ಹುಬ್ಬಳ್ಳಿ ಏ,4- ಹುಬ್ಬಳ್ಳಿಯ ಮಂಟೂರು ರಸ್ತೆಯ ಅರಳಿಕಟ್ಟಿ ಕಾಲೋನಿಯಲ್ಲಿ ಪೊಲೀಸರ ಮೇಲೆ ನಡೆದ ಕಲ್ಲು ತೂರಾಟ ಪೂರ್ವನಿಯೋಜಿತ ಕೃತ್ಯ ಎಂಬ ಅನುಮಾನ ಕಾಡುತ್ತಿದೆ.ಪೊಲೀಸರ ಕಣ್ತಪ್ಪಿಸಿ ಒಂದು ಕೋಮಿನ ಜನರು ಪ್ರಾರ್ಥನೆ ನಡೆಸಲು ಮುಂದಾಗಿದ್ದರು. ಆದ್ರೆ ಇದನ್ನು ಪ್ರಶ್ನಿಸಲಯ ಹೋದ ಪೊಲೀಸರ ಮೇಲೆ ಆ ಸಮುದಾಯದ ಮಹಿಳೆಯರು ಹಾಗೂ ಪುರುಷರು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಇದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪೊಲೀಸರು ಪ್ರಾರ್ಥನೆ ತಡೆಯಲು ಬರುತ್ತಾರೆ ಎಂದು ಪೂರ್ವನಿಯೋಜಿಯವಾಗಿ ಕಲ್ಲು …
Read More »ಸುಮಾರು 135 ವರ್ಷಗಳಿಂದ ನಡೆಯುತ್ತ ಬಂದಿದ್ದ ದಾಸೋಹ ಶನಿವಾರದಿಂದ ಸ್ಥಗಿತ:ಸಿದ್ಧಾರೂಢ ಸ್ವಾಮಿ
ಹುಬ್ಬಳ್ಳಿ: ಕೋವಿಡ್ 19 ವೈರಸ್ ಭೀತಿಯ ಹಿನ್ನೆಲೆಯಲ್ಲಿ ಸಿದ್ಧಾರೂಢ ಸ್ವಾಮಿಗಳ ಮಠದಲ್ಲಿ ಸುಮಾರು 135 ವರ್ಷಗಳಿಂದ ನಡೆಯುತ್ತ ಬಂದಿದ್ದ ದಾಸೋಹ ಶನಿವಾರದಿಂದ ಸ್ಥಗಿತಗೊಂಡಿದೆ. ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಗಳು ದೇಶದ ಎಲ್ಲ ಕ್ಷೇತ್ರಗಳನ್ನು ಸಂಚರಿಸುತ್ತ,ಅಜ್ಞಾನ ನಿವಾರಿಸಿ ಸನ್ಮಾರ್ಗ ತೋರುತ್ತ 1877ರಲ್ಲಿ ತಮ್ಮ 41ನೇ ವಯಸ್ಸಿನಲ್ಲಿ ಹುಬ್ಬಳ್ಳಿಗೆ ಆಗಮಿಸಿದರು. ತಮ್ಮನ್ನು ಭೇಟಿ ಮಾಡಲು ಆಗಮಿಸುವ ಭಕ್ತರು ಹಸಿವಿನಿಂದ ಹೋಗಬಾರದೆಂಬ ಉದ್ದೇಶದಿಂದ ಸುಮಾರು 1885-87ರಲ್ಲಿ ಅನ್ನಸಂತರ್ಪಣೆ ಆರಂಭಿಸಿದ್ದರು. ಅಂದಿನಿಂದ ಅನ್ನಸಂತರ್ಪಣೆ ಪ್ರತಿದಿನ ನಿರಂತರವಾಗಿ …
Read More »ಹುಬ್ಬಳ್ಳಿಯಲ್ಲಿ ಕೊರೊನಾ ಶಂಕಿತ ಟೆಕ್ಕಿ ಸಾವು……….
