Breaking News
Home / ಹುಬ್ಬಳ್ಳಿ (page 57)

ಹುಬ್ಬಳ್ಳಿ

ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ; 577 ನಾಮಪತ್ರ ಸಲ್ಲಿಕೆ

ಧಾರವಾಡ, ಆಗಸ್ಟ್ 24; ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟು 577 ನಾಮಪತ್ರಗಳು ಸಲ್ಲಿಕೆಯಾಗಿವೆ. 82 ವಾರ್ಡ್‌ಗಳಿಂದ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದ್ದು, ಸೆಪ್ಟೆಂಬರ್ 6ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಸೋಮವಾರ ಕೊನೆಯ ದಿನವಾಗಿತ್ತು. ಸೋಮವಾರ 478 ನಾಮಪತ್ರಗಳು ಸಲ್ಲಿಕೆಯಾಗಿದ್ದು, 82 ವಾರ್ಡ್‌ಗಳಿಗೆ ಒಟ್ಟು 577 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಪ್ರಕಟಣೆಯಲ್ಲಿ ಹೇಳಿದ್ದಾರೆ.   …

Read More »

ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ, ಹೊಸಬರಿಂದಲೇ ಪಕ್ಷ ಕಟ್ಟುತ್ತೇನೆ: H.D.K.

ಹುಬ್ಬಳ್ಳಿ: ಜನತಾ ಪರಿವಾರದ ಹಳಬರನ್ನು ಒಟ್ಟುಗೂಡಿಸುವ ಆಸಕ್ತಿ ಇಲ್ಲ. ಹೊಸಬರಿಂದಲೇ ಪಕ್ಷ ಕಟ್ಟುತ್ತೇನೆ. ನನಗೆ ಮಮತಾ ಬ್ಯಾನರ್ಜಿಯವರೇ ಸ್ಫೂರ್ತಿ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲಾ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ. ಕಾರ್ಯಕರ್ತರಲ್ಲಿ ಇಚ್ಛಾಶಕ್ತಿ ಕೊರತೆ ಇದೆ. ನಾನು ಬೆಂಗಳೂರಿಗೆ ಹೋಗುತ್ತಿದ್ದಂತೆ, ಮನೆಗೆ ಹೋಗಿ ಮಲಗುತ್ತಾರೆ. ಹೀಗಾಗಿ ನಮ್ಮ ಪಕ್ಷ ಉತ್ತರ ಕರ್ನಾಟಕದಲ್ಲಿ ಸಂಘಟನೆ ಆಗುತ್ತಿಲ್ಲ ಎಂದರು. ಇನ್ನು ಮುಖ್ಯಮಂತ್ರಿ …

Read More »

ಧಾರವಾಡ: ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಿ ಸ್ವಾಗತಿಸಿದ ಜಿಲ್ಲಾಧಿಕಾರಿ

ಹುಬ್ಬಳ್ಳಿ: ‘ಹದಿನೆಂಟು ತಿಂಗಳ ನಂತರ ಶಾಲೆ ಮತ್ತು ಕಾಲೇಜುಗಳು ಪುನರಾರಂಭವಾಗುತ್ತಿವೆ. ವಿದ್ಯಾರ್ಥಿಗಳು ಶುಚಿತ್ವ ಮತ್ತು ಆರೋಗ್ಯ ಸುರಕ್ಷತೆಯ ಕ್ರಮಗಳೊಂದಿಗೆ ಕಲಿಕೆಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದರು. ನವನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 9ರಿಂದ 12ನೇ ತರಗತಿಗಳ ಪುನರಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಹೂವು ನೀಡಿ ಸ್ವಾಗತಿಸಿ ಮಾತನಾಡಿದ ಅವರು, ‘ತರಗತಿಗಳ ಪುನರಾರಂಭ ಸಂತೋಷದಾಯಕ. ಭವಿಷ್ಯ ಉಜ್ವಲವಾಗಿಸಿಕೊಳ್ಳಲು ವಿದ್ಯಾರ್ಥಿಗಳು ದೊಡ್ಡ ಗುರಿ ಹೊಂದಿರಬೇಕು. ಆಸಕ್ತಿದಾಯಕ …

Read More »

ಪಕ್ಷ ಸಂಘಟನೆಗೆ ಮಮತಾ ಬ್ಯಾನರ್ಜಿಯೇ ಸ್ಫೂರ್ತಿ: ಎಚ್‌.ಡಿ. ಕುಮಾರಸ್ವಾಮಿ

ಹುಬ್ಬಳ್ಳಿ: ‘ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ನನಗೆ ಸ್ಫೂರ್ತಿ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಟಿಎಂಸಿಯ ಸುಮಾರು 60ರಿಂದ 70 ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಿತು. ಆದರೂ, ಮಮತಾ ಅವರು ಏಕಾಂಗಿಯಾಗಿ ಹೋರಾಡಿ ಚುನಾವಣೆಯಲ್ಲಿ ಮತ್ತೆ ಗೆದ್ದು ಬಂದರು. ಪಕ್ಷ ಕಟ್ಟಲು ಅವರಿಗಿಂತ ಸ್ಫೂರ್ತಿ ಬೇಕೇ’ ಎಂದರು. …

