Breaking News

ಅಂತರಾಷ್ಟ್ರೀಯ

ಬೆಂಗಳೂರಲ್ಲಿ ಹಾಡಹಗಲೇ ಇಂಥಾ ಘಟನೆ ನಡೆಯುತ್ತಾ ಅನ್ನೋ ಭಯ ಹುಟ್ಟಿಸುತ್ತಿದೆ.

ಬೆಂಗಳೂರು: ಇತ್ತೀಚೆಗಷ್ಟೇ ಚಾಕು ಹಿಡಿದ ವ್ಯಕ್ತಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಇಬ್ಬರ ಕೊಂದು ಹಾಕಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಅಂಥದ್ದೇ ಭಯಾನಕ ವಿಡಿಯೋವೊಂದು ವೈರಲ್ ಆಗಿದೆ. ಬೆಂಗಳೂರಿನಲ್ಲಿ ಸದ್ಯ ವೈರಲ್ ಆಗಿರೋ ವಿಡಿಯೋ ನೋಡ್ತಿದ್ರೆ ನಿಜಕ್ಕೂ ಬೆಂಗಳೂರಲ್ಲಿ ಹಾಡಹಗಲೇ ಇಂಥಾ ಘಟನೆ ನಡೆಯುತ್ತಾ ಅನ್ನೋ ಭಯ ಹುಟ್ಟಿಸುತ್ತಿದೆ. ಕೈಯಲ್ಲಿ ಡ್ಯಾಗರ್ ಹಿಡಿದು ಡರೋಡೆಗೆ ಸ್ಕೆಚ್! ಯೆಸ್.. ಸಿಟಿ ಮಾರ್ಕೆಟ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಲೈವ್ ರಾಬರಿಯ …

Read More »

ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ .

ಜಾರ್ಖಂಡ್​ನಲ್ಲಿ ಆಡಳಿತರೂಢ ಜೆಎಮ್​ಎಮ್ ಪಕ್ಷದ ಲೊಮಿನ್ ಹೆಂಬ್ರೊಮ್ ಎಂಬ ಹೆಸರಿನ ಶಾಸಕ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಅಪಹರಣದಂಥ ಪ್ರಕರಣಗಳು ಹೆಚ್ಚಾಗಲು ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ . ಕಳೆದ ವಾರ ರಾಜ್ಯದ ದುಮ್ಕಾ ಎಂಬಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಉಲ್ಲೇಖಿಸಿ ಹೆಂಬ್ರೊಮ್ ಹಾಗೆ ಹೇಳಿದ್ದಾರೆ . ಇದೇ ಕ್ಷೇತ್ರದಲ್ಲಿ ವಿಧಾನಸಭೆಗೆ ಉಪಚುನಾವಣೆ ನಡೆಯುತ್ತಿರುವುದರಿಂದ ಜೆ …

Read More »

ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ. ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ …

Read More »

ಸಿಡಿಲು ಬಡಿದು ಕುರಿಗಾರರ 45 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.

ಸವದತ್ತಿ : ಇಂದು ತಾಲೂಕಿನಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಭಾರಿ ಮಳೆಗೆ ನವಿಲುತೀರ್ಥ ಡ್ಯಾಮ್ ಹತ್ತಿರ ಸಿಡಿಲು ಬಡಿದು ಕುರಿಗಾರರ 45 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.   ಸ್ಥಳಕ್ಕೆ ಶಾಸಕ ಹಾಗೂ ವಿಧಾನಸಭೆಯ ಉಪಸಭಾದ್ಯಕ್ಷ ಆನಂದ ಮಾಮನಿ ಹಾಗೂ ತಾಲೂಕು ದಂಡಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಂತರ ಕುರಿಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಆನಂದ ಮಾಮನಿ ಸೂಚಿಸಿದರು.  