ಹುಬ್ಬಳ್ಳಿ: ಮಹಾರಾಷ್ಟ್ರದ ಪುಣೆಯಿಂದ ಸ್ವಗ್ರಾಮಕ್ಕೆ ಆಗಮಿಸಿದ್ದ ಎಂಜಿನಿಯರ್ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯ ನಿವಾಸಿ ಮೃತ ದುರ್ದೈವಿ. ಟೆಕ್ಕಿಗೆ ಕೊರೊನಾ ಸೋಂಕು ತಗುಲಿರುವ ಅನುಮಾನ ವ್ಯಕ್ತವಾಗಿದೆ. ಟೆಕ್ಕಿ ಜ್ವರ, ನೆಗಡಿ, ಕೆಮ್ಮ, ನ್ಯೂಮೋನಿಯಾ ರೋಗದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಕಿಮ್ಸ್ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಕೊರೊನಾ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಕ್ತ ಮಾದರಿ ಹಾಗೂ ಥ್ರೋಟ್ ಸ್ವ್ಯಾಬ್ ಅನ್ನು ಶಿವಮೊಗ್ಗಕ್ಕೆ ರವಾನೆ …
Read More »ನಮಾಜ್ಗೆ ತಡೆ- ಪೊಲೀಸರ ಮೇಲೆ ಕಲ್ಲು ತೂರಾಟ
ಹುಬ್ಬಳ್ಳಿ: ನಮಾಜ್ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಮರು ಮತ್ತು ಪೊಲೀಸ್ ಸಿಬ್ಬಂದಿಯ ಮಧ್ಯೆ ಗಲಾಟೆ ನಡೆದಿರುವ ಘಟನೆ ಹುಬ್ಬಳ್ಳಿ ಮಂಟೂರ್ ರೋಡ್ ಹತ್ತಿರದ ಅರಳಿಕಟ್ಟಿ ಕಾಲೋನಿ ಬಳಿ ನಡೆದಿದೆ. ಲಾಕ್ಡೌನ್ ಮಧ್ಯೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನಮಾಜ್ ಮಾಡುವುದನ್ನು ನಿಲ್ಲಿಸಲಾಗಿದೆ. ಕೆಲ ಮೌಲ್ವಿಗಳೇ ನಮಾಜ್ ಮಾಡಲು ಮಸೀದಿಗೆ ಬರಬೇಡಿ ಎಂದು ಮನವಿ ಕೂಡ ಮಾಡಿದ್ದಾರೆ. ಆದರೆ ಈ ಮಧ್ಯೆಯೂ ಕೂಡ ನಮಾಜ್ ಮಾಡುವ ವಿಚಾರಕ್ಕೆ ಮುಸ್ಲಿಮರು ಮತ್ತು ಪೊಲೀಸರ …
Read More »ಕೊರೋನಾ ಎಫೆಕ್ಟ್ : ಮಧ್ಯಂತರ ಜಾಮೀನಿನ ಮೇಲೆ 11 ಕೈದಿಗಳಿಗೆ ಬಿಡುಗಡೆ ಭಾಗ್ಯ..!
ಹುಬ್ಬಳ್ಳಿ: ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಗೆ ಒಳಗಾದವರು ಮತ್ತು ಇಷ್ಟೇ ಅವಧಿಗೆ ಶಿಕ್ಷೆಗೆ ಒಳಗಾಗುವ ಅಪರಾಧ ಪ್ರಕರಣ ಹೊಂದಿದ್ದವರ 11 ಜನ ಕೈದಿಗಳನ್ನು ಇಲ್ಲಿನ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಕೊರೊನೊ ಸೋಂಕು ವ್ಯಾಪಕವಾಗಿ ಹರಡುವ ಆತಂಕವಿರುವ ಕಾರಣ ಕಾರಾಗೃಹದಲ್ಲಿರುವ ಕೈದಿಗಳ ಸಂಖ್ಯೆ ಕಡಿಮೆ ಮಾಡುವ ಉದ್ದೇಶದಿಂದ ಏಳು ವರ್ಷಗಳಿಗಿಂತ ಕಡಿಮೆ ಶಿಕ್ಷೆ ಎದುರಿಸುತ್ತಿರುವ ಕೈದಿಗಳ ಪಟ್ಟಿ ಸಿದ್ಧಪಡಿಸುವಂತೆ ಎಲ್ಲ ಜೈಲುಗಳ ಮುಖ್ಯಸ್ಥರಿಗೆ ಮೇಲಧಿಕಾರಿಗಳು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲಿನ …
Read More »ಎಟಿಎಂಗಳಲ್ಲಿ ಹಣ ಖಾಲಿ, ಯಾಮಾರಿದರೆ ಉಚಿತವಾಗಿ ಅಂಟುತ್ತೆ ಕೊರೋನಾ..!