Read More »

ಜಾತಿ ಗಣತಿ’ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

ಹುಬ್ಬಳ್ಳಿ : ಜಾತಿ ಗಣತಿ ವಿಚಾರದ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಜಾತಿ ಗಣತಿ ವರದಿಯನ್ನು ಹಿಂದುಳಿದ ಆಯೋಗ ಕೂಡ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಜಾತಿ ಗಣತಿ ವಿಚಾರ ನ್ಯಾಯಾಲಯದ ಅಂಗಳದಲ್ಲಿದ್ದು, ಇತ್ಯರ್ಥಕ್ಕೆ ಕಾಲಾವಕಾಶವಿದೆ. ಈ ಕುರಿತು ವಿರೋಧ ಪಕ್ಷದವರಷ್ಟೇ ಅಲ್ಲ. ಯಾರೂ ಬೇಕಾದರೂ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಬಹುದು ಎಂದು ಹೇಳಿದ್ದಾರೆ. ಗುಂಡು ಹಾಕಿದರೂ ಸಾರ್ವಜನಿಕ ಗಣೇಶ …

Read More »

ಮಾಜಿ ಸಚಿವ ವಿನಯ್ ಕುಲಕರ್ಣಿ ಮುಂದಿನ ನಡೆ ಏನು?

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ (Vinay Kulkarni) ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಇದೀಗ ಜಾಮೀನು ಮೇಲೆ ಬಿಡುಗಡೆ ಆಗಿದ್ದಾರೆ. ಆದರೆ ಅವರು ಧಾರವಾಡ ಜಿಲ್ಲೆಗೆ ಹೋಗುವಂತಿಲ್ಲ ಅಂತಾ ಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಅವರು ಬೆಂಗಳೂರಿನಲ್ಲಿಯೇ ಇರಬೇಕು ಅನ್ನುವುದು ಕೂಡ ನ್ಯಾಯಾಲಯದ ಆದೇಶದಲ್ಲಿ ಸ್ಪಷ್ಟವಾಗಿದೆ. ಹಾಗಾದರೆ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ ಎಲ್ಲಿಗೆ ಹೋದರು ಎನ್ನುವುದು ಇದೀಗ ಕುತೂಹಲ ಮೂಡಿಸಿದೆ. …

Read More »

ಬ್ಯಾಂಕ್ ಸಿಬ್ಬಂದಿ ಕೊಂಚ ಯಾಮಾರಿದ್ದರೂ ಸಾಕಿತ್ತು ಯುವರಾಜ ಬಿರಾದಾರ ಎಂಬಾತ ಎರಡೂವರೆ ಕೋಟಿ ರೂಪಾಯಿಯನ್ನು ತನ್ನದಾಗಿಸಿಕೊಂಡು ಹೋಗುತ್ತಿದ್ದ

ಧಾರವಾಡ: ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂಬ ಮಾತಿದೆ. ಯಾರದ್ದೋ ದುಡ್ಡಿನಲ್ಲಿ ಮೋಜು-ಮಸ್ತಿ ಮಾಡುವವರನ್ನು ಕಂಡು ಈ ಮಾತು ರೂಢಿಯಲ್ಲಿ ಬಂದಿದೆ. ಇಂಥ ಮಾತಿಗೆ ಧಾರವಾಡದಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ. ಆದರೆ ಇಲ್ಲಿ ದುಡ್ಡು ಸಿಗೋದಕ್ಕೂ ಮುನ್ನಾ ಖದೀಮರ ಮರ್ಮ ಗೊತ್ತಾಗಿ, ಅವರೆಲ್ಲಾ ಸಿಕ್ಕಿಬಿದ್ದಿದ್ದಾರೆ. ಬ್ಯಾಂಕ್ ನ ಮ್ಯಾನೇಜರ್ ಕೊಂಚ ಯಾಮಾರಿದ್ದರೂ ಖದೀಮರ ದಂಡು ಕೋಟಿ ಕೋಟಿ ರೂಪಾಯಿ ಹಣವನ್ನು ಎಗರಿಸಿಕೊಂಡು ಪರಾರಿಯಾಗುತ್ತಿತ್ತು. ಆದರೆ ಹಾಗಾಗಲಿಲ್ಲ ಅನ್ನುವುದೇ ಸಮಾಧಾನದ ಸಂಗತಿ. …

Read More »