Read More »

ವಿಶ್ವದ ಎಲ್ಲಾ ರಾಷ್ಟ್ರಗಳಿಗೂ ಕೊರೊನಾ ಲಸಿಕೆ ಲಭ್ಯವಾಗುವಂತೆ ಮಾಡಲು ಈಗಿನಿಂದಲೇಸಿದ್ಧತಾ ಕಾರ್ಯ:W.H.O.

ವಿಶ್ವಸಂಸ್ಥೆ, ಅ.20- ಕಿಲ್ಲರ್ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ಸಹಕಾರ ನೀಡುತ್ತಿರುವ ವಿಶ್ವಸಂಸ್ಥೆಯ ಪ್ರಮುಖ ಅಂಗ ಸಂಸ್ಥೆಗಳಲ್ಲಿ ಒಂದಾದ ಯೂನಿಸೆಫ್ (ಸಂಯುಕ್ತ ರಾಷ್ಟ್ರಗಳ ಮಕ್ಕಳ ನಿಧಿ) ವರ್ಷಾಂತ್ಯದ ವೇಳೆಗೆ ಕೋವಿಡ್-19 ಲಸಿಕೆಗೆ ಪೂರ್ವಭಾವಿಯಾಗಿ 52 ಕೋಟಿ ಸಿರಿಂಜ್‍ಗಳನ್ನು ಸಿದ್ಧವಾಗಿಟ್ಟುಕೊಳ್ಳಲಿದೆ.ಮುಂದಿನ ವರ್ಷದ ಆರಂಭದಲ್ಲಿ ಕೊರೊನಾ ಲಸಿಕೆ ಮತ್ತು ಔಷಧಿಗಳು ಲಭ್ಯವಾಗಲಿದ್ದು, ಇವುಗಳ ಪೂರೈಕೆ ಮತ್ತು ನಿರ್ವಹಣೆಯಲ್ಲಿ ಯಾವುದೇ ರೀತಿಯ ಅಡಚಣೆಯಾಗದಂತೆ ಈ ವರ್ಷದ ಅಂತ್ಯದ ವೇಳೆಗೆ 52 ದಶಲಕ್ಷ ಸಿರಿಂಜ್‍ಗಳನ್ನು ದಾಸ್ತಾನು …

Read More »

ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರ ಎದುರು ಪ್ರವಾಹ ಸಂತ್ರಸ್ತೆಯೊಬ್ಬರು ತಮ್ಮ ಅಳಲು ತೋಡಿಕೊಳ್ಳಲು ಮುಂದಾದರು.

ಬಾಗಲಕೋಟೆ: ತಾವು ಪ್ರತಿನಿಧಿಸುವ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರ ಎದುರು ಪ್ರವಾಹ ಸಂತ್ರಸ್ತೆಯೊಬ್ಬರು ತಮ್ಮ ಅಳಲು ತೋಡಿಕೊಳ್ಳಲು ಮುಂದಾದರು. ತಮಗೊಂದು ಸೂರಿಗಾಗಿ ಸಿದ್ದರಾಮಯ್ಯ ಕಚೇರಿಗೆ ಅರ್ಜಿ ಸಲ್ಲಿಸಲು ಬಾದಾಮಿ ತಾಲೂಕಿನ ನೆಲವಿಗಿ ಗ್ರಾಮದ ಯಲ್ಲವ್ವ ಹನಮಂತಪ್ಪ ಗಾರವಾಡ ಬಂದಿದ್ದರು. ಆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಸರಿಯಾಗಿ ಸ್ಪಂದಿಸಲಿಲ್ಲ ಎಂದು ಅವರು ತಮ್ಮ ಆಕ್ರೋಶ ಹೊರಹಾಕಿದರು.    ಇದ್ದವರು ಸರ್ಕಾರದಿಂದ ಎರಡೆರಡು ಮನೆ ಹಾಕಿಸಿಕೊಂಡಾರ. …

Read More »

ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ಸಿದ್ದರಾಮಯ್ಯ

ಬೆಂಗಳೂರು: ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆಸಿರುವ ಸಿದ್ದು ಈ ರೀತಿ ಹೇಳಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಶಾಸಕ …

Read More »

ಭೀಮಾ ನದಿ ಪ್ರವಾಹ ಮುಂದುವರೆದಿದೆ.

