Breaking News

ಅಂತರಾಷ್ಟ್ರೀಯ

ಬೆಳಗಾವಿಯಲ್ಲಿ 12ಸಾವಿರದ ಗಡಿ ದಾಡಿದ ಸೋಂಕಿತರ ಸಂಖ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 357 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ, ಇಲ್ಲಿನ ಸೋಂಕಿತರ ಸಂಖ್ಯೆ 12ಸಾವಿರದ (12,090) ಗಡಿ ದಾಡಿದೆ. ತಾಲ್ಲೂಕಿನ ಸಾಂಬ್ರಾ ಏರ್‌ಮನ್‌ ತರಬೇತಿ ಶಾಲೆ (ಎಟಿಎಸ್)ಯಲ್ಲಿ ಒಂದೇ ದಿನ 69 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು (ರಾಮದುರ್ಗ, ಬೈಲಹೊಂಗಲ, ಹುಕ್ಕೇರಿ ಮತ್ತು ಬೆಳಗಾವಿ ತಾಲ್ಲೂಕಿನ ತಲಾ ಒಬ್ಬರು) ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ …

Read More »

ಮುಖ್ಯಮಂತ್ರಿಯಿಂದ ‘ಪ್ರಕೃತಿ ವಂದನಾ’

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಮ್ಮ ನಿವಾಸ ‘ಕಾವೇರಿ’ಯಲ್ಲಿ ಭಾನುವಾರ ಬೆಳಿಗ್ಗೆ ಪ್ರಕೃತಿ ವಂದನಾ ಕಾರ್ಯಕ್ರಮ ನಡೆಯಿತು. ಯಡಿಯೂರಪ್ಪ ಅವರು ಬಿಲ್ವ ಸಸಿ ನೆಟ್ಟು ಪೂಜೆ ಸಲ್ಲಿಸಿದರು. ಬಳಿಕ ವೃಕ್ಷಕ್ಕೆ ರಾಖಿ ಕಟ್ಟಿದರು. ಪ್ರಕೃತಿಯನ್ನು ಪೂಜಿಸುವ ಅಭಿಯಾನಕ್ಕೆ ಶುಭ ಹಾರೈಸಿ ಮಾತನಾಡಿದ ಯಡಿಯೂರಪ್ಪ, ‘ಮನೆ ಮನೆಗಳಲ್ಲಿ ಹಿತ್ತಲಲ್ಲಿ ಸಸಿ ನೆಟ್ಟು ರಕ್ಷಣೆ ಮಾಡಬೇಕು’ ಎಂದು ನಾಡಿನ ಜನರಿಗೆ ಮನವಿ ಮಾಡಿದರು. ಈ ವೇಳೆ ಉಪಸ್ಥಿತರಿದ್ದ ಕರ್ನಾಟಕ ಜೀವ ವೈವಿಧ್ಯ ಮಂಡಳಿ …

Read More »

ಕೋಲಾರದ ಚಿನ್ನದ ಗಣಿಯಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ನಿರ್ಧಾರ; ಸಚಿವ ಜಗದೀಶ್ ಶೆಟ್ಟರ್ ಮಾಹಿತಿ

ಕೋಲಾರ  : ಕೋಲಾರ ಜಿಲ್ಲೆಯ ಕೆಜಿಎಫ್​ನ ಬಿಜಿಎಂಎಲ್​ನ ಕೋಲಾರ ಗೋಲ್ಡ್ ಫೀಲ್ಡ್ಸ್ ಒಡೆತನದ ಬಳಕೆಯಾಗದ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲು ಮುಂದಾಗಿದೆ. ಚಿನ್ನದ ಗಣಿಯು 12 ಸಾವಿರ ಎಕರೆ ವಿಶಾಲವಾದ ಪ್ರದೇಶದಲ್ಲಿದ್ದು, ಇಲ್ಲಿ ಇದುವರೆಗೂ ಬಳಸದ 3,200 ಎಕರೆ ಜಾಗದಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಈ ಸ್ಥಳ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿ ಇರುವುದರಿಂದ ಕೇಂದ್ರದ ಸಮ್ಮತಿ ಅತ್ಯಗತ್ಯವಾಗಿದೆ. ಶನಿವಾರ ಬೃಹತ್ ಕೈಗಾರಿಕಾ ಸಚಿವ ಜಗದೀಶ್ …

Read More »

ಅಂಗನವಾಡಿ- ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 50 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಹತೆ, ವಯೋಮಿತಿಯನ್ನು ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕಡೆ ದಿನ 05.09.2020 ಆಗಿದ್ದು, ಹೆಚ್ಚಿನ ಮಾಹಿತಿಗೆ anganwadirecruit.kar.nic.inಗೆ ಸಂಪರ್ಕಿಸಬಹುದು.  

