Breaking News

ಹುಬ್ಬಳ್ಳಿ

ಧಾರವಾಡ ತಾಲೂಕಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಸಕ್ಕರೆ ಕಾರ್ಖಾನೆಗೆ ವಿರೋಧ

ಧಾರವಾಡ ತಾಲೂಕಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಸಕ್ಕರೆ ಕಾರ್ಖಾನೆಗೆ ವಿರೋಧ.. ಸಕ್ಕರೆ ಕಾರ್ಖಾನೆ ಆರಂಭಿಸುತ್ತಿರುವುದಕ್ಕೆ ಯಾದವಾಡ ಗ್ರಾಮಸ್ಥರ ವಿರೋಧ ಧಾರವಾಡ ತಾಲೂಕಿನ ಕರಡಿಗುಡ್ಡ, ಯಾದವಾಡ ಹಾಗೂ ಪುಡಕಲಕಟ್ಟಿ ಗ್ರಾಮಗಳ ಮಧ್ಯೆದ ಜಮೀನಿನಲ್ಲಿ ಆರಂಭವಾಗುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಮೃಣಾಲ್ ಸಕ್ಕರೆ ಕಾರ್ಖಾನೆಗೆ ಯಾದವಾಡ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಸಕ್ಕರೆ ಕಾರ್ಖಾನೆ ಆರಂಭಿಸಬಾರದು ಇದರಿಂದ ಮೂರೂ ಗ್ರಾಮಗಳ ರೈತರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಆರೋಪಿಸಿ ಪ್ರತಿಭಟನೆ …

Read More »

ರಸ್ತೆ ಪಕ್ಕ ನಿಲ್ಲಿಸಿದ ಲಾರಿ ಚಕ್ರ ಕಳ್ಳತನ.

ಧಾರವಾಡದಲ್ಲಿ ರಸ್ತೆ ಪಕ್ಕ ನಿಲ್ಲಿಸಿದ ಲಾರಿ ಚಕ್ರ ಕಳ್ಳತನ… ಲಾರಿಯ ಚಕ್ರ ಬಿಚ್ಚಿಕೊಂಡು ಹೋದ ಖದೀಮರ ಕೃತ್ಯಕ್ಕೆ ಬೆಚ್ಚಿಬಿದ್ದ ಸ್ಥಳೀಯರು. ರಸ್ತೆ ಪಕ್ಕ ಲಾರಿ ನಿಲ್ಲಿಸಿ ಚಾಲಕ ಮಲಗಿಕೊಂಡ ವೇಳೆ, ಖದೀಮರು ಆ ಲಾರಿಯ ಏಳು ಚಕ್ರಗಳನ್ನೇ ಬಿಚ್ಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ ರಮ್ಯಾ ರೆಸಿಡೆನ್ಸಿ ಘಟನೆ ನಡೆದಿದೆ. ಹೊಸಪೇಟೆ ಮೂಲದ ಕಂಪೆನಿಯೊಂದು ಸಿಮೆಂಟ್ ಬ್ಲಾಕ್ ಡೆಲಿವರಿ ಕೊಡುವ …

Read More »

ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು…

ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು… ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು ಹರಿಸದಂತೆ ಆಗ್ರಹಿಸಿದ ಇಂದು ಚಿಕ್ಕಪಡಸಲಗಿ ಗ್ರಾಮದ ಬಳಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಚಿಕ್ಕಪಡಸಲಗಿ ಗ್ರಾಮದ ಬಳಿ ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದ ಬಳಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ …

Read More »

ರಾಜ್ಯ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ… ಬೀದಿಗಿಳಿದು ಪ್ರೊಟೆಸ್ಟ್, ಪೊಲೀಸರೊಂದಿಗೆ ವಾಗ್ವಾದ

