Breaking News

ಹುಬ್ಬಳ್ಳಿ

3 ವಿಮಾನ ನಿಲ್ದಾಣಗಳಿಗೆ ನಾಮಕರಣ ಏಕಕಾಲಕ್ಕೆ ನಿರ್ಧಾರ: ಸಿಎಂ

ಹುಬ್ಬಳ್ಳಿ: ‘ಶಿವಮೊಗ್ಗ, ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಾಮಕರಣ ಕುರಿತು ಏಕಕಾಲದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವ ಜನರ ಬೇಡಿಕೆಯಿತ್ತು. ಯಡಿಯೂರಪ್ಪ ನವರೇ ಮತ್ತೆ ಬೇಡ ಎಂದಿದ್ದಾರೆ. ಶೀಘ್ರದಲ್ಲಿಯೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು. ‘ಕಾಂಗ್ರೆಸ್‌ನದ್ದು ಟಿಪ್ಪು ಸಂಸ್ಕೃತಿ, ಬಿಜೆಪಿಯದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಸಂಸ್ಕೃತಿ’ ಎಂಬ …

Read More »

ವೈದ್ಯಕೀಯ ನಿರ್ಲಕ್ಷ್ಯ: ಪ್ರಸೂತಿ ತಜ್ಞೆಗೆ ₹11 ಲಕ್ಷ ದಂಡ

ಧಾರವಾಡ: ವಾಸ್ತವಾಂಶವನ್ನು ಮರೆಮಾಚಿ ಅಂಗವಿಕಲ ಮಗುವಿನ ಜನನಕ್ಕೆ ಕಾರಣವಾದ ಇಲ್ಲಿನ ಮಾಳಮಡ್ಡಿಯ ಪ್ರಶಾಂತ ನರ್ಸಿಂಗ್ ಹೋಮ್‌ನ ಡಾ. ಸೌಭಾಗ್ಯ ಕುಲಕರ್ಣಿ ಅವರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ಮತ್ತು ಪರಿಹಾರವಾಗಿ ₹11.10ಲಕ್ಷ ವಿಧಿಸಿದೆ.   ಇಲ್ಲಿನ ಶ್ರೀನಗರ ಬಡಾವಣೆಯ ಭಾವಿಕಟ್ಟಿ ಪ್ಲಾಟ್ ನಿವಾಸಿ ಪರಶುರಾಮ ಘಾಟಗೆ ಎಂಬುವವರು ತಮ್ಮ ಪತ್ನಿ ಪ್ರೀತಿ ಅವರನ್ನು ಪ್ರಶಾಂತ ನರ್ಸಿಂಗ್ ಹೋಮ್‌ನಲ್ಲಿ 2018ರ ಜುಲೈ 12ರಿಂದ 2019ರ ಜನೆವರಿವರೆಗೆ ತಪಾಸಣೆ ನಡೆಸಿದ್ದಾರೆ. …

Read More »

ಕರ್ನಾಟಕ ವಿದ್ಯಾವರ್ಧಕ ಸಂಘ: 12 ಲೇಖಕಿಯರಿಗೆ ರತ್ನಮ್ಮ ಹೆಗ್ಗಡೆ ಪ್ರಶಸ್ತಿ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಮಹಿಳಾ ಸಾಹಿತ್ಯಕ್ಕೆ ನೀಡುವ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನವು ನಾಲ್ಕು ವರ್ಷಗಳ ಅವಧಿಗೆ 12 ಲೇಖಕಿಯರಿಗೆ ಲಭಿಸಿದೆ. 2018ರಿಂದ 2021ರವರೆಗೆ ಒಟ್ಟು 115 ಕೃತಿಗಳು ಆಯ್ಕೆಯಾಗಿ ಬಂದಿದ್ದವು. ನಿರ್ಣಾಯಕರು ಪ್ರತಿ ಸಾಲಿನಲ್ಲಿ ಮೂರು ಕೃತಿಗಳಂತೆ ಆಯ್ಕೆ ಮಾಡಿ ಒಟ್ಟು 12 ಕೃತಿಗಳಿಗೆ ಬಹುಮಾನ ನೀಡಿದ್ದಾರೆ. 2018ನೇ ಸಾಲಿನಲ್ಲಿ ಬೆಂಗಳೂರಿನ ಉಮಾ ಮುಕುಂದ ಅವರ ‘ಕಡೆ ನಾಲ್ಕು ಸಾಲು’ ಕವನ ಸಂಕಲನ, ಕೊಪ್ಪದ ದೀಪಾ …

