನಮ್ಮ ಪಕ್ಷದ ಜನಪ್ರತಿನಿಧಿಗಳು ತಮ್ಮ ವಿಶೇಷ ಮತ ಹಾಕುವುದರಿಂದ ಬಿಜೆಪಿ 45 …

Read More »

ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಹುಬ್ಬಳ್ಳಿ: ನಗರದ ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಶನಿವಾರ ಒಟ್ಟು 200 ಕಿ.ಮೀ. ಸೈಕಲ್ ಓಡಿಸುವ ಗುರಿ ಇಟ್ಟುಕೊಂಡಿತ್ತು. ಹುಬ್ಬಳ್ಳಿಯಿಂದ ಶಿಗ್ಗಾವಿಗೆ ಹೋಗಿ ವಾಪಸ್ ಬರುವುದು, ಹುಬ್ಬಳ್ಳಿಯಿಂದ ಕಿತ್ತೂರಿಗೆ ಹೋಗಿ ಮರಳುವುದು ಗುರಿಯಾಗಿತ್ತು ಒಟ್ಟು 35 ಸೈಕ್ಲಿಸ್ಟ್ ಗಳು ಭಾಗವಹಿಸಿದ್ದರು. ಶಿವಳ್ಳಿ ಅವರು ರೈಡ್‌ಗೆ ಹೆಸರು ನೋಂದಾಯಿಸಿರಲಿಲ್ಲ. ಆದರೆ, ಸ್ನೇಹಿತರಿಗೆ ಬೀಳ್ಕೊಡುವ ಸಲುವಾಗಿ ಹುಬ್ಬಳ್ಳಿಯಿಂದ …

Read More »