Read More »

ಬೆಂಗಳೂರು ಉಗ್ರ ಡಾ| ಶಬೀಲ್ ದಿಲ್ಲಿಯಲ್ಲಿ ಬಂಧನ!

ನವದೆಹಲಿ : 2007ರಲ್ಲಿ ನಡೆದಿದ್ದ ಬ್ರಿಟನ್‌ನ ಗ್ಲಾಸ್ಗೋ ಏರ್‌ಪೋರ್ಟ್‌ ದಾಳಿಯಲ್ಲಿ ಪಾತ್ರ ವಹಿಸಿದ್ದ ಬೆಂಗಳೂರು ಮೂಲದ ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. 2010-11ರಲ್ಲಿ ಬೆಂಗಳೂರಿನಿಂದ ಸೌದಿ ಅರೇಬಿಯಾಗೆ ಪರಾರಿಯಾಗಿದ್ದ ಈತನನ್ನು ಸ್ವದೇಶಕ್ಕೆ ವಾಪಸ್‌ ಕರೆಸಿಕೊಂಡು ಬಂಧಿಸಲಾಗಿದೆ. ಶಬೀಲ್‌ ಅಹ್ಮದ್‌ ಎಂಬಾತನೇ ಬಂಧಿತ. ಶುಕ್ರವಾರ ರಾತ್ರಿ ಭಾರತಕ್ಕೆ ಮರಳಿದ ನಂತರ ಈತನನ್ನು ಎನ್‌ಐಎ ತನ್ನ ವಶಕ್ಕೆ ತೆಗೆದುಕೊಂಡಿದೆ. ವೈದ್ಯಕೀಯ ಪದವೀಧರನಾಗಿರುವ ಶಬೀಲ್‌ ಅಹ್ಮದ್‌, ಗ್ಲಾಸ್ಗೋ …

Read More »

536 ಮಂದಿ ಗುಣಮುಖ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 276 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತ ಶನಿವಾರ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. 536 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

Read More »

ಕೊರೋನಾ ಆತಂಕ: ಹಳ್ಳಿಗಳು, ಸಣ್ಣ ಪಟ್ಟಣಗಳಲ್ಲಿ ಮಿಂಚಿನ ವೇಗದಲ್ಲಿ ಹರಡುತ್ತಿದೆ ಸೋಂಕು!

ಬೆಂಗಳೂರು: ಕೋವಿಡ್ -19 ರ ಪಟ್ಟಿಯಲ್ಲಿ ಕರ್ನಾಟಕವು ಮೂರು ಲಕ್ಷ ಗಡಿ ದಾಟುತ್ತಿದ್ದಂತೆ – ತಿಂಗಳಾರಂಭದಲ್ಲಿ 1.29 ಲಕ್ಷ ಸಕಾರಾತ್ಮಕ ಪ್ರಕರಣಗಳಿಂದ ಭಾರಿ ಜಿಗಿತ ಕಂಡಿದೆ. ಸಣ್ಣ ಪಟ್ಟಣಗಳು ​​ಮತ್ತು ಹಳ್ಳಿಗಳಲ್ಲಿ ಈ ವೈರಸ್ ವೇಗವಾಗಿ ಹರಡುತ್ತಿದೆ. ಶನಿವಾರ, ರಾಜ್ಯವು 8,324 ಹೊಸ ಪ್ರಕರಣಗಳನ್ನು ವರದಿ ಮಾಡಿದೆ, ಇದುವರೆಗೆ ರಾಜ್ಯದಲ್ಲಿ 32,7076 ಪ್ರಕರಣಗಳು ವರದಿಯಾಗಿದೆ. ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸಿದ ನಂತರ ಜನ ಮುಕ್ತ ಸಂಚಾರ, ನಗರಗಳಿಗೆ ಮರಳುವಿಕೆಮತ್ತು ಪರೀಕ್ಷೆಗಳ ಸಂಖ್ಯೆಯಲ್ಲಿನ …

Read More »

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಬೆನ್ನಾಳಿ ಗ್ರಾಮದ ವಿಶ್ವಕರ್ಮ ಸಮುದಾಯದ 10 ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.