Read More »

ರಾಜ್ಯದ ರೈಲು ಯೋಜನೆಗೆ ದಾಖಲೆ ಅನುದಾನ ಹಂಚಿಕೆ

ಹುಬ್ಬಳ್ಳಿ: ಕೇಂದ್ರ ಬಜೆಟ್​ನಲ್ಲಿ ಈ ಬಾರಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಅಂದಾಜು 7,561 ಕೋಟಿ ರೂ. ದಾಖಲೆ ಪ್ರಮಾಣದ ಅನುದಾನ ನೀಡಲಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. 2014ರಲ್ಲಿನ 835 ಕೋಟಿ ರೂ.ಗೆ ಹೋಲಿಸಿದರೆ 9 ಪಟ್ಟು ಹೆಚ್ಚಾಗಿದೆ. ರಾಜ್ಯದಲ್ಲಿ ಅಂದಾಜು 49,536 ಕೋಟಿ ರೂ. ಮೊತ್ತದ ಯೋಜನೆಗಳು ಪ್ರಗತಿಯಲ್ಲಿವೆ ಎಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ …

Read More »

ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಮಾತ್ರೆ-ಇಂಜೆಕ್ಷನ್; ಲೋಕಾಯುಕ್ತ ಭೇಟಿ ವೇಳೆ ಬಯಲಾದ ಸಂಗತಿ

ಹುಬ್ಬಳ್ಳಿ: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಅವಧಿ ಮುಗಿದ ಮಾತ್ರೆ ಹಾಗೂ ಚುಚ್ಚುಮದ್ದು ಪತ್ತೆಯಾಗಿರುವ ಆತಂಕಕಾರಿ ಸಂಗತಿಯೊಂದು ಹೊರಬಂದಿದೆ. ಲೋಕಾಯುಕ್ತ ತಂಡ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಅವಧಿ ಮುಗಿದ ಮಾತ್ರೆಗಳು ಮತ್ತು ಇಂಜೆಕ್ಷನ್​ಗಳು ಪತ್ತೆಯಾಗಿವೆ. ಈ ತಾಲೂಕಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾಗ ಕೆಲವು ಮಾತ್ರೆ-ಇಂಜೆಕ್ಷನ್​ಗಳ ಅವಧಿ ಮುಗಿದಿರುವುದು ಕಂಡುಬಂದಿತ್ತು. ಲೋಕಾಯುಕ್ತ ಅಧಿಕಾರಿಗಳು ಆಸ್ಪತ್ರೆ ಸಿಬ್ಬಂದಿಯನ್ನು ಪ್ರಶ್ನಿಸಿದಾಗ …

Read More »

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ಧಾರವಾಡ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡನೆ ಮಾಡುತ್ತಿದ್ದು ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟಿರುವುದು ವಿಶೇಷ. ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್ ನ ಮಹಿಳಾಮಣಿಗಳು ಅನ್ನುವುದು ಇನ್ನೂ ವಿಶೇಷ.   ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ …

Read More »

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ನಾಳೆ `ರೈತ ಶಕ್ತಿ’ ಸೇರಿ ಹಲವು ರೈತ ಕಲ್ಯಾಣ ಯೋಜನೆಗಳಿಗೆ ಸಿಎಂ ಚಾಲನೆ

ಧಾರವಾಡ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಾಳೆ ರೈತ ಶಕ್ತಿ ಸೇರಿದಂತೆ ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಇಲಾಖೆಯ ಕ್ರೀಡಾಂಗಣ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ.   ರೈತ ಶಕ್ತಿ ರಾಜ್ಯದ ಎಲ್ಲಾ ವರ್ಗದ ರೈತರಿಗೆ ಪ್ರತಿ ಎಕರೆಗೆ ರೂ. 250/- ಗಳಂತೆ ಗರಿಷ್ಠ 95 ಎಕರೆಗೆ ರೂ.1250/- ಗಳನ್ನು ಕೃಷಿ ಯಂತ್ರೋಪಕರಣಗಳ ಬಳಕೆಯ ಪ್ರೋತ್ಸಾಹಕ್ಕೆ ಹಾಗೂ ಇಂಧನ …