ರಾಜ್ಯ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ… ಬೀದಿಗಿಳಿದು ಪ್ರೊಟೆಸ್ಟ್, ಪೊಲೀಸರೊಂದಿಗೆ ವಾಗ್ವಾದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಮ್‌ರಿಗೆ ಶೇ.4 ರಷ್ಟು ಮೀಸಲಾತಿ ನೀಡುವುದರ ಜೊತೆಗೆ ಗುತ್ತಿಗೆಯಲ್ಲೂ ಶೇ.20 ರಷ್ಟು ಮೀಸಲಾತಿ ನೀಡಿರುವ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಧಾರವಾಡದ ಕೋರ್ಟ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು ಕೋರ್ಟ್ ವೃತ್ತವನ್ನು ಮಾನವ …

Read More »

ಎಸ್.ಎಸ್.ಎಲ್.ಸಿ ಪರೀಕ್ಷೆ -1 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಆವರಣ ನಿರ್ಭಂಧಿತ ಪ್ರದೇಶ;144ರ ಮೇರೆಗೆ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಾಚ್ 21, 2025 ರಿಂದ ಎಪ್ರೀಲ್ 4 ವರೆಗೆ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಪ್ರಯುಕ್ತ (ಹುಬ್ಬಳ್ಳಿ-ಧಾರವಾಡ ನಗರ ಹೊರತು ಪಡಿಸಿ) ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಆದೇಶಿಸಿರುವ ಅವರು, ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 106 ಪರೀಕ್ಷಾ ಕೇಂದ್ರಗಳಲ್ಲಿ ಮಾಚ್ 21, 2025 …

Read More »

ಸ್ಲಗ್ :ಹು-ಧಾ ಮ ಪಾ 1512.67 ಕೋ.ರೂ. ಗಾತ್ರದ ಬಜೆಟ್ ಮಂಡನೆ

ಜಿಐಎಸ್ ಸರ್ವೆ ಕೈಕೊಳ್ಳುವ ಮೂಲಕ ಪಾಲಿಕೆಯ ಆಸ್ತಿ ತೆರಿಗೆಯನ್ನು ಹಾಗೂ ಇತರೆ ಆಂತರಿಕ ಸಂಪನ್ಮೂಲಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚಿಸುವುದು, 2025-26ನೇ ಸಾಲಿನಲ್ಲಿ 24*7 ನಿರಂತರ ಕುಡಿಯುವ ನೀರಿನ ಸರಬರಾಜು ಕಾಮಗಾರಿಯನ್ನು ಪೂರ್ಣಗೊಳಿಸಿ ಎಲ್ಲ ವಾರ್ಡಗಳಿಗೂ 24*7 ನಿರಂತರ ಕುಡಿಯುವ ನೀರನ್ನು ಪೂರೈಸುವುದು, ಪ್ರತಿ ಮನೆಯಿಂದ ಶೇ.100 ರಷ್ಟು ವಿಂಗಡಿಸಿದ ಕಸ ಸಂಗ್ರಹಿಸಿ ಶೇ. 100 ರಷ್ಟು ಸಂಸ್ಕರಣೆ ಕೈಕೊಂಡು `ಕಸಮುಕ್ತ ನಗರ’ ವನ್ನಾಗಿಸುವುದು ಇತ್ಯಾದಿ ಮಹತ್ವದ …

Read More »

ಹುಬ್ಬಳ್ಳಿಯ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಲ್ಲಿ ಕೆಲವು ಮಾರ್ಗಗಳ ಬಸ್​ ಅಂಕಣಗಳನ್ನು ಮರು ಹೊಂದಾಣಿಕೆ ಮಾಡಲಾಗಿದೆ‌.

ಹುಬ್ಬಳ್ಳಿ: ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಹೊರಡುತ್ತಿದ್ದ ಉಪನಗರ ಸಾರಿಗೆ ಬಸ್​​ಗಳನ್ನು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿಯ ನೂತನ ನಗರ-ಉಪನಗರ ಸಾರಿಗೆ ಬಸ್ ನಿಲ್ದಾಣಕ್ಕೆ (ಹಳೇ ಬಸ್​ ನಿಲ್ದಾಣ) ಸ್ಥಳಾಂತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸೂರು ನಿಲ್ದಾಣದಲ್ಲಿನ ಲಭ್ಯ ಸ್ಥಳವನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಅಲ್ಲಿಂದ ಹೊರಡುವ ಕೆಲ ಮಾರ್ಗಗಳ ಬಸ್​​ಗಳ ಅಂಕಣಗಳನ್ನು ಮರು ಹೊಂದಾಣಿಕೆ ಮಾಡಲಾಗಿದೆ‌ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಹೊಸೂರು …