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹ ಮುಂದುವರೆದಿದೆ. ಪ್ರವಾಹದಲ್ಲಿ ಜನರ ಬದುಕೇ ಕೊಚ್ಚಿ ಹೋಗಿದೆ. ಮನೆಗಳ ಹಾನಿಯ ಜೊತೆ ಅಂಗಡಿಗಳಲ್ಲಿಯೂ ಅಪಾರ ಹಾನಿ ಸಂಭವಿಸಿದೆ. ಭೀಮಾ ನದಿ ಪ್ರವಾಹಕ್ಕೆ ಕಲಬುರ್ಗಿ ಜಿಲ್ಲೆ ಜನತೆ ತತ್ತರಿಸಿ ಹೋಗಿದ್ದಾರೆ. ಅಫಜಲಪುರ ತಾಲೂಕಿನಲ್ಲಿ ಪ್ರವಾಹ ಒಂದಷ್ಟು ಇಳಿಮುಖವಾಗಿದೆ. ಆದರೆ ಕಲಬುರ್ಗಿ, ಜೇವರ್ಗಿ, ಶಹಾಬಾದ್ ಹಾಗು ಚಿತ್ತಾಪುರ ತಾಲೂಕುಗಳಲ್ಲಿ ಪ್ರವಾಹ ಮುಂದುವರಿದಿದೆ. ಭಾರಿ ಪ್ರವಾಹದಲ್ಲಿ ಜನರ ಬದುಕೇ ಕೊಚ್ಚಿ ಹೋಗಿದೆ. ಕಲಬುರ್ಗಿ ತಾಲೂಕಿನ ಸರಡಗಿ …

Read More »

ಕೊರೊನಾ ವಾರಿಯರ್ಸ್‍ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ.

ಬೆಂಗಳೂರು,- ಕೋವಿಡ್ -19 ಸಂದರ್ಭದಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಇಲ್ಲವೇ ಅಪಘಾತಕ್ಕೆ ತುತ್ತಾದ ಕೊರೊನಾ ವಾರಿಯರ್ಸ್‍ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಈ ಯೋಜನೆಯ ಸೌಲಭ್ಯ ಒದಗಿಸಲಾಗಿದ್ದು, ಮತ್ತೆ ಈ ಸೌಲಭ್ಯವನ್ನು 6 ತಿಂಗಳಿಗೆ ವಿಸ್ತರಿಸಲಾಗಿದೆ. ರೋಗಿಗಳೊಂದಿಗೆ ನೇರ ಸಂಪರ್ಕ …

Read More »

ಈ ನಿರ್ಧಾರವನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರು : ಬೊಂಬೆ ತಯಾರಕರಿಗೆ ಬಿಐಎಸ್ (ಭಾರತೀಯ ಮಾನಕ ಬ್ಯೂರೋ) ಸಂಸ್ಥೆ ನೀಡುವ ಐಎಸ್‌ಐ ಮಾರ್ಕ್ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ ಸಾಂಪ್ರದಾಯಿಕ ಕಲೆ ಅವಲಂಬಿಸಿರುವ ಬೊಂಬೆ ತಯಾರಕರ ಮೇಲೆ ಗದಾಪ್ರಹಾರ ಮಾಡಿದ್ದು, ಈ ನಿರ್ಧಾರವನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬಿಐಎಸ್‌ ಪ್ರಮಾಣಪತ್ರ ಪಡೆಯಲು ಸಾವಿರಾರು ರೂ. ವೆಚ್ಚ ಸಣ್ಣ ಬೊಂಬೆಗಳ ತಯಾರಕರಿಗೆ ದುಬಾರಿ ಆಗಲಿದ್ದು, ದೇಶೀಯ ಬೊಂಬೆ ಉತ್ಪಾದಕರ ಭವಿಷ್ಯಕ್ಕೆ ಮಾರಕವಾಗಲಿದೆ. ಕೇಂದ್ರದ ಈ …

Read More »