ಹುಬ್ಬಳ್ಳಿ: ಉಪ ನೋಂದಣಾಧಿಕಾರಿಗಳ ವರ್ಗಾವಣೆಗೆ ಪಟ್ಟು

ಹುಬ್ಬಳ್ಳಿ: ದಾಖಲೆಗಳ ನೋಂದಣಿಗೆ ಉಪ ನೋಂದಣಾಧಿಕಾರಿಗಳು ವಿನಾಕಾರಣ ಅಲೆದಾಡಿಸುತ್ತಾರೆ. ಅವರನ್ನು ವರ್ಗಾವಣೆ ಮಾಡುವ ತನಕ ಹುಬ್ಬಳ್ಳಿಯ ಉತ್ತರದ ಕಚೇರಿಯಲ್ಲಿ ಯಾವುದೇ ದಾಖಲೆಗಳ ನೋಂದಣೆ ಮಾಡಿಸುವುದಿಲ್ಲ ಎಂದು ವಿವಿಧ ಸಂಸ್ಥೆಯವರು ಮಂಗಳವಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಭಾರತೀಯ ರಿಯಲ್‌ ಎಸ್ಟೇಟ್‌ ನಿರ್ಮಾಣಗಾರರ ಸಂಘಗಳ ಒಕ್ಕೂಟ (ಕ್ರೆಡಾಯ್), ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ವಾಸ್ತುಶಿಲ್ಪ ಸಂಘ, ಸಿವಿಲ್‌ ಎಂಜಿನಿಯರ್‌ಗಳ ಸಂಘ ಮತ್ತು ದಸ್ತಾವೇಜು ಬರಹಗಾರರ ಸಂಘದವರು ಉಪ ನೋಂದಣಾಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. …

Read More »

ಧಾರವಾಡ ಕೃಷಿ ವಿವಿಯಲ್ಲಿ ಅಪ್ಘಾನ್ ವಿದ್ಯಾರ್ಥಿಗಳ ಕಣ್ಣಿರು

ಧಾರವಾಡ: ಇಲ್ಲಿಯ ಕೃಷಿ ವಿಶ್ವವಿದ್ಯಾಲಯಕ್ಕೆ ಪಿಎಚ್ ಡಿ ಅಧ್ಯಯನಕ್ಕೆ ಬಂದಿರುವ ಅಪಘಾನಿಸ್ತಾನದ ವಿದ್ಯಾರ್ಥಿಗಳು ತಮ್ಮ ದೇಶದ ರಾಜಕೀಯ ಅಧಃಪತನ ನೋಡಿ ಇದೀಗ ಕಣ್ಣೀರು ಇಟ್ಟಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಕೃಷಿ ಸಂರಕ್ಷಣಾ ವಿಷಯದಲ್ಲಿ ಪಿಎಚ್‌ಡಿ ಮಾಡಲು ಬಂದಿರುವ ಈ ವಿದ್ಯಾರ್ಥಿಗಳು, ತಮ್ಮ ದೇಶವನ್ನು ತಾಲಿಬಾನಿಗಳು ವಶಕ್ಕೆ ಪಡೆದಿರುವುದನ್ನು ಕೇಳಿ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಒಟ್ಟು 15 ವಿದ್ಯಾರ್ಥಿಗಳು ಕೃಷಿ ವಿವಿಗೆ ಅಧ್ಯಯನಕ್ಕೆಂದು ಬಂದಿದ್ದರು. ಕೊರೊನಾ ಎರಡನೇ ಅಲೆ ವೇಳೆ ಐವರು ವಿದ್ಯಾರ್ಥಿಗಳು ಮರಳಿ …

Read More »

ಮಹದಾಯಿ ಹೋರಾಟದಿಂದ ಅಧಿಕಾರಕ್ಕೆ ಬಂದಿದ್ದೇವೆ,ಮಹದಾಯಿ ಕೈತಪ್ಪಲು ಬಿಡುವುದಿಲ್ಲ : ಸಚಿವ ಮುನೇನಕೊಪ್ಪ

ಹುಬ್ಬಳ್ಳಿ : ಮಹದಾಯಿ ವಿಷಯದಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ರಾಜ್ಯದ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಮಹದಾಯಿ ಮೂರು ರಾಜ್ಯಗಳ ಅಂತರಾಜ್ಯ ಸಮಸ್ಯೆ. ಹೀಗಾಗಿ ಕಾನೂನಾತ್ಮಕವಾಗಿ ಆ ಪ್ರಕ್ರಿಯೆ ಮುಂದುವರೆದಿದೆಈಗಾಗಲೇ 1677 ಕೋಟಿ ಮಹದಾಯಿಗಾಗಿ ಬಜೆಟ್‌ನಲ್ಲಿ ಮೀಸಲಿಡಲಾಗಿದೆ ಡಿಪಿಆರ್ ಮಾಡಲು ಸಿಡಬ್ಲ್ಯುಸಿಗೆ ಅನುಮತಿ ಕೇಳುವ ಪ್ರಯತ್ನದಲ್ಲಿದ್ದೇವೆ ಎಂದರು. ಮಹದಾಯಿ ಹೋರಾಟದಿಂದ …

Read More »