Breaking News

ಹುಬ್ಬಳ್ಳಿ

ಹುಬ್ಬಳ್ಳಿ : ಪೂರ್ವ ಕ್ರಾಂತಿಕಿರಣ, ಕುಂದಗೋಳ ಎಂ.ಆರ್.ಪಾಟೀಲ ಸ್ಪರ್ಧೆ

ಹುಬ್ಬಳ್ಳಿ : ಬಿಜೆಪಿ ಪಕ್ಷದ ಟಿಕೆಟ್ ಫೈನಲ್ ಆಗಿದ್ದು, ಇದೀಗ ಬಿಡುಗಡೆಯಾಗಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಡಾ.ಕ್ರಾಂತಿ ಕಿರಣಗೆ ಬಿಜೆಪಿ ಟಿಕೆಟ್ , ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಎಂ.ಆರ್.ಪಾಟೀಲಗೆ ಟಿಕೆಟ್ ದೊರೆತಿದ್ದು, ಬಿಜೆಪಿ ಪಾಳೆಯದಲ್ಲಿ ಹೊಸ ಮುಖಗಳಿಗೆ ಅವಕಾಶ ದೊರೆತಂತಾಗಿದೆ.   ಗ್ರಾಮೀಣ ಭಾಗದಿಂದ ಶಾಸಕ ಅಮೃತ ದೇಸಾಯಿ, ನವಲಗುಂದ ಕ್ಷೇತ್ರದಿಂದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸ್ಪರ್ಧೆಗೆ ಟಿಕೆಟ್ ಫೈನಲ್ ಆಗಿದ್ದು, ಪಶ್ಚಿಮ ಕ್ಷೇತ್ರದಿಂದ ಶಾಸಕ ಅರವಿಂದ ಬೆಲ್ಲದ …

Read More »

ಪ್ಲಾಟ್ ಅಭಿವೃದ್ಧಿ ಹೆಸರಿನಲ್ಲಿ ವಂಚನೆ: ಧಾರವಾಡದ ಸಾಮನ್ ಡೆವಲಪರ್ಸ್‌ ಕಂಪನಿಗೆ 4 ಲಕ್ಷ ರೂಪಾಯಿ ದಂಡ

ಧಾರವಾಡ, ಏಪ್ರಿಲ್‌, 04: ಧಾರವಾಡದ ಸಾಮನ್ ಡೆವಲಪರ್ಸ್‌ನವರು ಬಾಗೇವಾಡಿ ಹದ್ದಿನಲ್ಲಿ ಗಾಂಧಿನಗರ ನಿವಾಸಿಯಾದ ರವಿ ಸುರಗೊಂಡ ಅವರಿಗೆ ಪ್ಲಾಟ್ ನಂ.ಎ-92 ಹಾಗೂ ಎ-93 ಅನ್ನು ಒಟ್ಟು 9 ಲಕ್ಷ ರೂಪಾಯಿಗೆ 2012ರಲ್ಲಿ ಮಾರಾಟ ಮಾಡಿದ್ದರು. ಇದಕ್ಕೆ ರವಿ ಅವರು 4 ಲಕ್ಷ ರೂಪಾಯಿ ಮುಂಗಡ ಹಣ ಕೊಟ್ಟು ಒಪ್ಪಂದ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದರು. ಆದರೆ 7-8 ವರ್ಷ ಕಳೆದರೂ ಡೆವಲಪರ್ಸ್‌ ಈ ಜಮೀನಿನನ್ನು ಅಭಿವೃದ್ಧಿಪಡಿಸಲಿಲ್ಲ. ದೂರುದಾರ ರವಿಯವರು ಅಭಿವೃದ್ಧಿಪಡಿಸಿ ಪ್ಲಾಟ್ …

Read More »