Read More »

ನಾನು ಬೆಳಗಾವಿಗೆ ಮತ್ತೊಮ್ಮೆ ಬರುತ್ತೇನೆ ಅಷ್ಟರೊಳಗೆ ಎಲ್ಲ ಭಿನ್ನಮತ ಮುಗಿದಿರಬೇಕು:ಅಮಿತ್ ಶಾ

ಹುಬ್ಬಳ್ಳಿ: ನಾಲ್ಕೈದು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಸಲ ತ್ರಿಕೋನ ಸ್ಪರ್ಧೆಯಿಲ್ಲ, ಬಿಜೆಪಿ- ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಶನಿವಾರ ಬಿಜೆಪಿ ಹಮ್ಮಿಕೊಂಡ ‘ವಿಜಯ ಸಂಕಲ್ಪ ಅಭಿಯಾನ’ ಅಂಗವಾಗಿ ರೋಡ್ ಶೋ ನಡೆಸಿದ ನಂತರ ಅವರು ಮಾತನಾಡಿದರು.   ರಾಜ್ಯದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ಗೆ ಅಷ್ಟೆ ಅಲ್ಲ, …

Read More »

ಡಾ.ರಾಜೇಂದ್ರ ಚೆನ್ನಿ, ಡಾ.ಜಿನದತ್ತ ದೇಸಾಯಿಗೆ ಬೇಂದ್ರೆ ರಾಷ್ಟ್ರೀಯ ಪ್ರಶಸ್ತಿ

ಧಾರವಾಡ: ವರಕವಿ ಡಾ.ದ.ರಾ.ಬೇಂದ್ರೆ ಅವರ 127ನೇ ಜನ್ಮದಿನಾಚರಣೆ ಪ್ರಯುಕ್ತ ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ್ ವತಿಯಿಂದ ಕೊಡ ಮಾಡುವ 2023ನೇ ಸಾಲಿನ ಅಂಬಿಕಾತನಯದತ್ತ ರಾಷ್ಟೀಯ ಪ್ರಶಸ್ತಿಗೆ ಈ ಸಲ ಇಬ್ಬರು ಭಾಜನರಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ ಹೇಳಿದರು.   ನಗರದ ಬೇಂದ್ರೆ ಭವನದಲ್ಲಿ ಮಂಗಳವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಲಕ್ಷ ನಗದು, ಸ್ಮರಣಿಕೆ ಫಲಕ ಒಳಗೊಂಡ ಈ ಪ್ರಶಸ್ತಿಯನ್ನು ಪ್ರತ್ಯೇಕ ತಲಾ 50 ಸಾವಿರದಂತೆ ಮೂಲತ: …

Read More »

ಗುಜರಾತ್ ಸೇರಿ ಮೂರು ರಾಜ್ಯಗಳಲ್ಲಿ ಫಾರ್ಮಾ ಪಾರ್ಕ್: ಕೇಂದ್ರ ಸಚಿವ ಖೂಬಾ

ಹುಬ್ಬಳ್ಳಿ: ‘ಆಂಧ್ರಪ್ರದೇಶ, ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಫಾರ್ಮಾ ಪಾರ್ಕ್ ಸ್ಥಾಪಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ’ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.   ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಫಾರ್ಮಾ ಪಾರ್ಕ್ ಸ್ಥಾಪಿಸಲು ಅನುಮತಿ ಕೋರಿ ದೇಶದ ವಿವಿಧ ರಾಜ್ಯಗಳಿಂದ ಪ್ರಸ್ತಾವಗಳು ಬಂದಿದ್ದವು. ರಾಜ್ಯದ ಯಾದಗಿರಿಯಲ್ಲಿ ಸ್ಥಾಪಿಸಲು ರಾಜ್ಯದಿಂದಲೂ ಪ್ರಸ್ತಾವ ಬಂದಿತ್ತು. ರಾಜ್ಯ ಸರ್ಕಾರಗಳು …

Read More »