ಹುಬ್ಬಳ್ಳಿಮಾ,31- ಕೊರೊನಾ ವೈರಸ್ ತಡೆಗಟ್ಟಲು ಸಾರ್ವಜನಿಕ ಸೇವಾ ವಲಯಗಳಲ್ಲಿ ಕಡ್ಡಾಯವಾಗಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಹಾಗೂ ರಾಜ್ಯ ಸರಕಾರ ಸ್ಪಷ್ಟ ಸಂದೇಶ ರವಾನಿಸಿದೆ. ಆದರೆ ಧಾರವಾಡ ಜಿಲ್ಲೆಯಲ್ಲಿ ಬಹುತೇಕ ಎಟಿಎಂ ಸೆಂಟರ್ ಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲಾ, ಸರಿಯಾಗಿ ನಿರ್ವಹಣೆ ಮಾಡುತಿಲ್ಲ.ಶೇಕಡಾ 75 ರಷ್ಟು ಎಟಿಎಂಗಳಲ್ಲಿ ಹಣವೇ ಖಾಲಿ.ಕೆಲ ರಾಷ್ಟ್ರೀಕೃತ, ಪ್ರಾದೇಶಿಕ ಬ್ಯಾಂಕ್ಗಳ ಎಟಿಎಂಗಳಲ್ಲಿಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಬ್ಯಾಂಕ್ ಗ್ರಾಹಕರಲ್ಲಿಆತಂಕ ಇನ್ನಷ್ಟು ಸೃಷ್ಟಿಸಿದೆ. ಜಿಲ್ಲೆಯಲ್ಲಿರುವ 450 …
Read More »ಕೊರೊನಾ ಎಫೆಕ್ಟ್: ತಂದೆಯ ಅಂತ್ಯಕ್ರಿಯೆಗೆ ಬಾರದ ಮಗ, ಮಗಳಿಂದ ಚಿತೆಗೆ ಬೆಂಕಿ
ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಲಾಕ್ಡೌನ್ ಘೋಷಣೆ ಮಾಡಿದ್ದು, ತಂದೆಯ ಅಂತಿಮ ಸಂಸ್ಕಾರಕ್ಕೆ ಮಗನೇ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿಯಲ್ಲಿ ಮೃತ ತಂದೆಯ ಅಂತ್ಯ ಸಂಸ್ಕಾರಕ್ಕೆ ಮಗ ಬಾರದಿರುವ ಹಿನ್ನೆಲೆಯಲ್ಲಿ ಚಿತೆಗೆ ಮಗಳೇ ಅಗ್ನಿ ಸ್ಪರ್ಶ ಮಾಡಿದ್ದಾರೆ. ತಂದೆಯ ಅಂತಿಮ ಸಂಸ್ಕಾರಕ್ಕೆ ಆಗಮಿಸಬೇಕಿದ್ದ ಮಗ ಲಾಕ್ಡೌನ್ನಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಸಿಲುಕಿದ್ದಾರೆ. ಹೀಗಾಗಿ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಂದೆ ಎನ್.ಎ. ಚವ್ಹಾನ್ ಅವರ ಅಂತಿಮ ಸಂಸ್ಕಾರವನ್ನು ಮಗನ ಅನುಪಸ್ಥಿತಿಯಲ್ಲಿ ಅವರ …
Read More »ಕಿಮ್ಸ್ ಸಿಬ್ಬಂದಿಯಿಂದ್ಲೇ ಮಾಸ್ಕ್ ಕಳ್ಳತನ
ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಿಬ್ಬಂದಿಯೇ ಮಾಸ್ಕ್ ಬಾಕ್ಸ್ ಅನಧಿಕೃತವಾಗಿ ಕಳ್ಳತನ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಿಮ್ಸ್ ಸಿಬ್ಬಂದಿ ಫಾತಿಮಾ ಸೈಯದ್ ಎಂಬವರೇ ಕಿಮ್ಸ್ ಆಸ್ಪತ್ರೆಯಿಂದ ಮಾಸ್ಕ್ ಬಾಕ್ಸ್ ಕಳ್ಳತನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಿಮ್ಸ್ ಆಡಳಿತ ಮಂಡಳಿ ನೋಟಿಸ್ ನೀಡಿದೆ. ಮೇಲಾಧಿಕಾರಿ ಅನುಮತಿಯಿಲ್ಲದೇ ಮುಖ್ಯ ಔಷಾಧಾಲಯದಿಂದ 100 ಮಾಸ್ಕ್ ಇದ್ದ ಬಾಕ್ಸ್ ತೆಗೆದುಕೊಂಡು ಹೊಗಿದ್ದ ಫಾತಿಮಾ. ಕಿಮ್ಸ್ ಅಧಿಕಾರಿಗಳು ಕೇಳಿದ್ರೆ …
Read More »104 ಸಹಾಯವಾಣಿ ಕೇಂದ್ರಕ್ಕೆ ಶ್ರೀ ರಾಮುಲು ಭೇಟಿ
ಹುಬ್ಬಳ್ಳಿ : 104 ಆರೋಗ್ಯ ಸಹಾಯವಾಣಿ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿ ಉದ್ಯೋಗಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಇಲ್ಲಿ ಸುಮಾರು 336 ಉದ್ಯೋಗಿಗಳು 104 ಕಾಲ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೊರೋನಾ ವೈರಸ್ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಬಗೆ, ಅವರ ಆತಂಕ ನಿವಾರಣೆಯ ಚಾಣಾಕ್ಷತನ ನೋಡಿ ಸಂತಸವಾಯಿತು. ಇದೇ ವೇಳೆ ಕಾಲ್ ಸೆಂಟರ್ ಗೆ ಕರೆ ಮಾಡಿದ ಇಬ್ಬರು ವ್ಯಕ್ತಿಗಳ ಜೊತೆಗೆ ಮಾತನಾಡಿ ಸ್ಥೈರ್ಯ ತುಂಬುವ ಕೆಲಸ …
Read More »