Breaking News

ಹುಬ್ಬಳ್ಳಿ

ಹುಬ್ಬಳ್ಳಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಕಾರಣ ಒಂದಲ್ಲ ಎರಡಲ್ಲ

ಹುಬ್ಬಳ್ಳಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಕಾರಣ ಒಂದಲ್ಲ ಎರಡಲ್ಲ ಎಂಬಂತಾಗಿದೆ. ಸಮಸ್ಯೆ ಜೊತೆಗೆ ಗೊಂದಲವೂ ಸೇರಿ ಕೊನೆಗೆ ಈ ವಿದ್ಯಾರ್ಥಿನಿ ಸಾವಿನ ಮೊರೆ ಹೋಗಿದ್ದಳು. ಹುಬ್ಬಳ್ಳಿಯ ಕಾರವಾರ ರಸ್ತೆಯ ಪೊಲೀಸ್​ ಕ್ವಾರ್ಟರ್ಸ್​ನಲ್ಲಿ ಈ ಆತ್ಮಹತ್ಯೆ ನಡೆದಿದೆ.   ಹೆಡ್​ ಕಾನ್​ಸ್ಟೆಬಲ್​​ ಮಲ್ಲಪ್ಪ ಬದಾಮಿ ಎಂಬುವರ ಪುತ್ರಿ ಕಾವ್ಯಾ ಬದಾಮಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಎಸ್​ಎಸ್​ಎಲ್​ಸಿಯಲ್ಲಿ ಹೆಚ್ಚು ಅಂಕ ಗಳಿಸಿದ್ದಳು. ಆದರೆ ಪಿಯುಸಿ ಪ್ರಥಮ ವರ್ಷದ ಪರೀಕ್ಷೆಯಲ್ಲಿ …

Read More »

ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ತಾನು ಧರಿಸಿದ್ದ ಶರ್ಟ್ ನಿಂದ ಇಡ್ಲಿ-ವಡೆಯನ್ನು ಮುಚ್ಚಿದ್ದ ವ್ಯಾಪಾರಿ: ಶಿಸ್ತು ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಹುಬ್ಬಳ್ಳಿ: ರೈಲಿನಿಂದ ಇಡ್ಲಿ-ವಡೆ ಮಾರಾಟ ಮಾಡುವ ವ್ಯಾಪಾರಿ ತಾನು ಧರಿಸುವ ಶರ್ಟ್ ನಲ್ಲಿ ಆಹಾರವನ್ನು ಮುಚ್ಚಿದ್ದ ವಿಡಿಯೊ ವೈರಲ್ ಆಗಿದ್ದು ರೈಲುಗಳಲ್ಲಿ ಮಾರಾಟ ಮಾಡಿಕೊಂಡು ಬರುವ ಊಟ ತಿಂಡಿಗಳ ಸ್ವಚ್ಛತೆ ಬಗ್ಗೆ ಮತ್ತೆ ಮತ್ತೆ ಪ್ರಯಾಣಿಕರು, ಸಾರ್ವಜನಿಕರು ಪ್ರಶ್ನೆ ಮಾಡುವಂತೆ ಮಾಡಿದೆ.   ರೈಲು ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಪ್ರಯಾಣಿಕರಿಗೆ ಮಾರಾಟ ಮಾಡುವ ಆಹಾರ ಬಗ್ಗೆ ವ್ಯಾಪಾರಿಗಳು ಸ್ವಚ್ಛತೆಗೆ ಗಮನ ಹರಿಸಬೇಕೆಂದು ಮತ್ತು ಧರಿಸಿದ್ದ ಶರ್ಟ್ ನಿಂದ ಇಡ್ಲಿ-ವಡೆಯನ್ನು ಮುಚ್ಚಿದ್ದ ವ್ಯಾಪಾರಿ …

Read More »

ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ

ಧಾರವಾಡ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ಇಲ್ಲಿಯ ವಿದ್ಯಾಗಿರಿಯಲ್ಲಿ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಹುಬ್ಬಳ್ಳಿ ಮೂಲದ ವಿದ್ಯಾಧರ ಸಾಕರೆ ಎಂಬುವವರ ಕುಟುಂಬ ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಕಾರ್ಯಕ್ರಮಕ್ಕೆಂದು ಬರುತ್ತಿದ್ದ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಹತ್ತಿದೆ. ತಕ್ಷಣ ಕಾರಿನಲ್ಲಿದ್ದ ಕುಟುಂಬದ ನಾಲ್ವರು ಕಾರಿನಿಂದ ಕೆಳಗಿಳಿದಿದ್ದಾರೆ. ಕ್ಷಣಮಾತ್ರದಲ್ಲಿ ಬೆಂಕಿ ಕಾರಿಗೆಲ್ಲ ಆವರಿಸಿಕೊಂಡಿದೆ. …

Read More »

ಹುಬ್ಬಳ್ಳಿಯ ಲತಾ ಮೋಹನ ಸಂಕೇಶ್ವರ ನಿಧನ

ಹುಬ್ಬಳ್ಳಿ: ಹುಬ್ಬಳ್ಳಿಯ ಮೋಹನ ಪ್ರಿಂಟಿಂಗ್ ಪ್ರೆಸ್ ಮಾಲೀಕರಾದ ಮೋಹನ ಸಂಕೇಶ್ವರ ಅವರ ಧರ್ಮಪತ್ನಿ ಶ್ರೀಮತಿ ಲತಾ ಮೋಹನ ಸಂಕೇಶ್ವರ(59) ಸೋಮವಾರ ನಿಧನರಾದರು. ಲತಾ ಮೋಹನ ಸಂಕೇಶ್ವರ ಅವರು ದೇಶಪಾಂಡೆ ನಗರದ ವಾಸವಿದ್ದರು. ಇವರಿಗೆ ಪತಿ, ಪುತ್ರ ಸಂತೋಷ ಸಂಕೇಶ್ವರ, ಪುತ್ರಿ ಸ್ನೇಹಾ ಗುರುರಾಜ ಕಡಿವಾಳ, ಸೊಸೆ ಶ್ವೇತಾ ಸಂತೋಷ ಸಂಕೇಶ್ವರ ಹಾಗೂ ಅಪಾರ ಬಂಧುಗಳು ಇದ್ದಾರೆ. ಮಂಟೂರ ರಸ್ತೆಯ ಕಲಬುರ್ಗಿ ಮಠದ ರುದ್ರಭೂಮಿಯಲ್ಲಿ ಇಂದು ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. …

Read More »

ಲವರ್‌ ಜತೆಗೂಡಿ ತಮ್ಮನನ್ನೇ ಕೊಲೆ ಮಾಡಿ ಶವದ ಮುಂದೆ ಗೋಳೋ ಎಂದು ಅತ್ತ ಹುಬ್ಬಳ್ಳಿ ಹೆಣ್ಣು!

ಹುಬ್ಬಳ್ಳಿ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನ ಜತೆಗೆ ಸೇರಿ ತಮ್ಮನನ್ನೇ ಅಕ್ಕ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಕಳೆದ ಎರಡೂ ದಿನಗಳ ಹಿಂದೆ ನಡೆದ ಕೊಲೆ ಪ್ರಕರಣ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ. ಶಂಭುಲಿಂಗ ಕಮಡೊಳ್ಳಿ(35) ಕೊಲೆಯಾದ ಯುವಕ. ಅಕ್ಕ ಮತ್ತು ಪ್ರಿಯಕರ ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ …

Read More »

