Breaking News

ಹುಬ್ಬಳ್ಳಿ

ಜುಲೈನಲ್ಲಿ ದೊಡ್ಡ ಮಟ್ಟದ ಲಸಿಕೆ ಅಭಿಯಾನ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ‘ಜುಲೈ ತಿಂಗಳಿನಲ್ಲಿ ದೊಡ್ಡ ಮಟ್ಟದಲ್ಲಿ ಕೋವಿಡ್ ಲಸಿಕೆ ಅಭಿಯಾನ ನಡೆಯಲಿದೆ. ವಿಶ್ವದಲ್ಲೇ ಅತ್ಯಂತ ವೇಗವಾಗಿ ಲಸಿಕೆ ಅಭಿಯಾನ ನಡೆಯುತ್ತಿರುವ ದೇಶ ಭಾರತವಾಗಿದ್ದು, ಇದುವರೆಗೆ 32 ಕೋಟಿ ಲಸಿಕೆ ನೀಡಲಾಗಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನೈಸರ್ಗಿಕ ವಿಕೋಪದಿಂದ ಮೃತಪಟ್ಟ ಎಂಟು ಜನರ ಕುಟುಂಬದವರಿಗೆ ಸೋಮವಾರ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಅವರು, ‘ತಯಾರಕರು ಉತ್ಪಾದನೆಗೆ ಅನುಗುಣವಾಗಿ ಲಸಿಕೆ ಪೂರೈಕೆ ಮಾಡುತ್ತಿದ್ದಾರೆ. ಹಾಗಾಗಿ, ಆದ್ಯತಾ ವಲಯಗಳನ್ನು ಗುರುತಿಸಿ …

Read More »

ಹುಬ್ಬಳ್ಳಿಯಿಂದ ವಿಮಾನಯಾನ ಸೇವೆ ಮತ್ತೆ ಆರಂಭ

ಹುಬ್ಬಳ್ಳಿ: ಲಾಕ್ ಡೌನ್ ವೇಳೆ ಹುಬ್ಬಳ್ಳಿಯಿಂದ ವಿವಿಧ ಮಹಾನಗರಗಳಿಗೆ ಸಂಪರ್ಕಿಸುವ ವಿಮಾನಯಾನ ಸೇವೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಇಂಡಿಗೋ ಸಂಸ್ಥೆ ಜುಲೈ 1 ರಿಂದ ಮತ್ತೆ ವಿಮಾನಯಾನ ಸೇವೆ ಪುನರಾರಂಭ ಮಾಡುವುದಾಗಿ ತಿಳಿಸಿದೆ. ಹುಬ್ಬಳ್ಳಿಯಿಂದ ಮುಂಬೈ, ಚೆನೈ, ಬೆಂಗಳೂರು, ಕಣ್ಣೂರು, ಕೊಚ್ಚಿ ಮಹಾನಗರಗಳಿಗೆ ವಿಮಾನಯಾನ ಸಂಪರ್ಕ ಸೇವೆ ಮತ್ತೆ ಆರಂಭಗೊಳ್ಳಲಿದೆ. ಜುಲೈ 9 ರಿಂದ ಹುಬ್ಬಳ್ಳಿ- ಹೈದ್ರಾಬಾದ್ ಅಲಯನ್ಸ್ ಏರ್ ವಿಮಾನ ಸೇವೆ ಆರಂಭವಾಗಲಿದೆ. ಅಗಸ್ಟ್ 2 ರಿಂದ ಹುಬ್ಬಳ್ಳಿ – …

Read More »

ಹುಬ್ಬಳ್ಳಿಯಲ್ಲಿ 10 ಜನರ ಕಣ್ಣು ಕಿತ್ತುಕೊಂಡ ಬ್ಲ್ಯಾಕ್ ಫಂಗಸ್- ಒಟ್ಟು 46 ಮಂದಿಗೆ ದೃಷ್ಟಿ ದೋಷ

