ಹುಬ್ಬಳ್ಳಿ

ಸಾರ್ವಜನಿಕ ಸೇವೆಗೆ ನೈರುತ್ಯ ರೈಲ್ವೆ ಸನ್ನದ್ಧ- ಮುಂಜಾಗ್ರತಾ ಕ್ರಮ ಹೇಗಿದೆ ಗೊತ್ತಾ?

ಹುಬ್ಬಳ್ಳಿ: ಕೊರೊನಾ ಲಾಕ್‍ಡೌನ್‍ನಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಡಿಲಿಕೆ ಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆಯ ಆಡಳಿತ ಕಚೇರಿ, ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಗ್ಯಾರೇಜ್ ಮತ್ತು ವರ್ಕ್‌ಶಾಪ್ ಮೇ 4ರಿಂದ ಶೇ.33 ಸಿಬ್ಬಂದಿಯೊಂದಿಗೆ ಕೆಲಸ ಆರಂಭಿಸಿವೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತೆ ಕೆಲಸಕ್ಕೆ ಹಾಜರಾಗುತ್ತಿರುವುದರಿಂದ ಕೋವಿಡ್-19 ವೈರಸ್ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿನ ಗ್ಯಾರೇಜ್ ಮತ್ತು ವರ್ಕ್‌ಶಾಪ್ ಪ್ರವೇಶದ್ವಾರದಲ್ಲಿ ದೇಹ ತಾಪಮಾನ ಸ್ಕ್ರೀನಿಂಗ್ ಸ್ಮಾರ್ಟ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕಾರ್ಯಾಗಾರಕ್ಕೆ …

Read More »

ಹುಬ್ಬಳ್ಳಿಯಲ್ಲಿ ಕೂಡ ಅಜ್ಜಿಯೊಬ್ಬರು ದೊಣ್ಣೆ ಹಿಡಿದುಕೊಂಡೇ ಬಂದು ಮದ್ಯದಂಗಡಿ ಸರತಿ ಸಾಲಿನಲ್ಲಿ

ಹುಬ್ಬಳ್ಳಿ: ಲಾಕ್ ಡೌನ್ ಸಡಿಲಿಕೆ ಬಳಿಕ ಮದ್ಯದಂಗಡಿ ತೆರವು 2ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೂಡ ಜನ ಕ್ಯೂನಲ್ಲಿ ನಿಂತು ಎಣ್ಣೆ ಖರೀದಿ ಮಾಡುತ್ತಿರುವುದು ಕಂಡು ಬಂದಿದೆ. ಹುಬ್ಬಳ್ಳಿಯಲ್ಲಿ ಕೂಡ ಅಜ್ಜಿಯೊಬ್ಬರು ದೊಣ್ಣೆ ಹಿಡಿದುಕೊಂಡೇ ಬಂದು ಸರತಿ ಸಾಲಿನಲ್ಲಿ ನಿಂತಿದ್ದು ವಿಶೇಷವಾಗಿತ್ತು. ಹೌದು ಹಳೆ ಹುಬ್ಬಳ್ಳಿಯ ಮದ್ಯದಂಗಡಿಯಲ್ಲಿ ಅಜ್ಜಿ ಸಾರ್ವಜನಿಕರ ಕುತೂಹಲಕ್ಕೆ ಕಾರಣರಾದರು. ಮದ್ಯ ಖರೀದಿ ಮಾಡಲು ಬಂದಿದ್ದ ಅಜ್ಜಿಯನ್ನು ನೋಡಿ ಮದ್ಯಪ್ರಿಯರು ಅಚ್ಚರಿಗೊಂಡಿದ್ದಾರೆ. ಕಳೆದ 41 ದಿನಗಳಿಂದ ಅಂದರೆ …

Read More »

ಮೆಡಿಕಲ್ ಶಾಪ್ ಖಾಲಿ – ಮದ್ಯದಂಗಡಿ ಫುಲ್,ಬಿಸಿಲಿನಲ್ಲೇ ಕ್ಯೂ ನಿಂತ ಎಣ್ಣೆಪ್ರಿಯರು….