ಬಿಜೆಪಿಯ 4ಶಾಸಕರ ಬಗ್ಗೆ ಪಕ್ಷದೊಳಗೆ ಭಿನ್ನಮತ, ಮತ್ತೆ ಟಿಕೆಟ್‌ ನೀಡಿದ್ದಲ್ಲಿ ಬಂಡಾಯ/ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವುದಾಗಿ ಎಚ್ಚರಿಕೆ

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವ ನಡುವೆಯೇ ಬಿಜೆಪಿಯ ನಾಲ್ವರು ಶಾಸಕರ ಬಗ್ಗೆ ಪಕ್ಷದೊಳಗೆ ಭಿನ್ನಮತ ಭುಗಿಲೆದ್ದಿದೆ. ಶಿವಮೊಗ್ಗ ನಗರ ಶಾಸಕ ಕೆ.ಎಸ್‌. ಈಶ್ವರಪ್ಪ, ಕಲಬುರಗಿ ಜಿಲ್ಲೆಯ ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ್‌ ದೇಸಾಯಿ ಹಾಗೂ ಗದಗ ಜಿಲ್ಲೆಯ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ವಿರುದ್ಧ ತೊಡೆತಟ್ಟಿರುವ ಈ ಕ್ಷೇತ್ರದ ಇತರ ಟಿಕೆಟ್‌ ಆಕಾಂಕ್ಷಿಗಳು, ಹಾಲಿ ಶಾಸಕರಿಗೇ ಮತ್ತೆ ಟಿಕೆಟ್‌ …

Read More »

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ಧಾರವಾಡ : ಧಾರವಾಡ ಗ್ರಾಮೀಣ- 71 ವಿಧಾನಸಭಾ ಮತಕ್ಷೇತ್ರ ಬಿಟ್ಟು ಹೋಗದೇ, ಈ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಆಗ್ರಹಿಸಿ ಇಲ್ಲಿಯ ಬಾರಾಕೋಟ್ರಿಯಲ್ಲಿ ಇರುವ ಮಾಜಿ ಸಚಿವ ವಿನಯ ಕುಲಕರ್ಣಿ ಸ್ವಗೃಹದ ಎದುರು ಬ್ಲಾಕ್ ಕಾಂಗ್ರೆಸ್- 71ರ ನೇತೃತ್ವದಲ್ಲಿ ಅವರ ಅಭಿಮಾನಿಗಳು ರವಿವಾರ ಧರಣಿ ಸತ್ಯಾಗ್ರಹ ನಡೆಸಿದರು.   ಸಿಎಂ ಎದುರು ಸ್ಪರ್ಧೆಗಾಗಿ ಶಿಗ್ಗಾಂವಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವ ಕುರಿತಂತೆ ಚರ್ಚೆ ಆಗುತ್ತಿದ್ದು, ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಯಾವುದೇ ಕಾರಣಕ್ಕೂ ಧಾರವಾಡ …

Read More »

ಹುಬ್ಬಳ್ಳಿಯಲ್ಲಿ ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಿಂದ ಆಟೋ ಡ್ರೈವರ್​​ಗಳಿಗೆ ಫ್ಯಾನ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೇ 10ರಂದು ಮತದಾನ ನಡೆಯಲಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಇನ್ನು ಮಂತ್ರಿಗಳು , ಶಾಸಕರು ತಾವು ಇದ್ದ ಜಾಗದಲ್ಲಿಯೇ ಸರ್ಕಾರಿ ಸವಲತ್ತುಗಳನ್ನು ಬಿಟ್ಟು ಹೋಗಿದ್ದಾರೆ.   ಈ ನಡುವೆಯೇ ಮತದಾರರನ್ನು ಸೆಳೆಯಲು ರಾಜಕೀಯ ನಾಯಕರು ನಾನಾ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆ ಮತದಾರರಿಗೆ ಆಮಿಷ ಒಡ್ಡುವ ಸಲುವಾಗಿ ಗಿಫ್ಟ್‌ ಹಂಚುತ್ತಿದ್ದಾರೆ. ಅಕ್ರಮವನ್ನು ನಡೆಯುವುದಕ್ಕೆ …