ಹುಬ್ಬಳ್ಳಿ: ಕೊರೊನಾ ಎರಡನೇ ಅಲೆಯಲ್ಲಿ ಸಾಕಷ್ಟು ಜನರನ್ನು ಬಲಿ ತೆಗೆದುಕೊಂಡಿರುವ ಸೋಂಕಿನ ತೀವ್ರತೆ ಕಡಿಮೆಯಾಗುವ ಮೊದಲೇ ಕರಿ ಮಾರಿ ಬ್ಲ್ಯಾಕ್​ ಫಂಗಸ್​ ತನ್ನ ಕರಾಳತೆಯನ್ನು ತೋರುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೂ 10 ಮಂದಿ ಫಂಗಸ್​​ನಿಂದ ಸಂಪೂರ್ಣ ದೃಷ್ಟಿಯನ್ನೇ ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕಿಮ್ಸ್‌ನಲ್ಲಿ 46 ಜನರಿಗೆ ದೃಷ್ಟಿ ದೋಷ ಕಂಡು ಬಂದಿತ್ತು. ಕೊರೊನಾದಿಂದ ಗುಣಮುಖರಾದ ವ್ಯಕ್ತಿಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡು ಬರುತ್ತಿದ್ದು, ಹಲವರಿಗೆ ಮೂಗಿನ ಮೂಲಕವೂ ಬ್ಲ್ಯಾಕ್ ಹಬ್ಬಿ, ಕಣ್ಣಿನ ನರಗಳಿಗೆ …

Read More »

ಧಾರವಾಡದಿಂದ ಬೆಂಗಳೂರಿಗೆ ಯಕೃತ್ತು ರವಾನೆ:ಏರ್ ಪೋರ್ಟ್ ವರೆಗೆ ಜಿರೋಟ್ರಾಫಿಕ್ ಮಾಡಿದ ಪೊಲೀಸರು

ಹುಬ್ಬಳ್ಳಿ: ಧಾರವಾಡ ಸಮೀಪದ ಎಸ್‌ಡಿಎಂ ಆಸ್ಪತ್ರೆಯಿಂದ ಲಿವರ್ (ಯಕೃತ್ತು) ಅನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಾಗಿಸಲು ಸುಮಾರು 16 ಕಿ.ಮೀ ದೂರದ ಮಾರ್ಗವನ್ನು ಪೊಲೀಸರು ಹಸಿರು ಕಾರಿಡಾರ್ ಮೂಲಕ ಅಂಬ್ಯುಲೆನ್ಸ್ ತ್ವರಿತ ತಲುಪಲು ಅನುವು ಮಾಡಿಕೊಟ್ಟರು. ಜಿರೋ ಟ್ರಾಫಿಕ್ ನಲ್ಲಿ ಯಕೃತ್ ಇದ್ದ ಅಂಬ್ಯುಲೆನ್ಸ್ ನಿಗದಿಪಡಿಸಿದ ಸಮಯಕ್ಕೆ ವಿಮಾನ ನಿಲ್ದಾಣ ತಲುಪಿತಲ್ಲದೆ, ಯಕೃತ್ ನ್ನು ವಿಮಾನದಲ್ಲಿ ಬೆಂಗಳೂರಿಗೆ ಕಳುಹಿಸಲಾಯಿತು. ಮೃತ ಮಹಿಳೆಯೊಬ್ಬರ ಕಣ್ಣು, ಕಿಡ್ನಿ ಮತ್ತು ಲಿವರ್ ಸೇರಿದಂತೆ ವಿವಿಧ …

Read More »

