ಹುಬ್ಬಳ್ಳಿ: ದೇಶದಾದ್ಯಂತ ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಪ್ರಸರಣವಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದೆ. ಇನ್ನು ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕೂಡ ಏರಿಕೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಹೀಗಿರುವಾಗಲೇ ಹಲವೆಡೆ ಆಕ್ಸಿಜನ್ ಕೊರತೆ, ವೆಂಟಿಲೇಟರ್ ಬೆಡ್ ಇಲ್ಲ ಎನ್ನುವ ಕೂಗು ಕೇಳಿ ಬಂದಿದ್ದು. ಹುಬ್ಬಳಿಯಲ್ಲೂ ಕೂಡ ಸದ್ಯ ಇಂತಹದ್ದೆ ಸಮಸ್ಯೆ ಎದುರಾಗಿದೆ. ಈ ಆತಂಕ್ಕೆ ಪ್ರಮುಖ ಕಾರಣ ಹುಬ್ಬಳ್ಳಿಯ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ನಿನ್ನೆ …
Read More »ಹುಬ್ಬಳ್ಳಿಯಲ್ಲಿ ಐವರು ಕೋವಿಡ್ ಸೋಂಕಿತರ ಸಾವು ! ದುರಂತಕ್ಕೆ ಆಕ್ಸಿಜನ್ ಕೊರತೆ ಆರೋಪ
ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಐವರು ಕೋವಿಡ್ ಸೋಂಕಿತರು ಚಿಕಿತ್ಸೆ ಫಲಿಸದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ. ಮೃತರ ಕುಟುಂದವರು ಆಕ್ಸಿಜನ್ ಕೊರತೆ ಕಾರಣ ಎಂದು ಆರೋಪಿಸಿದ್ದಾರೆ. ಆದರೆ, ಆಸ್ಪತ್ರೆ ಮೂಲಗಳು ಇದನ್ನು ನಿರಾಕರಿಸಿವೆ. ಜಿಲ್ಲಾ ಆರೋಗ್ಯಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಘಟನೆ ಕುರಿತು ಪರಿಶೀಲಿಸಿದರು. ಮೃತರ ಕುಟುಂಬದವರು ಆಕ್ಸಿಜನ್ ಕೊರತೆಯಿಂದಲೇ ಮೃತಪಟ್ಟಿದ್ದಾರೆಂದು ಆರೋಪಿಸಿದರು. ಆದರೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಶವಂತ …
Read More »ನಮ್ಮವರೇ ನಮ್ಮ ಕಷ್ಟಕ್ಕೆ ಆಗೋದು.. ಕಿಮ್ಸ್ಗೆ ನೆರವಿನ ಹಸ್ತ ಚಾಚಿದ ಖಾಸಗಿ ಕಂಪನಿಗಳು..!
ಹುಬ್ಬಳ್ಳಿ: ಕೋವಿಡ್ ವ್ಯಾಪಕಗೊಂಡಿರುವ ಸಂದರ್ಭದಲ್ಲಿ ಸರ್ಕಾರದ ನೆರವಿಗೆ ಖಾಸಗಿ ಕಂಪನಿಗಳು ಮುಂದಾಗಿವೆ. ಸ್ವರ್ಣ ಗ್ರೂಪ್ ಆಪ್ ಕಂಪನಿಸ್, ದೇಶಪಾಂಡೆ ಫೌಂಡೇಶನ್, ಟಾಟಾ ಹಿಟಾಚಿ, ಟಾಟಾ ಮಾರ್ಕೊಪೊಲೊ ಕಂಪನಿಗಳ ಸಾರ್ವಜನಿಕ ಹೊಣೆಗಾರಿಕೆ ನಿಧಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ 570 ಬೆಡ್ ಗಳನ್ನು ನೀಡಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ 100 ಆಕ್ಸಿಜನ್ ಬೆಡ್ಗಳ ಕೋವಿಡ್ ಆಸ್ಪತ್ರೆಯನ್ನು ವೇದಾಂತ ಸಂಸ್ಥೆ ಯವರು ಕಿಮ್ಸ್ ಆವರಣದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ವಿವಿಧ ಜಿಲ್ಲೆಗಳಿಂದ ಆಗಮಿಸುವ …
Read More »ಕೋವಿಡ್ ಸೋಂಕಿತರಿಗೆ ಬೆಡ್ ಸಿಗದ ಪರಿಸ್ಥಿತಿ; ಐಸೋಲೇಶನ್ ಕೋಚ್ ಸಿದ್ಧಪಡಿಸಿದ ನೈರುತ್ಯ ರೈಲ್ವೆ
