Breaking News

ಅಂತರಾಷ್ಟ್ರೀಯ

ಪಠ್ಯದಲ್ಲಿಲ್ಲದ ಪ್ರಶ್ನೆ ಇದ್ದರೆ ಕೃಪಾಂಕ; ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಡಿಸಿಎಂ ಆಭಯ

ಬೆಂಗಳೂರು: ಎಂಜಿನಿಯರಿಂಗ್‌ ಪರೀಕ್ಷೆಯಲ್ಲಿ ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾದ ವಿಷಯ ಸರಕಾರದ ಗಮನಕ್ಕೆ ಬಂದಿದ್ದು, ಈ ಬಗ್ಗೆ ವಿದ್ಯಾರ್ಥಿಗಳಿಗೆ ಹಿತಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಉಪ ಕುಲಪತಿ ಪ್ರೊ. ಕರಿಸಿದ್ದಪ್ಪ ಅವರೊಂದಿಗೆ …

Read More »

ನೂತನ ಶಿಕ್ಷಣ ನೀತಿ ಜಾರಿ; ರಾಜ್ಯಪಾಲರ ಜತೆ ಡಿಸಿಎಂ ಮಹತ್ವದ ಚರ್ಚೆ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ, ರಾಜ್ಯಪಾಲ ವಜೂಭಾಯಿ ವಾಲ ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ಶುಕ್ರವಾರ ಬೆಂಗಳೂರಿನಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಡಿಸಿಎಂ, ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಈವರೆಗೆ ಸರಕಾರ ಕೈಗೊಂಡಿರುವ ಕ್ರಮಗಳು, ಕಾರ್ಯಪಡೆ ರಚನೆ, ಆ ಕಾರ್ಯಪಡೆ ಜತೆ ನಡೆಸಿರುವ ಸಭೆಗಳು, ವಿಚಾರ ವಿನಿಮಯ ಇತ್ಯಾದಿ …

Read More »

ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಪ್ರಕರಣ ಸೌಹಾರ್ದತೆಯಿಂದ ಇತ್ಯರ್ಥವಾಗಿದೆ.

ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಪ್ರಕರಣ ಸೌಹಾರ್ದತೆಯಿಂದ ಇತ್ಯರ್ಥವಾಗಿದೆ. ಇಬ್ಬರು ಮಹಾನ್ ನಾಯಕರಿಗೆ ಅಗೌರವ ಆಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ನಿನ್ನೆಯ ಮೂರ್ತಿ ಪ್ರತಿಷ್ಠಾಪನೆ ‌ಹಾಗೂ ಲಾಠಿ ಚಾರ್ಜ್ ಕುರಿತು ದಾಖಲಾಗಿರುವ ಪ್ರಕರಣಗಳನ್ನ ವಾಪಸ್ ಪಡೆಯುವ ಕುರಿತು ಸಿಎಂ ಜತೆಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು‌ ಎಂದ್ರು. ಕನ್ನಡ ಪರ ಹೋರಾಟಗಾರರ ಮೇಲೆ ಕೇಸ್ ವಿಚಾರ ಹಿಂಪಡೆಯಬೇಕೆಂಬ ಒತ್ತಡಗಳ …

Read More »

ಪರೀಕ್ಷೆ ನಡೆಸದೆ ಪದವಿ ಇಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ: ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಅಂತಿಮ ಸೆಮಿಸ್ಟರ್‌ ಪರೀಕ್ಷೆ ನಡೆಸದೆ, ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಮತ್ತು ವಿಶ್ವವಿದ್ಯಾಲಯಗಳಿಗೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸೆಪ್ಟೆಂಬರ್ 30ರ ಒಳಗೆ ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಅಂತಿಮ ಪರೀಕ್ಷೆಗಳನ್ನು ನಡೆಸಿ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಜುಲೈ 6ರಂದು ಹೊರಡಿಸಿದ್ದ ಮಾರ್ಗಸೂಚಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಆದರೆ, …

Read More »

ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಪ್ರದರ್ಶನ

ನವದೆಹಲಿ: ಫೆಬ್ರವರಿ 3ರಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ. ಏಷ್ಯಾದ ಅತಿದೊಡ್ಡ ಏರೋ ಸ್ಪೇಸ್ ಪ್ರದರ್ಶನವಾಗಿರುವ ಏರೋ ಇಂಡಿಯಾವನ್ನು ಬೆಂಗಳೂರಿನಲ್ಲಿ ನಡೆಸಲು ರಕ್ಷಣಾ ಸಚಿವಾಲಯ ತೀರ್ಮಾನ ಕೈಗೊಂಡಿದೆ. 2021ರ ಫೆಬ್ರವರಿ 3 ರಿಂದ 5 ರವರೆಗೆ ಏರೋ ಇಂಡಿಯಾ ಪ್ರದರ್ಶನ ನಡೆಯಲಿದ್ದು ಫೆಬ್ರವರಿ 6, 7 ರಂದು ಸಾರ್ವಜನಿಕರಿಗೆ ಪ್ರವೇಶ ನೀಡಲಾಗುವುದು. ದೆಹಲಿಯಲ್ಲಿ ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ …

Read More »

₹ 5 ಕೋಟಿ ವೆಚ್ಚದ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಭೂಮಿಪೂಜೆ

ಹುಣಸಗಿ: ‘ಪ್ರಸಕ್ತ ಸಾಲಿನ ಕೋವಿಡ್ ಸಂದರ್ಭದಲ್ಲಿಯೂ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆದಿದ್ದು, ನಮ್ಮ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ’ ಎಂದು ಶಾಸಕ ರಾಜುಗೌಡ ಹೇಳಿದರು. ಹುಣಸಗಿ ತಾಲ್ಲೂಕಿನ ಯರಿಕ್ಯಾಳ ಗ್ರಾಮದ ಬಳಿ ಹಳ್ಳಕ್ಕೆ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ‘ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಸುಮಾರು ₹ 200 ಕೋಟಿ ವೆಚ್ಚದಲ್ಲಿ ಈ ಬಾರಿ ಸಿ.ಸಿ ರಸ್ತೆ, ಕಾಲುವೆ …

Read More »

100 ಪಡಿತರ ಚೀಟಿ ಹೊಂದಿರುವ ತಾಂಡಗಳಿಗೊಂದು ನ್ಯಾಯಬೆಲೆ ಅಂಗಡಿ ಸ್ಥಾಪನೆ

ಬೆಂಗಳೂರು. ರಾಜ್ಯದಲ್ಲಿ 100ಕ್ಕೂ ಹೆಚ್ಚು ಪಡಿತರ ಚೀಟಿ ಹೊಂದಿರುವ ಎಲ್ಲಾ ತಾಂಡಗಳಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನದ 3 ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 3300 ತಾಂಡಗಳಿದ್ದು, ಲಂಬಾಣಿ ಸಮುದಾಯವು ತಾಂಡಗಳಲ್ಲಿರುವುದರಿಂದ ಪಡಿತರವನ್ನು ಪಡೆಯಲು ಒಂದು …

Read More »

ಪೀರನವಾಡಿ ಪ್ರತಿಮಾ ವಿವಾದ: ಎಡಿಜಿಪಿ, ಡಿಸಿಯಿಂದ ಸಂಧಾನ ಸಭೆ ಯಶಸ್ವಿ

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆಯಿಂದಾಗಿ ಉಲ್ಬಣಗೊಂಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮರ್‌ಕುಮಾರ್‌ ಪಾಂಡೆ ಮತ್ತು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನೇತೃತ್ವದಲ್ಲಿ ಶುಕ್ರವಾರ ರಾತ್ರಿವರೆಗೆ ನಡೆದ ಸಭೆ ಯಶಸ್ವಿಯಾಗಿದೆ. ‘ರಾಯಣ್ಣ ಪ್ರತಿಮೆಯನ್ನು ಈಗ ಪ್ರತಿಷ್ಠಾಪಿಸಿರುವ ಸ್ಥಳದಲ್ಲಿಯೇ ಉಳಿಸುವುದು ಹಾಗೂ ಆ ವೃತ್ತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ನಾಮಕರಣ ಮಾಡಬೇಕು’ ಎನ್ನುವ ತೀರ್ಮಾನಕ್ಕೆ ಬರಲಾಯಿತು. ಇದಕ್ಕೆ ‍ಕನ್ನಡಪರ ಸಂಘಟನೆಯವರು, ಎಂಇಎಸ್ ಹಾಗೂ ಶಿವಸೇನೆಯವರು ಮತ್ತು ಸ್ಥಳೀಯ ಮುಖಂಡರು ಸಮ್ಮತಿ ಸೂಚಿಸಿದರು. …

