ಬೆಂಗಳೂರು : ರಾಜ್ಯದಲ್ಲಿ ಸೋಮವಾರ 7,339 ಮಂದಿಗೆ ಸೋಂಕು ದೃಢಪಟ್ಟಿದ್ದು 122 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5.26 ಲಕ್ಷಕ್ಕೆ ಹಾಗೂ ಕೊರೋನಾ ಸಾವಿನ ಸಂಖ್ಯೆ 8,145ಕ್ಕೆ ಏರಿಕೆಯಾಗಿದೆ. ಆದರೆ ಸಕ್ರಿಯ ಸೋಂಕಿತರ ಸಂಖ್ಯೆ 98 ಸಾವಿರದಿಂದ 95,335ಕ್ಕೆ ಇಳಿದಿದೆ. ಇದೇ ವೇಳೆ 9,925 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 4.23 ಲಕ್ಷಕ್ಕೆ ಏರಿಕೆಯಾಗಿದೆ. ಸೋಮವಾರ ಒಟ್ಟು 42,691 ಪರೀಕ್ಷೆ ನಡೆಸಿದ್ದು, …
Read More »ಗುತ್ತಿಗೆ ಆಧಾರದ NHM ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿಶೇಷ ಹೆಚ್ಚುವರಿ ಭತ್ಯೆ
ಬೆಂಗಳೂರು : ರಾಜ್ಯ ಸರ್ಕಾರವು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ದಡಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 14,252 ವಿವಿಧ ಹುದ್ದೆಗಳಿಗೆ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ಆದೇಶಿಸಿದೆ. ಆಯುಷ್ ಮತ್ತು ಎಂಬಿಬಿಎಸ್ ವೈದ್ಯರು ಹಾಗೂ ತಜ್ಞರಿಗೆ 10 ಸಾವಿರ ರೂ. ಶುಶ್ರೂಷಕಿಯರಿಗೆ ಎ.ಎನ್. ಎಂ ಲ್ಯಾಬ್ ಟೆಕ್ನೀಷಿಯನ್ ಹಾಗೂ ಫಾರ್ಮಾಸಿಸ್ಟ್ ಗಳಿಗೆ ತಲಾ 5 ಸಾವಿರ ರೂ. ನಂತೆ ಮುಂದಿನ ಆರು ತಿಂಗಳ …
Read More »Latest 3 ವಿಕೆಟ್ ಕಿತ್ತು ರೋಚಕ ತಿರುವು ನೀಡಿದ ಚಹಲ್ –R.C.B.10 ರನ್ಗಳ ಗೆಲುವು
ದುಬೈ: ಆರಂಭದಲ್ಲಿ ಬ್ಯಾಟ್ಸ್ ಮನ್, ನಂತರ ಬೌಲರ್ಗಳ ಉತ್ತಮ ಪ್ರದರ್ಶನದಿಂದ ಹೈದರಾಬಾದ್ ಸನ್ ರೈಸರ್ಸ್ ವಿರುದ್ಧದ ನಡೆದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ರನ್ಗಳಿಂದ ಜಯಗಳಿಸಿದೆ.ಗೆಲ್ಲಲು 164 ರನ್ಗಳ ಗುರಿಯನ್ನು ಪಡೆದ ಹೈದರಾಬಾದ್ 19.4 ಓವರ್ ಗಳಲ್ಲಿ 153 ರನ್ಗಳಿಗೆ ಆಲೌಟ್ ಆಯ್ತು. ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ ಮೂರು ವಿಕೆಟ್ ಕಬಳಿಸಿ ಪಂದ್ಯಕ್ಕೆ ರೋಚಕ ತಿರುವ ನೀಡಿದರೆ ಸೈನಿ ಎರಡು ವಿಕೆಟ್ ಕೀಳುವ ಮೂಲಕ ಆರ್ಸಿಬಿ …
Read More »ಏರುತ್ತಿರುವ ಐಪಿಎಲ್ ಕಾವು : ಇಂದು RCBಗೆ SRH ಸವಾಲು