ಸಿಎಂ ಕಾರ್ಯಕ್ರಮಕ್ಕೂ ತಟ್ಟಿತು ಲೋಡ್ ಶೆಡ್ಡಿಂಗ್ ಬಿಸಿ

ಧಾರವಾಡ: ಸಿಎಂ ಹಾಗೂ ಕೇಂದ್ರ ಹಾಗೂ ರಾಜ್ಯ ಸಚಿವರು ಭಾಗವಹಿಸಿದ್ದ ಉಳವಿ ಚನ್ನಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲೂ ವಿದ್ಯುತ್ ವ್ಯತ್ಯಯದ ಬಿಸಿ ಉಂಟಾಗಿದೆ. Advertisements ಧಾರವಾಡದಲ್ಲಿ ಇಂದು ಉಳವಿ ಚನ್ನಬಸವೇಶ್ವರರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಹಾಲಪ್ಪ ಆಚಾರ್ ಭಾಗವಹಿಸಿದ್ದರು. ಮೊದಲು ರೇಲ್ವೆ ಸ್ಟೇಷನ್ ರಸ್ತೆಯಲ್ಲಿ ಇರುವ ಚನ್ನಬಸವೇಶ್ವರ ಪುತ್ಥಳಿ ಅನಾವರಣ ಮಾಡಿದ …

Read More »

ಹುಬ್ಬಳ್ಳಿಯಲ್ಲಿ ಏಷ್ಯಾದಲ್ಲಿಯೇ ಅತಿದೊಡ್ಡ ಭಗವದ್ಗೀತಾ ಜ್ಞಾನ ದಿವ್ಯಕಲಾಲೋಕ ಅನಾವರಣ

ಧಾರವಾಡ : ಮುಗಿಲೆತ್ತರಕ್ಕೆ ತಲೆಯೆತ್ತಿರುವ ಕಟ್ಟಡ. ಒಳಗೆ ಹೋದಂತೆ ನಿಸರ್ಗ ಸೌಂದರ್ಯ ಉಣಬಡಿಸುವ ಪರಿಸರ. ಮುಂದೆ ಹೆಜ್ಜೆ ಹಾಕುತ್ತಿದ್ದಂತೆ ಆಧ್ಯಾತ್ಮಿಕ ಜೀವನಕ್ಕೆ ಅಗತ್ಯವಾದ ಚಿತ್ರಣಗಳು. ಇದೆಲ್ಲದಕ್ಕೂ ಸಾಕ್ಷಿಯಾಗಿರುವುದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನಿರ್ಮಾಣ ಮಾಡಿರುವ ಜ್ಞಾನಲೋಕ ಮ್ಯೂಸಿಯಂ/ಭಗವದ್ಗೀತಾ ಜ್ಞಾನ ದಿವ್ಯಕಲಾಲೋಕ. ಇಷ್ಟು ದಿನ ವಾಣಿಜ್ಯನಗರಿಯಾಗಿ ಬಿಂಬಿತವಾಗಿದ್ದ ಹುಬ್ಬಳ್ಳಿ ಇನ್ಮುಂದೆ ಧಾರ್ಮಿಕ ಹಾಗೂ ಆಧ್ಯಾತ್ಮಿಕ ನಗರವಾಗಿ ಹೊರಹೊಮ್ಮಲಿದೆ. ಇಲ್ಲಿನ ಬೈರಿದೇವರಕೊಪ್ಪದ ಗಾಮನಗಟ್ಟಿ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಈ ಮ್ಯೂಸಿಯಂ ಏಷ್ಯಾದಲ್ಲಿಯೇ ಅತಿದೊಡ್ಡ ಮ್ಯೂಸಿಯಂ …

Read More »

ಮಿಷನ್ 150 ಕಷ್ಟ!; ಬಿಜೆಪಿ ನಿದ್ದೆಗೆಡಿಸಿದ ಆಂತರಿಕ ಸಮೀಕ್ಷೆ?