ಕೋವಿಡ್‌ ನಿಂದ ಪೋಷಕರನ್ನು ಕಳೆದುಕೊಂಡಿರುವ ಅನಾಥ ಮಕ್ಕಳಿಗೆ ಧನಸಹಾಯ: ಸಚಿವೆ ಜೊಲ್ಲೆ

ಧಾರವಾಡ: ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಅನಾಥವಾಗಿರುವ ಪ್ರತಿ ಮಕ್ಕಳ ಬ್ಯಾಂಕ್ ಖಾತೆಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ ಪ್ರತಿ ತಿಂಗಳು 3,500 ರೂ.ಗಳನ್ನು ಜಮೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದ ಕಮಲಾಪುರದಲ್ಲಿ ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಇಬ್ಬರು ಮಕ್ಕಳನ್ನು ಭೇಟಿ ಮಾಡಿ ಅವರಿಗೆ ಸಾಂತ್ವನ ಹೇಳಿದ ನಂತರ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಹುಬ್ಬಳ್ಳಿ- ಧಾರವಾಡದಲ್ಲಿ ಮೂರು ಜನ …

Read More »

ಹುಬ್ಬಳ್ಳಿ: ಒಂದೇ ಕಾಲಿನ ಅಪರೂಪದ ಮಗು ಜನನ

ಹುಬ್ಬಳ್ಳಿ, ಜೂನ್ 21: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಅಪರೂಪದ ಮಗುವಿನ ಜನನವಾಗಿದೆ. ಈ ಮಗುವಿನ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರದಾಡಿದ್ದು, ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದೆ. ಹಳೇ ಹುಬ್ಬಳ್ಳಿಯ ಮಹಿಳೆ ಒಬ್ಬರು ಹೆರಿಗೆ ನೋವು ಕಾಣಿಕೊಂಡ ಕಾರಣ ಕಿಮ್ಸ್ ಆಸ್ಪತ್ರೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಿಸಲಾಗಿತ್ತು. ವಿಚಿತ್ರ ರೀತಿಯಲ್ಲಿ ಒಂಟಿ ಕಾಲಿನ ಮಗು ಜನಿಸಿದ್ದು, ಆಸ್ಪತ್ರೆಯ ವೈದ್ಯರಿಗೂ ಸಹ ಅಚ್ಚರಿ ಮೂಡುವಂತೆ ಮಾಡಿದೆ. ಆದರೆ, ಕೆಲವೇ ಹೊತ್ತಿನ …

Read More »

ಬಿಎಸ್​ವೈರನ್ನ ಸಿಎಂ ಮಾಡಿದ್ದು ನಾನೇ..?-ಚಂದ್ರಕಾಂತ ‌ಬೆಲ್ಲದ್​

ಹುಬ್ಬಳ್ಳಿ: ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು ಎಂದು ಮಾಜಿ ಶಾಸಕ ಚಂದ್ರಕಾಂತ ‌ಬೆಲ್ಲದ್​​ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಐದು ಬಾರಿ ಶಾಸಕನಾಗಿದ್ದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಟ್ಟು ಮಾಡಿ ಅಂದು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು. ಯಡಿಯೂರಪ್ಪನವರ ಬೆಳವಣಿಗೆಗೆ ಯಾರು ಕಾರಣರು ಎಂಬುದನ್ನು ಅವರೇ ತಿಳಿದುಕೊಳ್ಳಬೇಕು. ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದ ನಾನೂ ಕೂಡ ಅಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದ್ರೆ, ಸಚಿವ ಸ್ಥಾನ …

Read More »

ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಇಂಡಿಗೋ ವಿಮಾನದ ಟೈರ್ ಸ್ಫೋಟ

ಹುಬ್ಬಳ್ಳಿ:ಕಣ್ಣೂರುನಿಂದ ಆಗಮಿಸಿದ್ದ ಇಂಡಿಗೋ ವಿಮಾನ, ಇಲ್ಲಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವೇಳೆ ಟೈರ್ ಸ್ಫೋಟ ಗೊಂಡ ಘಟನೆ, ಸೋಮವಾರ ರಾತ್ರಿ8:30ರ ಸುಮಾರಿಗೆ ನಡೆದಿದೆ, ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ. 15 ಪ್ರಯಾಣಿಕರನ್ನು ಹೊತ್ತುಕೊಂಡು ಬಂದಿದ್ದ ವಿಮಾನವನ್ನು, ಪೈಲಟ್‌ ಮೊದಲು ರನ್ ವೇ ದಲ್ಲಿ ಇಳಿಸಲು ಪ್ರಯತ್ನಿಸಿದ್ದಾನೆ. ಆಗದಿಂದಾಗ ಎರಡನೇ ಬಾರಿ ಇಳಿಸಲು ಯತ್ನಿಸಿದಾಗ ಟಾಯರ್ ಬ್ಲಾಸ್ಟ್ ಆಗಿದೆ ಎಂದು ಮೂಲಗಳು ತಿಳಿಸಿವೆ. ಕಣ್ಣೂರಿನಿಂದ ಆಗಮಿಸಿದ್ದ ವಿಮಾನ ನಂತರ ಬೆಂಗಳೂರಿಗೆ …

Read More »

ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಕೊರೊನಾ ಸೋಂಕಿತ ಆತ್ಮಹತ್ಯೆ

ಹುಬ್ಬಳ್ಳಿ: ಕೊರೊನಾದಿಂದ ಅದೆಷ್ಟೋ ಕುಟುಂಬಗಳು ಬೀದಿಗೆ ಬಂದಿವೆ. ರಾಜ್ಯದಲ್ಲಿ ಸಾವು, ನೋವು ಹೆಚ್ಚಾಗುತ್ತಿದೆ. ಕೊರೊನಾ ಸೋಂಕು ತಗುಲುತ್ತಿದ್ದಂತೆ ಆತ್ಮಸ್ಥೈರ್ಯ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಹುಬ್ಬಳ್ಳಿಯ ಕಿಮ್ಸ್ನಲ್ಲಿ ಕೊರೊನಾ ಸೋಂಕಿತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿಮ್ಸ್ ಕೊವಿಡ್ ವಾಡ್೯ ನಂ.303ರ ಬಾತ್ರೂಮ್ನಲ್ಲಿ ಸೋಂಕಿತ ನೇಣಿಗೆ ಶರಣಾಗಿದ್ದಾರೆ. ಸೋಂಕಿತ ವ್ಯಕ್ತಿ ಕಳೆದ ಕೆಲ ದಿನಗಳಿಂದ ಕಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಸ್ಪತ್ರೆಯಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. …

Read More »

ನನಗೆ ಯಾವುದೇ ಜಾತಿಯಿಲ್ಲ ನನ್ನದು ರೈತರ ಜಾತಿ – ಮುರುಗೇಶ್ ನಿರಾಣಿ

ಹುಬ್ಬಳ್ಳಿ: ಕಲಘಟಗಿ ತಾಲೂಕಿನ ರೈತರು ಸಹಕಾರ ಕೊಟ್ಟು ಒಪ್ಪುವುದಾದರೆ ಒಂದೂವರೆ ವರ್ಷದಲ್ಲಿ ಕಲಘಟಗಿಯಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡುತ್ತೇನೆ. ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವಲ್ಲಿ ನನ್ನದು ಯಾವುದೇ ಸ್ವಾರ್ಥವಿಲ್ಲ ಉದ್ಯೋಗ ಬೇರೆ ರಾಜಕಾರಣ ಬೇರೆ, ನನಗೆ ಯಾವುದೇ ಜಾತಿಯಿಲ್ಲ ನನ್ನದು ರೈತರ ಜಾತಿ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದ್ದಾರೆ. ನಗರದ ಹನ್ನೆರಡು ಮಠದಲ್ಲಿ ತಾಲೂಕಿನ ರೈತರ ಸಭೆಯಲ್ಲಿ ಮಾತನಾಡಿದ ನಿರಾಣಿ, ತಾಲೂಕಿನ ರೈತರು …

Read More »