ಹುಬ್ಬಳ್ಳಿ: ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಇದೂವರೆಗೂ ಮದ್ಯ ಮಾರಾಟವನ್ನ ಸ್ಥಗಿತಗೊಳಿಸಲಾಗಿತ್ತು. ಆದರೆ ಇಂದು ಲಾಕ್‍ಡೌನ್ ಸಡಿಲಿಕೆ ಮಾಡಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದ ಪರಿಣಾಮ ಮದ್ಯ ಪ್ರಿಯರು ಬೆಳಗ್ಗೆಯಿಂದ ಮದ್ಯ ಖರೀದಿ ಮಾಡಲು ಕ್ಯೂ ನಿಂತಿದ್ದಾರೆ. ಆದರೆ ಪಕ್ಕದಲ್ಲಿದ್ದ ಮೆಡಿಕಲ್ ಶಾಪ್ ಮಾತ್ರ ಖಾಲಿಯಾಗಿದೆ. ಮದ್ಯ ಮಾರಾಟ ಆರಂಭವಾಗುತ್ತಿದ್ದಂತೆ ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣ ಬಳಿಯ ದಾರುವಾಲ್ ಶಾಪ್ ಮುಂದೆ ಎಣ್ಣೆ ಖರೀದಿ ಮಾಡಲು ಸುಮಾರು ಒಂದು ಕೀಲೋ …

Read More »

ಬಾರ್‌ಗಳ ಮುಂದೆ ಸ್ವತಃ ತಾವೇ ಬ್ಯಾರಿಕೇಡ್ ನಿರ್ಮಿಸಿದ ಮದ್ಯ ಪ್ರಿಯರು……….

ಹುಬ್ಬಳ್ಳಿ: ಲಾಕ್‍ಡೌನ್ ಜಾರಿಯಾದ ದಿನದಿಂದಲೂ ಎಣ್ಣೆ ಸಿಗದೆ ಪರದಾಡಿದ ಕುಡುಕರು ನಾಳೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ರಾಜ್ಯ ಸರ್ಕಾರ ಮೇ 4ರಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದು, ಕುಡುಕರಲ್ಲಿ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಮದ್ಯಪ್ರಿಯರು ನಗರದ ಕಾಟನ್ ಮಾರ್ಕೆಟ್ ನಲ್ಲಿ ಸ್ವತ ತಾವೇ ಮುಂದೆ ನಿಂತು ಬಾರ್‍ಗಳಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಾಟನ್ ಮಾರ್ಕೆಟ್‍ನ ಎಂಎಸ್‍ಐಎಲ್ ಮುಂದೆ ನೂಕುನುಗ್ಗಲು ಆಗದಂತೆ ತಾವೇ ಕಟ್ಟಿಗೆಯ ಬ್ಯಾರಿಕೇಡ್ ಗಳನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸರತಿ …

Read More »

ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಲ್ಲಿಮೇ 2020ನೇ ತಿಂಗಳಿನಲ್ಲಿಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿದೆ.

ಹುಬ್ಬಳ್ಳಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿಸಾರ್ವಜನಿಕರಿಗೆ ಆಹಾರ ಭದ್ರತೆ ಒದಗಿಸಲು ಕೇಂದ್ರ ಸರಕಾರ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಲ್ಲಿಮೇ 2020ನೇ ತಿಂಗಳಿನಲ್ಲಿಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿದೆ. ಪಡಿತರ ಚೀಟಿದಾರರು ಓಟಿಪಿ ಅಥವಾ ಬಯೋ ಮೆಟ್ರಿಕ್‌ ಮೂಲಕ ಪಡಿತರವನ್ನು ಪಡೆಯಬಹುದು. ಜಿಲ್ಲೆಗೆ ಹೆಚ್ಚುವರಿ 12,857 ಮೆ. ಟನ್‌ ಅಕ್ಕಿ ಹಾಗೂ 3806 ಮೆ. ಟನ್‌ ತೊಗರಿಬೇಳೆ ಹಂಚಿಕೆಯಾಗಿದೆ. ಈ ಆಹಾರಧಾನ್ಯವನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ …

Read More »

ಸಂಚಾರಿ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಪಾಲಿಕೆ ಆವರಣದಲ್ಲಿ ಚಾಲನೆ ನೀಡಿದರು.

ಹುಬ್ಬಳ್ಳಿ: ಲಾಕ್‍ಡೌನ್ ಹಾಗೂ ರಂಜಾನ್ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲವಾಗಲಿ ಎಂದು ಮಿಟ್ ಆನ್ ಮಿಲ್ಸ್ (ಮಾಂಸ ಮತ್ತು ಮಾಂಸದಿಂದ ತಯಾರಿಸಿದ ಖಾದ್ಯ ಪದಾರ್ಥಗಳ) ಸಂಚಾರಿ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಪಾಲಿಕೆ ಆವರಣದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದು, ಈ ವೇಳೆಯಲ್ಲಿ ಜನರು ಮನೆಯಿಂದ ಹೊರಬರದಂತೆ ಆದೇಶ ಹೊರಡಿಸಲಾಗಿದೆ. ಅಲ್ಲದೆ ಇದು ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಜನರ ಮಾಂಸಕ್ಕೆ …

Read More »

ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಇಂದು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು.

