Breaking News
Home / ಹುಬ್ಬಳ್ಳಿ (page 55)

ಹುಬ್ಬಳ್ಳಿ

ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಮೇಯರ್, ಉಪಮೇಯರ್ ಸ್ಥಾನ ಬಿಜೆಪಿಗೆ: ಜಗದೀಶ್ ಶೆಟ್ಟರ್ ವಿಶ್ವಾಸ

ಹುಬ್ಬಳ್ಳಿ, ಸೆ. 12: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮೇಯರ್ ಹಾಗೂ ಉಪಮೇಯರ್ ಗಾದಿಯನ್ನು ಬಿಜೆಪಿಯವರೇ ಅಲಂಕರಿಸಲಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ರವಿವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಎರಡು ಬಾರಿ ಆಡಳಿತ ನಡೆಸಿದೆ. ಈ ಬಾರಿಯೂ ಜನರ ಆಶೀರ್ವಾದದಿಂದಾಗಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದರು. ನಮ್ಮ ಪಕ್ಷದ ಜನಪ್ರತಿನಿಧಿಗಳು ತಮ್ಮ ವಿಶೇಷ ಮತ ಹಾಕುವುದರಿಂದ ಬಿಜೆಪಿ 45 …

Read More »

ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಹುಬ್ಬಳ್ಳಿ: ನಗರದ ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಶನಿವಾರ ಒಟ್ಟು 200 ಕಿ.ಮೀ. ಸೈಕಲ್ ಓಡಿಸುವ ಗುರಿ ಇಟ್ಟುಕೊಂಡಿತ್ತು. ಹುಬ್ಬಳ್ಳಿಯಿಂದ ಶಿಗ್ಗಾವಿಗೆ ಹೋಗಿ ವಾಪಸ್ ಬರುವುದು, ಹುಬ್ಬಳ್ಳಿಯಿಂದ ಕಿತ್ತೂರಿಗೆ ಹೋಗಿ ಮರಳುವುದು ಗುರಿಯಾಗಿತ್ತು ಒಟ್ಟು 35 ಸೈಕ್ಲಿಸ್ಟ್ ಗಳು ಭಾಗವಹಿಸಿದ್ದರು. ಶಿವಳ್ಳಿ ಅವರು ರೈಡ್‌ಗೆ ಹೆಸರು ನೋಂದಾಯಿಸಿರಲಿಲ್ಲ. ಆದರೆ, ಸ್ನೇಹಿತರಿಗೆ ಬೀಳ್ಕೊಡುವ ಸಲುವಾಗಿ ಹುಬ್ಬಳ್ಳಿಯಿಂದ …

Read More »

ತಲ್ವಾರ್​​​​​ನಿಂದ ಕೇಕ್ ಕಟ್ ಮಾಡಿ ಹುಚ್ಚಾಟ; ಯುವಕನ ವಿರುದ್ಧ ಬಿತ್ತು ಕೇಸ್

ಧಾರವಾಡ: ತಲ್ವಾರ್​​​​​ನಿಂದ ಕೇಕ್ ಕಟ್ ಮಾಡಿ ಯುವಕನೋರ್ವ ಬರ್ತಡೇ ಆಚರಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಪ್ರವೀಣ ಸಂದೀಮನಿ ಎನ್ನುವ ಯುವಕ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಬರ್ತಡೇ ಆಚರಿಸಿದ್ದಾನೆ. ಪ್ರವೀಣ್ ತನ್ನದೇ ಸಾಯಿ ದಾಬಾದಲ್ಲಿ ಕಳೆದ ರಾತ್ರಿ ಬರ್ತಡೇ ಆಚರಿಸಿಕೊಂಡಿದ್ದಾನೆ. ಈ ವೇಳೆ ತಲ್ವಾರ್ ಕೇಕ್​ ಕಟ್ ಮಾಡಿ ಸಂಭ್ರಮಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ …

Read More »