Read More »

ಧಾರವಾಡ ಕಲಘಟಗಿ ರಸ್ತೆಯ ನುಗ್ಗಿಕೇರಿ ಬಳಿ ಸರಣಿ ಅಪಘಾತ,

ಧಾರವಾಡ ಕಲಘಟಗಿ ರಸ್ತೆಯ ನುಗ್ಗಿಕೇರಿ ಬಳಿ ಸರಣಿ ಅಪಘಾತ, ಹಲವರಿಗೆ ಗಾಯ…. ಅಪಘಾತದಲ್ಲಿ ಕಾರ್ ಅಟೋ ಬೈಕ್‌ಗೆ ಡ್ಯಾಮೇಜ್ ಅಟೋ ಬೈಕ್ ಹಾಗೂ ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಅಟೋ ಚಾಲಕರಿಗೆ ಗಾಯವಾಗಿ ಕಾರ್‌ನಲ್ಲಿದವರು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಧಾರವಾಡ ಹೊರವಲಯದ ಕಲಘಟಗಿ ರಸ್ತೆ ನುಗ್ಗಿಕೇರಿಯಲ್ಲಿ ನಡೆದಿದೆ. ಅಟೋ ಮತ್ತು ಬೈಕ್ ನಡುವೆ ಮೊದಲು‌ ಅಪಘಾತ ನಡೆದಿದ್ದು, ಈ ವೇಳೆ ಹಿಂಬದಿಯೇ ಬರುತ್ತಿದ್ದ ಕಾರ …

Read More »

ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್

ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್ ರಂಗಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹುಬ್ಬಳ್ಳಿಯಲ್ಲಿ ಕಾಮದೇವರನ್ನು ಪ್ರತಿಸ್ಥಾಪನೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಶಾಂತಿಯುತ ಹಬ್ಬ ಆಚರಣೆಗೆ ಕರೆ ಕೊಟ್ಟರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಬಾರಿ ಹೋಳಿಹಬ್ಬವನ್ನು ಧಾರವಾಡದಲ್ಲಿ ಮಾರ್ಚ್ 15, ಹುಬ್ಬಳ್ಳಿಯಲ್ಲಿ 18 ನೇ ತಾರೀಖು ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಹೊರ …

Read More »

ಆದಿ ಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಶಿವಲೀಲಾ ಕುಲಕರ್ಣಿಯರಿಗೆ ಸನ್ಮಾನ

ಧಾರವಾಡದಲ್ಲಿ ಆದಿ ಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಶಿವಲೀಲಾ ಕುಲಕರ್ಣಿಯರಿಗೆ ಸನ್ಮಾನ ಧಾರವಾಡ: ಆದಿ ಶಕ್ತಿ ಮಹಿಳಾ ಮಂಡಳ ವತಿಯಿಂದ ಧಾರವಾಡದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾಡಲಾಗಿದ್ದು, ಮಾಜಿ ಸಚಿವ ಹಾಗೂ ಹಾಲಿ ಗ್ರಾಮೀಣ ಶಾಸಕ ವಿನಯ ಕುಲಕರ್ಣಿವರ ಧರ್ಮಪತ್ನಿ ಶೀವಲೀಲಾ ಕುಲಕರ್ಣಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ‌ ಧಾರವಾಡದ ಮದಿಹಾಳ ನಗರದ ಗಾಯಕವಾಡ ಕಲ್ಯಾಣ ಮಂಟಪದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿದ್ದು, ಮಹಿಳಾ ಮಂಡಳದ ಪದಾಧಿಕಾರಿಗಳೆಲ್ಲರು …

Read More »