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೂಮ್ಮೆ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿರುವ ಬಿಜೆಪಿ ವಿಧಾನಸಭೆ ಚುನಾವಣೆ ತಯಾರಿಯಲ್ಲಿ ತೊಡಗಿದ್ದರೂ, ಪಕ್ಷ ನಡೆಸಿದ ಆಂತರಿಕ ಸಮೀಕ್ಷೆ ನಾಯಕರ ನಿದ್ದೆಗೆಡಿಸಿದೆ ಎಂದು ಹೇಳಲಾಗಿದೆ. ಬಿಜೆಪಿ ಮಿಷನ್‌-150 ಗುರಿ ತಲುಪುವುದು ಕಷ್ಟ. ಮುಖಂಡರ ವಿವಾದಾತ್ಮಕ ಹೇಳಿಕೆ, ನಾಯಕತ್ವ ಪ್ರಶ್ನಿಸುವ ರೀತಿಯ ಅನಿಸಿಕೆ, ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಕಸರತ್ತು, ವಲಸಿಗರ ಮೇಲೆ ಮೂಡದ ಪೂರ್ಣ ಪ್ರಮಾಣದ ವಿಶ್ವಾಸ, ಗುತ್ತಿಗೆದಾರನ ಆತ್ಮಹತ್ಯೆ, ಪಿಎಸ್‌ಐ ನೇಮಕ ಹಗರಣ, ಧಾರ್ಮಿಕ ಸೂಕ್ಷ್ಮ ವಿಚಾರದಲ್ಲಿ ಎದ್ದ …

Read More »

ತಂದೆ ಮೊಬೈಲ್ ಗೆ ಕರೆನ್ಸಿ ಹಾಕಲಿಲ್ಲವೆಂದು ಗೊರಪ್ಪನ ವೇಷ ತೊಟ್ಟು ತ್ರಿಶೂಲವನ್ನ ಮರ್ಮಾಂಗಕ್ಕೇ ಸಿಕ್ಕಿಸಿಕೊಂಡ ಯುವಕ

ಹುಬ್ಬಳ್ಳಿ; ತಂದೆ ಮೊಬೈಲ್ ಗೆ ಕರೆನ್ಸಿ ಹಾಕಲಿಲ್ಲವೆಂದು ಗೊರಪ್ಪನ ವೇಷ ತೊಟ್ಟು ತ್ರಿಶೂಲವನ್ನ ತರಡಿನಲ್ಲಿ ಸಿಕ್ಕಿಸಿಕೊಂಡ ಯುವಕ ನೋರ್ವ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿರುವ ಪ್ರಕರಣವೊಂದು ಧಾರವಾಡ ತಾಲೂಕಿನ ನವಲೂರ ಗ್ರಾಮದಲ್ಲಿ ನಡೆದಿದೆ. ನವಲೂರಿನ 20 ವರ್ಷದ ಮೈಲಾರಿ ತಿಪ್ಪಣ್ಣವರ ಎಂಬಾತನೇ ತ್ರಿಶೂಲವನ್ನ ತರಡಿನಲ್ಲಿ ಸಿಕ್ಕಿಸಿಕೊಂಡು ಕಿಮ್ಸನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಿಕಿತ್ಸೆ ಪಡೆಯುತ್ತಿರುವ ಮೈಲಾರಿ ಮೊಬೈಲ್ ಕರೆನ್ಸಿ ಹಾಕುವಂತೆ ತಂದೆಗೆ ಮೈಲಾರಿ ಕೇಳಿಕೊಂಡನಂತೆ. ಆದರೆ, ತಂದೆ ಇದಕ್ಕೆ ಒಪ್ಪಿಕೊಂಡಿಲ್ಲ. …

Read More »

ಮಸೀದಿಗಳಲ್ಲಿ ಧ್ವನಿವರ್ಧಕ: ಕಾನೂನು ಕೈಗೆತ್ತಿಕೊಳ್ಳಬಾರದು-ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ‘ಧ್ವನಿವರ್ಧಕಗಳಲ್ಲಿ ಶಬ್ದ ಎಷ್ಟಿರಬೇಕು ಎಂಬುದರ ಬಗ್ಗೆ ಪರೀಶಿಲಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ಹಾಗೂ ಹಿಂದೂಪರ ಸಂಘಟನೆಗಳು ನೀಡಿದ್ದ ಗಡುವು ಕುರಿತು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡುತ್ತದೆ. …

Read More »