Read More »

ಭಾರತದಲ್ಲಿ ಯಾರಿಗೆ ಲಭ್ಯವಾಗಲಿದೆ ಮೊದಲ ‘ಕೊರೊನಾ’ ಲಸಿಕೆ.? ಇಲ್ಲಿದೆ ಮಾಹಿತಿ

ವಿಶ್ವವನ್ನು ಕಂಗೆಡಿಸಿರುವ ಮಾರಣಾಂತಿಕ ಕೊರೊನಾ ಮಹಾಮಾರಿಗೆ ಲಸಿಕೆ ಕಂಡು ಹಿಡಿಯಲು ಭಾರತ ಸೇರಿದಂತೆ ವಿಶ್ವದ ಎಲ್ಲ ರಾಷ್ಟ್ರಗಳು ನಿರಂತರವಾಗಿ ಪ್ರಯತ್ನ ನಡೆಸಿವೆ. ರಷ್ಯಾ ತಾನು ಈಗಾಗಲೇ ಲಸಿಕೆ ತಯಾರಿಸಿರುವುದಾಗಿ ಹೇಳಿಕೊಂಡಿದ್ದು, ಮಾನವರ ಮೇಲೆ ಪ್ರಯೋಗವನ್ನೂ ಆರಂಭಿಸಿದೆ. ಭಾರತದಲ್ಲೂ ಸಹ ಲಸಿಕೆ ತಯಾರಾಗಿದ್ದು, ಎರಡು ಹಾಗೂ ಮೂರನೇ ಹಂತದ ಪರೀಕ್ಷೆಗಳು ನಡೆಯುತ್ತಿವೆ. ಇದರಲ್ಲಿ ಯಶಸ್ವಿಯಾದ ಬಳಿಕ ಮಾನವರ ಬಳಕೆಗೆ ಇದು ಲಭ್ಯವಾಗಲಿದೆ. ಇದರ ಮಧ್ಯೆ ಯಾರಿಗೆ ಮೊದಲಿಗೆ ಕೊರೊನಾ ಲಸಿಕೆ ನೀಡಲು …

Read More »

150ರಿಂದ 10 ಮೀಟರ್‌ಗೆ ಕುಗ್ಗಿದ ಮಲಪ್ರಭೆ!

ಬಾಗಲಕೋಟೆ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ದೊಡ್ಡಹಂಪಿಹೊಳಿ ಬಳಿ ಹರಿಯುವ ಮಲಪ್ರಭಾ ನದಿಯ ಅಗಲ ಜಲಸಂಪನ್ಮೂಲ ಇಲಾಖೆ ಟೋಪೊಶೀಟ್‌ನಲ್ಲಿ 150 ಮೀಟರ್ ಇದೆ. ಆದರೆ ಈಗ ಅದು 10 ಮೀಟರ್‌ಗೆ ಇಳಿಕೆಯಾಗಿದೆ! ಗದಗ ಜಿಲ್ಲೆ ನರಗುಂದ ತಾಲ್ಲೂಕಿನ ಕೊಣ್ಣೂರು ರಸ್ತೆ ಸೇತುವೆ ಬಳಿ 100 ಮೀಟರ್‌ ಅಗಲವಿದ್ದ ನದಿ ಈಗ 11 ಮೀಟರ್‌ಗೆ ಕುಗ್ಗಿದೆ. ಬಾದಾಮಿ ತಾಲ್ಲೂಕಿನ ಗೋವನಕೊಪ್ಪ ಬಳಿ 200 ಮೀಟರ್‌ನಿಂದ 14 ಮೀಟರ್‌ಗೆ ರೂಪಾಂತರಗೊಂಡಿದೆ. ಅತಿಯಾದ ಮಾನವ ಹಸ್ತಕ್ಷೇಪ …

Read More »