Read More »

ಮುಸ್ಲಿಂರ ಓಲೈಕೆಗಾಗಿ ಕಾಂಗ್ರೆಸ್ ಮಾಡಿದ್ದ ಮೀಸಲಾತಿ ರದ್ದು ಮಾಡಿದ್ದೇವೆ: ಜೋಶಿ

ಹುಬ್ಬಳ್ಳಿ: ‘ಮುಸ್ಲಿಮರ ಓಲೈಕೆಗಾಗಿ, ಕಾಂಗ್ರೆಸ್ ಪಕ್ಷ ಅಸಂವಿಧಾನಿಕವಾಗಿ ಧರ್ಮದ ಆಧಾರದ ಮೇಲೆ ಮೀಸಲಾತಿ ಹಂಚಿಕೆ ಮಾಡಿತ್ತು. ಬಿಜೆಪಿ ಅದನ್ನು ರದ್ದು ಪಡಿಸಿ ಅಗತ್ಯವಿರುವ ಸಮಾಜಕ್ಕೆ ಹಂಚಿಕೆ ಮಾಡಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.   ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ನಿರ್ಣಾಯಕ ಪಕ್ಷವಾಗಿ ಅವೈಜ್ಞಾನಿಕವಾಗಿ ಹಂಚಿಕೆಯಾಗಿದ್ದ ಮೀಸಲಾತಿಯನ್ನು ಸರಿಪಡಿಸಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎನ್ನುವುದು ಸಂವಿಧಾನದ ನಿರ್ಮಾತೃರ ಆಶಯವಾಗಿತ್ತು. ಹಾಗೂ ಸುಪ್ರೀಂ …

Read More »

ಹುಬ್ಬಳ್ಳಿಯಲ್ಲಿ ಮಾ.19ಕ್ಕೆ ವಿಪ್ರ ಮಹಾ ಸಮಾವೇಶ-2023

ಹುಬ್ಬಳ್ಳಿ: ‘ವಿಪ್ರ ಮಹಾ ಸಮಾವೇಶ-2023’ ಹುಬ್ಬಳ್ಳಿಯ ಗೋಕುಲ ರಸ್ತೆಯ ಗೋಕುಲ ಗಾರ್ಡನ್‌ನಲ್ಲಿ ಮಾರ್ಚ್‌ 19ರಂದು ನಡೆಯಲಿದೆ ಎಂದು ವಿಪ್ರ ಸೇವಾ ಟ್ರಸ್ಟಿನ ಅಧ್ಯಕ್ಷ ಲಕ್ಷ್ಮಣ ಕುಲಕರ್ಣಿ ಹೇಳಿದರು. ಶುಕ್ರವಾರ ಪ‍ತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಪಂಗಡದ ಹಂಗಿಲ್ಲದೆ ಸಮಸ್ತ ವಿಪ್ರ ಸಮುದಾಯ ಒಂದು ಎಂಬ ಸಂದೇಶ ನೀಡುವುದು, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕೆ ಹಕ್ಕೊತ್ತಾಯ ಮಾಡುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ. ಈ ಬಗ್ಗೆ ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು …

Read More »