ತಾಲಿಬಾನ್ ಸಮಸ್ಯೆಯಿಂದ ಅನಿಲ ಬೆಲೆ ಏರಿಕೆಯಾಗಿದೆ :ಅರವಿಂದ್ ಬೆಲ್ಲದ್

ಧಾರವಾಡ: ತಾಲಿಬಾನ್ ಸಮಸ್ಯೆಯಿಂದ ಅನಿಲ ಬೆಲೆ ಏರಿಕೆಯಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ.  ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಲಿಬಾನ್ ಸಮಸ್ಯೆಯಿಂದಾಗಿ ಬೆಲೆ ಏರಿಕೆಯಾಗಿವೆ. ಅಲ್ಲದೇ ಕಚ್ಚಾ ತೈಲ ಬರುತ್ತಿಲ್ಲ. ಹೀಗಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯಾಗಿದೆ ಮತ್ತು ಗ್ಯಾಸ್ ದರ ಹೆಚ್ಚಳ ಯಾಕೆ ಆಗಿದೆ ಎಂದು ಮತದಾರರೇ ವಿಚಾರ ಮಾಡಿ ಮತ ಹಾಕುತ್ತಾರೆ ಎಂದು ನುಡಿದಿದ್ದಾರೆ.  ಇದೇ ವೇಳೆ ಹುಬ್ಬಳ್ಳಿ ಧಾರವಾಡ ಪಾಲಿಕೆ …

Read More »

ಯಡಿಯೂರಪ್ಪ, ಶೆಟ್ಟರ್ ಅನುಭವ ಪಕ್ಷ ಬಳಸಿಕೊಳ್ಳಲಿದೆ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಹಿರಿಯರಾದ ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್ ಅವರ ರಾಜಕೀಯ ಅನುಭವವನ್ನು‌ ಮುಂಬರುವ ದಿನಗಳಲ್ಲಿ ಪಕ್ಷ ಸಮರ್ಪಕವಾಗಿ ಬಳಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಮಹಾನಗರ ಪಾಲಿಕೆ ಚುನಾವಣೆಗೆ ಕುಟುಂಬ ಸಮೇತ ಬಂದು ಮತ ಚಲಾಯಿಸಿ ಮಾಧ್ಯಮದವರ ಜೊತೆ ‌ಮಾತನಾಡಿದ ಅವರು ಪಕ್ಷದಲ್ಲಿ ಯಾವ ಹಿರಿಯರನ್ನೂ ಕಡೆಗಣಿಸಿಲ್ಲ. ಕೋವಿಡ್ ಕಾರಣಕ್ಕೆ ಕೋರ್ ಕಮಿಟಿ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಹಿರಿಯರ ಸಲಹೆ ಪಡೆದೇ ತೀರ್ಮಾನ ಕೈಗೊಳ್ಳಲಾಗುವುದು …

Read More »

ಯಾವ ಹಿರಿಯರನ್ನೂ ಬಿಜೆಪಿ ಕಡೆಗಣಿಸಿಲ್ಲ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್ ಅವರ ರಾಜಕೀಯ ಅನುಭವವನ್ನು‌ ಬಿಜೆಪಿ ಸಮರ್ಪಕವಾಗಿ ಬಳಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಗೆ ಕುಟುಂಬ ಸಮೇತ ಬಂದು ಮತ ಚಲಾಯಿಸಿ ಮಾಧ್ಯಮದವರ ಜೊತೆ ‌ಮಾತನಾಡಿದ ಅವರು, ಪಕ್ಷದಲ್ಲಿ ಯಾವ ಹಿರಿಯರನ್ನೂ ಕಡೆಗಣಿಸಿಲ್ಲ. ಕೋವಿಡ್ ಕಾರಣಕ್ಕೆ ಕೋರ್ ಕಮಿಟಿ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಹಿರಿಯರ ಸಲಹೆ ಪಡೆದೇ ತೀರ್ಮಾನ ಕೈಗೊಳ್ಳಲಾಗುವುದು …

Read More »

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ.