ದುಬೈ,ಸೆ.21- ಐಪಿಎಲ್ ಕಾವು ರಂಗೇರಿದ್ದು ಡೆಲ್ಲಿ ಹಾಗೂ ಪಂಜಾಬ್ ವಿರುದ್ಧ ನಡೆದ ಪಂದ್ಯ ಸೂಪರ್ ಓವರ್ನಲ್ಲಿ ಮುಗಿದ ನಂತರ ಹೊಡಿ ಬಡಿ ಆಟಕ್ಕೆ ಮತ್ತಷ್ಟು ರಂಗು ಬಂದಿದೆ ಇಂದು 2016ರ ಚಾಂಪಿಯನ್ ಸನ್ರೈಸರ್ಸ್ ಹೈದ್ರಾಬಾದ್ ಹಾಗೂ ರನ್ನರ್ಅಪ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ವಿರುದ್ಧ ಹಣಾಹಣಿ ನಡೆಯುತ್ತಿದ್ದು ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚಿಸಿದೆ. 2019ರಲ್ಲಿ ಆರ್ಸಿಬಿ ಪ್ಲೇಆಫ್ಗೇರಲು ಪ್ರಮುಖ ಪಂದ್ಯದಲ್ಲೇ ಕೇನ್ವಿಲಿಯಮ್ಸ್ ನಾಯಕತ್ವದ ಎಸ್ಆರ್ಎಚ್ ವಿರುದ್ಧ ಹೀನಾಯವಾಗಿ ಸೋತು …
Read More »ಶಾಸಕ ಐಹೊಳೆಗೆ ಕೋವಿಡ್ ದೃಢ.
ಬೆಳಗಾವಿ: ರಾಯಬಾಗ ಬಿಜೆಪಿ ಶಾಸಕ ಡಿ.ಎಂ. ಐಹೊಳೆ ಅವರಿಗೆ ಸೋಮವಾರ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಯಾವುದೇ ರೀತಿಯ ರೋಗದ ಲಕ್ಷಣಗಳಿಲ್ಲ. ಆರೋಗ್ಯವಾಗಿದ್ದು, ಬೆಂಗಳೂರಿನ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗದಂತೆ ಬೆಂಗಳೂರಿನಿಂದಲೇ ನಿಗಾ ವಹಿಸುತ್ತೇನೆ’ ಎಂದು ತಿಳಿಸಿದ್ದಾರೆ.
Read More »ಜೂಜಾಟ: 22 ಮಂದಿ ಬಂಧನ.
ಬೆಳಗಾವಿ: ಇಲ್ಲಿನ ರಾಜಹಂಸ ಗಲ್ಲಿಯ ಸದಾನಂದ ಮಠದ ಪಕ್ಕದ ಗಲ್ಲಿಯಲ್ಲಿ ಭಾನುವಾರ ಮಧ್ಯರಾತ್ರಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ 22 ಮಂದಿಯನ್ನು ಟಿಳಕವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜೂರ ಚೋಪಧಾರ, ಪ್ರದೀಪ ಲಾಟೂಕರ, ಮೋಯಿಜ ಗಚವಾಲೆ, ವಿಜಯ ಪಾಟೀಲ, ಪರಶುರಾಮ ಮೇತ್ರಿ, ಸುಶೀಲ ಮುದೋಳಕರ, ಬಾಬು ಯಾದವ, ಅನಿಲ ಯಳ್ಳೂರಕರ, ಕಿಸನ ಪಾಟೀಲ, ಜಹಾಂಗೀರಖಾನ ಪಠಾಣ, ವಿಜಯ ಶಿಂದೋಳಕರ, ದೀಪಕ ಹೊನ್ಯಾಳಕರ, ಆಕಾಶ ಜಕ್ಕಾನೆ, ವಿನಾಯಕ ಗಣಾಚಾರಿ, ಸಾಗರ ಮುತಗೇಕರ, …
Read More »ಸಿಎಂ ಬಿ ಎಸ್ ಯಡಿಯೂರಪ್ಪ ಓರ್ವ ಸರ್ವಾಧಿಕಾರಿ ; ವಾಟಾಳ್ ನಾಗರಾಜ್ ಗಂಭೀರ ಆರೋಪ
ಬೆಳಗಾವಿ : ರಾಜ್ಯದಲ್ಲಿ ಅನೇಕ ಮುಖ್ಯಮಂತ್ರಿಗಳನ್ನು ನಾನು ನೋಡಿದ್ದೇನೆ. ಆದರೆ, ಬಿ ಎಸ್ ಯಡಿಯೂರಪ್ಪ ಅವರು ಓರ್ವ ಸರ್ವಾಧಿಕಾರಿ ಮುಖ್ಯಮಂತ್ರಿ. ನನ್ನನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್ ಪ್ರವೇಶ ಆಗದಂತೆ ನೋಡಿಕೊಂಡಿದ್ದಾರೆ. ನನ್ನ ವಿರುದ್ಧ ಶ್ರೀಮಂತರನ್ನು ನಿಲ್ಲಿಸಿ ಸೋಲಿಸುತ್ತಾರೆ ಎಂದು ಬೆಳಗಾವಿಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ವಿಶೇಷ ಅಧಿವೇಶನ ನಡೆಸಬೇಕು. ಪ್ರವಾಹ, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿ, …
Read More »‘ಕೇಂದ್ರ ಸರ್ಕಾರದಿಂದ ರೈತ ಪರ ಕಾಯ್ದೆ, ಮಧ್ಯವರ್ತಿಗಳ ಪರ ಇರುವವರಿಂದ ವಿರೋಧ’
ಮಂಗಳೂರು: ರೈತರಿಗೆ ಮೋಸ ಮಾಡುತ್ತಿದ್ದ ಮಧ್ಯವರ್ತಿಗಳು, ಖರೀದಿದಾರರ ಪರವಾಗಿರುವ ಪ್ರತಿಪಕ್ಷಗಳು ಈ ರೈತಪರ ಕಾಯ್ದೆಯನ್ನು ವಿರೋಧಿಸುತ್ತವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಸ್ವತಂತ್ರ ಭಾರತದಲ್ಲಿ ಮೊದಲಬಾರಿಗೆ ರೈತರು ತಮ್ಮ ಉತ್ಪನ್ನಗಳನ್ನು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ದೇಶದ ಯಾವುದೇ ಭಾಗದಲ್ಲಿ ಉತ್ತಮ ಬೆಲೆಗೆ ಮಾರಬಹುದಾಗಿದೆ. ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದ್ದು ರೈತರು ಆಹಾರ ತಯಾರಿಕಾ …
Read More »ವಿಜಯಪುರ: ನೇಣು ಬಿಗಿದುಕೊಂಡು ಮಹಿಳಾ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ
ವಿಜಯಪುರ : ಎಂಕಾಂ ಅಂತಿಮ ವರ್ಷದ ಕೊನೆಯ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆವರಣದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಭಾನುವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮೂಲತಃ ಕಲಬುರಗಿ ನಗರದ ಐಶ್ವರ್ಯ ಶಂಕರ ನಾಟಿಕಾರ (24) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ. ತಂಗಿ ಆತ್ಮಹತ್ಯೆಗೆ ಕಾರಣವೆಂದು ಭಾವನನ್ನೇ ಹತ್ಯೆಗೈದ ಯೋಧ ವಿದ್ಯಾರ್ಥಿನಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯಿಂದ ಸಾವಿನ ನಿಖರ …
Read More »ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್!
ಬೆಂಗಳೂರು : ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ. ಕಡೂರು ಕ್ಷೇತ್ರದ ಶಾಸಕ ಬೆಳ್ಳಿ ಪ್ರಕಾಶ್ ಅವರು ಸಚಿವ ನಾರಾಯಣಗೌಡಅವರನ್ನು ಅನುದಾನದ ವಿಚಾರವಾಗಿ ಏಕವಚನದಲ್ಲೇ ನಿಂದಿಸಿದ್ದಾರೆ. ಬಳಿಕ ಮಾತಿನ ಚಕಮಕಿ ತಾರಕಕ್ಕೇರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ತೋಟಗಾರಿಕೆ ಇಲಾಖೆಯಿಂದ ನೀಡಬೇಕಿದ್ದ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ …
Read More »