ಹುಬ್ಬಳ್ಳಿ(ಮೇ 02): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ತೀವ್ರಗೊಂಡಿದ್ದು, ಕೊರೋನಾ ಎರಡನೇ ಅಲೆಗೆ ಜನ ತತ್ತರಿಸುವಂತಾಗಿದೆ. ರಾಜ್ಯದ ಹಲವೆಡೆ ಬೆಡ್ ಗಳಿಗಾಗಿ ಪರದಾಟ ಮುಂದುವರಿದಿದೆ. ಬೆಡ್, ವೆಂಟಿಲೇಟರ್ ಸಿಗದೆ ರೋಗಿಗಳು ಪರದಾಡುವಂತಾಗಿದೆ. ಆಸ್ಪತ್ರೆ ಎದುರಿನಲ್ಲಿಯೇ ಆಯಂಬುಲೆನ್ಸ್ ಇತ್ಯಾದಿಗಳಲ್ಲಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರ ಸಂಕಷ್ಟಕ್ಕೆ ಸ್ಪಂದಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಹುಬ್ಬಳ್ಳಿ ಕೇಂದ್ರ ಸ್ಥಾನ ಹೊಂದಿರೊ ನೈರುತ್ಯ ರೈಲ್ವೆ ವಿಭಾಗದಿಂದ ರೈಲ್ವೆ ಐಸೋಲೇಷನ್ ಬೋಗಿಗಳನ್ನು ಸ್ಥಾಪನೆ …
Read More »ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಕೇಶ್ವಾಪುರದಲ್ಲಿ
ಹುಬ್ಬಳ್ಳಿ: ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯ ಕೇಶ್ವಾಪುರದಲ್ಲಿ ನಡೆದಿದೆ. ಕಳೆದ 3 ದಿನಗಳ ಹಿಂದೆ ಮಂಜುನಾಥ್ಗೆ ಕೊವಿಡ್ ದೃಢಪಟ್ಟಿತ್ತು. ಮನೆಯಲ್ಲೇ ಹೋಂ ಐಸೋಲೇಷನ್ನಲ್ಲಿದ್ದ ಮಂಜುನಾಥ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆಕಾಶ್ ಪಾಕ್೯ ನಿವಾಸಿ ಮಂಜುನಾಥ್ ಕೊರೊನಾ ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಥವಾ ಇಂದು ಕೆಮ್ಮು ಹೆಚ್ಚಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆಕ್ಸಿಜನ್ ಸಿಕ್ಕಿಲ್ಲ …
Read More »ಕಿಮ್ಸ್ನಲ್ಲಿ 66 ಬೆಡ್ಗಳ ತಾತ್ಕಾಲಿಕ ಚಿಕಿತ್ಸಾ ಕೇಂದ್ರ
ಹುಬ್ಬಳ್ಳಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಸೌಲಭ್ಯ ಒಳಗೊಂಡ 66 ಬೆಡ್ಗಳ ತಾತ್ಕಾಲಿಕ ತುರ್ತು ಚಿಕಿತ್ಸಾ ಕೇಂದ್ರ ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಕಿಮ್ಸ್ನಲ್ಲಿರುವ ಪಿಎಂಎಸ್ಎಸ್ವೈ ಸೂಪರ್ ಸ್ಟೆಷಾಲಿಟಿ ಸಮೀಪದ ಜಾಗದಲ್ಲಿಯೇ ಕೇಂದ್ರ ತಯಾರಾಗಲಿದೆ. ಈ ಜಾಗವನ್ನು ಗುರುವಾರ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘ನಿರ್ಮಿತಿ ಕೇಂದ್ರದಿಂದ ₹66 ಲಕ್ಷ …
Read More »ಬಸವರಾಜ್ ಹೊರಟ್ಟಿಗೆ ಕೊರೊನಾ ಸೋಂಕು; ಕಿಮ್ಸ್ ಗೆ ದಾಖಲು
ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ಕೆಮ್ಮು-ಜ್ವರದಿಂದ ಬಳಲುತ್ತಿದ್ದ ಹೊರಟ್ಟಿ ಅವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ವೈದ್ಯರ ಸಲಹೆ ಮೇರೆಗೆ ಹೊರಟ್ಟಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More »ಹುಬ್ಬಳ್ಳಿ: ಕೊರೊನಾ ಸೋಂಕಿತ ಕಾನ್ಸರ್ ರೋಗಿಯೊಬ್ಬ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ ಅವರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕುತ್ತಿಗೆ ಕಾನ್ಸರ್ ರೋಗದಿಂದ ಬಳಲುತ್ತಿದ್ದ ಸೋಂಕಿತನಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಇವರನ್ನು ಕಾನ್ಸರ್ ವಾರ್ಡ್ ನಲ್ಲೇ ಕೋವಿಡ್ ವಿಭಾಗಕ್ಕೆ ಶಿಫ್ಟ್ ಮಾಡಲಾಗಿತ್ತು.