ರಾಜ್ಯದ ಸಾರ್ವಭೌಮತೆಗೆ ಧಕ್ಕೆ;ಮಹಾರಾಷ್ಟ್ರ ಸರ್ಕಾರ ವಜಾಕ್ಕೆ ಸಿದ್ದರಾಮಯ್ಯ ಒತ್ತಾಯ

ಹುಬ್ಬಳ್ಳಿ: ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ 865 ಹಳ್ಳಿಗಳ ಜನರಿಗಾಗಿ ಮಹಾರಾಷ್ಟ್ರ ಸರ್ಕಾರವು ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸುತ್ತಿರುವುದು ಅಕ್ಷಮ್ಯ. ಇದು ಒಕ್ಕೂಟದ ವ್ಯವಸ್ಥೆಗೆ, ರಾಜ್ಯದ ಸಾರ್ವಭೌಮತೆಗೆ ಧಕ್ಕೆ ತರುವಂತಿದೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ, ಅಲ್ಲಿನ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಯಮ್ಯ ಒತ್ತಾಯಿಸಿದರು.   ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ‘ರಾಜ್ಯ ಹಾಗೂ ಕನ್ನಡಿಗರ ಹಿತಾಸಕ್ತಿ ಕಾಪಾಡುವಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೂಡ ವಿಫಲರಾಗಿದ್ದಾರೆ. …

Read More »

ಮಹಾರಾಷ್ಟ್ರದಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ;ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ:ಸಿದ್ದರಾಮಯ್ಯ

ಹುಬ್ಬಳ್ಳಿ: ಮಹಾರಾಷ್ಟ್ರದವರು ಗಡಿ ಭಾಗದ ರಾಜ್ಯಕ್ಕೆ ಸುಮಾರು 865 ಗ್ರಾಮಗಳಲ್ಲಿ ಆರೋಗ್ಯ ವಿಮೆ ಜಾರಿ ಘೋಷಣೆ ಮಾಡಿದ್ದು, ಇದು ಒಕ್ಕೂಟ ವ್ಯವಸ್ಥೆ ಗೆ ಧಕ್ಕೆಯಾಗಿದ್ದು,ಕೇಂದ್ರ ಸರಕಾರ ತಕ್ಷಣ ಮಧ್ಯ ಪ್ರವೇಶಿಸಬೇಕು. ವಿಚಾರ ಬಗ್ಗೆ ಮೌನ ತಾಳಿರುವ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.   ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಏಕನಾಥ ಶಿಂಧೆ ಸರಕಾರದ ಹಿರಿಯ ನಾಯಕರೊಬ್ಬರು 865 ವಿವಾದಾತ್ಮಕ ಗಡಿ ಹಳ್ಳಿಗಳಲ್ಲಿ …

Read More »

ಬೆಲೆ ಕುಸಿತಕ್ಕೆ ಕಂಗಾಲಾಗಿ ಗಿಡದಿಂದ ಹತ್ತಿ ಬಿಡಿಸದ ರೈತ.

ಧಾರವಾಡ: ರೈತರ ಪಾಲಿನ ಬಿಳಿ ಬಂಗಾರ ಅಂತಲೇ ಹೆಸರುವಾಸಿಯಾಗಿರುವ ಮತ್ತು ವರ್ಷದಿಂದ ವರ್ಷಕ್ಕೆ ಏರುತ್ತ ಹೊರಟಿದ್ದ ಹತ್ತಿ ಯ ಬೆಲೆ ಈ ಬಾರಿ ಏಕಾಏಕಿಯಾಗಿ ಕುಸಿದಿದ್ದು, ಇದರಿಂದಾಗಿ ರೋಸಿ ಹೋದ ರೈತರು ಇದೀಗ ಹತ್ತಿಯನ್ನು ಬಿಡಿಸದೇ ಗದ್ದೆಯಲ್ಲಿ ಹಾಗೆಯೇ ಬಿಡುತ್ತಿದ್ದು, ಬೆಳೆದು ನಿಂತಲ್ಲಿಯೇ ಹತ್ತಿಯೆಲ್ಲವೂ ಹಾಳಾಗಿ ಹೋಗುತ್ತಿದೆ.   ಧಾರವಾಡ, ನವಲಗುಂದ, ಅಣ್ಣಿಗೇರಿ ತಾಲೂಕಿನ ಭಾಗದಲ್ಲಿ ಹತ್ತಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಾರೆ. ಕಳೆದ ವರ್ಷ ಒಂದು ಕ್ವಿಂಟಾಲ್​ ಹತ್ತಿಗೆ 12 ಸಾವಿರ …

Read More »