ಹುಬ್ಬಳ್ಳಿ: ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಇಂದು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸ್ವಚ್ಛತಾ ಸೇನಾನಿಗಳಂತೆ ಕಾರ್ಯನಿರ್ವಹಿಸುತ್ತಿರುವ (Frontline workers) ಪಾಲಿಕೆಯ ಪೌರಕಾರ್ಮಿಕರು, ಆಟೋ ಟಿಪ್ಪರ್ ಚಾಲಕರು ಮತ್ತು ಸಹಾಯಕರು, ಟ್ರ್ಯಾಕ್ಟರ್ ಡ್ರೈವರ್‍ಗಳು, ಲೋಡರ್ಸ್, ಜೆಟ್ಟಿಂಗ್ ಯಂತ್ರದ ಸಿಬ್ಬಂದಿಗೆ 2,800 ಆಹಾರ ಸಾಮಗ್ರಿಗಳ ಕಿಟ್ ವಲಯವಾರು ವಿತರಿಸಲಾಯಿತು. ಕಿಟ್ 5 ಕೆ.ಜಿ ಅಕ್ಕಿ, 1ಕೆ.ಜಿ ತೊಗರಿ …

Read More »

ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಮರಳು ಶಿಲ್ಪದ ಮೂಲಕ ಗೌರವ

ಹುಬ್ಬಳ್ಳಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಮರಳು ಶಿಲ್ಪದ ಮೂಲಕ ಗೌರವ ಸಲ್ಲಿಸಲಾಗಿದೆ. ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಈ ವಿಶೇಷ ಮರಳು ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಗದೀಶ್ ಶೆಟ್ಟರ್ ವೀಕ್ಷಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. …

Read More »

ಬೆಳಗಾವಿ -ಇಬ್ಬರು ನಕಲಿ ಪತ್ರಕರ್ತರ ಬಂಧನ…..

ಧಾರವಾಡ ( ಕರ್ನಾಟಕ ವಾರ್ತೆ) ಏ.23: ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ಬಿಎಂಎನ್ ಅಗ್ರೋ ಫುಡ್ಸ್ ಸಂಸ್ಥೆಗೆ ಭೇಟಿ ನೀಡಿ, ಪತ್ರಕರ್ತರು ಎಂದು ಹೇಳಿ ಕೊಂಡು ಬೆದರಿಕೆ ಒಡ್ಡಿ, 25 ಸಾವಿರ ರೂ.ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಜೆಕೆ 24×7 ನ್ಯೂಸ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ಅನ್ವರ್ ಕೆ.ಜಮಾದಾರ ಹಾಗೂ ಜೆಎಂ ಆರ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ನಿಝಾಮ್ ಅಬ್ದುಲ್ …

Read More »

ಬುದ್ಧಿ ಹೇಳಿದ್ದಕ್ಕೆ ಪೊಲೀಸರ ಮೇಲೆ ಯೋಧನಿಂದ ಹಲ್ಲೆ

ಚಿಕ್ಕೋಡಿ: ಮಾಸ್ಕ್ ಹಾಕಿಕೊಳ್ಳಿ ಹಾಗೇ ಮನೆ ಬಿಟ್ಟು ಹೊರಗಡೆ ತಿರುಗಾಡಬೇಡಿ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರ ಮೇಲೆ ಸಿ.ಆರ್.ಪಿ.ಎಫ್ ಯೋಧ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಪಟ್ಟಣದಲ್ಲಿ ನಡೆದಿದೆ. ಎಕ್ಸಂಬಾ ಪಟ್ಟಣದಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಹೊರಗಡೆ ರಸ್ತೆಯಲ್ಲಿ ಮಾಸ್ಕ್ ಇಲ್ಲದೆ ತಿರಾಗುಡುತ್ತಿದ್ದ ಸಿ.ಆರ್.ಪಿ.ಎಫ್ ಯೋಧ ಸಚಿನ್ ಸಾವಂತ್ ನಿಗೆ ಪೊಲೀಸರು ಮನೆಯಿಂದ ಹೊರಗೆ ತಿರುಗಾಡಬೇಡಿ. ಮಾಸ್ಕ್ ಧರಿಸಬೇಕು ಎಂದು …

Read More »