ಸ ಮದ್ಯ ವ್ಯಸನಿಯಾದ ಭೀಮಪ್ಪ, ಕುಡಿಯಲು ಮದ್ಯ ಸಿಗದ ಕಾರಣ ಜೊತೆಗೆ ತಮಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಮನನೊಂದು ಕೋವಿಡ್ ವಾರ್ಡ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ವಿದ್ಯಾನಗರ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ ಸಂಬಧಿಕರಿಗೆ ಹಸ್ತಾಂತರ ಮಾಡಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ: ಕೊರೊನಾ ಸೋಂಕಿತ ಕಾನ್ಸರ್ ರೋಗಿಯೊಬ್ಬ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ ಅವರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕುತ್ತಿಗೆ ಕಾನ್ಸರ್ ರೋಗದಿಂದ ಬಳಲುತ್ತಿದ್ದ ಸೋಂಕಿತನಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಇವರನ್ನು ಕಾನ್ಸರ್ ವಾರ್ಡ್ ನಲ್ಲೇ ಕೋವಿಡ್ ವಿಭಾಗಕ್ಕೆ ಶಿಫ್ಟ್ ಮಾಡಲಾಗಿತ್ತು.ಸ ಮದ್ಯ …
Read More »‘ಕೊರೊನಾ ತಡೆಗೆ ಜನರು ತಾವೇ ಕಟ್ಟುನಿಟ್ಟಿನ ನಿಯಮ ಹಾಕಿಕೊಳ್ಳಬೇಕು”
ಹುಬ್ಬಳ್ಳಿ ಏ 26 : ಕೊರೊನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ಜನರು ಸೋಂಕು ತಡೆಗಟ್ಟಲು ತಾವೇ ಕಟ್ಟುನಿಟ್ಟಿನ ನಿಯಮ ಹಾಕಿಕೊಳ್ಳಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಲಹೆ ನೀಡಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಲ್ಲ ರೀತಿಯ ಸಹಾಯ ಮಾಡಲು ಸಿದ್ದವಾಗಿದೆ. ಈಗಾಗಲೇ 1.22 ಲಕ್ಷ ರೆಮ್ ಡಿಸಿವಿಯರ್ ನೀಡಿದ್ದೇವೆ. ಕೇಂದ್ರ ಸರ್ಕಾರ ಹೊಸದಾಗಿ 551 ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಅನುಮತಿ ನೀಡಿದೆ ಎಂದರು. ಲಾಕ್ …
Read More »ಕೊರೋನಾ ಹೆಸರಲ್ಲಿ ಉಚಿತ ಕೊಡುಗೆಗಳು ದೇಶಕ್ಕೆ ಗಂಡಾಂತರ – ವಿಜಯ ಸಂಕೇಶ್ವರ್
ಹುಬ್ಬಳ್ಳಿ: ಉಚಿತ ಆಹಾರ ವಿತರಣೆಯಂತಹ ಸ್ಕೀಂ ಗಳು ದೇಶದ ಉತ್ಪಾದನಾ ವಲಯದ ಮೇಲೆ ತೀವ್ರ ತರದ ಪರಿಣಾಮ ಬೀರಲಿದೆ ಎಂದು ಮಾಜಿ ಸಂಸದ, ಉದ್ಯಮಿ ವಿಜಯ ಸಂಕೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೋವಿಡ 2 ನೇ ಅಲೆ ಅಬ್ಬರಿಸುತ್ತಿದೆ. ಜನ ಸಾಮಾನ್ಯರು ತೊಂದರೆಗೆ ಈಡಾಗ್ತಿದಾರೆ ಅಂತ ಪ್ರಧಾನಿ ನರೇಂದ್ರ ಮೋದಿ, ಅವರ ನರವಿಗೆ ಮುಂದಾಗಿದಾರೆ. 80 ಕೋಟಿ ಜನರಿಗೆ ಉಚಿತ ರೇಷನ್ ಕೊಡೋದಾಗಿ ಪ್ರಧಾನಿ ಹೇಳಿದಾರೆ. ಇದರಿಂದ …
Read More »