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ. ಇದಕ್ಕಾಗಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮನೆ ಹಂಚಿಕೆ ಮಾಡುವಂತೆ ಭಿಕ್ಷೆ ಬೇಡುತ್ತಿಲ್ಲ. ಮನೆ ಕೊಟ್ಟರೆ ಕೊಡಲಿ, ಬಿಡುವುದಿದ್ದರೆ ಬಿಡಲಿ, ಇನ್ನು ಮುಂದೆ ಮನೆ ಹಂಚಿಕೆ ಮಾಡುವಂತೆ ಕೇಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದ ಅವರು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಮನೆ …

Read More »

ಮಾಸ್ಕ್ ಹಾಕದೆ ಇದ್ರೆ ಮತ ಹಾಕಲು ಅವಕಾಶ ಇಲ್ಲ.!

ಹುಬ್ಬಳ್ಳಿ: ನಗರದ ಲ್ಯಾಮಿಂಗ್ಟನ್ ಹೈಸ್ಕೂಲಿನಲ್ಲಿ ಮತ ಚಲಾವಣೆ ನಡೆಯುತ್ತಿದ್ದು, ಮತಚಲಾಯಿಸಿದ ಬಳಿಕ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಎಥಿಕ್ಸ್ ಮೇಲೆ ಚುನಾವಣೆ ನಡೆಯುತ್ತಿಲ್ಲ, ಕೊರೋನಾ ಭೀತಿ ಇರುವುದರಿಂದ ಮಾಸ್ಕ್ ಹಾಕದೆ ಇರುವವರಿಗೆ ಮತ ಹಾಕಲು ಅವಕಾಶ ಕೊಡಬಾರದು ಎಂದು ತಿಳಿಸಿದ್ರು. ಜನಪರವಾದ ಕೆಲಸ ಎಲ್ಲಿಯವರೆಗೆ ಮಾಡುವುದಿಲ್ಲ ಅಲ್ಲಿಯವರೆಗೂ ಇದು ಹೀಗೆ ನಡೆಯುತ್ತದೆ. ಆಯ್ಕೆಯಾದವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ನಮ್ಮದು ಪ್ರಜಾಪ್ರಭುತ್ವ ದೇಶ, ಎಲ್ಲರೂ ಜನಪರ ಕೆಲಸ ಮಾಡಬೇಕು. ಜೋಶಿ ಪುತ್ರಿಯ ಮದುವೆಗೆ …

Read More »

ಬೆಲೆ ಏರಿಕೆ ಕುರಿತು ಹಣಕಾಸು ಸಚಿವರ ಜೊತೆ ಚರ್ಚೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ‘ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಕುರಿತಂತೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾದ ಕಾರಣ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಸೆ.5 ರಂದು ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಬರಲಿದ್ದು, ಅವರೊಂದಿಗೆ ಚರ್ಚಿಸುತ್ತೇನೆ’ ಎಂದರು. ‘ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. …

Read More »

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪುತ್ರಿಯ ಅದ್ಧೂರಿ ವಿವಾಹ: ಗಣ್ಯರ ದಂಡು

ಹುಬ್ಬಳ್ಳಿ: ಇಲ್ಲಿನ ಡೆನಿಸನ್ಸ್ ಹೋಟೆಲ್‌ನಲ್ಲಿ ಬುಧವಾರ ಅದ್ಧೂರಿಯಾಗಿ ನಡೆದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪುತ್ರಿ ಅರ್ಪಿತಾ ಮದುವೆ ಸಮಾರಂಭದಲ್ಲಿ ರಾಷ್ಟ್ರ, ರಾಜ್ಯ ನಾಯಕರ ದಂಡೇ ಭಾಗವಹಿಸಿದೆ. ರಾಜ್ಯಪಾಲ ಥಾವರಚಂದ್‌ ಗೆಹಲೋತ್, ಕೇಂದ್ರ ಸಚಿವರಾದ ಡಿ.ರಾವ್‌ಸಾಹೇಬ್ ದಾದಾರಾವ್‌, ಅರ್ಜುನ್‌ ರಾಮಪಾಲ್‌ ಮೇಘ್ವಾಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್‌. ಅಶೋಕ್, ಹಾಲಪ್ಪ ಆಚಾರ್‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತ್ತಿತರರು ಪಾಲ್ಗೊಂಡಿದ್ದರು. ಗುರವಾರ …

Read More »