ಬೆಳಗಾವಿ: ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಬೆನ್ನಾಳಿ ಗ್ರಾಮದ ವಿಶ್ವಕರ್ಮ ಸಮುದಾಯದ 10 ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು. ಬೆನ್ನಾಳಿ ಗ್ರಾಮದ ಮೌನೇಶ್ವರ ನಗರದಲ್ಲಿ ಶಾಸಕ ಸತೀಶ ಜಾರಕಿಹೊಳಿ ಬಿಜೆಪಿ‌‌ ಮುಖಂಡರನ್ನು ಪಕ್ಷಕ್ಕೆ ಬರ ಮಾಡಿಕೊಂಡು, ಹೂವಿನ ಹಾರ ಹಾಕಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಶಾಸಕ ಸತೀಶ, 10 ವರ್ಷಗಳಿಂದ ಯಮಕನಮರಡಿ ಕ್ಷೇತ್ರದಲ್ಲಿ   ಶಿಕ್ಷಣ ಸೇರಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ …

Read More »

ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್​ ನೋಟಿಫಿಕೇಶನ್​ ಹೊರಡಿಸಲ ಕ್ರಮ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು‌ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ (Ramesh jarakiholi) ಹೇಳಿದರು. ಬೆಳಗಾವಿ ಸಮೀಪದ ಪೀರನವಾಡಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ‌ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌, ಸಂಗೊಳ್ಳಿ ರಾಯಣ್ಣ ಪ್ರತಿಮೆ (Sangolli Rayanna statue) ವಿವಾದ ನಿನ್ನೆಯೇ ಸುಖಾಂತ್ಯವಾಗಿರುವುದು ಒಳ್ಳೆಯ ಬೆಳವಣಿಗೆ. ಸಂಗೊಳ್ಳಿ ರಾಯಣ್ಣ ಮತ್ತು‌ ಛತ್ರಪತಿ ಶಿವಾಜಿ ಇಬ್ಬರೂ ದೇಶದ …

Read More »

ಕರುಣಾಜನಕ ಕತೆ.. ಕೊರೊನಾ Bad Timeನಲ್ಲಿ ಮಾರಾಟವಾಗಿದ್ದ ಮಗು ತಾಯಿ ಮಡಿಲಿಗೆ!

ಮನೆ ಬಾಡಿಗೆ ಕಟ್ಟಲು ಸಹ ಹಣವಿಲ್ಲದೆ 3 ವರ್ಷದ ಹೆಣ್ಣು ಮಗುವನ್ನ 11,000 ರುಪಾಯಿಗೆ ಷರತ್ತುಬದ್ದ ಮಾರಾಟ ಮಾಡಲಾಗಿತ್ತು. ಷರತ್ತಿನ ಪ್ರಕಾರ ಮಗುವನ್ನ ತಾಯಿಗೆ ನೋಡಲು ಬಿಡದಿದ್ದಕ್ಕೆ ಠಾಣೆ ಮೆಟ್ಟಿಲೇರಿದ ನೊಂದ ಮಾತೃ ಹೃದಯ.. ಮುಂದೆ ಓದಿ. ನೆಲಮಂಗಲ: ಕೊರೋನಾ ಎಂಬ ಮಹಾಮಾರಿ ಜನರ ಆರ್ಥಿಕ ಪರಿಸ್ಥಿತಿಯನ್ನ ನೆಲ ಕಚ್ಚಿಸಿದ್ದು, ಲಕ್ಷಾಂತರ ಜನ ಬೆಂಗಳೂರಿನಲ್ಲಿ ಮನೆ ಬಾಡಿಗೆ ಸಹ ಕಟ್ಟಲಾಗದೆ ಬೆಂಗಳೂರು ತೊರೆದು ಹಳ್ಳಿಗಳ್ಳತ್ತ ಗಂಟು ಮೂಟೆ ಕಟ್ಟಿಕೊಂಡು ಹೊರಟೇ …

Read More »